ಮೀರಾರೋಡ್‌ ಶ್ರೀ ಶನೈಶ್ಚರ ಸೇವಾ ಟ್ರಸ್ಟ್‌:ವಾರ್ಷಿಕ ಮಹಾಪೂಜೆ


Team Udayavani, Feb 13, 2018, 3:55 PM IST

1101mum02a.jpg

ಮುಂಬಯಿ: ಮೀರಾರೋಡ್‌ ಪೂರ್ವದ ನ್ಯೂ ಪ್ಲೆಸೆಂಟ್‌ ಪಾರ್ಕ್‌ ಮೀರಾಧಾಮ್‌ ಸೊಸೈಟಿಯಲ್ಲಿರುವ ಶ್ರೀ ಶನೀಶ್ವರ ಸೇವಾ ಚಾರಿಟೇಬಲ್‌ ಟ್ರಸ್ಟ್‌ ನ ಶ್ರೀ ಶನೈಶ್ಚರ ದೇವರ ಸನ್ನಿಧಾನದಲ್ಲಿ ಫೆ. 10 ರಂದು 14 ನೇ ವಾರ್ಷಿಕ ಶ್ರೀ ಶನಿಮಹಾಪೂಜೆಯು ಬೊರಿವಲಿ ಪೂರ್ವ ಸಾವರಾ³ಡಾದ ಶ್ರೀ ಶನಿಮಂದಿರದ ಪ್ರಧಾನ ಅರ್ಚಕ ಪೆರ್ಡೂರು ವಿಷ್ಣುಮೂರ್ತಿ ಅಡಿಗ ಅವರ ಪೌರೋಹಿತ್ಯದಲ್ಲಿ ಹಾಗೂ ಮಂದಿರದ ಸರ್ವ ಸದಸ್ಯರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರಗಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ 6 ರಿಂದ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, ಪಂಚಾಮೃತ ಅಭಿಷೇಕ, ನವಕ ಕಲಶಾಭಿಷೇಕ, ಗಣಹೋಮ, ಬೆಳಗ್ಗೆ 9 ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ, ಮಧ್ಯಾಹ್ನ 12 ರಿಂದ ಶ್ರೀ ಶನಿದೇವರ ಕಲಶ ಪ್ರತಿಷ್ಠಾಪನೆ, ಮಂಡಳಿಯ ಸದಸ್ಯರಿಂದ ಹಾಗೂ ಆಹ್ವಾನಿತ ಸದಸ್ಯರಿಂದ ಶನಿದೇವರ ಸಂಪೂರ್ಣ ಶನಿಗ್ರಂಥ ಪಾರಾಯಣ ನೆರವೇರಿತು. ಪ್ರಥಮ ವಾಚಕರಾಗಿ ಅಚ್ಯುತ ಕೋಟ್ಯಾನ್‌, ಪ್ರಥಮ ಅರ್ಧದಾರಿಯಾಗಿ ಪುರಂದರ ಶ್ರೀಯಾನ್‌ ಸಹಕರಿಸಿದರು.

ವಾಚಕರಾಗಿ ನಾಗೇಶ್‌ ಕರ್ಕೇರ, ಉಷಾ ಶೆಟ್ಟಿಗಾರ್‌, ಗೋಪಾಲ್‌ ದೇವಾಡಿಗ, ವಸಂತಿ ಶೆಟ್ಟಿ, ಸದಾಶಿವ ಪುತ್ರನ್‌, ಅನಿಲ್‌ ಕುಕ್ಯಾನ್‌ ಹಾಗೂ ಅರ್ಥದಾರಿಗಳಾಗಿ ಕೇಶವ ಕಾಂಚನ್‌, ಬಾಲಚಂದ್ರ ಅವರು ಸಹಕರಿಸಿದರು. ಆನಂತರ  ಸದಸ್ಯರಿಂದ ಭಜನೆ ಮತ್ತು ಸಂಕೀರ್ತನೆ, ಸಂಜೆ 5 ರಿಂದ ರಂಗಪೂಜೆ, ಸಂಕಲ್ಪ ವಿಧಿ, ಗುರುಪೂಜೆ, ಶ್ರೀ ಶನಿದೇವರಿಗೆ ಮಹಾಮಂಗಳಾರತಿ, ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು. 

ರಾತ್ರಿ 7 ರಿಂದ ಕಟೀಲು ಸದಾನಂದ ಶೆಟ್ಟಿ ಇವರ ನಿರ್ದೇಶನದಲ್ಲಿ ಶ್ರೀ ಶನೀಶ್ವರ ಕೃಪಾಪೋಷಿತ ಮಕ್ಕಳ ಮೇಳ ಮೀರಾರೋಡ್‌ ಮತ್ತು ಶ್ರೀ ಭಾÅಮರಿ ಯಕ್ಷನೃತ್ಯ ಕಲಾನಿಲಯ ಮೀರಾರೋಡ್‌ ಇದರ ಬಾಲ ಪ್ರತಿಭೆಗಳಿಂದ ಕೋಟಿ-ಚೆನ್ನಯ ಯಕ್ಷಗಾನ ಪ್ರದರ್ಶನಗೊಂಡಿತು. 

ಸಮ್ಮಾನ
ಇದೇ ಸಂದರ್ಭದಲ್ಲಿ ಮಂದಿರದ ಸದಸ್ಯರುಗಳಾದ ಸುರೇಶ್‌ ಕೋಟ್ಯಾನ್‌, ರಾಧಾ ಕೋಟ್ಯಾನ್‌ ದಂಪತಿ, ದೇವರಾಜ್‌ ಪೂಜಾರಿ, ಲೀಲಾ ಪೂಜಾರಿ ದಂಪತಿ ಹಾಗೂ ಯಕ್ಷಗಾನ ನಿರ್ದೇಶಕ ಕಟೀಲು ಸದಾನಂದ ಶೆಟ್ಟಿ ಮತ್ತು 14 ನೇ ವಾರ್ಷಿಕ ಶ್ರೀ ಶನಿಮಹಾಪೂಜೆಗೆ ನಿಸ್ವಾರ್ಥವಾಗಿ ಸೇವೆಗೈದ ಕಟೀಲು ಶ್ರೀ ದುರ್ಗಾಪರಮೇಶ್ವರಿ ಮಂಟಪ, ನಾಗದೇವರ ಮಂಟಪ, ಗಣಪತಿ ಮಂಟಪ, ಹನುಮಾನ್‌ ದೇವರ ಮಂಟಪ, ಶನಿದೇವರ ಆಕರ್ಷಣೀಯ ಮಂಟವನ್ನು ರಚಿಸಿದ ಮೀರಾರೋಡ್‌ನ‌ ಗಿರೀಶ್‌ ಕರ್ಕೇರ, ಪುರುಷೋತ್ತಮ ಮಂಚಿ, ಸದಾನಂದ ಇವರನ್ನು ಮಂದಿರದ ಪರವಾಗಿ ಗಣ್ಯರ ಸಮ್ಮುಖದಲ್ಲಿ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು. ಪರಿಸರದ ವಿವಿಧ ಸಂಘಟನೆಗಳ ಪದಾಧಿಕಾರಿಗಳನ್ನು ಪ್ರಸಾದವನ್ನಿತ್ತು ಗೌರವಿಸಲಾಯಿತು. ರಾತ್ರಿ 7.30 ರಿಂದ ರಾತ್ರಿ 10 ರವರೆಗೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಸುಮಾರು ಮೂರುವರೆ ಸಾವಿರಕ್ಕೂ ಅಧಿಕ  ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು.

ಮಂದಿರದ ಗೌರವಾಧ್ಯಕ್ಷ ವಿನೋದ್‌ ವಾಘಾಸಿಯಾ, ಅಧ್ಯಕ್ಷ ವಿದ್ಯಾ ಅಶೋಕ್‌ ಕರ್ಕೇರ, ಉಪಾಧ್ಯಕ್ಷ ಗೋಪಾಲ್‌ ದೇವಾಡಿಗ, ಕಾರ್ಯದರ್ಶಿ ಗುಣಕಾಂತ್‌ ಶೆಟ್ಟಿ ಕರ್ಜೆ, ಜತೆ ಕಾರ್ಯದರ್ಶಿಗಳಾದ  ಜಯಕರ ಶೆಟ್ಟಿ ಮತ್ತು ಲೀಲಾ ಪೂಜಾರಿ, ಕೋಶಾಧಿಕಾರಿ ಪುರಂದರ ಶ್ರೀಯಾನ್‌, ಜೊತೆ ಕೋಶಾಧಿಕಾರಿಗಳಾದ  ಅಚ್ಯುತ ಕೋಟ್ಯಾನ್‌ ಮತ್ತು ಸುಜಾತಾ ಶೆಟ್ಟಿ ಹಾಗೂ ಸಂಸ್ಥೆಯ ಟ್ರಸ್ಟಿಗಳು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ, ಸರ್ವ ಸದಸ್ಯರ, ಮಹಿಳಾ ಸದಸ್ಯೆಯರು ಸಹಕರಿಸಿದರು. 

ಚೆಂಡೆಯಲ್ಲಿ ಅಶೋಕ್‌ ಮತ್ತು ಬಳಗದವರು ಸಹಕರಿಸಿದರು. ಪ್ರತೀಕ್ಷಾ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಗುಣಕಾಂತ್‌ ಶೆಟ್ಟಿ ಕರ್ಜೆ ಕಾರ್ಯಕ್ರಮ ವಂದಿಸಿದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.