ಮೀರಾರೋಡ್ ಶ್ರೀ ಶನೀಶ್ವರ ಮಂದಿರ: ನಾಗರ ಪಂಚಮಿ ಉತ್ಸವ
Team Udayavani, Aug 18, 2021, 1:30 PM IST
ಮೀರಾರೋಡ್: ಮೀರಾರೋಡ್ ಶ್ರೀ ಶನೀಶ್ವರ ಸೇವಾ ಸಮಿತಿಯ ಸಂಚಾಲಕತ್ವದ ಶ್ರೀ ಶನೀಶ್ವರ ಮಂದಿರದಲ್ಲಿ ನಾಗರ ಪಂಚಮಿ ಉತ್ಸ ವವು ಆ. 13ರಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.
ವಿದ್ವಾನ್ ವಿಷ್ಣುಮೂರ್ತಿ ಅಡಿಗ ಮತ್ತು ಮಂದಿರದ ಪ್ರದಾನ ಅರ್ಚಕ ನಿರಾವ್ ಭಟ್ ಅವರ ಪೌರೋ ಹಿತ್ಯದಲ್ಲಿ ನಡೆದ ಧಾರ್ಮಿಕ್ರಮದಲ್ಲಿ ಬೆಳಗ್ಗೆ 6 ರಿಂದ ಕ್ಷೇತ್ರ ಶುದ್ಧೀಕರಣ, ಬೆಳಗ್ಗೆ ‰8ರಿಂದ ತನು ಸೇವೆ, ತಂಬಿಲ ಸೇವೆ, ಪಂಚಾಮೃತ ಅಭಿಷೇಕ, ಅಶ್ಲೇಷಾ ಬಲಿ ಸೇವೆ, ಭಜನ ಕಾರ್ಯಕ್ರಮ ನಡೆಯಿತು. ವಿಜಯ ಶೆಟ್ಟಿ ಮೂಡುಬೆಳ್ಳೆ ಇವರ ತಂಡದಿಂದ ಭಕ್ತಿ ರಸಮಂಜರಿ ಭಕ್ತರ ಗಮನ ಸೆಳೆಯಿತು. ಮಧ್ಯಾಹ್ನ ಮಹಾಮಂಗಳಾರತಿ ಬಳಿಕ ತೀರ್ಥಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು.
ಇದನ್ನೂ ಓದಿ:ತಾಲಿಬಾನ್ ಉಗ್ರರಿಗೆ ಸಡ್ಡು ಹೊಡೆದು ಪಡೆ ಕಟ್ಟಿದ್ದ ಮಹಿಳಾ ಗವರ್ನರ್ ಸಲೀಮಾ ಸೆರೆ!
ಅನ್ನಸಂತಪಣೆಯ ಸೇವಾಕರ್ತ ರಾದ ವಿನೋದ್ ನಿರ್ಮಲಾ ವಾಘಷಿಯ ಅವರನ್ನು ಮಂದಿರದ ವತಿಯಿಂದ ಫಲವಸ್ತು, ಪ್ರಸಾದವನ್ನಿತ್ತು ಗೌರವಿಸಲಾಯಿತು. ವಿವಿಧ ಸೇವೆಗ ಳನ್ನು ನೀಡಿದ ಮಾಲಾ ಜೈನ್, ಪ್ರಸಾದದ ಸೇವಾಕರ್ತರಾದ ವಾಸಂತಿ ಶೆಟ್ಟಿ, ಪ್ರೇಮಾ ಶೇಖರ್ ಪೂಜಾರಿ ಅವರನ್ನು ಮಂದಿರದ ವತಿಯಿಂದ ಗೌರವಿಸಲಾ ಯಿತು. ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ನಾಗರ ದೇವರ ಕೃಪೆಗೆ ಪಾತ್ರರಾದರು. ಕೊರೊನಾ ಮಾರ್ಗಸೂಚಿಗಳಿಗೆ ಅನುಗುಣವಾಗಿ ಕಾರ್ಯಕ್ರಮವನ್ನು ಸರಳ ರೀತಿಯಲ್ಲಿ ಆಚರಿಸಲಾಯಿತು. ಸಮಿತಿಯ ಉಪಾಧ್ಯಕ್ಷ ಗುಣಕಾಂತ ಶೆಟ್ಟಿ ಕರ್ಜೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ
ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್ ಆಫ್ ಅಟಾರ್ನಿ, ದೂರು ದಾಖಲು
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ