ನಿಸಾರ್ಥ ಸೇವಾ ಮನೋಭಾವದ ಸಮಿತಿ ಅಭಿವೃದ್ಧಿ ಹೊಂದಲಿ: ಜಯ ಎಂ. ಶೆಟ್ಟಿ


Team Udayavani, Feb 13, 2024, 5:14 PM IST

Udayavani Kannada Newspaper

ವಸಾಯಿ: ದೂರಗಾಮಿ ಚಿಂತನೆಯ, ಪ್ರಗತಿಪರ ಯೋಚನೆಯ ಬೆರಳೆಣಿಕೆಯ ಮಂದಿ ಸ್ಥಾಪಿಸಿದ ವಸಾಯಿ ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿಗೆ ಅಧ್ಯಾತ್ಮವೇ ಭದ್ರ ಬುನಾದಿ. ಬದಲಾವಣೆಯ ಕಾಲ ಘಟ್ಟದಲ್ಲಿ ಇಂದು ಧರ್ಮ, ಸಂಸ್ಕೃತಿಗಳ ಕುರಿತು ಜಾಗೃತಿ ಮೂಡಿಸುವ ಕೆಲಸ ನಮ್ಮಿಂದ ಆಗಬೇಕಾಗಿದೆ. ಪರಸ್ಪರ ಸಹನೆ, ಸಹಕಾರ, ಸಂಪ್ರದಾಯದೊಂದಿಗೆ ಮುಂದಿನ ಪೀಳಿಗೆಗೆ ಮಾರ್ಗದ ರ್ಶಕರಾಗೋಣ ಎಂದು ವಸಾಯಿ ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿಯ ಸ್ಥಾಪಕ ಅಧ್ಯಕ್ಷ ಜಯ ಎಂ. ಶೆಟ್ಟಿ ತಿಳಿಸಿದರು.

ಫೆ. 10ರಂದು ವಸಾಯಿ ಪಶ್ವಿ‌ಮದ ನವಯುಗ್‌ ನಗರ, ದಿವಾನ್‌ ಮನ್‌ ತಲಾವ್‌ ಸಮೀಪದ ವಸಾಯಿ ಸಾರ್ವ ಜನಿಕ ಶ್ರೀ ಶನೀಶ್ವರ ಸೇವಾ ಸಮಿತಿಯ 25ನೇ ವಾರ್ಷಿಕ ಸಮಾರಂಭದಲ್ಲಿ ಅವರು ಮಾತನಾಡಿ, ಕಿತ್ತು ತಿನ್ನುವ ಬಡ ತನದಲ್ಲೂ ತುಳು – ಕನ್ನಡಿಗರು ದೇಣಿಗೆ ನೀಡಿ ಈ ಸಂಸ್ಥೆಯನ್ನು ಬೆಳೆಸಿದರು. ನಿಷ್ಕಳಂಕ ಪ್ರೇಮ, ನಿಸ್ವಾರ್ಥ ಭಾವನೆ ಯಿಂದ ಬೆಳೆದು ನಿಂತ ಸಮಿತಿ ಉತ್ತರೋತ್ತರ ಅಭಿವೃದ್ಧಿ ಕಾಣಲಿ ಎಂದು ಹೇಳಿ 25 ವರ್ಷಗಳ ಕಾಲ ನಿರಂತ ರವಾಗಿ ಸಹಕರಿಸಿದ ಸರ್ವರಿಗೂ ಕೃತಜ್ಞತೆ ಸಲ್ಲಿಸಿದರು.

ಶ್ರೀಕಾಂತ್‌ ಭಟ್‌ ಥಾಣೆ ಪೌರೋಹಿತ್ಯದಲ್ಲಿ ಬೆಳಗ್ಗೆ ಗಣಪತಿ ಹೋಮ, ನಾಗಾಭಿಷೇಕ, ಶ್ರೀ ಹನುಮಾನ್‌ ಪೂಜೆ, ಶ್ರೀ ಸತ್ಯನಾರಾಯಣ ಮಹಾಪೂಜೆ, ಅಪರಾಹ್ನ ಹರೀಶ್‌ ಶಾಂತಿ ಅವರಿಂದ ಕಲಶ ಪ್ರತಿಷ್ಠೆ ನಡೆಯಿತು. ಗಣಪತಿ ಹೋಮದಲ್ಲಿ ದಿನೇಶ್‌ ಕರ್ಕೇರ ಮತ್ತು ಪುಷ್ಪಾ ಕರ್ಕೇರ ದಂಪತಿ, ಶ್ರೀ ಸತ್ಯನಾರಾಯಣ ಪೂಜೆಯಲ್ಲಿ ನಿತಿನ್‌ ಪೂಜಾರಿ ಮತ್ತು ದೀಪಿಕಾ ಪೂಜಾರಿ ದಂಪತಿ, ಶ್ರೀ ಶನಿ ಮಹಾಪೂಜೆಯಲ್ಲಿ ಸ್ಥಾಪಕ ಅಧ್ಯಕ್ಷ ಜಯ ಎಂ. ಶೆಟ್ಟಿ ಮತ್ತು ಸರೋಜಿನಿ ಶೆಟ್ಟಿ ದಂಪತಿ ಪೂಜೆಯ
ವ್ರತ ಕೈಗೊಂಡರು.

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ ಪೋರ್ಟ್‌ ಮುಂಬಯಿ ಸದಸ್ಯರಿಂದ ಶ್ರೀ ಶನಿ ಗ್ರಂಥ ಪಾರಾಯಣವು ಯಕ್ಷಗಾನ ತಾಳಮದ್ದಳೆ ರೀತಿಯಲ್ಲಿ ನಡೆಯಿತು. ರಾತ್ರಿ ಭಜನೆ, ಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಮತ್ತು ಸಾರ್ವ ಜನಿಕ ಅನ್ನಸಂತರ್ಪಣೆ ಜರಗಿತು. ಸಮಾರಂಭದಲ್ಲಿ ನಿರಂತರ 25 ವರ್ಷ ಸೇವೆಗೈದ ಸ್ಥಾಪಕಾಧ್ಯಕ್ಷ ಜಯ ಎಂ. ಶೆಟ್ಟಿ ದಂಪತಿಯನ್ನು ಶಾಲು ಹೊದೆಸಿ, ಮೈಸೂರು ಪೇಟ ತೊಡಿಸಿ, ಪುಷ್ಪಗುತ್ಛ, ಸ್ಮರಣಿಕೆ, ಸಮ್ಮಾನಪತ್ರ ವನ್ನಿತ್ತು ಕಾರ್ಯಕಾರಿ ಸಮಿತಿ ಸದಸ್ಯರು ಸಮ್ಮಾನಿಸಿದರು.

ದಾನಿಗಳು, ಸ್ಥಳೀಯ ಸಂಘ -ಸಂಸ್ಥೆಗಳ ಪ್ರತಿನಿಧಿಗಳನ್ನು ಸನ್ನಿಧಿಯ ಪ್ರಸಾದ ನೀಡಿ ಗೌರವಿಸಲಾಯಿತು. ಗೌರವಾಧ್ಯಕ್ಷ ಪಾಂಡು ಎಲ್‌. ಶೆಟ್ಟಿ, ಅಧ್ಯಕ್ಷ ಉಮೇಶ್‌ ಎಚ್‌. ಕರ್ಕೇರ, ಉಪಾಧ್ಯಕ್ಷ ಜಯ ಜಿ. ಅಮೀನ್‌, ಗೌರವ ಕೋಶಾಧಿಕಾರಿ ಉಮೇಶ್‌ ಎಂ. ಕರ್ಕೇರ, ಜತೆ ಕಾರ್ಯದರ್ಶಿ ಕೆ. ಪಿ. ಶ್ಯಾಮ್, ಜತೆ ಕೋಶಾಧಿಕಾರಿ ಶಂಕರ ಬಿಲ್ಲವ, ಪ್ರಧಾನ ಅರ್ಚಕ ಶಶಿ‌ ಕರ್ಕೇರ ಉಪಸ್ಥಿತರಿದ್ದರು.

ಕಾರ್ಯಕಾರಿ ಸಮಿತಿ ಸದಸ್ಯರಾದ ಸುಧಾಕರ ಎನ್‌. ಬಂಗೇರ, ದಿನೇಶ್‌ ಎ. ಭಂಡಾರಿ, ಲಕ್ಷ್ಮಣ್‌ ಜಿ. ಅಂಚನ್‌, ಕೆ. ಟಿ. ಬಂಗೇರ, ಬಿ. ವಿಟಲ್‌ ರೈ, ಸುಧಾಕರ ಸುವರ್ಣ, ಸಂಜೀವ ಪೂಜಾರಿ, ಸಮಿತಿ ಸದಸ್ಯರಾದ ಸದಾ ಎಂ. ಪೂಜಾರಿ, ಆನಂದ ಕುಂದರ್‌, ದೇವೆಂದ್ರ ಸುರತ್ಕಲ್‌ , ಸಂಜೀವ ಶೆಟ್ಟಿ, ಶೇಖರ ಮೈಂದನ್‌, ಹರೀಶ್‌ ಶೆಟ್ಟಿ, ದಿನೇಶ್‌ ಕರ್ಕೇರ, ಚಂದ್ರಶೇಖರ ಎಂ. ಕರ್ಕೇರ, ತೇಜ್‌ಪಾಲ್‌ ಕಿದಿಯೂರು ಮೊದಲಾದವರು ಪಾಲ್ಗೊಂಡಿದ್ದರು.

ಸ್ಥಳೀಯ ನಗರ ಸೇವಕರು, ರಾಜಕೀಯ ಮುಖಂಡರು, ವಿವಿಧ ಸಂಘ -ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಬಿಲ್ಲವರ ಅಸೋಸಿಯೇನ್‌ ಸೇವಾ ದಳದ ಸದಸ್ಯರು, ಮಹಿಳಾ ವಿಭಾಗ ದವರು ಸಹಕರಿಸಿದರು. ಗೌರವ ಪ್ರಧಾನ ಕಾರ್ಯದರ್ಶಿ ಪ್ರಭಾಕರ ಎನ್‌. ಬಂಗೇರ ನಿರೂಪಿಸಿ, ವಂದಿಸಿದರು.

ಚಿತ್ರ-ವರದಿ: ರಮೇಶ್‌ ಅಮೀನ್‌

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.