ಸಂಸದ ಗೋಪಾಲ್‌ ಶೆಟ್ಟಿ ಅವರಿಗೆ ಅಭಿನಂದನೆ


Team Udayavani, Feb 28, 2019, 4:11 PM IST

2702mum17.jpg

ಮುಂಬಯಿ: ಪ್ರಾಮಾಣಿಕ ಮತ್ತು ದಕ್ಷ ಸಮಾಜ ಸೇವೆಯ ಸಂತೃಪ್ತಿಯೇ ನನಗೆ ಸಚಿವ ಸ್ಥಾನವಾಗಿದೆ ಎಂದು ಮುಂಬಯಿ ನಗರ ಉತ್ತರ ಲೋಕಸಭಾ ಕ್ಷೇತ್ರದ ಸಂಸದ  ಗೋಪಾಲ್‌ ಸಿ. ಶೆಟ್ಟಿ ತಿಳಿಸಿದರು.

ಬೊರಿವಿಲಿ ಪಶ್ಚಿಮದ ಪೊಯಿಸರ್‌ನ ಸಂಸದರ ಕಚೇರಿಯಲ್ಲಿ ಫೆ. 26 ರಂದು ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೋಪಾಲ್‌ ಶೆಟ್ಟಿ ಅವರು ತಾವು ಭಾವೀ ಕೇಂದ್ರ ಸಚಿವರು ಎಂದೇ ಬಿಂಬಿತರಾಗಿದ್ದರಲ್ಲಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ವಿಶ್ವಾಸ ಮತ್ತು ಅಭಿಮಾನಕ್ಕೆ ನಾನು ಸದಾ ಋಣಿಯಾಗಿದ್ದೇನೆ. ಇದೆಲ್ಲಾ ನನ್ನ ಕ್ಷೇತ್ರದ ಮತದಾರ ಬಂಧುಗಳು ಮತ್ತು ಹಿತೈಷಿಗಳಿಗೆ ಸಲ್ಲಬೇಕಾದ ಗೌರವವಾಗಿದೆ. ನಾನು ಯಾವತ್ತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಅಪೇಕ್ಷೆಯೂ ಇಲ್ಲ. ಕೇಂದ್ರದಲ್ಲಿ ನನಗಿಂತ ಹಿರಿಯ ಮತ್ತು ಅನುಭವಸ್ಥ ರಾಜಕೀಯ ಧುರೀಣರಿದ್ದಾರೆ. ನಾನೇನಿದ್ದರೂ ನನ್ನ ಕ್ಷೇತ್ರದ ಸರ್ವೋನ್ನತಿ ಮತ್ತು ಕ್ಷೇತ್ರದ ಜನತೆಯ ಸೇವೆಗೆ ಮೊದಲ ಆದ್ಯತೆ ನೀಡುವೆ. ರಾಷ್ಟ್ರ-ರಾಜ್ಯಗಳ ಸ್ಥಾನಕ್ಕಿಂತ ಕ್ಷೇತ್ರದ ಜನತೆಯ ಸ್ಥಾನಮಾನವೇ ನನ್ನ ಪಾಲಿಗೆ ಪ್ರಧಾನವಾಗಿದೆ. ನನ್ನ ಕ್ಷೇತ್ರದ ಮತದಾರರ ವಿಶ್ವಾಸವೇ ಇದಕ್ಕೆ ಕಾರಣ. ಮತದಾರರ ಆಶಯಕ್ಕಿಂತಲೂ ಮೀರಿ ಕ್ಷೇತ್ರದ ಜನತೆಗೆ ಗರಿಷ್ಠ ಸೇವೆಯನ್ನು ನೀಡಿದ ಭರವಸೆ ನನಗಿದೆ. ಪಕ್ಷವು ಮತ್ತೆ ನನ್ನನ್ನೇ ಕಣಕ್ಕಿಳಿಸಿದರೆ ಗತ ಸ್ಪರ್ಧೆಯ ಇತಿಹಾಸ ತಿದ್ದಿ ಹೊಸ ಅಧ್ಯಾಯ ನಿರ್ಮಿಸುವ ಹೊಣೆಯೂ ಕ್ಷೇತ್ರದ ಜನತೆಗೆ ಸೇರಿದ್ದು. ಪ್ರತಿಯೋರ್ವರಿಗೂ ಮಾತೃಭಾಷೆ, ಸ್ವಸಮಾಜ ಮತ್ತು ಹುಟ್ಟೂರ ಅಭಿಮಾನ ಇದ್ದೇ ಇರುತ್ತದೆ. ಅಂತೆಯೇ ಕರ್ಮಭೂಮಿ ಮುಂಬಯಿಯಲ್ಲಿ ನೆಲೆಯಾಗಿರುವ ಕರ್ನಾ

ಟಕ ಮೂಲದ ತುಳುಕನ್ನಡಿಗರಿಗೂ ಕರ್ನಾಟಕ ಭವನ ನಿರ್ಮಾಣದ ಉದ್ದೇಶ ಇದ್ದಿರ ಬಹುದು. ಆದರೆ  ತುಳುಕನ್ನಡಿಗರ ಲ್ಲಿನ ಬಹುತೇಕರು ಸ್ವಸಮುದಾಯ ಭವನಗಳನ್ನು ನಿರ್ಮಿಸಿ ಇತರರಿಗೆ ಮಾದರಿಯೂ ಮಾರ್ಗದರ್ಶಕರೂ ಆಗಿದ್ದಾರೆ. ಆದರೂ ಕರ್ನಾಟಕದ ಸಮಗ್ರ ಜನತೆಯ ಕರ್ನಾಟಕ ಭವನದ ಕನಸೊಂದಿದ್ದರೆ ಮನವಿಯನ್ನು ಪರಿಶೀಲಿಸಿ ಯೋಜನೆಯತ್ತ ಒಟ್ಟಾಗಿ ಗಮನ ಹರಿಸೋಣ ಎಂದು ನುಡಿದರು.

ಅಭಿನಂದನ ಸಮಾರಂಭದ ಪ್ರಧಾನ ಸಂಯೋಜಕ ಎರ್ಮಾಳ್‌ ಹರೀಶ್‌ ಶೆಟ್ಟಿ ಅವರು  ಮಾತನಾಡಿ,ಮಹಾರಾಷ್ಟ್ರ ರಾಜ್ಯ ದಲ್ಲಿನ ಏಕೈಕ ತುಳು-ಕನ್ನಡಿಗರ ಧ್ವನಿ, ಲೋಕಸಭಾ ಪ್ರತಿನಿಧಿಯಾಗಿದ್ದು ರಾಷ್ಟ್ರದ  ಸರ್ವೋತ್ಕೃಷ್ಟ  ಸಂಸದರಲ್ಲಿ ಓರ್ವರಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದಲೇ “ಸರ್ವೋತ್ಕೃಷ್ಟ ಸಂಸದ’ ಎಂದು ಗೌರವಿಸಲ್ಪಟ್ಟ ಗೋಪಾಲ್‌ ಸಿ. ಶೆಟ್ಟಿ ಅವರಿಗೆ ಮಾ. 2ರಂದು ಸಂಜೆ ಬೊರಿವಿಲಿ ಪಶ್ಚಿಮದ ಪುಷ್ಪಾಂಜಲಿ ಗಾರ್ಡನ್‌ನಲ್ಲಿ ಸಂಸದ ಶ್ರೀ ಗೋಪಾಲ್‌ ಶೆಟ್ಟಿ  ತುಳು-ಕನ್ನಡಿಗರ ಅಭಿಮಾನಿ ಬಳಗ ಆಯೋಜಿ ಸಿರುವ ಸಾರ್ವಜನಿಕ ಸಮಾವೇಶ ಮತ್ತು 
ಸಮ್ಮಾನ ಸಮಾರಂಭದ ಯಶಸ್ಸಿಗೆ ತುಳು-ಕನ್ನಡಿಗರ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದರು. ಈ ಸಂದರ್ಭದಲ್ಲಿ ಗೋಪಾಲ್‌ ಶೆಟ್ಟಿ ಅವರನ್ನು ಅವರ ಹಿತೈಷಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು.

ಮುಂಬಯಿ ನಗರ ಉತ್ತರ ಲೋಕಸಭಾ ಕ್ಷೇತ್ರ 1952ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ಈ ಕೇತ್ರ ಆರಂಭದಿಂದಲೇ ಒಂದು ಪ್ರತಿಷ್ಠೆಯ ಕಣವಾಗಿದೆ. 1952ರಲ್ಲಿ ಕಮ್ಯೂನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ ಪಕ್ಷದಿಂದ ಹಲವಾರು ಮಂದಿ ಜಯ ಗಳಿಸಿದ್ದರು. 2014ರಲ್ಲಿ ಬಿಜೆಪಿಯಿಂದ ಗೋಪಾಲ್‌ ಸಿ. ಶೆಟ್ಟಿ ಸ್ಪರ್ಧಿಸಿ ತುಳು-ಕನ್ನಡಿಗರ ಸೇರಿದಂತೆ ಕ್ಷೇತ್ರದ ಬಹುಭಾಷಿಕರ ಹಿರಿಮೆಯ ಸಂಸದರಾಗಿ ಆಯ್ಕೆಯಾಗಿದ್ದರು. ಅದೂ ಈ ಕ್ಷೇತ್ರದಿಂದ ಬಿಜೆಪಿ (ಶಿವಸೇನೆ ಬೆಂಬಲಿತ), ಕಾಂಗ್ರೆಸ್‌ (ಐ), ಆಮ್‌ ಆದ್ಮಿ ಪಾರ್ಟಿ, ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ ಸೇರಿದಂತೆ  ಸುಮಾರು ಹನ್ನೆರಡು ಪಕ್ಷಗಳು ಮತ್ತು 8-ಪಕ್ಷೇತರರು ಸ್ಪರ್ಧಿಸಿ ಒಟ್ಟಾರೆ ಶೆಟ್ಟಿ ಅವರನ್ನು ಸೋಲಿಸಿಯೇ ಸಿದ್ಧ ಎಂದು ಪಣತೊಟ್ಟರೂ ಸಾಮರಸ್ಯದ ದ್ಯೋತಕರಾದ ಶಿಸ್ತಿನ ಶಿಪಾಯಿ ಗೋಪಾಲ ಶೆಟ್ಟಿ ಅವರನ್ನೇ ಕ್ಷೇತ್ರದ ಮತದಾರರು ಜನನಾಯಕರನ್ನಾಗಿಸಿ ತಮ್ಮ ಪ್ರತಿನಿಧಿಯನ್ನಾಗಿಸಿ ಲೋಕಸಭೆಗೆ ಕಳುಹಿಸಿದ್ದರು. ಓರ್ವ ಸಾಮಾನ್ಯ ನಗರ ಸೇವಕರಾಗಿ, ಶಾಸಕರಾಗಿ, ಸಂಸದಾಗಿ ಗೋಪಾಲ ಶೆಟ್ಟಿ ಮಾಡಿರುವ ಸೇವೆಯಿಂದಲೇ ತುಳು-ಕನ್ನಡಿಗರು ಹಾಗೂ ಅನ್ಯಭಾಷಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಶ್ರೇಷ್ಠ ಸಂಸದ್‌ ಪ್ರಶಸ್ತಿ ಪುರಸ್ಕೃತ ಸಂಸದ ಗೋಪಾಲ್‌ ಶೆಟ್ಟಿ ಅವರಿಗೆ ಅಭಿನಂದನೆ

ಮುಂಬಯಿ: ಪ್ರಾಮಾಣಿಕ ಮತ್ತು ದಕ್ಷ ಸಮಾಜ ಸೇವೆಯ ಸಂತೃಪ್ತಿಯೇ ನನಗೆ ಸಚಿವ ಸ್ಥಾನವಾಗಿದೆ ಎಂದು ಮುಂಬಯಿ ನಗರ ಉತ್ತರ ಲೋಕಸಭಾ ಕ್ಷೇತ್ರದ ಸಂಸದ  ಗೋಪಾಲ್‌ ಸಿ. ಶೆಟ್ಟಿ ತಿಳಿಸಿದರು.

ಬೊರಿವಿಲಿ ಪಶ್ಚಿಮದ ಪೊಯಿಸರ್‌ನ ಸಂಸದರ ಕಚೇರಿಯಲ್ಲಿ ಫೆ. 26 ರಂದು ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಗೋಪಾಲ್‌ ಶೆಟ್ಟಿ ಅವರು ತಾವು ಭಾವೀ ಕೇಂದ್ರ ಸಚಿವರು ಎಂದೇ ಬಿಂಬಿತರಾಗಿದ್ದರಲ್ಲಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ವಿಶ್ವಾಸ ಮತ್ತು ಅಭಿಮಾನಕ್ಕೆ ನಾನು ಸದಾ ಋಣಿಯಾಗಿದ್ದೇನೆ. ಇದೆಲ್ಲಾ ನನ್ನ ಕ್ಷೇತ್ರದ ಮತದಾರ ಬಂಧುಗಳು ಮತ್ತು ಹಿತೈಷಿಗಳಿಗೆ ಸಲ್ಲಬೇಕಾದ ಗೌರವವಾಗಿದೆ. ನಾನು ಯಾವತ್ತೂ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಅಪೇಕ್ಷೆಯೂ ಇಲ್ಲ. ಕೇಂದ್ರದಲ್ಲಿ ನನಗಿಂತ ಹಿರಿಯ ಮತ್ತು ಅನುಭವಸ್ಥ ರಾಜಕೀಯ ಧುರೀಣರಿದ್ದಾರೆ. ನಾನೇನಿದ್ದರೂ ನನ್ನ ಕ್ಷೇತ್ರದ ಸರ್ವೋನ್ನತಿ ಮತ್ತು ಕ್ಷೇತ್ರದ ಜನತೆಯ ಸೇವೆಗೆ ಮೊದಲ ಆದ್ಯತೆ ನೀಡುವೆ. ರಾಷ್ಟ್ರ-ರಾಜ್ಯಗಳ ಸ್ಥಾನಕ್ಕಿಂತ ಕ್ಷೇತ್ರದ ಜನತೆಯ ಸ್ಥಾನಮಾನವೇ ನನ್ನ ಪಾಲಿಗೆ ಪ್ರಧಾನವಾಗಿದೆ. ನನ್ನ ಕ್ಷೇತ್ರದ ಮತದಾರರ ವಿಶ್ವಾಸವೇ ಇದಕ್ಕೆ ಕಾರಣ. ಮತದಾರರ ಆಶಯಕ್ಕಿಂತಲೂ ಮೀರಿ ಕ್ಷೇತ್ರದ ಜನತೆಗೆ ಗರಿಷ್ಠ ಸೇವೆಯನ್ನು ನೀಡಿದ ಭರವಸೆ ನನಗಿದೆ. ಪಕ್ಷವು ಮತ್ತೆ ನನ್ನನ್ನೇ ಕಣಕ್ಕಿಳಿಸಿದರೆ ಗತ ಸ್ಪರ್ಧೆಯ ಇತಿಹಾಸ ತಿದ್ದಿ ಹೊಸ ಅಧ್ಯಾಯ ನಿರ್ಮಿಸುವ ಹೊಣೆಯೂ ಕ್ಷೇತ್ರದ ಜನತೆಗೆ ಸೇರಿದ್ದು. ಪ್ರತಿಯೋರ್ವರಿಗೂ ಮಾತೃಭಾಷೆ, ಸ್ವಸಮಾಜ ಮತ್ತು ಹುಟ್ಟೂರ ಅಭಿಮಾನ ಇದ್ದೇ ಇರುತ್ತದೆ. ಅಂತೆಯೇ ಕರ್ಮಭೂಮಿ ಮುಂಬಯಿಯಲ್ಲಿ ನೆಲೆಯಾಗಿರುವ ಕರ್ನಾ

ಟಕ ಮೂಲದ ತುಳುಕನ್ನಡಿಗರಿಗೂ ಕರ್ನಾಟಕ ಭವನ ನಿರ್ಮಾಣದ ಉದ್ದೇಶ ಇದ್ದಿರ ಬಹುದು. ಆದರೆ  ತುಳುಕನ್ನಡಿಗರ ಲ್ಲಿನ ಬಹುತೇಕರು ಸ್ವಸಮುದಾಯ ಭವನಗಳನ್ನು ನಿರ್ಮಿಸಿ ಇತರರಿಗೆ ಮಾದರಿಯೂ ಮಾರ್ಗದರ್ಶಕರೂ ಆಗಿದ್ದಾರೆ. ಆದರೂ ಕರ್ನಾಟಕದ ಸಮಗ್ರ ಜನತೆಯ ಕರ್ನಾಟಕ ಭವನದ ಕನಸೊಂದಿದ್ದರೆ ಮನವಿಯನ್ನು ಪರಿಶೀಲಿಸಿ ಯೋಜನೆಯತ್ತ ಒಟ್ಟಾಗಿ ಗಮನ ಹರಿಸೋಣ ಎಂದು ನುಡಿದರು.

ಅಭಿನಂದನ ಸಮಾರಂಭದ ಪ್ರಧಾನ ಸಂಯೋಜಕ ಎರ್ಮಾಳ್‌ ಹರೀಶ್‌ ಶೆಟ್ಟಿ ಅವರು  ಮಾತನಾಡಿ,ಮಹಾರಾಷ್ಟ್ರ ರಾಜ್ಯ ದಲ್ಲಿನ ಏಕೈಕ ತುಳು-ಕನ್ನಡಿಗರ ಧ್ವನಿ, ಲೋಕಸಭಾ ಪ್ರತಿನಿಧಿಯಾಗಿದ್ದು ರಾಷ್ಟ್ರದ  ಸರ್ವೋತ್ಕೃಷ್ಟ  ಸಂಸದರಲ್ಲಿ ಓರ್ವರಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದಲೇ “ಸರ್ವೋತ್ಕೃಷ್ಟ ಸಂಸದ’ ಎಂದು ಗೌರವಿಸಲ್ಪಟ್ಟ ಗೋಪಾಲ್‌ ಸಿ. ಶೆಟ್ಟಿ ಅವರಿಗೆ ಮಾ. 2ರಂದು ಸಂಜೆ ಬೊರಿವಿಲಿ ಪಶ್ಚಿಮದ ಪುಷ್ಪಾಂಜಲಿ ಗಾರ್ಡನ್‌ನಲ್ಲಿ ಸಂಸದ ಶ್ರೀ ಗೋಪಾಲ್‌ ಶೆಟ್ಟಿ  ತುಳು-ಕನ್ನಡಿಗರ ಅಭಿಮಾನಿ ಬಳಗ ಆಯೋಜಿ ಸಿರುವ ಸಾರ್ವಜನಿಕ ಸಮಾವೇಶ ಮತ್ತು 
ಸಮ್ಮಾನ ಸಮಾರಂಭದ ಯಶಸ್ಸಿಗೆ ತುಳು-ಕನ್ನಡಿಗರ ಪ್ರೋತ್ಸಾಹ, ಸಹಕಾರ ಸದಾಯಿರಲಿ ಎಂದರು. ಈ ಸಂದರ್ಭದಲ್ಲಿ ಗೋಪಾಲ್‌ ಶೆಟ್ಟಿ ಅವರನ್ನು ಅವರ ಹಿತೈಷಿಗಳು, ವಿವಿಧ ಕ್ಷೇತ್ರಗಳ ಗಣ್ಯರು ಪುಷ್ಪಗುತ್ಛವನ್ನಿತ್ತು ಅಭಿನಂದಿಸಿದರು.

ಮುಂಬಯಿ ನಗರ ಉತ್ತರ ಲೋಕಸಭಾ ಕ್ಷೇತ್ರ 1952ರಲ್ಲಿ ಅಸ್ತಿತ್ವಕ್ಕೆ ಬಂದಿದ್ದು ಈ ಕೇತ್ರ ಆರಂಭದಿಂದಲೇ ಒಂದು ಪ್ರತಿಷ್ಠೆಯ ಕಣವಾಗಿದೆ. 1952ರಲ್ಲಿ ಕಮ್ಯೂನಿಸ್ಟ್‌ ಪಾರ್ಟಿ ಆಫ್‌ ಇಂಡಿಯಾ ಪಕ್ಷದಿಂದ ಹಲವಾರು ಮಂದಿ ಜಯ ಗಳಿಸಿದ್ದರು. 2014ರಲ್ಲಿ ಬಿಜೆಪಿಯಿಂದ ಗೋಪಾಲ್‌ ಸಿ. ಶೆಟ್ಟಿ ಸ್ಪರ್ಧಿಸಿ ತುಳು-ಕನ್ನಡಿಗರ ಸೇರಿದಂತೆ ಕ್ಷೇತ್ರದ ಬಹುಭಾಷಿಕರ ಹಿರಿಮೆಯ ಸಂಸದರಾಗಿ ಆಯ್ಕೆಯಾಗಿದ್ದರು. ಅದೂ ಈ ಕ್ಷೇತ್ರದಿಂದ ಬಿಜೆಪಿ (ಶಿವಸೇನೆ ಬೆಂಬಲಿತ), ಕಾಂಗ್ರೆಸ್‌ (ಐ), ಆಮ್‌ ಆದ್ಮಿ ಪಾರ್ಟಿ, ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ ಸೇರಿದಂತೆ  ಸುಮಾರು ಹನ್ನೆರಡು ಪಕ್ಷಗಳು ಮತ್ತು 8-ಪಕ್ಷೇತರರು ಸ್ಪರ್ಧಿಸಿ ಒಟ್ಟಾರೆ ಶೆಟ್ಟಿ ಅವರನ್ನು ಸೋಲಿಸಿಯೇ ಸಿದ್ಧ ಎಂದು ಪಣತೊಟ್ಟರೂ ಸಾಮರಸ್ಯದ ದ್ಯೋತಕರಾದ ಶಿಸ್ತಿನ ಶಿಪಾಯಿ ಗೋಪಾಲ ಶೆಟ್ಟಿ ಅವರನ್ನೇ ಕ್ಷೇತ್ರದ ಮತದಾರರು ಜನನಾಯಕರನ್ನಾಗಿಸಿ ತಮ್ಮ ಪ್ರತಿನಿಧಿಯನ್ನಾಗಿಸಿ ಲೋಕಸಭೆಗೆ ಕಳುಹಿಸಿದ್ದರು. ಓರ್ವ ಸಾಮಾನ್ಯ ನಗರ ಸೇವಕರಾಗಿ, ಶಾಸಕರಾಗಿ, ಸಂಸದಾಗಿ ಗೋಪಾಲ ಶೆಟ್ಟಿ ಮಾಡಿರುವ ಸೇವೆಯಿಂದಲೇ ತುಳು-ಕನ್ನಡಿಗರು ಹಾಗೂ ಅನ್ಯಭಾಷಿಕರ ಪ್ರಶಂಸೆಗೆ ಪಾತ್ರರಾಗಿದ್ದಾರೆ.

  ಚಿತ್ರ-ವರದಿ: ರೋನ್ಸ್‌  ಬಂಟ್ವಾಳ್‌

ಟಾಪ್ ನ್ಯೂಸ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.