ಮೊಗವೀರ ಮಾಸಿಕದ 78ರ ಸಂಭ್ರಮ:ಲೇಖಕರ -ಓದುಗರ ಸಮಾವೇಶ


Team Udayavani, Mar 17, 2018, 4:22 PM IST

1603mum04.jpg

ಡೊಂಬಿವಲಿ: ಮೊಗವೀರ ಪತ್ರಿಕೆಯ 78ರ ಸಂಭ್ರಮ ನಿಮಿತ್ತ ಲೇಖಕರ ಮತ್ತು ಓದುಗರ ಸಮಾವೇಶ ಕಾರ್ಯಕ್ರಮವು ಮಾ. 4 ರಂದು ಮೊಗವೀರ ವ್ಯವಸ್ಥಾಪಕ ಮಂಡಳಿ ಮುಂಬಯಿ ಇದರ ಡೊಂಬಿವಲಿ ಶಾಖೆಯ ವತಿಯಿಂದ ಜ್ಞಾನೇಶ್ವರ ಕಾರ್ಯಾಲಯ, ಮಹಾತ್ಮಾ ಫುಲೆ ರೋಡ್‌, ವಿಷ್ಣು ನಗರ ಡೊಂಬಿವಲಿ ಪಶ್ಚಿಮ ಇಲ್ಲಿ ವಿಜೃಂಭಣೆಯಿಂದ ಜರಗಿತು.

ಪ್ರಾರಂಭದಲ್ಲಿ ಶಾಖೆಯ ಕಾರ್ಯಾಧ್ಯಕ್ಷ ಯುದುವೀರ್‌ ಪುತ್ರನ್‌ ಸ್ವಾಗತಿಸಿದರು. ಶಾಖೆಯ ಮಹಿಳಾ ವಿಭಾಗದ  ಸದಸ್ಯರಾದ ಶಶಿಕಲಾ ಮೆಂಡನ್‌, ಬಿಂದಿಯಾ ಸಾಲ್ಯಾನ್‌ ಮತ್ತು ಸುಜಾತಾ ಪುತ್ರನ್‌ ಪ್ರಾರ್ಥನೆ ಹಾಡಿದರು. ವೇದಿಕೆಯಲ್ಲಿ ಅತಿಥಿಗಣ್ಯರು  ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಸಮಾವೇಶದ ಅಧ್ಯಕ್ಷತೆ ವಹಿಸಿದ ಹಿರಿಯ ಸಾಹಿತಿ ಡಾ| ಸುನೀತಾ ಎಂ. ಶೆಟ್ಟಿಯವರು ಮಾತನಾಡುತ್ತಾ, ಮೊಗವೀರ ಪತ್ರಿಕೆಯು  ವಿಶಿಷ್ಟ ಸ್ಥಾನಮಾನ ಹೊಂದಿರುವ ಪತ್ರಿಕೆಯಾಗಿದೆ. ಮುಂಬಯಿಯಲ್ಲಿ ಮೊಗವೀರ ಪತ್ರಿಕೆಯು ಒಂದು ಸಮಾಜದ ಪತ್ರಿಕೆಯಾಗಿ, ಒಂದು ಸಮಾಜದ ಕಲ್ಯಾಣಕ್ಕಾಗಿ ಸ್ಥಾಪನೆಗೊಂಡು ಮೊಗವೀರ  ವ್ಯವಸ್ಥಾಪಕ ಮಂಡಳಿಯ ಮುಖವಾಣಿಯಾದರೂ ಅದು ಜಾತಿಯನ್ನು ಮೀರಿ ಬೆಳೆದಿರುವುದರಿಂದ ಜನಪ್ರಿಯಗೊಂಡಿದೆ. ಇದು ಈ ಪತ್ರಿಕೆಯ ವಿಶೇಷತೆ. ಜಾತಿಯ ಸಂಘಟನೆಗಳಿಂದ ನಡೆಸಲ್ಪಡುವ ಪತ್ರಿಕೆಗೆ ತನ್ನದೇ ಆದ ನಿಲುವು, ಧೋರಣೆ, ಧ್ಯೇಯಗಳಿರುತ್ತವೆ. ಅದರೊಡನೆ ಸಮಾಜಕ್ಕೆ ಸಾಹಿತ್ಯ -ಕಲೆ – ಕಾವ್ಯದ ಬಗ್ಗೆ  ತಿಳಿಸಬೇಕಾದ  ಅಗತ್ಯ ಇರುವುದರಿಂದ ಸಾಹಿತಿಗಳ ಲೇಖನಗಳನ್ನು ಪ್ರಕಟಿಸಬೇಕಾಗುತ್ತದೆ. ಮೊಗವೀರ ಪತ್ರಿಕೆಯು ಆಯೋಜಿಸುತ್ತಿರುವ ಇಂತಹ ಸಮಾವೇಶಗಳು ಮುಂಬಯಿ ಪತ್ರಿಕಾ ಕ್ಷೇತ್ರದಲ್ಲಿ ಒಂದು ಪ್ರಶಂಸನೀಯ ಮತ್ತು ದಾಖಲಾರ್ಹ ವಿಷಯ. ಇಂದಿನ ಸಮಾವೇಶಕ್ಕೆ ಆಯ್ದುಕೊಂಡ ವಿಚಾರಗಳು ಸಹ ಮಹಿಳೆಯರ  ಬದುಕು – ಸಂಘರ್ಷ, ತ್ಯಾಗ, ಅನ್ಯಾಯದ ವಿರುದ್ಧ ಹೋರಾಟಕ್ಕೆ ಸಂಬಂಧಿಸಿದ ವಿಷಯಗಳಾದುದರಿಂದ ಸಮಯೋಚಿತವಾಗಿದೆ.  ಆದಿಕಾಲದಿಂದಲೂ ಮಹಿಳೆಯರು ಗ್ರಾಮದ ರಕ್ಷಕಿ, ಹೋರಾಟದ ವೀರ ಮಹಿಳೆಯರಾಗಿ ಕಾರ್ಯ ನಿರ್ವಹಿಸಿದವರು. ಆದರೆ ಅವರ ಪರಿಚಯವನ್ನು ಇಂದು ಮಾಡಬೇಕಾದ  ಅನಿವಾರ್ಯತೆ ಇದೆ. ತುಳುನಾಡಿನ ಸತ್ಯದ ಮಣ್ಣಿನಲ್ಲಿ  ಸತ್ಯಕ್ಕಾಗಿ ತ್ಯಾಗ ಮಾಡಿದ ಮಹಿಳೆಯರ ಉಲ್ಲೇಖ ತುಳು ಪಾಡªನಗಳಲ್ಲಿ ಇದೆ ಎಂದು ನುಡಿದರು.

ಸಮಾವೇಶವನ್ನು  ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ  ಕೃಷ್ಣ ಕುಮಾರ್‌ ಎಲ್‌. ಬಂಗೇರ ಉದ್ಘಾಟಿಸಿ, ಮಂಡಳಿಯು ಕಳೆದ 78 ವರ್ಷಗಳಿಂದ  ಪ್ರಕಟಿಸುತ್ತಿರುವ ಮೊಗವೀರ  ಪತ್ರಿಕೆಯು ದಿನೇ ದಿನೇ ಪ್ರಗತಿಯತ್ತ ಸಾಗುತ್ತಿದ್ದು, ಓದುಗರು ಈ ಪತ್ರಿಕೆಯ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

ಮುಖ್ಯ ಅತಿಥಿಯಾಗಿ ತುಳುಕೂಟ ಡೊಂಬಿವಲಿ ಇದರ ಅಧ್ಯಕ್ಷ ಕಾವೂರು ಗುತ್ತು ಹೇಮಂತ್‌ ಶೆಟ್ಟಿ  ಅವರು ಮಾತನಾಡಿ,  ಬಂಟರು ಮತ್ತು ಮೊಗವೀರ ಸಮಾಜವು ಅಕ್ಕ ತಂಗಿಯರ ಮಕ್ಕಳಾದುದರಿಂದ ಸಮಾಜ ಸೇವೆಯಲ್ಲಿ  ಯಾವಾಗಲೂ ಮುಂಚೂಣಿ ಯಲ್ಲಿರುತ್ತಾರೆ. 117 ವರ್ಷಗಳಿಂದ  ಸೇವೆ ಸಲ್ಲಿಸುತ್ತಿರುವ ಮಂಡಳಿಯ ಸಾಧನೆ ಅಮೋಘವಾದುದು ಎಂದ ಅವರು ಡೊಂಬಿವಲಿ ಶಾಖೆಯ ಕ್ರಿಯಾಶೀಲ ಚಟುವಟಿಕೆಯನ್ನು  ಶ್ಲಾಘಿಸಿದರು.

ಮೊಗವೀರ ಪತ್ರಿಕೆಯ  ಸಂಪಾದಕ ಅಶೋಕ್‌ ಸುವರ್ಣರು ಪ್ರಾಸ್ತಾವಿಕವಾಗಿ  ಮಾತನಾಡಿ, ಡೊಂಬಿವಲಿಯಲ್ಲಿ ನಡೆಯುವ  3 ನೇ ಸಮಾವೇಶವು ಡೊಂಬಿವಲಿ ಶಾಖೆಯ ಅಪೇಕ್ಷೆ ಮೇರೆಗೆ ನಡೆಯುತ್ತಿದ್ದು ಈಗಾಗಲೇ ಒಟ್ಟು ಎಂಟು ಸಮಾವೇಶಗಳನ್ನು  ನಡೆಸಲಾಗಿದೆ. ಪತ್ರಿಕೆಗೆ ಲೇಖಕರು ಮತ್ತು ಓದುಗರು ಬಹು ಅಮೂಲ್ಯ ಸೊತ್ತು ಆಗಿದ್ದು, ಇಂತಹ ಸಮಾವೇಶವು ಪತ್ರಿಕೆಯ ಪ್ರಗತಿಗೆ ಪೂರಕವಾಗುವುದು ಎಂದರು.

ವೇದಿಕೆಯಲ್ಲಿ ಮೊಗವೀರ ವ್ಯವಸ್ಥಾಪಕ ಮಂಡಳಿಯ ಟ್ರಸ್ಟಿ  ಜಿ.ಕೆ. ರಮೇಶ್‌, ಡೊಂಬಿವಲಿ ಸಮಿತಿಯ ಕಾರ್ಯದರ್ಶಿ ಕೇಶವ ಎನ್‌. ಬಂಗೇರ,  ಡೊಂಬಿವಲಿ ಶಾಖೆಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಶೇಖರ್‌ ಮೆಂಡನ್‌ ಉಪಸ್ಥಿತರಿದ್ದರು. ಡೊಂಬಿವಲಿ ವಲಯದ ಮಕ್ಕಳಿಂದ ಕರ್ನಾಟಕ ರಾಜ್ಯದ ಹಿರಿಮೆಯನ್ನು ಸಾರುವ ಮನಮೋಹಕ ನೃತ್ಯ ಸಾದರಗೊಂಡಿತು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.