ಮೀರಾ-ಭಾಯಂದರ್‌ ದಕ್ಷಿಣ ಭಾರತೀಯ ಬಿಜೆಪಿ:ಸಾಂಸ್ಕೃತಿಕ ಕಾರ್ಯಕ್ರಮ


Team Udayavani, Aug 16, 2017, 12:14 PM IST

15-Mum05a.jpg

ಮುಂಬಯಿ: ನಿಸ್ವಾರ್ಥ ಕಾರ್ಯ ಕರ್ತರು ಪಕ್ಷ ಬೆಳವಣಿಗೆಯ ಭದ್ರತೆಯ ಹರಿಕಾರರು. ಇವರು ಅಧಿಕಾರ, ಅಂತಸ್ತುಗಳಿಂದ ಸದಾ ದೂರ ಉಳಿದು ಪಕ್ಷ ನಿಷ್ಠೆಯನ್ನು ಮೇಳೈಸಿಕೊಂಡವರು. ನಾಯಕತ್ವ ಗುಣ ಎಲ್ಲರಲ್ಲೂ ಇದೆ. ಆದರೆ ಎಲ್ಲರಿಗೂ ಟಿಕೆಟ್‌ ನೀಡುವುದು ಅಸಾಧ್ಯ. ಟಿಕೆಟ್‌ ಆಕಾಂಕ್ಷಿಗಳು ತನಗೆ ಸ್ಥಾನಮಾನ ನೀಡಲಿಲ್ಲ ಎಂದು ಬೇಸರಿಸದೆ ಪಕ್ಷದ ಒಳಿತಿಗಾಗಿ ನಿಷ್ಠೆ ಮತ್ತು  ಶ್ರದ್ಧೆಯಿಂದ ದುಡಿಯಬೇಕು. ಆ. 20 ರಂದು ನಡೆಯಲಿರುವ ಮೀರಾ-ಭಾಯಂದರ್‌ ನಗರ ಪಾಲಿಕೆಯ ಚುನಾವಣೆಯಲ್ಲಿ ಬಿಜೆಪಿಯನ್ನು ಬಹುಮತದೊಂದಿಗೆ ಆಯ್ಕೆ ಮಾಡಬೇಕು ಎಂದು ಸಂಸದ ಗೋಪಾಲ್‌ ಶೆಟ್ಟಿ  ಹೇಳಿದರು.

ಆ. 14 ರಂದು ಸಂಜೆ ಮೀರಾರೋಡ್‌ ಸೆವೆನ್‌ ಸ್ಕ್ವೇರ್‌ ಶಾಲಾ ಮೈದಾನದಲ್ಲಿ ಮೀರಾ- ಭಾಯಂದರ್‌ ದಕ್ಷಿಣ ಭಾರತೀಯ ಬಿಜೆಪಿ ಘಟಕ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಕನ್ನಡಿಗರಾದ ಭಾರತೀಯ ಜನತ ಪಕ್ಷದ ಅಭ್ಯರ್ಥಿಗಳಾದ ಅರವಿಂದ ಶೆಟ್ಟಿ, ರೈಮಾ ಜಯಶೀಲ ತಿಂಗಳಾಯ, ಉಷಾ ಕರ್ಕೇರ, ಗಣೇಶ್‌  ಶೆಟ್ಟಿ ಅವರನ್ನು ಅಭಿನಂದಿಸಿ, ಗೌರವಿಸಿ ಶುಭಹಾರೈಸಿದರು.

ದಕ್ಷಿಣ ಭಾರತೀಯ ಬಿಜೆಪಿ ಘಟಕದ ಅಧ್ಯಕ್ಷ ಉದಯ ಆರ್‌. ಹೆಗ್ಡೆ ಎಲಿಯಾಳ ಅವರು ಮಾತನಾಡಿ, ಪ್ರಥಮ ಬಾರಿ ಬಿಜೆಪಿಯು ದಕ್ಷಿಣ ಭಾರತೀಯರಿಗೆ ಮೀರಾ-ಭಾಯಂದರ್‌ ನಗರ ಪಾಲಿಕೆಯಲ್ಲಿ 4 ಸ್ಥಾನಗಳನ್ನು ಕಲ್ಪಿಸಿದೆ. ಪ್ರತಿಯೋರ್ವ ಅಭ್ಯರ್ಥಿಯು ಮನೆಮನೆಗೆ ಭೇಟಿನೀಡಿ ಚುನಾವಣೆ ಪ್ರಚಾರದೊಟ್ಟಿಗೆ ಕಾರ್ಯಸಾಧನೆಯನ್ನು ತಿಳಿಸಬೇಕು. ಕೇಂದ್ರ, ರಾಜ್ಯದಂತೆ ಮೀರಾ-ಭಾಯಂದರ್‌ ನಗರ ಪಾಲಿಕೆಯಲ್ಲಿ ಭಾರತೀಯ ಜನತಾ ಪಕ್ಷ ಸ್ಪಷ್ಟ ಬಹುಮತದೊಂದಿಗೆ ಆಡಳಿತ ನಡೆಸುವಂತೆ ಮತದಾರರು ಸಹಕರಿಸಬೇಕು ಎಂದರು.

ಬಿಜೆಪಿ ಮೀರಾ-ಭಾಯಂದರ್‌ ಜಿಲ್ಲಾ ಕಾರ್ಯದರ್ಶಿ ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿಗುತ್ತು ಅವರು ಮಾತನಾಡಿ, ಶಾಸಕ ನರೇಂದ್ರ ಮೆಹ್ತಾರ ಶಿಫಾರಾಸಿನಂತೆ ದಕ್ಷಿಣ ಭಾರತೀಯರಿಗೆ ಬಂಪರ್‌ ಕೊಡುಗೆ ಲಭಿಸಿದೆ. ಬಹುಮತ ವಿಜಯದೊಂದಿಗೆ ಅವರ ಋಣ ತೀರಿಸುವುದು ಪ್ರತಿಯೋರ್ವ ಅಭ್ಯರ್ಥಿಯ ಕರ್ತವ್ಯವವಾಗಿದೆ ಎಂದು ನುಡಿದು ಎಲ್ಲಾ ಅಭ್ಯರ್ಥಿಗಳನ್ನು ಅಭಿನಂದಿಸಿ  ಶುಭಹಾರೈಸಿದರು.

ಶಾಸಕ ನರೇಂದ್ರ ಮೆಹ್ತಾ, ಅಭ್ಯರ್ಥಿ ಅರವಿಂದ ಶೆಟ್ಟಿ, ಮಹಿಳಾ ವಿಭಾಗದ ಉಪಾಧ್ಯಕ್ಷೆ ಲೀಲಾ ಡಿ. ಪೂಜಾರಿ ಅವರು ಮಾತನಾಡಿದರು. ಲೇಖಕ ಅರುಣ್‌ ಕುಮಾರ್‌ ಶೆಟ್ಟಿ ಎರ್ಮಾಳ್‌, ಚಿತ್ರನಟ ಜಿ. ಕೆ. ಕೆಂಚನಕೆರೆ ಅವರು ಷತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರ್ವಹಿಸಿದರು. ಶಾಲಿನಿ ಶೆಟ್ಟಿ, ಮಹಾಬಲ ಸಾಮಾನಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮವಾಗಿ ಊರಿನ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ಕೋಟಿ-ಚೆನ್ನಯ ಯಕ್ಷಗಾನ ಬಯಲಾಟ ನಡೆಯಿತು.

 ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.