ಮೂಲ್ಕಿ ಸುಂದರ್‌ ರಾಮ ಶೆಟ್ಟಿ ಸಭಾ ಭವನ ನಿರ್ಮಾಣ: ಪುಣೆಯಲ್ಲಿ ಸಭೆ


Team Udayavani, Sep 16, 2018, 4:55 PM IST

1409mum11.jpg

ಪುಣೆ: ಮೂಲ್ಕಿ ಸುಂದರ್‌ ರಾಮ ಶೆಟ್ಟಿಯವರು ಇಡೀ ಬಂಟ ಸಮುದಾಯವನ್ನು ಉದ್ಧರಿಸಿದ ಮಹಾನುಭಾವರಾಗಿದ್ದಾರೆ. ಒಂದು ಕಾಲದಲ್ಲಿ ಭೂಮಸೂದೆಯಿಂದ ಬಂಟ ಸಮುದಾಯವು ಕಂಗಾಲಾಗಿದ್ದ ಸಂದರ್ಭದಲ್ಲಿ ಸಮಾಜದ ಪ್ರತಿಯೊಬ್ಬರ ಮನೆಯಿಂದ ಒಬ್ಬರಿಗೆ ಕರೆದು ವಿಜಯಾ ಬ್ಯಾಂಕಿನಲ್ಲಿ  ಕೆಲಸ ಕೊಡಿಸಿ ಬಾಳಿಗೆ ಆಸರೆಯಾಗಿ ಬೆಳಕನ್ನು  ನೀಡಿದವರು ಸುಂದರ್‌ರಾಮ್‌ ಶೆಟ್ಟಿಯವರಾಗಿದ್ದಾರೆ. ನಮ್ಮ ಸಮಾಜದ ಅಭ್ಯುದಯದ ಏಕೈಕ ಉದ್ದೇಶದಿಂದ ಸಮಾಜಕ್ಕೆ ಕೊಡುಗೆ ನೀಡಿದ ಅವರನ್ನು ಸ್ಮರಿಸಿಕೊಂಡು ಅವರ ಬಗ್ಗೆ ಸ್ಮಾರಕವೊಂದನ್ನು ನಿರ್ಮಾಣ ಮಾಡುವಲ್ಲಿ ಸಮಾಜದ ಹಿರಿಯರು, ಹಿತೈಷಿಗಳು ಚಿಂತನ ನಡೆಸಿ ಆ ನಿರ್ಮಾಣದ ಜವಾಬ್ದಾರಿಯನ್ನು ನನಗೆ  ವಹಿಸಿದ್ದು  ಹಿರಿಯರೆಲ್ಲ ಧೈರ್ಯ ತುಂಬಿ¨ªಾರೆ . ಸಮಾಜದ ಪುಣ್ಯದ ಕೆಲಸವೆಂದು ಭಾವಿಸಿ ಈ ಕೆಲಸವನ್ನು ಮುಂದಿನ ಎಪ್ರಿಲ್‌ನಲ್ಲಿ ಪೂರ್ತಿಗೊಳಿಸಿ ಸಮಾಜ ಕ್ಕೋಪ್ಪಿಸುವಲ್ಲಿ ಶ್ರಮಿಸಲಾಗುವುದು. ಈ ಕಾರ್ಯಕ್ಕೆ ಪುಣೆ ಮುಂಬಯಿಯ ಸಮಾಜ ಬಾಂಧವರು ಸುಂದರ್‌ ರಾಮ ಶೆಟ್ಟಿಯವರಿಗೆ ಗೌರವವೆಂಬಂತೆ ತಮ್ಮಿಂದಾದ ನೆರವನ್ನು ನೀಡಿ ಬೆಂಬಲಿಸಬೇಕು ಎಂದು ಗೋಲ್ಡ… ಪಿಂಚ್‌ ಗ್ರೂಪ್‌ ಆಪ್‌ ಹೋಟೆಲ್ಸ…ನ  ಕಾರ್ಯಾಧ್ಯಕ್ಷರಾದ ಕೆ . ಪ್ರಕಾಶ್‌ ಶೆಟ್ಟಿ  ಅವರು ಅಭಿಪ್ರಾಯಿಸಿದರು.

ಸೆ. 11 ರಂದು ನಗರದ ಬೋಟ್‌ ಕ್ಲಬ್‌ ಸಭಾಂಗಣದಲ್ಲಿ ನಡೆದ ಮುಲ್ಕಿ ಸುಂದರ್‌ ರಾಮ ಶೆಟ್ಟಿ ಸಭಾಭವನ ನಿರ್ಮಾಣ ಪ್ರಯುಕ್ತ ನಡೆದ ಪುಣೆಯ ಸಮಾಲೋಚನಾ ಸಭೆಯಲ್ಲಿ ಮಾತನಾಡಿ, ಪುಣೆಯ ಬಂಟರು ಸ್ವಾಭಿಮಾನಿಗಳು. ಇಲ್ಲಿ ಸಂತೋಷ್‌ ಶೆಟ್ಟಿಯವರ ಸಾಮೂಹಿಕ ನೇತೃತ್ವದಲ್ಲಿ ಸಮಾಜ ಬಾಂಧವರ ನೆರವಿನಿಂದ ಭವ್ಯವಾದ ಸಮಾಜದ ಭವನವನ್ನು ನಿರ್ಮಿಸಿರುವುದು ಅಭಿಮಾನವೆನಿಸುತ್ತದೆ. ಅದೇ ರೀತಿ ಮುಲ್ಕಿಯಲ್ಲಿ 1 ಎಕ್ರೆ 82 ಸೆಂಟ್ಸ್‌ ಜಾಗವನ್ನು ಖರೀದಿಸಲಾಗಿದ್ದು,  ಇಲ್ಲಿ ಸುಂದರ್‌ ರಾಮ ಶೆಟ್ಟಿಯವರ ಸುಂದರವಾದ ಭವನವನ್ನು ಸುಮಾರು 25 ಕೋಟಿ ರೂ. ವೆಚ್ಚದಲ್ಲಿ  ನಿರ್ಮಿಸುವಲ್ಲಿ ತೊಡಗಿಕೊಂಡಿದ್ದೇವೆ. ಈ ಕಾರ್ಯಕ್ಕೆ ಸಮಾಜಬಾಂಧವರ ನೆರವಿನ ಒಂದೊಂದು ಇಟ್ಟಿಗೆಯೂ ಸೇರಿದರೆ ಮಹತ್ವದ ಕಾರ್ಯ ನೆರವೇರುತ್ತದೆ. ಪುಣೆಯಲ್ಲಿರುವ ಪ್ರತಿ ಯೋರ್ವ ಸಮಾಜ ಬಾಂಧವರಿಗೂ ಈ ಮಾಹಿತಿಯನ್ನು ತಲುಪಿಸುವ ಕಾರ್ಯ ಆಗಬೇಕಾಗಿದೆ ಎಂದರು.

ಚಾರ್ಟರ್ಡ್‌ ಹೌಸಿಂಗ್‌ ಆಡಳಿತ ನಿರ್ದೇಶಕರಾದ ಎ. ಬಾಲಕೃಷ್ಣ ಹೆಗ್ಡೆ  ಮಾತನಾಡಿ ದಿ. ಸುಂದರ್‌ ರಾಮ ಶೆಟ್ಟಿಯವರು ಬಂಟ ಸಮಾಜದ ಸೇವೆಗಾಗಿಯೇ ತನ್ನ ಜೀವನವನ್ನು ಅರ್ಪಿಸಿಕೊಂಡವರಾಗಿ¨ªಾರೆ. ಅವರ ಸೇವೆಯನ್ನು ಮನಗಂಡು ಅವರಿಗಾಗಿ ಸ್ಮಾರಕವೊಂದನ್ನು ನಿರ್ಮಿಸಿ ಗೌರವ ಸಲ್ಲಿಸುವ ಕಾರ್ಯ ನಡೆಯುತ್ತಿದ್ದು ಸಮಾಜ ಬಾಂಧವರೆಲ್ಲರ ಸಹಕಾರ ಅಗತ್ಯವಾಗಿದೆ. ಮುಲ್ಕಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅವರ ಹೆಸರಿನ ಭವನದಲ್ಲಿ 1300 ಜನರು ಆಸೀನರಾಗುವ ಭವ್ಯ ಸಭಾಂಗಣ, ಎರಡು ಕಾನ್ಫರೆನ್ಸ್‌ ಹಾಲ್‌, ವಾಣಿಜ್ಯ ಮಳಿಗೆಗಳು ಸೇರಿದಂತೆ ಸುಸಜ್ಜಿತವಾಗಿ ನಿರ್ಮಿಸಲಾಗುವುದು. ಮುಂದಿನ ಎಂಟು ತಿಂಗಳಲ್ಲಿ ಯೋಜನೆ ಪೂರ್ಣಗೊಳ್ಳುವ ವಿಶ್ವಾಸವಿದೆ ಎಂದರು.

ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷ ಹಾಗೂ ಕೊನೋಟ್‌ ಬೋಟ್‌ ಕ್ಲಬ್‌ನ  ಅಧ್ಯಕ್ಷರಾದ ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆಯವರು ಮಾತನಾಡಿ, ನಮ್ಮ ಸಮಾಜಕ್ಕೆ ಅಪ್ರತಿಮ ಕೊಡುಗೆ ನೀಡಿದ ದಿ| ಸುಂದರ್‌ ರಾಮ್‌ ಶೆಟ್ಟಿಯವರನ್ನು ನೆನಪಿಸಿಕೊಳ್ಳುವ ಕಾರ್ಯ ಆಗುತ್ತಿರುವುದು ಅಭಿನಂದನೀಯವಾಗಿದೆ. ಆತ್ಮೀಯರಾದ ಪ್ರಕಾಶ್‌ ಶೆಟ್ಟಿಯವರು ಈ ಕಾರ್ಯವನ್ನು ಕೈಗೆತ್ತಿಕೊಂಡು ಉತ್ತಮ ಕಾರ್ಯ ಮಾಡುತ್ತಿ¨ªಾರೆ. ಪುಣೆಯಲ್ಲಿನ ಬಂಟರು ತಮ್ಮಿಂದಾದ ನೆರವನ್ನು ನೀಡಿ  ಅವರನ್ನು ಬೆಂಬಲಿಸಬೇಕಾಗಿದೆ ಎಂದರು.

ವೇದಿಕೆಯಲ್ಲಿ ಪುಣೆ ಬಂಟರ ಸಂಘದ ಗೌರವಾಧ್ಯಕ್ಷ ಓಣಿಮಜಲು ಜಗನ್ನಾಥ ಶೆಟ್ಟಿ, ವಿಜಯಾ ಬ್ಯಾಂಕಿನ ಮಾಜಿ ಕಾರ್ಯಾಧ್ಯಕ್ಷರಾದ ಕೆ. ಸದಾನಂದ ಶೆಟ್ಟಿ, ಯೂನಿಯನ್‌ ಬ್ಯಾಂಕಿನ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕರಾದ ಕೆ. ರತ್ನಾಕರ ಹೆಗ್ಡೆ, ಓರಿಯೆಂಟಲ್‌ ಬ್ಯಾಂಕಿನ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕರಾದ ಎಚ್‌. ರತ್ನಾಕರ ಹೆಗ್ಡೆ ಉಪಸ್ಥಿತರಿದ್ದರು. ಅತಿಥಿ ಗಣ್ಯರನ್ನು ಪುಷ್ಪಗುತ್ಛ ನೀಡಿ ಸ್ವಾಗತಿಸಲಾಯಿತು. ಈ ಸಂದರ್ಭ ದಿ|  ಸುಂದರ್‌ ರಾಮ ಶೆಟ್ಟಿ ಸಭಾ ಭವನದ ವಿವರ ನೀಡುವ ಮಾಹಿತಿ ಪತ್ರವನ್ನು ಹಂಚಲಾಯಿತು.

ಸಭೆಯಲ್ಲಿ ಪಿಂಪ್ರಿ-ಚಿಂಚಾÌಡ್‌ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಎರ್ಮಾಳ್‌ ವಿಶ್ವನಾಥ ಶೆಟ್ಟಿ, ಎರ್ಮಾಳ್‌ ಸೀತಾರಾಮ್‌ ಶೆಟ್ಟಿ,ಪುಣೆ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಜಯಂತ್‌ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಅಜಿತ್‌ ಹೆಗ್ಡೆ, ಉಪಾಧ್ಯಕ್ಷ ರಾಮಕೃಷ್ಣ ಶೆಟ್ಟಿ, ಪದಾಧಿಕಾರಿಗಳಾದ ವಿಶ್ವನಾಥ ಶೆಟ್ಟಿ, ಸತೀಶ್‌ ಶೆಟ್ಟಿ, ಚಂದ್ರಶೇಖರ ಶೆಟ್ಟಿ ನಿಟ್ಟೆ, ವಿವೇಕಾನಂದ ಶೆಟ್ಟಿ ಆವರ್ಸೆ, ಪ್ರಶಾಂತ್‌ ಶೆಟ್ಟಿ ಹೆರ್ಡೆಬೀಡು, ನಿವೃತ್ತ ಐಜಿ ಜಯಾನಂದ ಶೆಟ್ಟಿ, ಜಗದೀಶ್‌ ಹೆಗ್ಡೆ, ಸತೀಶ್‌ ಸೂಡಾ, ಕರುಣಾಕರ ಶೆಟ್ಟಿ, ಸದಾಶಿವ ಶೆಟ್ಟಿ, ಉಮಾನಾಥ ಶೆಟ್ಟಿ, ಸುರೇಶ ಶೆಟ್ಟಿ, ಸಂಕಯ್ಯ ಶೆಟ್ಟಿ, ನಾಗೇಶ್‌ ಶೆಟ್ಟಿ ಮತ್ತಿತರ ಗಣ್ಯರು ಉಪಸ್ಥಿತರಿದ್ದರು. ಸ್ನೇಹಭೋಜನದೊಂದಿಗೆ ಸಭೆ ಮುಕ್ತಾಯಗೊಂಡಿತು. ಮೊಳಹಳ್ಳಿ ಬಾಲಕೃಷ್ಣ ಹೆಗ್ಡೆ ಸ್ವಾಗತಿಸಿ ವಂದಿಸಿದರು. 

ಬಂಟ ಸಮಾಜದ ಒಳಿತನ್ನು ಬಯಸಿ ಬದುಕನ್ನು ಸವೆಸಿದ ದಿ| ಸುಂದರ್‌ ರಾಮ ಶೆಟ್ಟಿಯವರನ್ನು ಎರಡು ಸಲ ಭೇಟಿ ಮಾಡಿದ್ದ ನೆನಪಿದೆ. ಅವರಂತಹ ಮಹಾನ್‌ ವ್ಯಕ್ತಿತ್ವವನ್ನು ನಾನು ಇನ್ನೆಲ್ಲೂ ಕಂಡಿಲ್ಲ. ನಮ್ಮ ಸಮಾಜಬಾಂಧವರಿಗೆ ಬದುಕೇ ಬರಿದಾದಂತಹ ಸಂದರ್ಭದಲ್ಲಿ ಆಸರೆ ನೀಡಿ ಕಾಪಾಡಿದ ಮಾನವತಾವಾದಿಯಾಗಿ¨ªಾರೆ. ಅವರ ನೆನಪಿನ ಭವನವನ್ನು ನಿರ್ಮಿಸುವ ಕಾರ್ಯಕ್ಕೆ ನನ್ನಿಂದಾದ ನೆರವನ್ನು ನೀಡುತ್ತೇನೆ .
ಕುಶಲ್‌ ಹೆಗ್ಡೆ , ಅಧ್ಯಕ್ಷರು :  ಪುಣೆ ಕನ್ನಡ ಸಂಘ

ನಮ್ಮ ಆತ್ಮೀಯರಾದ ಸಮಾಜದಲ್ಲಿ ಉನ್ನತ ಸ್ಥಾನವನ್ನು ಹೊಂದಿದ ಮೇರು ವ್ಯಕ್ತಿತ್ವದ ಪ್ರಕಾಶ್‌ ಶೆಟ್ಟಿಯವರು ಪುಣೆ ಬಂಟರ ಭವನಕ್ಕೆ ಮಹತ್ವದ ಕೊಡುಗೆಯನ್ನು ನೀಡಿರುವುದು ಅವರ ಸಮಾಜದ ಬಗೆಯ ಸಾಮಾಜಿಕ ಕಳಕಳಿಯ ಉತ್ತಮ ನಿದರ್ಶನವಾಗಿದೆ. ಇದೀಗ ಅವರ ನೇತೃತ್ವದಲ್ಲಿ ಬಂಟ ಸಮಾಜದ ಸಾವಿರಾರು ಸಮಾಜ ಬಾಂಧವರ ಬದುಕಿಗೆ ಆಶಾಕಿರಣದಂತೆ ವಿಜಯಾ ಬ್ಯಾಂಕಿನಲ್ಲಿ ಕೆಲಸವನ್ನು ನೀಡಿ ಮಾನವೀಯತೆ ಮೆರೆದ ಸುಂದರ್‌ ರಾಮ ಶೆಟ್ಟಿಯವರ ಹೆಸರಿನ ಉಳಿವಿಗಾಗಿ ಭವನವನ್ನು ನಿರ್ಮಿಸುವ ಯೋಜನೆ 
ಅಭಿನಂದನೀಯವಾಗಿದೆ. ಇದು  ಒಂದು  ಉತ್ತಮ ಕಾರ್ಯ ಎಂದು ತಾನು ಭಾವಿಸುತ್ತೇನೆ. ಸಮಾಜ ರಚನೆಯ ಹಾದಿಯಲ್ಲಿ ಮಾನವೀಯತೆಯ ಸೆಳೆತದೊಂದಿಗೆ ಜನರ ಸೇವೆಗೆ ತನ್ನ ಜೀವನವನ್ನು ಮುಡಿಪಾಗಿಟ್ಟ ಮಹಾಚೇತನಕ್ಕೆ ಗೌರವ ಸಲ್ಲಿಸುವ ಮಹತ್ಕಾರ್ಯ ಆಗುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ. ಈ ಕಾರ್ಯಕ್ಕೆ ನಾವೆಲ್ಲರೂ ಕೈಜೋಡಿಸೋಣ .
ಸಂತೋಷ್‌ ಶೆಟ್ಟಿ  ಇನ್ನಕುರ್ಕಿಲ್‌ಬೆಟ್ಟು , 
ಅಧ್ಯಕ್ಷರು : ಪುಣೆ ಬಂಟರ ಸಂಘ

ಚಿತ್ರ-ವರದಿ : ಕಿರಣ್‌ ಬಿ. ರೈ ಕರ್ನೂರು

ಟಾಪ್ ನ್ಯೂಸ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.