ಶಾಖೆಯ ಅಭಿವೃದ್ಧಿಗೆ ಗ್ರಾಹಕರ ಸಹಕಾರ ಅಗತ್ಯ: ಆಲ್ಬರ್ಟ್‌ ಡಬ್ಲ್ಯು. ಡಿ’ಸೋಜಾ


Team Udayavani, Mar 24, 2021, 11:45 AM IST

ಶಾಖೆಯ ಅಭಿವೃದ್ಧಿಗೆ ಗ್ರಾಹಕರ ಸಹಕಾರ ಅಗತ್ಯ: ಆಲ್ಬರ್ಟ್‌ ಡಬ್ಲ್ಯು. ಡಿ’ಸೋಜಾ

ಮುಂಬಯಿ: ಪ್ರತಿಷ್ಠಿತ ಮೋಡೆಲ್‌ ಕೋ-ಆಪರೇಟಿವ್‌ ಬ್ಯಾಂಕ್‌ ಇದರ ಸ್ಥಳಾಂತರಿತ ಮುಲುಂಡ್‌ ಪಶ್ಚಿಮದ ಶಾಖೆಯು ಮಾ. 22 ರಂದು ಪೂರ್ವಾಹ್ನ ಮುಲುಂಡ್‌ ಪಶ್ಚಿಮದ ನಾಹೂರ್‌ ರಸ್ತೆಯಲ್ಲಿನ ಕಂಡೊç ಅಪಾರ್ಟ್‌ಮೆಂಟ್‌ನಲ್ಲಿ ಲೋಕಾರ್ಪಣೆಗೊಂಡಿತು.

ಬ್ಯಾಂಕ್‌ನ ಕಾರ್ಯಾಧ್ಯಕ್ಷ ಆಲ್ಬರ್ಟ್‌ ಡಬ್ಲ್ಯು. ಡಿ’ಸೋಜಾ ಸಾರಥ್ಯದಲ್ಲಿ  ಜರಗಿದ ಸರಳ ಕಾರ್ಯಕ್ರಮದಲ್ಲಿ  ಮುಂಬಯಿ ಪ್ರದೇಶ ಕಾಂಗ್ರೆಸ್‌ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಾನೆಟ್‌ ಲಾರೆನ್ಸ್‌ ಡಿ’ಸೋಜಾ ಅತಿಥಿಯಾಗಿ ಪಾಲ್ಗೊಂಡು ರಿಬ್ಬನ್‌ ಕತ್ತರಿಸಿ ಸ್ಥಳಾಂತರಿತ ಶಾಖೆಯನ್ನು ಉದ್ಘಾಟಿಸಿದರು. ಸೈಂಟ್‌ ಪಾಯಸ್‌-10 (ಟೆಂಥ್‌) ಚರ್ಚ್‌ ಮುಲುಂಡ್‌

ಇದರ ಪ್ರಧಾನ ಧರ್ಮಗುರು ರೆ| ಫಾ| ಜಾರ್ಜ್‌ ಅಥೈಡೆ ದೀಪ ಪ್ರಜ್ವಲಿಸಿ ಆಶೀರ್ವಚನ ನೀಡಿ, ಶಾಖೆಯ ಸೇವೆಗಳಿಗೆ ಚಾಲನೆ ನೀಡಿದರು.

ಉಪಸ್ಥಿತ ಗಣ್ಯರಿಗೆ ಆಲ್ಬರ್ಟ್‌ ಡಿ’ಸೋಜಾ ಪುಷ್ಪಗುತ್ಛವನ್ನಿತ್ತು ಗೌರವಿಸಿ, ಶಾಖೆ ವಿಶಾಲವಾಗಿದ್ದು, ಗ್ರಾಹಕರ ಅನುಕೂಲಕ್ಕಾಗಿ ಅತ್ಯಾಧುನಿಕ ಸುಸಜ್ಜಿತ ಎಲ್ಲ ಸೌಲಭ್ಯಗಳನ್ನು ಹೊಂದಿದೆ. ಶಾಖೆಯು ಪಕ್ಕದಲ್ಲಿ  ವಾರದ 24 ಗಂಟೆಗಳ ಕಾಲ ಪೂರ್ಣಕಾಲಿಕ ನಗದು ಮತ್ತು ಮರುಬಳಕೆಯ (ಎಟಿಎಂ ಕಮ್‌ ಕ್ಯಾಶ್‌ ರಿಸೈಕ್ಲರ್‌) ಯಂತ್ರ ಹೊಂದಿದೆ. ಇದು ಬ್ಯಾಂಕ್‌ನ ಗ್ರಾಹಕರಿಗೆ ಮತ್ತು ಇತರ ಗ್ರಾಹಕರಿಗೆ ನಗದು ಸಂಬಂಧಿತ ಚಟುವಟಿಕೆಗಳಿಗಾಗಿ ಹಗಲಿರುಳು ಸೇವೆ ಸಲ್ಲಿಸುತ್ತದೆ. ಶಾಖೆಯಲ್ಲಿ ವಿನಯಶೀಲ ಸಿಬಂದಿಯಿದ್ದು, ಗ್ರಾಹಕರ ಅಗತ್ಯಗಳನ್ನು ತಮ್ಮ ವಹಿವಾಟು ನಿಶಾನೆ (ಟ್ರೇಡ್‌ಮಾರ್ಕ್‌) ವೃತ್ತಿಪರ ಮತ್ತು ತ್ವರಿತ ಸೇವೆಯೊಂದಿಗೆ ಪೂರೈಸಲಿದ್ದಾರೆ. ಶಾಖೆಯ ಅಭಿವೃದ್ಧಿಗೆ ಎಲ್ಲರ ಸಹಕಾರ ಸದಾಯಿರಲಿ ಎಂದು ತಿಳಿಸಿದರು.

ಈ ಸಂದರ್ಭ ಬ್ಯಾಂಕ್‌ನ ಉಪ ಕಾರ್ಯಾಧ್ಯಕ್ಷ ವಿಲಿಯಂ ಸಿಕ್ವೇರಾ, ನಿರ್ದೇಶಕರಾದ ಸಿಎ ಪೌಲ್‌ ನಝರೆತ್‌, ಅಬ್ರಹಾಂ ಕ್ಲೇಮೆಂಟ್‌ ಲೋಬೋ, ಸಂಜಯ್‌ ಶಿಂಧೆ, ಲಾರೆನ್ಸ್‌ ಡಿ’ಸೋಜಾ, ಜೆರಾಲ್ಡ್‌ ಕರ್ಡೊಜಾ ಶುಭ ಕೋರಿದರು. ಸಹಾಯಕ ಪ್ರಧಾನ ಪ್ರಬಂಧಕ ನರೇಶ್‌ ಠಾಕೂರ್‌, ಉನ್ನತಾಧಿಕಾರಿಗಳು, ವಿವಿಧ ಶಾಖೆಗಳ ಮುಖ್ಯಸ್ಥರು, ಬ್ಯಾಂಕ್‌ನ ಷೇರುದಾರರು, ಸ್ಥಾನೀಯ ಗ್ರಾಹಕರು, ಹಿತೈಷಿಗಳು ಉಪಸ್ಥಿತರಿದ್ದರು. ಬ್ಯಾಂಕ್‌ನ ಪ್ರಧಾನ ಪ್ರಬಂಧಕ ಝೆನೊನ್‌ ಡಿ’ಕ್ರೂಜ್‌ ಸ್ವಾಗತಿಸಿ, ಬೈಬಲ್‌ ವಾಚಿಸಿದರು. ಪ್ರಧಾನ ಪ್ರಬಂಧಕ ಓಸ್ಡೆನ್ ಫೂನ್ಸೆಕಾ ಅತಿಥಿಗಳನ್ನು ಪರಿಚಯಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

 

ಚಿತ್ರ-ವರದಿ: ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.