ಮೊಗವೀರ ವ್ಯವಸ್ಥಾಪಕ ಮಂಡಳಿ ಮೀರಾ- ಭಾಯಂದರ್ ಶಾಖೆ: ಸಂತಾಪ ಸೂಚಕ ಸಭೆ
Team Udayavani, Sep 4, 2021, 2:44 PM IST
ಮುಂಬಯಿ: ಮೊಗವೀರ ವ್ಯವಸ್ಥಾಪಕ ಮಂಡಳಿ ಇದರ ಮೀರಾ-ಭಾಯಂದರ್ ಶಾಖೆಯ ವತಿಯಿಂದ ಸಮಿತಿಯ ಸಕ್ರಿಯ ಸದಸ್ಯರಾಗಿದ್ದ ದಿ| ಶಂಕರ ರಾಜು ಕೋಟ್ಯಾನ್ ಅವರಿಗೆ ಸಂತಾಪ ಸೂಚಕ ಸಭೆ ಆ. 21ರಂದು ಶಾಖೆಯ ಕಾರ್ಯಾಲಯದಲ್ಲಿ ಸಂಜೆ 5ರಿಂದ ನಡೆಯಿತು.
ಸಮಿತಿಯ ಕಾರ್ಯಾದರ್ಶಿ ಗಂಗಾಧರ ಬಂಗೇರ ಅವರು ಶಂಕರ್ ಕೋಟ್ಯಾನ್ ಅವರು ಶಾಖೆಗೆ ಸಲ್ಲಿಸಿದ ಸೇವೆಯ ಕುರಿತು ಮಾತನಾಡಿ, ಶಾಖೆಯ ಪ್ರಾರಂಭದ ದಿನಗಳಿಂದ ಇತ್ತೀಚೆಗಿನವರೆಗೆ ಎಲ್ಲ ಕಾರ್ಯಚಟುವಟಿಕೆಗಳಲ್ಲಿ ತಮ್ಮನ್ನು ಪೂರ್ಣವಾಗಿ ತೊಡಗಿಸಿಕೊಂಡು ಅದರಲ್ಲೂ ಕ್ರೀಡಾರಂಗದಲ್ಲಿ ಅವರು ಸಲ್ಲಿಸಿದ ಅಮೂಲ್ಯ ಸೇವೆಯನ್ನು ಸ್ಮರಿಸಿದರು.
ಸಂತಾಪ ಸಭೆಯ ಅಧ್ಯಕ್ಷತೆ ವಹಿಸಿದ್ದ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಕುಂದರ್ ಅವರು ಮೃತರ ಆತ್ಮಕ್ಕೆ ಚಿರಶಾಂತಿ ಕರುಣಿಸುವಂತೆ ಎರಡು ನಿಮಿಷಗಳ ಕಾಲ ಮೌನ ಪ್ರಾರ್ಥನೆ ಸಲ್ಲಿಸಿ ಮೃತರ ಭಾವಚಿತ್ರಕ್ಕೆ ಪುಷ್ಪವೃಷ್ಠಿಗೈದು ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿ, ಅವರ ಅಗಲುವಿಕೆಯು ಶಾಖೆಗೆ ತುಂಬಲಾರದ ನಷ್ಟವಾಗಿದೆ. ಶಂಕರ್ ರಾಜು ಕೋಟ್ಯಾನ್ ಅವರು ನನಗೆ ಚಿರಪರಿಚಿತರಾಗಿದ್ದು, ಶಾಖೆಗೆ ಪ್ರತಿಯೊಂದು ವಿಧದಲ್ಲೂ ಸಂಪೂರ್ಣ ಸಹಕಾರ ನೀಡಿದ್ದಾರೆ. ಎಲ್ಲರೊಡನೆ ಬೆರೆತು, ಎಲ್ಲರ ಪ್ರೀತಿಗೆ ಪಾತ್ರರಾದ ಅವರ ನಡೆನುಡಿ ನಮಗೆಲ್ಲ ಮಾರ್ಗದರ್ಶಿಯಾಗಿದೆ. ನಾವೆಲ್ಲರು ಒಗ್ಗಟ್ಟು ಮತ್ತು ಒಮ್ಮತದಿಂದ ಶಾಖೆ ಹಾಗೂ ಮಂಡಳಿಯ ಏಳ್ಗೆಗೆ ಕೆಲಸ ಮಾಡಿದರೆ ಅದೇ ಅವರಿಗೆ ಸಲ್ಲಿಸುವ ಶ್ರದ್ಧಾಂಜಲಿಯಾಗುತ್ತದೆ ಎಂದರು.
ಇದನ್ನೂ ಓದಿ:ಡೆಲಿವರಿ ಬಾಯ್ಸ್ ಕೈಯಿಂದ ಹೊರಬಂದ ಟ್ರೇಲರ್: ದರ್ಶನ ನೀಡಲು ‘ಡಿಯರ್ ಸತ್ಯ’ ರೆಡಿ
ಸಭಿಕರ ವತಿಯಿಂದ ಉಪಾಧ್ಯಕ್ಷ ಧನಂಜಯ್ ಸಾಲ್ಯಾನ್, ಕೋಶಾಧಿಕಾರಿ ತಿಲಕ್ ಎನ್. ಸುವರ್ಣ, ಜತೆ ಕಾರ್ಯದರ್ಶಿ ಸಂದೀಪ್ ಕುಂದರ್, ಜತೆ ಕೋಶಾಧಿಕಾರಿ ಹರೀಶ್ ಕೋಟ್ಯಾನ್, ಸದಸ್ಯರಾದ ಯೋಗೀಶ್ ಸಾಲ್ಯಾನ್ ಮತ್ತು ಯುವ ವಿಭಾಗದ ಕಾರ್ಯದರ್ಶಿ ಪ್ರಮೋದ್ ಪುತ್ರನ್ ಅವರು ನುಡಿನಮನ ಸಲ್ಲಿಸಿದರು. ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತು ಶಾಖೆಯ ಸದಸ್ಯರು ಮೃತರ ನಿವಾಸಕ್ಕೆ ತೆರಳಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್ ಬೈಕ್ನಲ್ಲಿ 64ರ ಹಿರಿಯರ ಸಾಹಸ ಯಾನ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು