ಮುಲುಂಡ್‌ ಫ್ರೆಂಡ್ಸ್‌,ಕರ್ನಾಟಕ ಜಾನಪದ ಪರಿಷತ್ತು ಪ್ರತಿಭಾ ಪುರಸ್ಕಾರ 


Team Udayavani, Jul 22, 2018, 4:20 PM IST

2107mum06a.jpg

ಮುಂಬಯಿ: ಇಂದಿನ ಆಧುನಿಕ ಯುಗದಲ್ಲಿ ಬದುಕು ಎನ್ನುವುದು ವಿಚಿತ್ರವಾಗಿದೆ. ಮಾನವೀಯತೆ ಮಣ್ಣು ಪಾಲಾಗುತ್ತಿದೆ. ಇಂದು ಮಕ್ಕಳ ಶಿಕ್ಷಣದ ಬಗ್ಗೆ ಪಾಲಕರು ಹೆಚ್ಚು ಹೆಚ್ಚು ಕಾಳಜಿ ವಹಿಸುತ್ತಾರೆ. ಇದು ಅಗತ್ಯ. ಮಕ್ಕಳಿಗೆ ಶಿಕ್ಷಣ ಬೇಕು ನಿಜ. ಆದರೆ ಕೇವಲ ಶಿಕ್ಷಣ ಮಾತ್ರ ಇದ್ದರೆ ಸಾಲದು. ಅವರಲ್ಲಿ ಸಂಸ್ಕಾರ, ಸಂಸ್ಕೃತಿಯ ಅರಿವು ಬೇಕು. ಇದರ ಅರಿವನ್ನು ಮೂಡಿಸುವ ಜವಾಬ್ದಾರಿ ಪಾಲಕರ ಮೇಲಿದೆ. ಮನುಷ್ಯನ ಜೀವನದಲ್ಲಿ ದುರಂತ, ಅಪಘಾತ ಎನ್ನುವಂತದ್ದು ಯಾವಾಗಲೂ ಸಂಭವಿಸಬಹುದು. ಬಂದಂತಹ ಸಂಕಷ್ಟವನ್ನು ನಿಭಾಯಿಸುವ ಶಕ್ತಿಯನ್ನು ಮೈಗೂಡಿಸಿಕೊಂಡಾಗ ನಮ್ಮ ಬದುಕನ್ನು ನಾವೇ ಕಟ್ಟಲು ಸಾಧ್ಯ. ಅಂತಹ ಶಕ್ತಿಯನ್ನು ಮಕ್ಕಳಲ್ಲಿ ವಿದ್ಯಾರ್ಥಿ ಬದುಕಿನ ಜೊತೆಗೆ ತುಂಬಬೇಕಾಗಿದೆ ಎಂದು ಅನಾಥ ರಕ್ಷಕ ಪ್ರಶಸ್ತಿ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ, ಉಡುಪಿ ಜಿಲ್ಲೆಯ ಶ್ರೇಷ್ಠ ಸಮಾಜ ಸೇವಕ ವಿಶುಕುಮಾರ್‌ ಶೆಟ್ಟಿ ಅಂಬಲಪಾಡಿ ನುಡಿದರು.
ಅವರು ಜು.19ರಂದು ಸಂಜೆ ಮುಲುಂಡ್‌ ಪೂರ್ವದ ಕೇಳ್ಕರ್‌ ಕಾಲೇಜು ಹತ್ತಿರದ ಮರಾಠ ಮಂಡಳ್‌ ಸಭಾಗೃಹದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕ ಮತ್ತು ಮುಲುಂಡ್‌ ಫ್ರೆಂಡ್ಸ್‌ ಇದರ ವತಿಯಿಂದ ಸಮಾಜ ಸೇವಕ ಸುರೇಶ್‌ ಶೆಟ್ಟಿ ಯೆಯ್ನಾಡಿ ಅವರ ನೇತೃತ್ವದಲ್ಲಿ ವಿ.ಪಿ. ಎಂ. ಕನ್ನಡ ಶಾಲಾ ಮಕ್ಕಳಿಗೆ ನೀಡಲಾದ ಪ್ರತಿಭಾ ಪುರಸ್ಕಾರ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ, ಸಂಸ್ಥೆಯು ನೀಡಿದ ಸಮ್ಮಾನವನ್ನು ಸ್ವೀಕರಿಸಿ ಮಾತನಾಡುತ್ತಿದ್ದರು.

ಮಕ್ಕಳಿಗೆ ಮನೆಯೇ ಮೊದಲ ಪಾಠ ಶಾಲೆ. ಅದು ನಿಜವಾಗಬೇಕಾದರೆ ಅಲ್ಲಿ ಪಾಲಕರ, ಮಾರ್ಗದರ್ಶಕರ ಕೆಲಸ ಬಹಳಷ್ಟಿದೆ. ದೇಶಕ್ಕಾಗಿ ಹೋರಾಡಿದ ಸಂಪನ್ಮೂಲ ವ್ಯಕ್ತಿಗಳ ಆದರ್ಶ ಬದುಕಿನ ಬಗ್ಗೆ ಮಕ್ಕಳಿಗೆ ತಿಳಿಸಿ ಹೇಳುವ ಅಗತ್ಯವಿದೆ ಎಂದೆನ್ನುತ್ತಾ ಮುಲುಂಡ್‌ ಫ್ರೆಂಡ್ಸ್‌ ಮಕ್ಕಳ ವಿದ್ಯಾರ್ಥಿ ಬದುಕಿಗಾಗಿ ನೀಡುತ್ತಾ ಬಂದಿರುವ ಪ್ರೋತ್ಸಾಹವನ್ನು ಶ್ಲಾಘಿಸಿದರು ಮತ್ತು ಸಮ್ಮಾನಕ್ಕೆ ಕೃತಜ್ಞತೆ ಸಲ್ಲಿಸಿದರು.
ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅವರ ಅಧ್ಯಕ್ಷತೆಯಲ್ಲಿ ಜರಗಿದ ಈ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತ ವಿಶುಕುಮಾರ್‌ ಶೆಟ್ಟಿ ಅಂಬಲಪಾಡಿ ಅವರನ್ನು ಮುಲುಂಡ್‌ ಫ್ರೆಂಡ್ಸ್‌ ಮತ್ತು ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ವತಿಯಿಂದ ಅತಿಥಿ ಗಣ್ಯರುಗಳ ಹಸ್ತದಲ್ಲಿ ಶಾಲು ಹೊದಿಸಿ, ಪೇಟ ತೊಡಿಸಿ, ಫಲಪುಷ್ಪ, ನೆನಪಿನ ಕಾಣಿಕೆ, ಸಮ್ಮಾನ ಪತ್ರದೊಂದಿಗೆ ಸಮ್ಮಾನಿಸಿ ಅಭಿನಂದಿಸಲಾಯಿತು.
ರಾಜಕೀಯ ನೇತಾರ, ಹೊಟೇಲ್‌ ಉದ್ಯಮಿ ಜಯಪ್ರಕಾಶ್‌ ಶೆಟ್ಟಿ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸುತ್ತಾ, ಸುರೇಶ್‌ ಶೆಟ್ಟಿ ಯೆಯ್ನಾಡಿ ಅವರ ವಿದ್ಯಾಸೇವೆ ಅಭಿನಂದನಾರ್ಹ. ಅವರ ಸಮಾಜ ಸೇವೆಗೆ ನಮ್ಮ ಸಹಕಾರ ನಿರಂತರವಿದೆ ಎಂದರು.

ತೌಳವಶ್ರೀ ಪ್ರಶಸ್ತಿ ಪುರಸ್ಕೃತ ತುಳು ಚಲನಚಿತ್ರ ನಟ ಸೌರಭ್‌ ಭಂಡಾರಿ ಅವರು ಮಾತನಾಡುತ್ತಾ, ಅನ್ನದಾನಕ್ಕಿಂತ ಶ್ರೇಷ್ಠ ದಾನವೊಂದಿದ್ದರೆ ಅದು ವಿದ್ಯಾದಾನ. ಅನ್ನದಾನ ಒಂದು ದಿನದ ಹಸಿವನ್ನು ನೀಗಿಸಬಹುದು. ಆದರೆ ವಿದ್ಯಾದಾನ ಜೀವನ ಪರ್ಯಂತ ಶಾಶ್ವತವಾಗಿರುತ್ತದೆ ಎಂದು ಹೇಳುತ್ತಾ ತಮ್ಮ ಮುಂದಿನ ತುಳುಚಿತ್ರಕ್ಕೆ ತುಳು-ಕನ್ನಡಿಗರು ಹೆಚ್ಚಿನ ರೀತಿಯಲ್ಲಿ ಪ್ರೋತ್ಸಾಹವನ್ನು ನೀಡಿ ಸಹಕರಿಸುವಂತೆ ವಿನಂತಿಸಿಕೊಂಡರು.

ವಿ.ಪಿ.ಎಂ. ಶಾಲಾ ಮಕ್ಕಳ ಪ್ರಾರ್ಥನೆ, ಅತಿಥಿ ಗಣ್ಯರ ಹಸ್ತದಿಂದ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅತಿಥಿ ಗಣ್ಯರನ್ನು ಮುಲುಂಡ್‌ ಫ್ರೆಂಡ್ಸ್‌ನ ಅಧ್ಯಕ್ಷ ಸುರೇಶ್‌ ಶೆಟ್ಟಿ ಯೆಯ್ನಾಡಿ ಸ್ವಾಗತಿಸಿದರು. ಉಪಾಧ್ಯಕ್ಷ ಸುಂದರ ಶೆಟ್ಟಿ ವಾಮದಪದವು, ಕೋಶಾಧಿಕಾರಿ ವೇಣುಗೋಪಾಲ್‌ ಶೆಟ್ಟಿ, ಜೊತೆ ಕಾರ್ಯದರ್ಶಿ ಯುವರಾಜ್‌ ಶೆಟ್ಟಿ ಅವರು ಅತಿಥಿ ಗಣ್ಯರನ್ನು ಶಾಲು ಹೊದಿಸಿ, ಹೂಗುತ್ಛ ನೆನಪಿನ ಕಾಣಿಕೆಯೊಂದಿಗೆ ಗೌರವಿಸಿದರು.
ವಿ.ಪಿ.ಎಂ. ಕನ್ನಡ ಶಾಲೆಯ 10ನೇ ತರಗತಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ಹಾಗೂ ಪ್ರಾಥಮಿಕ ಶಾಲಾ ಮಕ್ಕಳಿಗೆ ಸಮವಸ್ತ್ರವನ್ನು ಅತಿಥಿ ಗಣ್ಯರ ಹಸ್ತದಿಂದ ವಿತರಿಸಲಾಯಿತು. ಪ್ರತಿಭಾ ಪುರಸ್ಕಾರದ ಯಾದಿಯನ್ನು ಜೊತೆ ಕಾರ್ಯದರ್ಶಿ ಯುವರಾಜ್‌ ಶೆಟ್ಟಿ ಓದಿದರು. ಸಮ್ಮಾನ ಪತ್ರವನ್ನು ವಾಚಿಸಿ ಕಾರ್ಯಕ್ರಮವನ್ನು ಚಲನಚಿತ್ರ ನಟ ಬಾಬಾ ಪ್ರಸಾದ್‌ ಅರಸರವರು  ನಿರೂಪಿಸಿದರು. ಕೋಶಾಧಿಕಾರಿ ವೇಣುಗೋಪಾಲ್‌ ಶೆಟ್ಟಿ ವಂದಿಸಿದರು. ವೇದಿಕೆಯಲ್ಲಿ ಮುಖ್ಯ ಅತಿಥಿಯಾಗಿ ಸೌತ್‌ ಸೇವಾ ಸಂಘ ಕಲೀಲಾ ಇದರ ಅಧ್ಯಕ್ಷ ವಿಜಯ ಶೆಟ್ಟಿ, ಮುಲುಂಡ್‌ ಉದ್ಯಮಿ ಅಶೋಕ್‌ ಶೆಟ್ಟಿ  ಉಪಸ್ಥಿತರಿದ್ದರು. 

ಸಭಾ ಕಾರ್ಯಕ್ರಮದ ಬಳಿಕ ಅಜೆಕಾರು ಕಲಾಭಿಮಾನಿ ಬಳಗ ಮುಂಬಯಿ ಇದರ ತವರೂರ ನಾಮಾಂಕಿತ ಕಲಾವಿದರಿಂದ ಗರುಡ ಗರ್ವಭಂಗ ಯಕ್ಷಗಾನ ತಾಳ ಮದ್ದಳೆ ಪ್ರಸ್ತುತಗೊಂಡಿತು. ಅಜೆಕಾರು ಕಲಾಭಿಮಾನಿ ಬಳಗದ ರೂವಾರಿ ಬಾಲಕೃಷ್ಣ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಹೂಗುತ್ಛ  ನೀಡಿ ಅಭಿನಂದಿಸಲಾಯಿತು.

ಮುಖ್ಯ ಅತಿಥಿ, ಮುಲುಂಡ್‌ನ‌ ಹೊಟೇಲ್‌ ಉದ್ಯಮಿ, ಯಕ್ಷ ಮಾನಸ ಮುಂಬಯಿಯ ಅಧ್ಯಕ್ಷ ಶೇಖರ್‌ ಆರ್‌. ಶೆಟ್ಟಿ  ಮಾತನಾಡುತ್ತ, ಸಮಾಜ ಸೇವಕ ಸುರೇಶ್‌ ಶೆಟ್ಟಿ ಯೆಯ್ನಾಡಿ ಅವರು ತಮ್ಮ ಮುಲುಂಡ್‌ ಫ್ರೆಂಡ್ಸ್‌ನ ಆಶ್ರಯದಲ್ಲಿ ಕಳೆದ 22 ವರ್ಷಗಳಿಂದ ಶಾಲಾ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಬಡ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸುತ್ತಾ ಬಂದಿದ್ದು, ಈ ಬಾರಿಯೂ ಅದನ್ನು ಕರ್ನಾಟಕ ಜಾನಪದ ಪರಿಷತ್ತು ಮಹಾರಾಷ್ಟ್ರ ಘಟಕದ ಇದರ ಸಹಯೋಗದೊಂದಿಗೆ ನೀಡು ತ್ತಿದ್ದಾರೆ. ಇದು ನಿಜವಾಗಿಯೂ ಮೆಚ್ಚುವಂತಹ ಕೆಲಸ ಎಂದು ಶ್ಲಾಘಿಸಿದರು. ಮತ್ತು ವಿಶುಕುಮಾರ್‌ ಶೆಟ್ಟಿ ಅವರ ಉತ್ಕೃಷ್ಟ ಸೇವೆ, ಸಮಾಜ ಪರ ಚಿಂತನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಅವರ ಸಾಧನೆ ಗಿನ್ನೆಸ್‌ ಬುಕ್‌ನಲ್ಲಿ ದಾಖಲೆಯಾಗಲಿ ಎಂದರು.

ಅಧ್ಯಕ್ಷತೆ ವಹಿಸಿದ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ ಅವರು ಮಾತನಾಡಿ, ಮುಲುಂಡ್‌ ಫ್ರೆಂಡ್ಸ್‌ ಶಾಲಾ ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮದ ಜೊತೆಗೆ ಓರ್ವ ಶ್ರೇಷ್ಠ ಸಮಾಜ ಸೇವಕರಾಗಿರುವ ವಿಶುಕುಮಾರ್‌ ಶೆಟ್ಟಿ ಅವರನ್ನು ಆಹ್ವಾನಿಸಿ ಸಮ್ಮಾನಿಸಿದೆ. ಇದು ನಿಜವಾಗಿಯೂ ಅರ್ಥಪೂರ್ಣ. ಅವರು ಮಾಡಿದ ಮಾನವೀಯತೆಯನ್ನು ಮೆರೆಯುವ ಕೆಲಸಗಳನ್ನು ಕೇಳಿದಾಗ ನಿಜವಾಗಿಯೂ ಇಂಥವರು ಬೇಕೆಂದೆನಿಸುತ್ತದೆ. ಕಣ್ಣ ಮುಂದೆ ಒಂದು ಅಪಘಾತವಾದರೆ ಯಾರೂ ಸಹಾಯಕ್ಕೆ ಬಾರದ ಇಂದಿನ ಕಾಲದಲ್ಲಿ ವಿಶುಕುಮಾರ್‌ ಅವರು ಸಾವಿರಾರು ಜನರಿಗೆ ಮರುಜೀವ ನೀಡುವಲ್ಲಿ ತಮ್ಮ ಯೋಗದಾನವನ್ನು ನೀಡಿದ್ದಾರೆ. ಅವರ ಈ ಕೆಲಸವನ್ನು ಸರಕಾರ ಗುರುತಿಸುವಂತಾಗಲಿ ಎಂದು ಶುಭ ಹಾರೈಸಿದರು.
 

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.