ಮೊಗವೀರ ವ್ಯವಸ್ಥಾಪಕ ಮಂಡಳಿ: ಆಟಿಡೊಂಜಿ ಕೂಟ


Team Udayavani, Aug 5, 2018, 4:25 PM IST

0408mum11.jpg

ಮುಂಬಯಿ: ತುಳುನಾಡಿನ ನಮ್ಮ ಸಂಸ್ಕೃತಿಯು ಅತ್ಯಂತ ಶ್ರೀಮಂತವಾಗಿದ್ದು, ಬೇರೆ ಬೇರೆ ಉದ್ದೇಶಗಳಿಗಾಗಿ ಹುಟ್ಟೂರಿನಿಂದ ಮುಂಬಯಿಗೆ ಬಂದು ನೆಲೆಸಿರುವ ತುಳುವರು ತಮ್ಮ ಮೂಲ ಸಂಸ್ಕೃತಿಯನ್ನು ಮರೆಯದೆ ಇಲ್ಲಿಯೂ ಕೂಡಾ, ಅದರ ಉಳಿವಿಗಾಗಿ ಪ್ರಯತ್ನಿಸುತ್ತಿರುವುದು ಸುತ್ಯರ್ಹವಾಗಿದೆ. ಇಂದಿನ ಯುವ ಜನಾಂಗಕ್ಕೆ ನಮ್ಮ ಸಂಸ್ಕೃತಿಯನ್ನು ಪರಿಚಯಿಸಿ ಅದನ್ನು ಅವರು ಮುಂದುವರಿಸಿಕೊಂಡು ಹೋಗು ವಂತೆ ಮಾಡುವಲ್ಲಿ ಆಟಿಡೊಂಜಿ ಕೂಟದಂತಹ ಕಾರ್ಯಕ್ರಮವು ಉಪಯುಕ್ತವಾಗಿದೆ ಎಂದು ಮೊಗವೀರ ವ್ಯವಸ್ಥಾಪಕ ಮಂಡಳಿಯ ನವಿಮುಂಬಯಿ ಶಾಖೆಯ ಗೌರವಾಧ್ಯಕ್ಷ ಕೆ. ಟಿ. ಸಾಲ್ಯಾನ್‌ ಅವರು ನುಡಿದರು.

ಜು. 29 ರಂದು ಪನ್ವೇಲ್‌ ಕಾಂದಾ ಕಾಲನಿಯಲ್ಲಿರುವ ಮೊಗವೀರ ವ್ಯವಸ್ಥಾಪಕ ಮಂಡಳಿಯ ನವಿಮುಂಬಯಿ ಶಾಖೆಯ ಕಚೇರಿಯಲ್ಲಿ ಜರಗಿದ ಆಟಿಡೊಂಜಿ ಕೂಟ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಹಿರಿಯರು ಹೆಚ್ಚು ವಿದ್ಯಾವಂತರಾಗಿರದಿದ್ದರೂ ಅನ್ಯೋನ್ಯತೆಯಿಂದ ಬಾಳುತ್ತಿದ್ದರು. ಆ  ಅನ್ಯೋನ್ಯತೆ ಈಗಿನ ಕಾಲದಲ್ಲಿ ಮರೆ ಆಗುತ್ತಿರುವುದು ವಿಷಾದ‌ನೀಯ. ನಮ್ಮ ಹಿರಿಯರ ಉತ್ತಮ ಗುಣವನ್ನು ಮೈಗೂಡಿಸಿಕೊಂಡಲ್ಲಿ ಎಲ್ಲರೊಂದಿಗೆ ಸಹಬಾಳ್ವೆಯಿಂದ ಜೀವನ ನಡೆಸಬಹುದು ಎಂದರು.

ಮುಂಬಯಿ ಲೇಖಕ ಸೋಮನಾಥ ಎಸ್‌. ಕರ್ಕೇರ ಅವರು ಆಟಿತಿಂಗಳ ವಿಶೇಷತೆಯ ಬಗ್ಗೆ ತಿಳಿಸಿ, ಆಟಿದ ಕೂಟದಂತಹ ಕಾರ್ಯಕ್ರಮದ ಮೂಲಕ ಸದಸ್ಯರಲ್ಲಿ ಒಗ್ಗಟ್ಟನ್ನು  ಮೂಡಿಸುತ್ತಿರುವ ಬಗ್ಗೆ ಸಂತೋಷ ವ್ಯಕ್ತಪಡಿಸಿದರು.

ಮಹಿಳಾ ವಿಭಾಗದ ಹಿರಿಯ ಸದಸ್ಯೆ ಜಯಲತಾ ಸಾಲ್ಯಾನ್‌ ಅವರು ಮಾತನಾಡಿ, ನಾವು ಆಚರಿಸುತ್ತಿರುವ ಹಬ್ಬಹರಿದಿನಗಳು ನಮ್ಮಲ್ಲಿ ಹೊಸ ಉತ್ಸಾಹವನ್ನು ತುಂಬುವ ಜೊತೆಗೆ ನಮ್ಮಲ್ಲಿ ಒಗ್ಗಟ್ಟನ್ನು ಕಾಪಾಡಿಕೊಳ್ಳುವಲ್ಲಿ ಸಹಕಾರಿಯಾಗಿದೆ ಎಂದರು. ಸಿದ್ಧಾರ್ಥ ಎಲ್‌. ಕೋಟ್ಯಾನ್‌ ಅವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ನವಿಮುಂಬಯಿ ಶಾಖೆಯ ಅಧ್ಯಕ್ಷ ಪುರುಷೋತ್ತಮ ಎಲ್‌. ಪುತ್ರನ್‌ ಅವರು ಮಾತನಾಡಿ, ಈಗಲೂ ನಮ್ಮಲ್ಲಿ ಕೆಲವು ಮೂಢನಂಬಿಕೆಗಳು ಮನೆಮಾಡಿದ್ದು, ಅವುಗಳಿಗೆ ಬಲಿ ಬೀಳದಂತೆ ಎಲ್ಲರೂ ಎಚ್ಚರಿಕೆ ವಹಿಸಬೇಕು ಎಂದು ಸಲಹೆ ನೀಡಿದರು. 

ಗೌರವ ಜೊತೆ ಕಾರ್ಯದರ್ಶಿ ತೇಜಸ್ವಿ ಮಲ್ಪೆ ವಂದಿಸಿದರು.
ಮಹಿಳಾ ವಿಭಾಗದ ಸದಸ್ಯರು ಆಟಿತಿಂಗಳ ವಿಶೇಷ ಖಾದ್ಯ ಪದಾರ್ಥಗಳನ್ನು ತಯಾರಿಸಿ ಪ್ರದರ್ಶಿಸಿದರು.  ಸದಸ್ಯರಿಗಾಗಿ ಕೇವಲ 30 ಸೆಕೆಂಡ್‌ಗಳಲ್ಲಿ ಅತೀ ಹೆಚ್ಚು ಮೀನುಗಳ ಹೆಸರನ್ನು ಹೇಳುವ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಇದರಲ್ಲಿ ಸಿದ್ದಾರ್ಥ ಕೋಟ್ಯಾನ್‌, ಮೋಹನ್‌ದಾಸ್‌ ಅವರು ಪ್ರಥಮ, ಉಮೇಶ್‌ ಕರ್ಕೇರ ದ್ವಿತೀಯ, ಯೋಗೇಶ್‌ ಎಂ. ಕರ್ಕೇರ ಅವರು ತೃತೀಯ ಬಹುಮಾನಗಳನ್ನು ಪಡೆದರು.

ನವಿಮುಂಬಯಿ ಶಾಖೆಯ ಗೌರವಾಧ್ಯಕ್ಷ ಕೆ. ಬಿ. ಸಾಲ್ಯಾನ್‌, ಅಧ್ಯಕ್ಷ ಪುರುಷೋತ್ತಮ ಎಲ್‌. ಪುತ್ರನ್‌, ಕಾರ್ಯದರ್ಶಿ ಪುಷ್ಪರಾಜ್‌ ಮೆಂಡನ್‌, ಉಪಾಧ್ಯಕ್ಷರಾದ ಲೋಕೇಶ್‌ ಎಂ. ಕರ್ಕೇರ, ಸೋಮನಾಥ ಎಸ್‌. ಕರ್ಕೇರ ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಮಹಿಳಾ ವಿಭಾಗದ ವತಿಯಿಂದ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಸದಸ್ಯರು, ಅವರ ಮಕ್ಕಳು ಮತ್ತು ಕುಟುಂಬಸ್ಥರು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.