ವಿದ್ಯೆ ನೀಡಿದ ಸಂಸ್ಥೆಯ ಸ್ಮರಣೆ ಅವಶ್ಯ : ಬೆನ್ನಿ ರಸ್ಕೀನಾ


Team Udayavani, Sep 8, 2019, 12:48 PM IST

mumbai-tdy-2

ಮುಂಬಯಿ, ಸೆ. 7: ದಾನದಲ್ಲಿ ಮಹತ್ವದ ದಾನ ವಿದ್ಯಾದಾನವೆಂಬ ಮಾತು ಸತ್ಯಕ್ಕೆ ಸಮೀಪವಾಗಿದೆ. ವಿದ್ಯಾ ಪ್ರಸಾರಕ ಮಂಡಳವು ಹೊರ ರಾಜ್ಯದಲ್ಲಿ ಕನ್ನಡ ಕಂದಮ್ಮಗಳ ಮೇಲಿನ ಅಪಾರಪ್ರೀತಿಯಿಂದ ಹಲವಾರು ದಶಕಗಳಿಂದ ಅಹರ್ನಿಶಿಯಾಗಿ ಶಿಕ್ಷಣ ಸೇವೆ ಮಾಡುತ್ತಿರುವುದು ಪ್ರಶಂಸನೀಯ. ಶಿಕ್ಷಕರು ಕೊಳಚೆ ಪ್ರದೇಶದಲ್ಲಿ ವಾಸಿಸುತ್ತಿರುವ ಕಡುಬಡವರ ಮಕ್ಕಳಿಗೆ ಶಿಕ್ಷಣ ಮತ್ತು ವಿದ್ಯಾ ಪ್ರಸಾರಕ ಮಂಡಳದ ಸಹಾಯ-ಸಹಕಾರದ ಕುರಿತು ಹೇಳಿ ಕರೆದುಕೊಂಡು ಬರುತ್ತಿರುವುದು, ಅವರನ್ನು ಶಿಕ್ಷಿತರನ್ನಾಗಿ ಮಾಡುವ ಕಾರ್ಯ ಮಹತ್ತರವಾಗಿದೆ ಎಂದು ಮುಲುಂಡ್‌ನ‌ ಲಯನ್ಸ್‌ ಕ್ಲಬ್‌ ಇದರ ಅಧ್ಯಕ್ಷೆ ಅಲ್ವಿನ್‌ ರಸ್ಕೀನಾ ನುಡಿದರು.

ಇತ್ತೀಚೆಗೆ ಮುಲುಂಡ್‌ ವಿಪಿಎಂ ಕನ್ನಡ ಮಾಧ್ಯಮ ಶಾಲಾ ಸಭಾಗೃಹದಲ್ಲಿ ನಡೆದ ಶಾಲಾ ಪರಿಕರಗಳ ವಿತರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದ ಅವರು, ಯಾವಾಗಲೂ ವಿದ್ಯಾ ಪ್ರಸಾರಕ ಮಂಡಳದ ಕನ್ನಡ ಶಾಲೆಯ ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ನಾವು ಸಿದ್ದರಿದ್ದೇವೆ ಎಂದು ನುಡಿದು ಶುಭ ಹಾರೈಸಿದರು. ಡಾ| ಕೆ. ಮೋಹನ್‌ ಅವರು ಮಾತನಾಡಿ, ವಿದ್ಯಾರ್ಥಿಗಳು ಸದೃಢವಾಗಿರಲು ಆಟ-ಪಾಠ-ಕೂಟಗಳು ಅತ್ಯಗತ್ಯವಾಗಿವೆ. ಹಿತಮಿತವಾದ ಆಹಾರ ಸೇವನೆಯಿಂದ ಆರೋಗ್ಯದ ಸಂಪತ್ತನ್ನು ಕಾಪಾಡಿಕೊಳ್ಳಬಹುದು. ಅಧ್ಯಯನ ಮಾಡಿದ ವಿದ್ಯಾ ದೇಗುಲವನ್ನು, ಜ್ಞಾನ ನೀಡಿದ ಶಿಕ್ಷಕರನ್ನು ವಿದ್ಯಾರ್ಥಿಗಳು ಮರೆಯದೆ ಸದಾ ಸ್ಮರಣೆಯನ್ನು ಮಾಡಿ, ಮುಂದೊಂದು ದಿನ ಉನ್ನತ ಹುದ್ದೆಗೆ ಸೇರಿದಾಗ ಶಾಲೆಗೆ ಬಡ ಮಕ್ಕಳಿಗೆ ಇದೇ ರೀತಿಯಾಗಿ ಧನ ಸಹಾಯವನ್ನು, ಧಾನ-ಧರ್ಮವನ್ನು ಮಾಡಲು ಮುಂದೆ ಬರಬೇಕು ಎಂದು ನುಡಿದರು. ಡಾ| ಪಿ. ಎಂ. ಕಾಮತ್‌ ಮಾತನಾಡಿ, ಮುಂಬಯಿ ವಲಯದ ಮುಲುಂಡಿನ ಲಯನ್ಸ್‌ ಕ್ಲಬ್‌ನವರು ಮಾಡುವ ಸಮಾಜ ಸೇವೆಗೆ ನಾವು ಸದಾ ಕೃತಜ್ಞರಾಗಿದ್ದೇವೆ. ವಿದ್ಯಾ ಪ್ರಸಾರಕ ಮಂಡಳದ ಕನ್ನಡ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ ಉಚಿತ ಶಾಲಾ ಪರಿಕರಗಳನ್ನು ಮತ್ತು ವೈದ್ಯಕೀಯ ಚಿಕಿತ್ಸಾ ಶಿಬಿರವನ್ನು ಡಾ| ಕೆ. ಮೋಹನ್‌ ಅವರ ಮಾರ್ಗದರ್ಶನದಲ್ಲಿ ಹಮ್ಮಿಕೊಂಡು, ಕಡುಬಡತನದ ವಿದ್ಯಾರ್ಥಿಗಳಿಗೆ ದಾನ-ಧರ್ಮ ಮಾಡುತ್ತಿರುವುದು ಒಂದು ವಿಶಾಲ ಹೃದಯದ ಮನೋಭಾವನೆ ಮತ್ತು ಸೇವಾ ಕಾರ್ಯವಾಗಿದೆ. ಕನ್ನಡ ಮಾಧ್ಯಮದಲ್ಲಿ ಅಧ್ಯಯನ ಮಾಡುವ ವಿದ್ಯಾರ್ಥಿಗಳನ್ನು ಒತ್ತಾಯ ಪೂರ್ವಕವಾಗಿ ಕರೆದುಕೊಂಡು ಬರದೆ, ಅವರಿಗೆ ನಾವು ಶಿಕ್ಷಣವನ್ನು ನೀಡಿ ಉತ್ತಮ ಮತ್ತು ಆದರ್ಶ ಸಮಾಜದಲ್ಲಿ ಶ್ರೇಷ್ಠ ನಾಗರಿಕರನ್ನಾಗಿ ಪರಿವರ್ತಿಸಲು ಪ್ರಾಮಾಣಿಕವಾಗಿ ಪ್ರಯತ್ನವನ್ನು ಮಾಡುತ್ತಾ ಬಂದಿದ್ಧೇವೆ ಮತ್ತು ಇನ್ನೂ ಮುಂದೆಯೂ ಮಾಡುತ್ತೇವೆ ಎಂದರು.

ವೇದಿಕೆಯಲ್ಲಿ ಲಯನ್ಸ್‌ ಕ್ಲಬ್‌ನ ಸದಸ್ಯರು, ಡಾ| ಪಿ. ಎಂ. ಕಾಮತ್‌, ಡಾ| ಕೆ. ಮೋಹನ್‌, ಮುಖ್ಯ ಶಿಕ್ಷಕಿ ಸುವಿನಾ ಶೆಟ್ಟಿ ಉಪಸ್ಥಿತರಿದ್ದರು. ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಜಸಿಂತಾ ಸಿಕ್ವೇರಾ, ಮಾರ್ಗರೆಟ್ ಬೆರೆಟ್ಟೊ, ಲಯನ್ಸ್‌ ಮಾರ್ಗದರ್ಶಿಗಳಾದ ಧನಂಜಯ್‌ ಭೋಸ್ಲೆ, ಪ್ರವೀಣ್‌ ಶೆಟ್ಟಿ, ಪ್ರಭಾಕರ್‌ ಗುರವ್‌ ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಪ್ರಾರ್ಥನೆಗೈದರು. ಅತಿಥಿಗಳನ್ನು ಮಂಡಳದ ಅಧ್ಯಕ್ಷರಾದ ಡಾ| ಪಿ. ಎಂ. ಕಾಮತ್‌ ಗೌರವಿಸಿದರು. ಶಿಕ್ಷಕಿ ಲಕ್ಷ್ಮೀಕೆಂಗನಾಳ ಅತಿಥಿಗಳನ್ನು ಪರಿಚಯಿಸಿದರು. ಶಾಲಾ ಪರಿವೀಕ್ಷಕಿ ಗೌರಿ ದೇಶಪಾಂಡೆ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕಿ ಲಿನೆಟ್ ಪಿಂಟೋ ವಂದಿಸಿದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.