ಸಂಸದ ಗೋಪಾಲ್ ಶೆಟ್ಟಿ,ಪ್ರಕಾಶ್ ಶೆಟ್ಟಿ ಅವರಿಗೆ ಸಮ್ಮಾನ
ಜಾಗತಿಕ ಬಂಟರ ಸಂಘಗಳ ಒಕ್ಕೂಟ
Team Udayavani, Jun 11, 2019, 3:53 PM IST
ಮುಂಬಯಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಉತ್ತರ ಮುಂಬಯಿ ಲೋಕಸಭಾ ಕ್ಷೇತ್ರದಿಂದ ದ್ವಿತೀಯ ಬಾರಿಗೆ ಸಂಸದರಾಗಿ ಭರ್ಜರಿಯಾಗಿ ಜಯಗಳಿಸಿದ ಗೋಪಾಲ್ ಸಿ. ಶೆಟ್ಟಿ ದಂಪತಿ ಹಾಗೂ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಸಂಸ್ಥೆಗೆ ನೂತನ ನಿರ್ದೇಶಕರಾಗಿ ಸೇರ್ಪಡೆಗೊಂಡ ಪ್ರತಿಷ್ಠಿತ ಎಂಆರ್ಜಿ ಸಮೂಹದ ಆಡಳಿತ ನಿರ್ದೇಶಕ ಕೊರಂಗ್ರಪಾಡಿ ಪ್ರಕಾಶ್ ಶೆಟ್ಟಿ ಅವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಹಾಗೂ ಗೌರವ ಕೋಶಾಧಿಕಾರಿ ಉಳೂ¤ರು ಮೋಹನದಾಸ್ ಶೆಟ್ಟಿ ಮತ್ತು ಒಕ್ಕೂಟದ ಪೋಷಕ ಸದಸ್ಯ, ಬಂಟ್ಸ್ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್.ಪಯ್ಯಡೆ ಅವರು ಸಮ್ಮಾನಿಸಿದರು.
ರವಿವಾರ ಪೂರ್ವಾಹ್ನ ಕುರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ನಡೆದ ಸಮಾರಂಭದ ಮಧ್ಯಾಂತರದಲ್ಲಿ ಸಾಧಕರನ್ನು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕದ ಮಾಜಿ ಸಚಿವ, ಬಿಜೆಪಿ ಶಾಸಕ ಸಿ. ಟಿ. ರವಿ, ಸುಧೀರ್ ವಿ. ಶೆಟ್ಟಿ, ಸುಧಾಕರ್ ಎಸ್. ಹೆಗ್ಡೆ, ಡಾ| ಸುರೇಂದ್ರ ವಿ. ಶೆಟ್ಟಿ, ಆದಾಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತೆ ನಿವ್ಯಾ ಪಿ. ಶೆಟ್ಟಿ ಐಆರ್ಎಸ್, ಬಂಟ್ಸ್ ಸಂಘ ಮುಂಬಯಿ ಇದರ ಪದಾಧಿಕಾರಿಗಳಾದ ಚಂದ್ರಹಾಸ ಕೆ. ಶೆಟ್ಟಿ, ಸಿಎ ಸಂಜೀವ ಶೆಟ್ಟಿ, ಪ್ರವೀಣ್ ಬಿ. ಶೆಟ್ಟಿ, ಮಹೇಶ್ ಎಸ್. ಶೆಟ್ಟಿ, ಗುಣಪಾಲ್ ಶೆಟ್ಟಿ ಐಕಳ, ರಂಜನಿ ಸುಧಾಕರ್ ಹೆಗ್ಡೆ, ಶರತ್ ವಿಜಯ್ ಶೆಟ್ಟಿ, ಸುಬ್ಬಯ ಎ. ಶೆಟ್ಟಿ, ಖಾಂದೇಶ್ ಭಾಸ್ಕರ್ ವೈ. ಶೆಟ್ಟಿ, ಸುರೇಶ್ ಬಿ. ಶೆಟ್ಟಿ ಮರಾಠ, ಅಶೋಕ್ ಪಕ್ಕಳ, ಬಂಟರ ಸಂಘದ ಪ್ರಧಾನ ಪ್ರಬಂಧಕ ಪ್ರವೀಣ್ ಶೆಟ್ಟಿ ವಾರಂಗ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ಚಿತ್ರ – ವರದಿ : ರೋನ್ಸ್ ಬಂಟ್ವಾಳ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು