ಸಂಸದ ಗೋಪಾಲ್‌ ಶೆಟ್ಟಿ ಅಭಿನಂದನಾ ಸಮಾರಂಭದ ಪೂರ್ವಭಾವಿ ಸಭೆ


Team Udayavani, Feb 27, 2019, 2:53 PM IST

2602mum16a.jpg

ಮುಂಬಯಿ: ಫೇಮ್‌ ಇಂಡಿಯಾದ ಅಭಿಮತದ ಮೂಲಕ ಶ್ರೇಷ್ಠ ಸಂಸದ್‌ ಅವಾರ್ಡ್‌-2019ಕ್ಕೆ  ಭಾಜನರಾದ ಸಂಸದ ಗೋಪಾಲ್‌ ಶೆಟ್ಟಿ ಅಭಿಮಾನಿ ಬಳಗ ಮುಂಬಯಿ ವತಿಯಿಂದ ಮಾ. 2ರಂದು ನಡೆಯಲಿರುವ ಅಭಿನಂದನಾ ಸಮಾ ರಂಭದ ಪೂರ್ವಭಾವಿ ಸಭೆಯು  ಪೊಯಿಸರ್‌ ಜಿಮಾVನದ ಸಭಾಂಗಣ ದಲ್ಲಿ ನಡೆಯಿತು. ಸಭೆಯಲ್ಲಿ ಹಲವಾರು ತುಳು- ಕನ್ನಡಿಗರು, ರಾಜಕೀಯ ಧುರೀಣರು ಪಾಲ್ಗೊಂಡು ತಮ್ಮ ಅಮೂಲ್ಯ ಸಲಹೆ-ಸೂಚನೆಗಳನ್ನು ನೀಡಿದರು.

ಕಾರ್ಯಕ್ರಮದ ಸಂಚಾಲಕ, ಸಮಾಜ ಸೇವಕ ಎರ್ಮಾಳ್‌ ಹರೀಶ್‌ ಶೆಟ್ಟಿ ಅವರು ಮಾತನಾಡಿ, ಗೋಪಾಲ್‌ ಶೆಟ್ಟಿ ಅವರು ರಾಜಕೀಯ ರಂಗದ ಎಲ್ಲ ಹಂತಗಳಲ್ಲೂ ತಮ್ಮ ಸಮಾಜ ಸೇವೆಯ ಕಲಾ ನೈಪುಣ್ಯದಿಂದ ಸಂಸದರಾಗಿ ದೇಶದಲ್ಲಿಯೇ ಓರ್ವ ಸರ್ವಶ್ರೇಷ್ಠ ಸಂಸದರಾಗಿ ಹೆಸರು ಪಡೆದಿರುವುದು ತುಳು-ಕನ್ನಡಿಗರಿಗೆ ಹೆಮ್ಮೆಯ ವಿಷಯವಾಗಿದೆ. ಅವರ ಅಭಿನಂದನ ಸಮಾರಂಭವು ಅಭೂತ ಪೂರ್ವಕವಾಗಿ ನಡೆದು ಎಲ್ಲರ ಹೃದಯದಲ್ಲಿ ನೆಲೆ ನಿಲ್ಲುವಂತೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯವಾಗಿದೆ. ಈ ಉದ್ದೇಶದಿಂದ ಸಭೆಯನ್ನು ಕರೆಯಲಾಗಿದೆ ಎಂದು ನುಡಿದರು.

ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಇವರು ಮಾತನಾಡಿ, ಕಾರ್ಯಕ್ರಮವು ನಮ್ಮ ಸಂಸ್ಕೃತಿ, ಪರಂಪರೆಯನ್ನು ಪ್ರತಿ ಬಿಂಬಿಸುವಂತಿರಬೇಕು. ತುಳು- ಕನ್ನಡಿಗರ ಕಾರ್ಯಕ್ರಮಗಳು ಯಾವಾಗಲೂ ವೈವಿಧ್ಯತೆಯಿಂದ ಕೂಡಿರುತ್ತದೆ. ಆ ನಿಟ್ಟಿನಲ್ಲಿ ನಾವು ಸಮಾರಂಭ  ಆಯೋಜಿಸಿ ಪ್ರಶಂಸೆಗೆ ಪಾತ್ರರಾಗಬೇಕು ಎಂದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಅಧ್ಯಕ್ಷ ಚಂದ್ರಶೇಖರ ಎಸ್‌. ಪೂಜಾರಿ ಇವರು ಮಾತನಾಡಿ, ಮಹಾನಗರದ ಎಲ್ಲಾ ಸಂಘಗಳ ಒಕ್ಕೂಟದಿಂದ ಜರಗಲಿರುವ ಈ ಸಮಾರಂಭವು  ರಾಜಕೀಯ ಕಾರ್ಯಕ್ರಮವಾಗದೆ ಒಗ್ಗಟ್ಟಿನಿಂದ ಸಂಭ್ರಮವಾಗಬೇಕು. ನಮ್ಮ ಮುಂದಾಳು ಜಯ ಸಿ. ಸುವರ್ಣರ ಸಹಕಾರ ಹಾಗೂ 26 ಸ್ಥಳೀಯ ಸಮಿತಿಗಳ ಸಂಪೂರ್ಣ ಸಹಕಾರ ಈ ಸಂಭ್ರಮಕ್ಕೆ ದೊರೆಯಲಿದೆ ಎಂದರು.

ಮೊಗವೀರ ವ್ಯವಸ್ಥಾಪಕ ಮಂಡಳಿಯ ಅಧ್ಯಕ್ಷ ಕೆ. ಎಲ್‌. ಬಂಗೇರ ಇವರು ಮಾತನಾಡಿ, ಓರ್ವ ಪ್ರಾಮಾಣಿಕ ವ್ಯಕ್ತಿಗೆ ಸಂದ ಗೌರವ ನಮ್ಮ ಎಲ್ಲ ತುಳು-ಕನ್ನಡಿಗರಿಗೆ ದೊರೆತ ಗೌರವವಾಗಿದ್ದು, ಮೊಗವೀರ ಸಮಸ್ತ ಬಂಧು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮೀರಾ-ಡಹಾಣೂ ಬಂಟ್ಸ್‌ ಇದರ ಗೌರವಾಧ್ಯಕ್ಷ ಡಾ| ವಿರಾರ್‌ ಶಂಕರ್‌ ಶೆಟ್ಟಿ ಇವರು ಮಾತನಾಡಿ, ನಮ್ಮ ಕರ್ತವ್ಯಕ್ಕೆ ಅನುಗುಣವಾಗಿ ನಾವೆಲ್ಲರೂ ಕಾರ್ಯವೆಸಗುವ ಮೂಲಕ ಸಮಾರಂಭವನ್ನು ಮಹಾನಗರ ಅಲ್ಲದೆ ಉತ್ತರ ಮುಂಬಯಿ, ಥಾಣೆ, ಪಾಲ^ರ್‌ ಪ್ರದೇಶದಲ್ಲಿ ಕೂಡ ಅವರ ಬ್ಯಾನರ್‌ಗಳು ರಾರಾಜಿಸಬೇಕು. ಪ್ರತಿಯೊಬ್ಬರೂ ಜವಾಬ್ದಾರಿಯಿಂದ ಕಾರ್ಯಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ಮೆರವಣಿಗೆ, ಜನಸ್ತೋಮ ನಿಯಂತ್ರಣ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಯೋಜನೆ, ದೇಶ ಭಕ್ತಿಗಾಯನ ಹಾಗೂ ಶಿಸ್ತಿನ ಸಿಪಾಯಿಯಾಗಿರುವ ಗೋಪಾಲ್‌ ಶೆಟ್ಟಿ ಅವರ ವ್ಯಕ್ತಿತ್ವಕ್ಕೆ ಅನುಗುಣವಾಗಿ ನಾವು ಕಾರ್ಯಕ್ರಮ ಆಯೋಜನೆ, ಮುಖ್ಯವಾಗಿ ಭದ್ರತೆಯ ಬಗ್ಗೆ ಚರ್ಚಿಸಲಾಯಿತು.

ಮೀರಾ-ಭಾಯಂದರ್‌ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿಗುತ್ತು, ಕೃಷ್ಣಪ್ಪ ಪೂಜಾರಿ, ಗೋರೆಗಾಂವ್‌ ಕರ್ನಾಟಕ ಸಂಘದ ಮಾಜಿ ಅಧ್ಯಕ್ಷ ಪಯ್ನಾರು ರಮೇಶ್‌ ಶೆಟ್ಟಿ, ಮಹೇಶ್‌ ಶೆಟ್ಟಿ, ಚಾರ್ಕೋಪ್‌ ಕನ್ನಡಿಗ ಬಳಗದ ಅಧ್ಯಕ್ಷ ಎಂ. ಕೃಷ್ಣ ಎನ್‌. ಶೆಟ್ಟಿ, ಸಾಂತಾಕ್ರೂಜ್‌ ಕನ್ನಡ ಸಂಘದ ಅಧ್ಯಕ್ಷ ಎಲ್‌. ವಿ. ಅಮೀನ್‌, ಸುರೇಶ್‌ ಅಂಚನ್‌, ಬಿಲ್ಲವರ ಅಸೋಸಿಯೇಶನ್‌ ಉಪಾಧ್ಯಕ್ಷರಾದ ಶಂಕರ ಡಿ. ಪೂಜಾರಿ, ಬೊರಿವಲಿ ತುಳು ಸಂಘದ ಅಧ್ಯಕ್ಷ ವಾಸು ಕೆ. ಪುತ್ರನ್‌, ಮೊಗವೀರ ಕೋ ಆಪರೇಟಿವ್‌ ಬ್ಯಾಂಕಿನ ನಿರ್ದೇಶಕ ಗೋಪಾಲ್‌ ಪುತ್ರನ್‌, ಭಾರತ್‌ ಬ್ಯಾಂಕಿನ ನಿರ್ದೇಶಕರಾದ ಗಂಗಾಧರ ಜೆ. ಪೂಜಾರಿ, ಪ್ರೇಮನಾಥ ಪಿ. ಕೋಟ್ಯಾನ್‌, ಬಂಟರ ಸಂಘ ಜೋಗೇಶ್ವರಿ-ದಹಿಸರ್‌ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಎಸ್‌. ಶೆಟ್ಟಿ, ಜಿ. ಟಿ. ಆಚಾರ್ಯ, ಪೇಟೆಮನೆ ಪ್ರಕಾಶ್‌ ಶೆಟ್ಟಿ, ನಿಟ್ಟೆ ದಾಮೋದರ ಆಚಾರ್ಯ, ಪೊಯಿಸರ್‌ ಜಿಮಾVನದ ಉಪಾಧ್ಯಕ್ಷ ಕರುಣಾಕರ ಶೆಟ್ಟಿ, ಸುರೇಶ್‌ ಅಂಚನ್‌, ವಿನೋದಾ ಎ. ಶೆಟ್ಟಿ, ವಿನೋದಾ ಡಿ. ಶೆಟ್ಟಿ, ಪ್ರಭಾಕರ ಶೆಟ್ಟಿ, ಇತರ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದು, ಅಭಿನಂದನಾ ಸಮಾರಂಭದ ಯಶಸ್ಸಿಗೆ ಸೂಕ್ತ ಸಲಹೆ-
ಸೂಚನೆಗಳನ್ನು ನೀಡಿದರು. ಕಲಾ ಜಗತ್ತು ಡಾ| ವಿಜಯ ಕುಮಾರ್‌ ಶೆಟ್ಟಿ ಮತ್ತು ರಘುನಾಥ ಎಸ್‌. ಶೆಟ್ಟಿ ಅವರು ಕಾರ್ಯಕ್ರಮದ ಬಗ್ಗೆ ವಿವರ ನೀಡಿದರು.
 
ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.