ಮೀರಾರೋಡ್‌ ಪಲಿಮಾರು ಮಠ : ಭಜನ ಮಂಡಳಿಗಳ ಸಮಾವೇಶ


Team Udayavani, Oct 12, 2017, 3:46 PM IST

09-Mum02a.jpg

ಮುಂಬಯಿ: ಸನಾತನ ಧರ್ಮ, ಮಹಾಕಾವ್ಯ, ವೇದ ಪುರಾಣಗಳ ಒಳ-ಹೊರಗಿನ ವಾಸ್ತವಿಕ ಅರಿವುಗಳನ್ನು ಸರಳ ಭಾಷೆಯಲ್ಲಿ ದಾಸರು ಕೀರ್ತನೆಯ ಮೂಲಕ ಜಗತ್ತಿಗೆ ಸಾರಿದ್ದಾರೆ. ಸಮಾಜ, ಮನೆ, ಮನಸ್ಸಿನ ಅಂಕು-ಡೊಂಕು, ಢಾಂಬಿಕ ವಿಚಾರಧಾರೆಗಳ ಬಗ್ಗೆ ಎಚ್ಚರಿಸಿದ್ದಾರೆ. ಭಕ್ತರನ್ನು ಭಗವಂತನ ಸನ್ನಿಧಿಗೆ ಕೊಂಡೊಯ್ಯುವ ವಿಶೇಷ ಶಕ್ತಿ ಹೊಂದಿದ ಭಜನೆಯನ್ನು ಪರ್ಯಾಯ ಉತ್ಸವದ ಸಮಯದಲ್ಲಿ ಉಡುಪಿ ಶ್ರೀ ಕೃಷ್ಣನ ಕ್ಷೇತ್ರದಲ್ಲಿ ಮುಂದಿನ ವರ್ಷ ಜನ‌ವರಿ  18ರಿಂದ ನಿರಂತರವಾಗಿ ಎರಡು ವರ್ಷಗಳ ಕಾಲ ದಿನ ರಾತ್ರಿ ಆಯೋಜಿಸಲಾಗಿದೆ. 

ಮಹಾರಾಷ್ಟ್ರ ರಾಜ್ಯದ ಎಲ್ಲಾ ಭಜನ ಮಂಡಳಿಗಳು, ವಿವಿಧ ಜಾತಿ, ಸಂಘಟನೆಗಳು ಯಾವುದಾದರೊಂದು ದಿನವನ್ನು ಆಯ್ಕೆಮಾಡಿ ಹೆಸರನ್ನು  ನೋಂದಾಯಿಸಿ ಕೊಳ್ಳಬಹುದು. ಆರಾಧನಾ ಕಲೆಯಾದ ಶ್ರೀ ಗೋವಿಂ ದನ ಭಜನೆಯು ಕಲಿಯುಗದ ಮೋಕ್ಷ ಪ್ರಾಪ್ತಿಯ ದಾರಿದೀಪ ಎಂದು ದ್ವಿತೀಯ ಬಾರಿ ಪರ್ಯಾಯ ಪೀಠಾರೋಹಣ ಮಾಡಿಲಿರುವ ಪಲಿಮಾರು ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ ಅವರು ನುಡಿದರು.

ಅ.8ರಂದು ಮೀರಾರೋಡ್‌ ಪೂರ್ವದ ಪಲಿಮಾರು ಮಠದ ಬಾಲಾಜಿ ಸನ್ನಿಧಿಯಲ್ಲಿ ನಡೆದ ಮಹಾನಗರಗಳ ಭಜನ ಮಂಡಳಿಗಳ ಬೃಹತ್‌ ಸಮಾವೇಶಕ್ಕೆ ಚಾಲನೆ ನೀಡಿ, ಆಶೀರ್ವಚನ ನೀಡಿದ ಶ್ರೀಗಳು, ವಾಯು ಮಾಲಿನ್ಯವನ್ನು ಶುದ್ಧಿಗೊಳಿಸುವ, ಆರೋಗ್ಯಕರ ಪರಿಸರವನ್ನು ನಿರ್ಮಾಣಗೊಳಿಸುವ ಶ್ರೀ ಕೃಷ್ಣ ದೇವರ ಪ್ರೀಯವಾದ ತುಳಸಿ ಗಿಡವನ್ನು ಆರು ಎಕರೆ ಜಾಗ ದಲ್ಲಿ ಸುಮಾರು 15 ಲಕ್ಷ ತುಳುಸಿ ಗಿಡಗಳನ್ನು ನೆಡುವ ಯೋಜನೆ ಕಾರ್ಯಾ ರಂಭಗೊಂಡಿದೆ. ಪ್ರತಿದಿನ ಲಕ್ಷತುಳಸಿ ಅರ್ಚನೆ ಶ್ರೀ ಕೃಷ್ಣ ದೇವರಿಗೆ ಅರ್ಪಿತವಾಗಲಿದೆ. ಶ್ರೀ ಕೃಷ್ಣ ಸುವರ್ಣ ಗೋಪುರಕ್ಕೆ ಭಕ್ತಕೋಟಿ ಕಿಂಚಿತ್ತು ಕಾಣಿಕೆ ನೀಡಿ ಯೋಜನೆಯನ್ನು ಸಾಕಾರಗೊಳಿಸಬೇಕು. ಪರ್ಯಾ ಯೋತ್ಸವದಲ್ಲಿ ಪರಿಹಾರ ಸಮೇತ ಉಪಸ್ಥಿತರಿದ್ದು ಶ್ರೀ ಕೃಷ್ಣನ ಅನುಗ್ರಹಕ್ಕೆ ಪಾತ್ರರಾಗೋಣ ಎಂದರು.

ಮುಂಬಯಿ ಪರ್ಯಾಯ ಸಮಿತಿಯ ಗೌರವಾಧ್ಯಕ್ಷ ಡಾ| ಸೀತಾ ರಾಮ ಆಳ್ವ ಅವರು ಮಾತನಾಡಿ, ಶ್ರೀ ರಾಮನಂತೆ ಲೋಕೋದ್ಧಾರದ ಯೋಜನೆ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿಗಳದ್ದು. ಮನುಕುಲದ ಸೇವೆಯ ಮೂಲಕ ಸುಮಾರು 108 ಶಾಲೆಗಳ 32 ಸಾವಿರಕ್ಕೂ ಹೆಚ್ಚಿನ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುತ್ತಿದ್ದಾರೆ. ಚಿಣ್ಣರ ಶುಶ್ರೂಷ ಯೋಜನೆ, ವಿಶ್ವ ಸಂಜೀವಿನಿ ಟ್ರಸ್ಟ್‌ ಮೊದಲಾದ ಹಲವಾರು ಸಾಮಾಜಿಕ, ಸೇವಾ ಸಂಸ್ಥೆಗಳು ಯಶಸ್ವಿಯಾಗಿ ಸಾಗುತ್ತಿವೆ. ಶ್ರೀಗಳ ಯೋಜನಬದ್ಧ ಸುವರ್ಣ ಗೋಪುರ ಉಡುಪಿ ಶ್ರೀ ಕೃಷ್ಣನ ಸನ್ನಿಧಿಯಲ್ಲಿ ಕಾಣುವ ಸೌಭಾಗ್ಯ ನಮ್ಮದಾಗಿಸಿಕೊಳ್ಳೋಣ ಎಂದರು.

ಡೊಂಬಿವಲಿಯ ಗೋಪಾಲ್‌ ಆಚಾರ್ಯ ಅವರು ಸಂಕೀರ್ತ ನೆಯೊಂದಿಗೆ ಸ್ವಾಗತಿದರು. ಸುಪ್ರಸನ್ನ ಭಟ್‌ ಮತ್ತು ಲಕ್ಷ್ಮೀಶ್‌ ಭಟ್‌ ಪಕ್ಷಿಕೆರೆ ವೇದಘೋಷಗೈದರು. ಡಾ| ವಂಶಿ ಕೃಷ್ಣ ಆಚಾರ್ಯ ಪುರೋಹಿತ್‌ ಅವರು ಕಾರ್ಯಕ್ರಮ ನಿರ್ವಹಿಸಿದರು. 

ಪುತ್ತಿಗೆ ರಘುನಂದನ ಶರ್ಮ ಮಠದ ಮುಂದಿನ ಯೋಜನೆಗಳ ಬಗ್ಗೆ ವಿವರಿಸಿದರು. ಪಲಿಮಾರು ಮಠ ಮೀರಾರೋಡ್‌ ಶಾಖೆಯ ಪ್ರಬಂಧಕ, ಟ್ರಸ್ಟಿ ರಾಧಾಕೃಷ್ಣ ಭಟ್‌, ಟ್ರಸ್ಟಿ ಸಚ್ಚಿದಾನಂದ ರಾವ್‌, ಸಂಚಾಲಕ ಶ್ರೀಶ ಭಟ್‌, ತಿರುಪತಿ ದಾಸ ಸಾಹಿತ್ಯ ಪ್ರೊಜೆಕ್ಟ್‌ನ ಗೋಪಾಲ ಆಚಾರ್ಯ ಉಡುಪಿ, ಮಂತ್ರಾಲಯ ಗುರು ಸಾರ್ವಭೌಮ ದಾಸ ಸಾಹಿತ್ಯ ಪ್ರೊಜೆಕ್ಟ್‌ನ ಸದಾನಂದ ಶಾಸ್ತಿÅà, ಎಸ್‌. ಮೋಹನ್‌ ಆಚಾರ್ಯ ಬೆಂಗಳೂರು, ಎಸ್‌. ಸೀತಾ, ಮನೋಹರ್‌ ತಿರುಪತಿ, ಗುರುರಾಜ ಆಚಾರ್ಯ,  ಗಿರೀಶ್‌ ಆಚಾರ್ಯ ಕುತ್ಯಾರು, ನಾಗಾರಾಹಾಳ, ಸಂಜೀವ ಜೋಶಿ ಮೊದಲಾದವರು ಉಪಸ್ಥಿತರಿದ್ದರು. ಸ್ಥಳೀಯ ಹಾಗೂ ಪರಿಸರದ ವಿವಿಧ ಭಜನ ಮಂಡಳಿಗಳ ಸದಸ್ಯರು, ಸಮುದಾಯ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು. 

ಚಿತ್ರ-ವರದಿ : ರಮೇಶ್‌ ಅಮೀನ್‌

ಟಾಪ್ ನ್ಯೂಸ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.