ಭಜನೆಯಿಂದ ಮಾನಸಿಕ ಶಾಂತಿ: ಮೆಂಡನ್‌


Team Udayavani, Feb 27, 2020, 6:35 PM IST

MUMBAI-TDY-1

ಮುಂಬಯಿ, ಫೆ. 26: ಗೋರೆಗಾಂವ್‌ ಕರ್ನಾಟಕ ಸಂಘದ ಮಹಿಳಾ ವಿಭಾಗದ ವತಿಯಿಂದ ಶ್ರೀ ಪುರಂದರ ದಾಸರ ಕೀರ್ತನ ಸ್ಪರ್ಧೆಯು ಫೆ. 8ರಂದು ಅಪರಾಹ್ನ 2.30ರಿಂದ ಕೇಶವ್‌ ಗೋರೆ ಸ್ಮಾರಕ ಟ್ರಸ್ಟ್‌ ಹಾಲ್‌ನಲ್ಲಿ ನಡೆಯಿತು.

ಸ್ಪರ್ಧೆಯಲ್ಲಿ 14 ಸಂಘ-ಸಂಸ್ಥೆಗಳು ಮತ್ತು ಭಜನ ಮಂಡಳಿಗಳು ಸಾ ಮೂಹಿಕ ಹಾಗೂ ವೈಯಕ್ತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದವು. ಸ್ಪರ್ಧೆಯ ನಿಯಮಾವಳಿಗಳನ್ನು ಸಂಘದ ಉಪಾಧ್ಯಕ್ಷೆ ಪದ್ಮಜಾ ಮಣ್ಣೂರು ಸ್ಪರ್ಧಾಳುಗಳಿಗೆ ತಿಳಿಸಿದರು. ಸ್ಪರ್ಧೆಯ ತೀರ್ಪುಗಾರರಾಗಿ ಡಾ| ಶ್ಯಾಮಲಾ ಪ್ರಕಾಶ್‌ ಮತ್ತು ಮಂಜುಳಾ ಭಟ್‌ ಅವರು ಸಹಕರಿಸಿದರು.

ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ನಾರಾಯಣ ಆರ್‌. ಮೆಂಡನ್‌ ಅವರು ಮಾತನಾಡಿ, ಜಿಪುಣಾಗ್ರಸ್ತರಾದ ಶ್ರೀನಿವಾಸ ನಾಯಕನ ಜೀವನದಲ್ಲಿ ನಡೆದ ಒಂದು ಅಪೂರ್ವ ಘಟನೆ ಅದು ಅವನ ಜೀವನ ಶೈಲಿಯನ್ನೇ ಬದಲಾಯಿಸಿತು. ಅನಂತರ ಅವನು ಭಗವಂತನ ಲೀಲೆಯನ್ನು ಹಾಡಿ ಹೊಗಳುತ್ತಾ ಅನೇಕ ಕೃತಿಗಳನ್ನು ರಚಿಸಿ ದಾಸರಲ್ಲಿ ಶ್ರೇಷ್ಠರಾಗಿ ಪುರಂದರ ದಾಸರೆಂದೇ ಖ್ಯಾತಿ ಪಡೆದರು. ಇವರ ಅಪೂರ್ವ ತಿರುವು ಬರುವುದಕ್ಕೆ ಭಗವಂತನ ಪ್ರೇರಣೆ ಹಾಗೂ ಕೃಪೆ ಯೇ ಕಾರಣ. ಪುರಂದರ ದಾಸರ ಮಹತ್ವವನ್ನು ಇಂದಿನ ಯುವಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಸಂಘವು ಪ್ರತೀ ವರ್ಷ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದರು.

ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಉಷಾ ಎಸ್‌. ಶೆಟ್ಟಿ ಅವರು ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತೀರ್ಪುಗಾರರನ್ನು ಮಹಿಳಾ ವಿಭಾಗದ ಸದಸ್ಯೆಯರಾದ ಸುಮಿತಿ ಆರ್‌. ಶೆಟ್ಟಿ ಮತ್ತು ಚಂದ್ರಾವತಿ ಬಿ. ಶೆಟ್ಟಿ ಪರಿಚಯಿಸಿದರು. ವೈಯಕ್ತಿಕ ಸ್ಪರ್ಧೆಯಲ್ಲಿ ಭಾಗವಹಿಸಿದವರನ್ನು ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸರಿತಾ ಎಸ್‌. ನಾಯಕ್‌ ಮತ್ತು ಸಮೂಹ ಗೀತೆಯಲ್ಲಿ ಭಾಗವಹಿಸಿದವರ ಹೆಸರನ್ನು ಸಾವಿತ್ರಿ ಶೆಟ್ಟಿ ಅವರು ಘೋಷಿಸಿದರು.

ಬಂಗೂರ್‌ ನಗರ ಕನ್ನಡ ಬಳಗ, ಗೋರೆಗಾಂವ್‌ ಕರ್ನಾಟಕ ಸಂಘ, ಸುಮಿತ್ರಾ ಆರ್‌. ಕುಂದರ್‌ ಇವರು ತಮ್ಮ ತಾಯಿ ಕಮಲಾ ಎಲ್‌. ಕುಂದರ್‌ ಅವರ ಸಂಸ್ಮರಣೆಯಲ್ಲಿ ಸ್ಥಾಪಿಸಿದ ದತ್ತಿನಿಧಿ ಹಾಗೂ ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ಸರಿತಾ ಸುರೇಶ್‌ ನಾಯಕ್‌ ಅವರು ಸಂಗ್ರಹಿಸಿದ ಧನ ಸಂಗ್ರಹದಿಂದ ಕಾರ್ಯಕ್ರಮ ನೆರವೇರಿತು. ಸಮೂಹ ಗೀತೆಯಲ್ಲಿ ಚಾರ್‌ಕೋಪ್‌ ಕನ್ನಡಿಗರ ಬಳಗ ಪ್ರಥಮ, ಮದ್ವೇಷ ಭಜನ ಮಂಡಳಿ ದ್ವಿತೀಯ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನ ಮಂಡಳಿ ತೃತೀಯ ಬಹುಮಾನ ಪಡೆಯಿತು.

ವೈಯಕ್ತಿಕ ಸ್ಪರ್ಧೆಯಲ್ಲಿ ಬಬಿತಾ ಕಾಂಚನ್‌ ಶ್ರೀ ದುರ್ಗಾಮರಮೇಶ್ವರಿ ಭಜನ ಮಂಡಳಿ ಪ್ರಥಮ, ವಿಜಯಾ ರಾವ್‌ ಮಧ್ವೇಷ ಭಜನ ಮಂಡಳಿ ದ್ವಿತೀಯ, ಸುಶೀಲಾ ಪೂಜಾರಿ ಜಗದಂಬಾ ಕಾಲಭೈರವ ದೇವಸ್ಥಾನ ತೃತೀಯ ಬಹುಮಾನ ಗಳಿಸಿದರು. ಬಹುಮಾನದ ಯಾದಿಯನ್ನು ಮಹಿಳಾ ವಿಭಾಗದ ಉಪ ಕಾರ್ಯಾಧ್ಯಕ್ಷೆ ಇಂದಿರಾ ಮೊಲಿ ಓದಿದರು. ಮಹಿಳಾ ವಿಭಾಗದ ಸಂಚಾಲಕಿ ಉಷಾ ಪಿ. ಸುವರ್ಣ ಕಾರ್ಯಕ್ರಮ ನಿರ್ವಹಿಸಿದರು. ಮಹಿಳಾ ವಿಭಾಗದ ಸದಸ್ಯೆ ಸವಿತಾ ಭಟ್‌ ವಂದಿಸಿದರು.

ಟಾಪ್ ನ್ಯೂಸ್

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

1-qeqewqe

Amethi; ಸ್ಮೃತಿ ಇರಾನಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ವಿಕಾಸ್ ಅಗ್ರಹಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.