ಕರ್ನಾಟಕ ಸಂಘ ಮುಂಬಯಿ ಕಚೇರಿಗೆ ಸಚಿವ ಎಚ್‌.ಆಂಜನೇಯ 


Team Udayavani, Dec 18, 2017, 4:42 PM IST

17-Mum08.jpg

ಮುಂಬಯಿ: ಮುಂಬಯಿ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾಗಿರುವ ಪ್ರತಿಷ್ಠಿತ ಮಾಟುಂಗ ಪಶ್ಚಿಮದ ಕರ್ನಾಟಕ ಸಂಘ ಮುಂಬಯಿ ಕಚೇರಿಗೆ ಡಿ. 17ರಂದು ಅಪರಾಹ್ನ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಸಚಿವ ಎಚ್‌. ಆಂಜನೇಯ ಮತ್ತು ಶ್ರೀಮದ್‌ ಉಜ್ಜುನಿ ಸದ್ಧರ್ಮ ಸಿಂಹಾಸನಾಧೀಶ  ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ| ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಸಚಿವರನ್ನು ಕರ್ನಾಟಕ ಸಂಘ ಮುಂಬಯಿ ಇದರ ಅಧ್ಯಕ್ಷ ಮನೋಹರ್‌ ಎಂ. ಕೋರಿ ಸ್ವಾಗತಿಸಿ, ಪುಷ್ಪಗುತ್ಛ ಮತ್ತು ಸ್ಮರಣಿಕೆಯನ್ನಿತ್ತು ಗೌರವಿಸಿ ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಡಾ| ಶಿವಮೂರ್ತಿ ಸ್ವಾಮೀಜಿಯವರು, ಇಲ್ಲಿ ಕರ್ನಾಟಕ ಸಂಘವು ಕನ್ನಡಿಗ  ಮನಸ್ಸುಗಳನ್ನು ಒಗ್ಗೂಡಿಸುವಲ್ಲಿ ಮಹತ್ತರ ಪಾತ್ರ ವಹಿಸಿದೆ. ನೀವು ನಿಜವಾದ ಕನ್ನಡಿಗರು. ಒಳನಾಡ ನಾಯಕರ ನಡವಳಿಕೆಯಿಂದ ಕನ್ನಡದ ಪ್ರಾಬಲ್ಯತೆ ಕ್ಷೀಣಿಸುತ್ತಿದೆ. ತಮ್ಮೆಲ್ಲರ ನಿರೀಕ್ಷಿತ ಕರ್ನಾಟಕ ಸಂಘದ ಸಭಾಗೃಹದ ಕಾಮಗಾರಿ ಶೀಘ್ರವೇ ಆರಂಭಗೊಂಡು ಅಲ್ಪಾವಧಿಯಲ್ಲೇ ಪೂರ್ಣಗೊಳ್ಳಲಿ ಎಂದು ಹರಸಿದರು.

ಹೊರನಾಡ ಕನ್ನಡಿಗರಾಗಿದ್ದೂ ಕರ್ಮಭೂಮಿ ಮರಾಠಿ ನೆಲದಲ್ಲೂ ಈ ಸಂಸ್ಥೆಯನ್ನು ಸುಮಾರು ಎಂಟೂವರೆ ದಶಕಗಳಿಂದ ಹೆಮ್ಮರವಾಗಿ ಬೆಳೆಸಿ ಕನ್ನಡಾಂಬೆಯ ಸೇವೆಯೊಂದಿಗೆ ಕರ್ನಾಟಕದ ಜನತೆಗೆ ನೆರಳಾಗಿರುವ ಸಂಘದ ಬಗ್ಗೆ ಸಚಿವ ಆಂಜನೇಯ ಹರ್ಷ ವ್ಯಕ್ತಪಡಿಸಿದರು. ಸಂಘವು ಹಮ್ಮಿಕೊಂಡಿರುವ ಬೃಹತ್‌ ಯೋಜನೆಗೆ ಕರ್ನಾಟಕ ಸರಕಾರದ ವತಿಯಿಂದ ಆರ್ಥಿಕ ನೆರವು ನೀಡುವ ಬಗ್ಗೆ ಭರವಸೆ ನೀಡಿದರು.

ಮುಂಬಯಿಯಲ್ಲಿ ಕನ್ನಡ ಒಂದೇ ಎಲ್ಲರ ಜೀವಾಳವಾಗಿದೆ.   ಇಲ್ಲಿನ ಕನ್ನಡಿಗರ ಸಾಧನೆ ಅನುಕರಣೀಯವಾಗಿದೆ.  ಆದ್ದರಿಂದ ತವರು ಮನೆಯಿಂದ ನೆರವಿನ ಅವಶ್ಯಕತೆಯಿದೆ. ಅಂಬೇಡ್ಕರ್‌ ಅವರಿಗೂ ಈ ಸಂಘಕ್ಕೂ ಬಹಳ ನಿಕಟ ಸಂಬಂಧವಿದೆ. ಮುಂಬಯಿ ಕನ್ನಡಿಗರ ಗೋಳು ನಿವಾರಣೆಯಾಗಬೇಕಾಗಿದೆ. ಸರಕಾರದಿಂದ ಅಂತಲ್ಲ ನಮ್ಮ ತವರೂರ ಕೊಡುಗೆಯ ಅನುದಾನ ಬಯಸುತ್ತಿದ್ದೇವೆ ಎಂದು ಡಾ| ಬಿ. ಆರ್‌.  ಮಂಜುನಾಥ್‌ ಅವರು ನುಡಿದರು.

ಅವಿನಾಶ್‌ ಆರ್ಯ, ಓಂದಾಸ್‌ ಕಣ್ಣಂಗಾರ್‌, ಡಾ| ಎಸ್‌. ಕೆ. ಭವಾನಿ, ಮೋಹನ್‌ ಮಾರ್ನಾಡ್‌, ಅಶೋಕ್‌ ಎಸ್‌. ಸುವರ್ಣ, ಕೋಶಾಧಿಕಾರಿ ನ್ಯಾಯವಾದಿ  ಎಂ. ಡಿ. ರಾವ್‌, ಬಿ. ಜಿ. ನಾಯಕ್‌ ಮತ್ತಿತರರು ಉಪಸ್ಥಿತರಿದ್ದರು. ಡಾ| ಮಮತಾ ರಾವ್‌, ಸುಶೀಲಾ ಎಸ್‌. ದೇವಾಡಿಗ, ಯಶೋದಾ ಶೆಟ್ಟಿ ಅವರು ಶ್ರೀಗಳಿಗೆ ಆರತಿ ಬೆಳಗಿ ಬರಮಾಡಿಕೊಂಡರು. ಸಂಘದ ಗೌರವ ಪ್ರಧಾನ ಕಾರ್ಯದರ್ಶಿ   ಡಾ| ಭರತ್‌ ಕುಮಾರ್‌ ಪೊಲಿಪು ಅವರು  ವಂದಿಸಿದರು.    

ಚಿತ್ರ- ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.