ಮೀರಾ-ಭಾಯಂದರ್ ಮನಪಾದಿಂದ ವಿದ್ಯಾರ್ಥಿಗಳಿಗೆ ಮೊಬೈಲ್ ಟ್ಯಾಬ್
Team Udayavani, Jul 5, 2021, 2:32 PM IST
ಭಾಯಂದರ್: ಮೀರಾ- ಭಾಯಂದರ್ ಮಹಾನಗರ ಪಾಲಿಕೆಯ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೊಬೈಲ್ ಟ್ಯಾಬ್ ನೀಡುವಂತೆ ಒತ್ತಾಯಿಸಲಾಗಿದ್ದು, ಅದರಂತೆ ವಿದ್ಯಾರ್ಥಿಗಳಿಗೆ ಮೊಬೈಲ್ ಟ್ಯಾಬ್ಗಳನ್ನು ನೀಡುವ ನಿರ್ಣಯವನ್ನು ಸಾಮಾನ್ಯ ಮಂಡಳಿಯ ಸಭೆಯಲ್ಲಿ ಬಹುಮತದಿಂದ ಅಂಗೀಕರಿಸಲಾಯಿತು.
ಮನಪಾ ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಸಂಖ್ಯೆಯ ಬಗ್ಗೆ ವರದಿ ಸಲ್ಲಿಸುವಂತೆ ಕೇಳಲಾಗಿದ್ದು, ಸಮಿತಿಯನ್ನು ರಚಿಸಲಾಗುವುದು ಎಂದು ಮೇಯರ್ ಜ್ಯೋತ್ಸಾ$° ಹಸ್ನಾಲೆ ಮಾಹಿತಿ ನೀಡಿದ್ದಾರೆ.
ಹೊಸ ಶೈಕ್ಷಣಿಕ ವರ್ಷ ಆನ್ಲೈನ್ನಲ್ಲಿ ಪ್ರಾರಂಭವಾಗುತ್ತಿದ್ದಂತೆ, ಮೀರಾ-ಭಾಯಂದರ್ ಮುನ್ಸಿಪಲ್ ಶಾಲೆಯಲ್ಲಿ ಓದುತ್ತಿರುವ ಆರ್ಥಿಕ ವಾಗಿ ಹಿಂದುಳಿದ ವಿದ್ಯಾರ್ಥಿಗಳು ಶಾಲೆಯನ್ನು ಮುಚ್ಚುವುದರಿಂದ ಶಿಕ್ಷಣದಿಂದ ವಂಚಿತ ರಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಆದ್ದರಿಂದ ಮನಪಾ ಆಡಳಿತವು ಇದನ್ನು ಗಂಭೀರವಾಗಿ ಪರಿಗಣಿಸಿ ಸಾಮಾನ್ಯ ಸಭೆಯಲ್ಲಿ ಮಕ್ಕಳಿಗೆ ಆನ್ಲೈನ್ ಕಲಿಕೆಗೆ ಅನುಕೂಲವಾಗುವಂತೆ ಟ್ಯಾಬ್ಗಳನ್ನು ನೀಡಲು ನಿರ್ಧರಿಸಿತು.
ಆಡಳಿತದ ನಿರ್ಲಕ್ಷ್ಯದಿಂದಾಗಿ ಮುಚ್ಚಿರುವ ಶಾಲೆಗಳು
ಕೊರೊನಾ ಸೋಂಕು ಹೆಚ್ಚುತ್ತಿರುವ ಕಾರಣ ಕಳೆದ ಒಂದೂವರೆ ವರ್ಷ
ಗಳಿಂದ ಶಾಲೆಗಳನ್ನು ಮುಚ್ಚಲಾಗಿದೆ. ಕೊರೊನಾದ ಸಂಭವನೀಯ 3ನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎಂದು ತಿಳಿಸಲಾಗಿದೆ. ಇದರಿಂದ ವ್ಯಾಕ್ಸಿನೇಶನ್ ಪೂರ್ಣಗೊಳ್ಳುವವರೆಗೆ ಶಾಲೆಯನ್ನು ಪ್ರಾರಂಭಿಸಲಾಗುವುದಿಲ್ಲ ಎಂಬುವುದು ಸ್ಪಷ್ಟವಾಗುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಆನ್ಲೈನ್ನಲ್ಲಿ ಹೊಸ ಶಿಕ್ಷಣ ವ್ಯವಸ್ಥೆಯನ್ನು ಜಾರಿಗೆ ತರುವ ಮೂಲಕ ಜೂ. 7ರಿಂದ ಶಾಲೆಗಳನ್ನು ಪ್ರಾರಂಭಿಸಲು ರಾಜ್ಯ ಸರಕಾರವು ಸೂಚನೆ ನೀಡಿದೆ. ಆದರೆ ಮನಪಾ ಶಾಲೆ
ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಾಮಗ್ರಿಗಳ ಕೊರತೆ ಇದ್ದು, ಆಡಳಿತದ ನಿರ್ಲಕ್ಷ éದಿಂದಾಗಿ ಶಾಲೆ ಗಳನ್ನು ಇನ್ನೂ ಪ್ರಾರಂಭಿಸಿಲ್ಲ ಎಂಬುದು ಬೆಳಕಿಗೆ ಬಂದಿದೆ.
ಬಿಜೆಪಿ ಗಂಭೀರ ಆರೋಪ
ವಿದ್ಯಾರ್ಥಿಗಳ ಸಂಖ್ಯೆಯನ್ನು ನಿರ್ಧರಿಸುವ ಸಮೀಕ್ಷೆ ನಡೆಸುವ ಮತ್ತು ಆನ್ಲೈನ್ ತರಗತಿಗಳನ್ನು ಭರ್ತಿ ಮಾಡುವ ಕಾರ್ಯಗಳು ಇನ್ನೂ ಪೂರ್ಣ ಗೊಂಡಿಲ್ಲವಾದ್ದರಿಂದ ಶೈಕ್ಷಣಿಕ ವರ್ಷದ ಶಾಲೆಗಳು ಇನ್ನೂ ಮುಚ್ಚಲ್ಪಟ್ಟಿವೆ ಎಂದು ಆಡಳಿತ ಪಕ್ಷದ ಬಿಜೆಪಿ ಕಾರ್ಪೊರೇಟರ್ ಧ್ರುವಿ ಕಿಶೋರ್ ಪಾಟೀಲ್ ಸಾಮಾನ್ಯ ಮಂಡಳಿಯ ಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. ಈ ಮಧ್ಯೆ ಶಾಲೆ ತೆರೆದಿರು ತ್ತದೆ. ಆದರೆ ವಿದ್ಯಾರ್ಥಿಗಳ ಸಂಖ್ಯೆ ಯನ್ನು ಇನ್ನೂ ನಿರ್ಧರಿಸಲಾಗಿಲ್ಲ. ಪ್ರಸ್ತುತ ಹೊಸ ಪ್ರವೇಶಗಳು ನಡೆಯುತ್ತಿವೆ ಎಂದು ಶಿಕ್ಷಣಾಧಿಕಾರಿ ಊರ್ಮಿಳಾ ಪಾರ್ಧೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು