ಮೊಗವೀರ ವ್ಯವಸ್ಥಾಪಕ ಮಂಡಳಿ: 116ನೇ ಸಂಸ್ಥಾಪನಾ ದಿನಾಚರಣೆ


Team Udayavani, Aug 11, 2017, 3:29 PM IST

09-Mum05.jpg

ಮುಂಬಯಿ: ಫೋರ್ಟ್‌ ಪರಿಸರದಲ್ಲಿ 1902ರ ಆಗಸ್ಟ್‌ 9ರಂದು ದಿ| ಕಾಡಿಪಟ್ಣ ಚಂದು ಮಾಸ್ತರ್‌ ಅವರ ನೇತೃತ್ವದಲ್ಲಿ ಸ್ಥಾಪನೆಗೊಂಡ ಮೊಗವೀರ ವ್ಯವಸ್ಥಾಪಕ ಮಂಡಳಿಯು ಮರಾಠಿ ಮಣ್ಣಿನಲ್ಲಿ 115 ವರ್ಷಗಳನ್ನು ಪೂರೈಸಿರುವುದು ತುಳು-ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ಮಂಡಳಿ ಕಳೆದ 115 ವರ್ಷಗಳಿಂದ ಜನತಾ ಸೇವೆಯೇ ಜನಾರ್ದನ ಸೇವೆ ಎಂಬ ಧ್ಯೇಯ ಧೋರಣೆಯೊಂದಿಗೆ ಸಾಮಾ ಜಿಕ, ಶೈಕ್ಷಣಿಕ, ಆರ್ಥಿಕ ಮತ್ತು ಸಾಹಿತ್ಯಕ ಕ್ಷೇತ್ರದಲ್ಲಿ ಅದ್ಭುತ ಸಾಧನೆಗೈದ ಸಂಸ್ಥೆ ಎಂದು ದಾಖಲಿಸಲ್ಪಟ್ಟಿದೆ. ಮಂಡಳಿಯ ಸಾಧನೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಸರಕಾರವು 2012ರಲ್ಲಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದ್ದು, ಮುಂಬಯಿಯ ಸಾಮುದಾಯಕ ಸಂಸ್ಥೆಯೊಂದರ ಇತಿಹಾಸದಲ್ಲಿ ಪ್ರಾಮುಖ್ಯವಾದದ್ದು. ಈಗಾಗಲೇ ಶತಮಾನೋ ತ್ಸವವನ್ನು ಆಚರಿಸಿದ ಕರ್ನಾಟಕದ ಹೊರ ರಾಜ್ಯದಲ್ಲಿ ರುವ ಪ್ರಥಮ ಸಂಸ್ಥೆ ಎಂಬ ಮಾನ್ಯತೆಯನ್ನು ಪಡೆದಿದೆ. 

ಮಹಾರಾಷ್ಟÅ ರಾಜ್ಯ ಸರಕಾರವು ಮಂಡಳಿಯನ್ನು ಕನ್ನಡ ಭಾಷಾಅಲ್ಪಸಂಖ್ಯಾಕ ಸಂಸ್ಥೆ ಎಂದು ಗೌರವಿಸಿದೆ.ಇದರಿಂದಾಗಿ ಮಂಡಳಿಯ ಸಂಚಾಲಕತ್ವದಲ್ಲಿ ರುವ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ  ತುಳು- ಕನ್ನಡಿಗರಿಗಾಗಿ ಶೇ. 50 ರಷ್ಟು ಮೀಸಲಾತಿಯನ್ನು ಒದಗಿಸಲಾಗುತ್ತಿದೆ. ಇದರ ಪ್ರಯೋಜನವನ್ನು ನೂರಾರು ಕನ್ನಡಿಗರು ಪಡೆಯುತ್ತಿದ್ದಾರೆ ಎನ್ನಲು ಸಂತೋಷವಾಗುತ್ತಿದೆ ಎಂದು ಮೊಗವೀರ ವ್ಯವಸ್ಥಾಪಕ  ಮಂಡಳಿಯ ಅಧ್ಯಕ್ಷ ಕೃಷ್ಣ ಕುಮಾರ್‌ ಎಲ್‌. ಬಂಗೇರ ಅವರು ನುಡಿದರು.

ಆ. 9ರಂದು ಪೂರ್ವಾಹ್ನ ಅಂಧೇರಿಯ ಶ್ರೀ ಮದ್ಭಾರತ ಮಂಡಳಿಯ ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದಲ್ಲಿ ನಡೆದ ನಗರದ ಹಿರಿಯ ಸಾಮಾಜಿಕ, ಶೈಕ್ಷಣಿಕ, ಸಾಹಿತ್ಯಕ ಸಂಘಟನೆಯಾದ ಮೊಗವೀರ ವ್ಯವಸ್ಥಾಪಕ ಮಂಡಳಿಯ 116ನೇ ವರ್ಷಕ್ಕೆ ಪಾದಾರ್ಪಣೆಗೈದ ನಿಮಿತ್ತ ವಿಶೇಷ ಪೂಜೆಯನ್ನು ನೆರವೇರಿಸಿ ಮಾತನಾಡಿದ ಅವರು, ಮಂಡಳಿಯ ಇಂಟರ್‌ನ್ಯಾಷನಲ್‌ ಶಾಲೆಯು ಉತ್ತಮ ದರ್ಜೆಯಲ್ಲಿ ಸಾಗುತ್ತಿದ್ದು, 2014ರಲ್ಲಿ ನಿರ್ಮಿಸಲಾದ ಹೊಸ ಶೈಕ್ಷಣಿಕ ಸಂಕುಲದಲ್ಲಿ ಉಚ್ಚ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ವಿವಿಧ ಶೈಕ್ಷಣಿಕ ವಿಭಾಗಗಳು ಕಾರ್ಯವೆಸಗುತ್ತಿವೆ. ಸುಮಾರು ಮೂರು ಸಾವಿರ ವಿದ್ಯಾರ್ಥಿಗಳು ಮಂಡಳಿಯ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಮೊಗವೀರ ಸಮುದಾಯದ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ಶೇ. 30ರಷ್ಟು ರಿಯಾಯಿತಿ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸಹಾಯಧನ, ವೈದ್ಯಕೀಯ ನೆರವು, ಮೀನುಗಾರಿಕೆಯ ಸಂದರ್ಭದಲ್ಲಿ ಮರಣ ಹೊಂದಿದ ಸಂಬಂಧಿಕರಿಗೆ ಪರಿಹಾರ ಧನ, ವಿಧವೆಯರ ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಸಹಾಯಧನ, ಉಚ್ಚ ಶಿಕ್ಷಣಕ್ಕಾಗಿ ಬಡ್ಡಿ ರಹಿತ ವಿದ್ಯಾರ್ಥಿ ವೇತನ ಇತ್ಯಾದಿ ಸಹಾಯಧನಕ್ಕಾಗಿ ಪ್ರತೀ ವರ್ಷ ಸುಮಾರು 25 ರಿಂದ 30 ಲಕ್ಷ  ರೂ. ಗಳನ್ನು ವಿನಿಯೋಗಿಸಲಾಗುತ್ತಿದೆ. ಮಂಡಳಿಯು ಭವಿಷ್ಯದಲ್ಲಿ ನೂತನ ಯೋಜನೆಗಳನ್ನು ಹೊಂದಿದ್ದು, ಅದರಲ್ಲಿ ಶೈಕ್ಷಣಿಕ ಸಂಕುಲವನ್ನು ವಿಸ್ತರಿಸಿ, ಇನ್ನೂ ಹೆಚ್ಚಿನ ವಿಭಾಗಗಳನ್ನು ತೆರೆಯುವುದು, ಉಪನಗರದಲ್ಲಿರುವ ಮಂಡಳಿಯ ಶಾಖೆ ಗಳಿಗೆ ಸ್ವಂತ ಕಚೇರಿಯನ್ನು ಒದಗಿಸು ವುದು, ಸಾಮಾಜಿಕ ಕ್ಷೇತ್ರದ ವಿವಿಧ ಯೋಜನೆಗಳನ್ನು ಪರಿಷ್ಕರಿಸುವುದು ಮತ್ತು ವೃದ್ಧಿಸುವುದು ಮೊದಲಾದ ಮಂಡಳಿಯ ಕಾರ್ಯಕ್ರಮಗಳಿಗೆ ಸರ್ವರ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದರು.

ಪೂಜಾ ಸಂದರ್ಭದಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ಪಾರುಪತ್ಯ ಗಾರರಾದ ಅಜಿತ್‌ ಜಿ. ಸುವರ್ಣ, ಉಪಾಧ್ಯಕ್ಷ ಶ್ರೀನಿವಾಸ ಪಿ. ಸುವರ್ಣ, ಧನ ಸಂಗ್ರಹ ಸಮಿತಿಯ ಕಾರ್ಯಾಧ್ಯಕ್ಷ ಹರೀಶ್‌ ವಿ. ಪುತ್ರನ್‌, ಮೊಗವೀರ ಪತ್ರಿಕೆಯ ಸಂಪಾದಕ ಅಶೋಕ್‌ ಸುವರ್ಣ, ಶ್ರೀ ಮದ್ಭಾರತ ಮಂಡಳಿಯ ಕಾರ್ಯಕರ್ತರಾದ ದೇವದಾಸ್‌ ಕರ್ಕೇರ, ಅಶೋಕ್‌ ಕರ್ಕೇರ ಮೊದ ಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

8-ptr

Puttur: ಶ್ರೀ ಮಹಾಲಿಂಗೇಶರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.