ಮೀರಾಗಾಂವ್‌ ಮಹಾಲಿಂಗೇಶ್ವರ ದೇವಸ್ಥಾನ: ಶ್ರೀ ಅಯ್ಯಪ್ಪ ಮಹಾಪೂಜೆ


Team Udayavani, Dec 18, 2017, 11:34 AM IST

16-Mum04a.jpg

ಮುಂಬಯಿ: ಆಚಾರ-ವಿಚಾರಗಳ ಮೇಲೆ ಹಾಗೂ ಆಹಾರ ಮೊದಲಾದವುಗಳ ಮೇಲೆ ನಿರ್ಬಂಧವನ್ನು  ಹಾಕಿ ಭಗವಂತನ ಸಾಮೀಪ್ಯವನ್ನು ಹೊಂದುವುದೇ ಪ್ರತಿಯೊಂದು ವ್ರತದ ವಿಶೇಷತೆಯಾಗಿದೆ. ಸನಾತನ ಧರ್ಮಗಳ ಪ್ರಕಾರ ವಿವಿಧ ವ್ರತಗಳು ಮಾನವನ ನ್ಯೂನತೆಗಳನ್ನು ದೂರಗೊಳಿಸಿ ಸನ್ಮಾರ್ಗವನ್ನು ಪ್ರಾಪ್ತಿಸುವ ಸಾಧನಗಳಾಗಿವೆ ಎಂದು ಮೀರಾಗಾಂವ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟಿ ಹಾಗೂ ಪ್ರಧಾನ ಅರ್ಚಕ ಸಾಂತಿಂಜ ಜನಾದ‌ìನ ಭಟ್‌ ಅವರು ನುಡಿದರು.

ಡಿ. 16ರಂದು ಮೀರಾರೋಡ್‌ ಪೂರ್ವದ ಮೀರಾಗಾಂವ್‌ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಮಹಾಲಿಂಗೇಶ್ವರ ಟ್ರಸ್ಟ್‌ ಇದರ 26ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆಗೆ ಚಾಲನೆ ನೀಡಿ ಆಶೀರ್ವಚನ ನೀಡಿದ ಅವರು, ಅಯ್ಯಪ್ಪ ವ್ರತಧಾರಿಗಳು ಶ್ರದ್ಧಾ, ಭಕ್ತಿಯಿಂದ ಪಾಲಿಸಿದ ಒಂದು ಮಂಡಲದ ಕಠಿನ ವ್ರತಗಳನ್ನು ಜೀವನ ಪರ್ಯಂತ ಅನುಷ್ಠಾನಗೊಳಿಸಿ ಧರ್ಮ ರಕ್ಷಕರಾಗಿ ಮೆರೆಯಬೇಕು ಎಂದು ನುಡಿದು ಎಲ್ಲರಿಗೂ ಶುಭ ಹಾರೈಸಿದರು.

ಧಾರ್ಮಿಕ ಕಾರ್ಯಕ್ರಮವಾಗಿ ಸಾಂತಿಂಜ ಜನಾದ‌ìನ್‌ ಭಟ್‌ ಅವರ ನೇತೃತ್ವದಲ್ಲಿ ಬೆಳಗ್ಗೆ ಮಹಾಗಣಪತಿ ಹೋಮ, ಅಭಿಷೇಕ, ಉಷಾಪೂಜೆ, ಪರಿವಾರ ದೇವರಿಗೆ ವಿಶೇಷ ಪೂಜೆ ನಡೆಯಿತು. ಮೀರಾರೋಡ್‌ ಶ್ರೀ ಅಯ್ಯಪ್ಪ ಭಕ್ತಮಂಡಳಿಯ ಗುರುಸ್ವಾಮಿ ಜಯಶೀಲ ತಿಂಗಳಾಯ ಹಾಗೂ ಇತರ ಮಾಲಾಧಾರಿ ಸ್ವಾಮಿಗಳಿಂದ ಶರಣು ಘೋಷ, ಅಯ್ಯಪ್ಪ ಕೀರ್ತನೆ, ಪಡಿಪೂಜೆ ಮೊದಲಾದ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು.

ಮೀರಾರೋಡ್‌ ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಮತ್ತು ಎರ್ಮಾಳ್‌ ಬಡಾ ಶ್ರೀ ವಿಷ್ಣು ಭಜನ ಮಂಡಳಿ ಸದಸ್ಯರು ಭಜನ ಕಾರ್ಯಕ್ರಮ ನೀಡಿದರು. ಆಡಳಿತ ಮೊಕ್ತೇಸರರಾದ ಶಿಮಂತೂರು ಮಜಲಗುತ್ತು ರಂಜನ್‌ (ಬಾಬಾ) ಶೆಟ್ಟಿ, ಸ್ಥಾಪಕರಾದ ಕೃಷ್ಣ ಜಿ. ಶೆಟ್ಟಿ, ಅರ್ಚಕ ಮಾಧವ ಭಟ್‌, ಕಾರ್ಯದರ್ಶಿ ಪ್ರಮೋದ್‌ ವಿ. ಮ್ಹಾತ್ರೆ, ಕೋಶಾಧಿಕಾರಿ ವೆಂಕಟೇಶ್‌ ಡಿ. ಪಾಟೀಲ್‌, ಕಾರ್ಯಕಾರಿ ಸಮಿತಿಯ ಸದಸ್ಯರು, ಮಹಿಳಾ ವಿಭಾಗದವರು, ಅರ್ಚಕವೃಂದದವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ರಾತ್ರಿ ದೀಪಾರಾಧನೆ ಮತ್ತು ಮಹಾಪೂಜೆ ನೆರವೇರಿತು.

ಸ್ಥಳೀಯ ಶಾಸಕರು, ನಗರ ಸೇವಕರು, ವಿವಿಧಸಮುದಾಯ ಸಂಘಟನೆಗಳ ಪದಾಧಿಕಾರಿಗಳು, ತುಳು-ಕನ್ನಡಿಗರು, ಭಕ್ತಾದಿಗಳು ಅಧಿಕ ಸಂಖ್ಯೆ ಯಲ್ಲಿ ಪಾಲ್ಗೊಂಡಿದ್ದರು. ಅನ್ನಸಂತರ್ಪಣೆಯಲ್ಲಿ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಅಯ್ಯಪ್ಪ ಮತ್ತು ಶ್ರೀ ಮಹಾಲಿಂಗೇಶ್ವರ ದೇವರ ಕೃಪೆಗೆ ಪಾತ್ರರಾದರು. 

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.