ಮೋಡೆಲ್ ಕೋ ಆಪ್ ಬ್ಯಾಂಕ್ಗೆ “ಉತ್ಕೃಷ್ಟ ಸಾಧಕ ಬ್ಯಾಂಕ್’ ಪುರಸ್ಕಾರ
Team Udayavani, Mar 7, 2017, 5:14 PM IST
ಮುಂಬಯಿ: ದಿ. ಮಹಾ ರಾಷ್ಟ್ರ ಅರ್ಬನ್ ಕೋ- ಆಪರೇಟಿವ್ ಬ್ಯಾಂಕ್ಸ್ ಫೆಡರೇಶನ್ ಲಿಮಿಟೆಡ್ ಇದರ 2015-2016ರ ನೇ ಸಾಲಿನ ವಾರ್ಷಿಕ ಬ್ಯಾಂಕ್ ಪುರಸ್ಕಾರ ಪ್ರದಾನ ಸಮಾರಂಭವು ಮಾ. 6 ರಂದು ವಡಾಲದ ಭಾರತೀಯ ಕ್ರೀಡಾ ಮಂದಿರ ಸಂಕುಲದ ಸಭಾಗೃಹದಲ್ಲಿ ನಡೆಯಿತು.
ಫೆಡರೇಶನ್ ಅಧ್ಯಕ್ಷ ವಿದ್ಯಾಧರ್ ಅನಾಸ್ಕರ್ ಅಧ್ಯಕ್ಷತೆಯಲ್ಲಿ ಜರಗಿದ ಬ್ಯಾಂಕ್ಸ್ ಫೆಡರೇಶನ್ ಲಿಮಿಟೆಡ್ನ 38ನೇ ವಾರ್ಷಿಕ ಮಹಾಸಭೆ ಹಾಗೂ ವಾರ್ಷಿಕ ಪಾರಿತೋಷಕ ವಿತರಣ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಹಾರಾಷ್ಟ್ರ ಸಚಿವ ಸುಭಾಶ್ ರಾವ್ ದೇಶ್ಮುಖ್ ಉಪಸ್ಥಿತರಿದ್ದು ಮೋಡೆಲ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಸಂಸ್ಥೆ 2015-2016 ರ ಕ್ಯಾಲೆಂಡರ್ ವರ್ಷದ ವಾರ್ಷಿಕ ವ್ಯವಹಾರ 600 ಕೋ. ರೂ. ಗಳ ಮೊತ್ತಕ್ಕಿಂತ ಅಧಿಕ ವ್ಯವಹಾರಕ್ಕಾಗಿ “ಉತ್ಕೃಷ್ಟ ಸಾಧಕ ಬ್ಯಾಂಕ್ ಪುರಸ್ಕಾರ-2016′ ಪುರಸ್ಕಾರ ಹಾಗೂ ನೂರು ವರ್ಷಗಳನ್ನು (ಶತ ಮಾನ) ಪೂರೈಸಿದಕ್ಕಾಗಿ ವಿಶೇಷ ಪ್ರಶಸ್ತಿ ಗೌರವ ಪಾರಿತೋಷಕ ಹಸ್ತಾಂತರಿಸಿ ಶುಭಾರೈಸಿದರು. ಮೋಡೆಲ್ ಬ್ಯಾಂಕ್ನ ಕಾರ್ಯಾಧ್ಯಕ್ಷ ಆಲ್ಬರ್ಟ್ ಡಬ್ಲೂ Â.ಡಿ’ಸೋಜಾ ಹಾಗೂ ಸಿಇಒ ಮತ್ತು ಮಹಾ ಪ್ರಬಂಧಕ ವಿಲಿಯಂ ಲೂಯಿಸ್ ಡಿ’ಸೋಜಾ ಪುರಸ್ಕಾರ ಫಲಕ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬ್ಯಾಂಕ್ನ ಉಪ ಕಾರ್ಯಾಧ್ಯಕ್ಷ ವಿಲಿಯಂ ಸಿಕ್ವೇರಾ, ಹೆಚ್ಚುವರಿ ಪ್ರಧಾನ ಪ್ರಬಂಧಕ ಹರೋಲ್ಡ್ ಎಂ.ಸೆರಾವೋ ಉಪಸ್ಥಿತರಿದ್ದು ಸಂತಸ ವ್ಯಕ್ತಪಡಿಸಿದರು.
ಮೋಡೆಲ್ ಬ್ಯಾಂಕ್ನ ಗತ ಸಾಲಿನಲ್ಲಿ ಭದ್ರತಾ ಠೇವಣಿ 764.46 ಕೋ. ರೂ. ಗಳನ್ನು ಹೊಂದಿದ್ದು, ಮುಂಗಡ ಠೇವಣಿ 415.41 ಕೋ. ರೂ. ಹೊಂದಿ ಸುಮಾರು 88.11 ಕೋ. ರೂ. ನಿವ್ವಳ ಲಾಭ ಪಡೆದಿದೆ. 834.72 ಕೋ. ರೂ. ಕಾರ್ಯನಿರ್ವಹಣಾ ಬಂಡವಾಳದೊಂದಿಗೆ ವ್ಯವಹರಿಸಿ 76.10 ಕೋ. ರೂ. ಒಟ್ಟು ಲಾಭ ಪಡೆದು ಗ್ರಾಹಕರ ವಿಶ್ವಾಸಕ್ಕೆ ಪಾತ್ರವಾಗಿರುವುದನ್ನು ಪರಿಗಣಿಸಿ ಬ್ಯಾಂಕ್ಸ್ ಫೆಡರೇಶನ್ ನಮ್ಮ ಸಂಸ್ಥೆಯನ್ನು ಗೌರವಿಸಿರುವುದು ಅಭಿಮಾನ ಎನಿಸುತ್ತಿದೆ ಎಂದು ಮೋಡೆಲ್ ಬ್ಯಾಂಕ್ನ ಕಾರ್ಯಾಧ್ಯಕ್ಷ ಆಲ್ಬರ್ಟ್ ಡಿ’ಸೋಜಾ ತಿಳಿಸಿದರು.
ಚಿತ್ರ-ವರದಿ : ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ