ಮುಂಬಯಿ ಬಂಟರ ಭವನ: ಗಣೇಶೋತ್ಸವಕ್ಕೆ ಸಂಭ್ರಮದ ಚಾಲನೆ
Team Udayavani, Sep 16, 2018, 4:49 PM IST
ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಆವರಣ ದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ 13ನೇ ವಾರ್ಷಿಕ ಗಣೇಶೋತ್ಸವ ಸಂಭ್ರಮವು ಸೆ. 13ರಿಂದ ಪ್ರಾರಂಭಗೊಂಡಿದ್ದು, ಸೆ. 17ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.
ದೇವಸ್ಥಾನದ ಪ್ರಧಾನ ಅರ್ಚಕ ವಿದ್ವಾನ್ ಅರವಿಂದ ಬನ್ನಿಂತಾಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದ್ದು, ಸೆ. 13 ರಂದು ಬೆಳಗ್ಗೆ 9 ರಿಂದ ಶ್ರೀ ಗಣೇಶ ಪ್ರತಿಷ್ಠಾಪನೆ, ಗಣಹೋಮ, ಮಹಾಪೂಜೆ ನಡೆಯಿತು. ಆ ದಿನದ ಸೇವಾರ್ಥಿಗಳಾಗಿ ಸಂಘದ ಯುವ ವಿಭಾಗ ಮತ್ತು ನವಿಮುಂಬಯಿ ಪ್ರಾದೇಶಿಕ ಸಮಿತಿಯವರು ಸಹ ಕರಿಸಿದರು. ಮಾತೃಭೂಮಿ ಕೋ. ಆಪರೇಟಿವ್ ಕ್ರೆಡಿಟ್ ಸೊಸೈಟಿ ವಿಶೇ ಷವಾಗಿ ಪ್ರಾಯೋಜಕತ್ವ ವಹಿಸಿತ್ತು.
ಸೆ. 14 ರಂದು ಪೂರ್ವಾಹ್ನ 10 ರಿಂದ ಗಣಹೋಮ ಹಾಗೂ ಮಹಾಪೂಜೆ ಜರಗಿತು. ಅಂದಿನ ಸೇವಾರ್ಥಿಗಳಾಗಿ ಸಂಘದ ಅಂಧೇರಿ-ಬಾಂದ್ರಾ ಪ್ರಾದೇಶಿಕ ಸಮಿತಿ ಹಾಗೂ ಜೋಗೇಶ್ವರಿ ದಹಿಸರ್ ಪ್ರಾದೇಶಿಕ ಸಮಿತಿಯವರು ಸಹಕರಿಸಿದರು. ಅಪರಾಹ್ನ 4 ರಿಂದ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯ ಸದಸ್ಯರಿಂದ ಭಜನ ಕಾರ್ಯಕ್ರಮ ನಡೆಯಿತು.
ಬಂಟರ ಸಂಘ ಮುಂಬಯಿ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ, ಜ್ಞಾನ ಮಂದಿರ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ, ಸಂಘದ ಉಪಾಧ್ಯಕ್ಷ ಚಂದ್ರಹಾಸ ಕೆ. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಸಿಎ ಸಂಜೀವ ಶೆಟ್ಟಿ, ಗೌರವ ಕೋಶಾಧಿಕಾರಿ ಪ್ರವೀಣ್ ಭೋಜ ಶೆಟ್ಟಿ, ಜತೆ ಕಾರ್ಯದರ್ಶಿ ಮಹೇಶ್ ಎಸ್. ಶೆಟ್ಟಿ, ಜತೆ ಕೋಶಾಧಿಕಾರಿ ಗುಣಪಾಲ್ ಶೆಟ್ಟಿ ಐಕಳ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರಂಜನಿ ಸುಧಾಕರ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಶರತ್ ವಿ. ಶೆಟ್ಟಿ, ಬೆಳ್ಳಂಪಳ್ಳಿ ಬಾಲಕೃಷ್ಣ ಶೆಟ್ಟಿ, ಬೊಳ್ನಾಡುಗುತ್ತು ಚಂದ್ರಹಾಸ್ ಶೆಟ್ಟಿ, ಕಬಡ್ಡಿ ಜಯ ಎ. ಶೆಟ್ಟಿ, ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು, ವಿಶ್ವಸ್ಥರು, ಮಾಜಿ ಅಧ್ಯಕ್ಷರು ಹಾಗೂ ಪ್ರಾದೇಶಿಕ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸೆ. 15 ರಂದು ಬೆಳಗ್ಗೆ 10 ರಿಂದ ಗಣಹೋಮ ಹಾಗೂ ಮಹಾಪೂಜೆ ನೆರವೇರಲಿದ್ದು, ಸಂಘದ ಕಲ್ಯಾಣ್-ಬದ್ಲಾಪುರ ಪ್ರಾದೇಶಿಕ ಸಮಿತಿ ಮತ್ತು ಡೊಂಬಿವಲಿ ಪ್ರಾದೇಶಿಕ ಸಮಿತಿಯವರು ಅಂದಿನ ಸೇವಾರ್ಥಿಗಳಾಗಿದ್ದಾರೆ.
ಸಂಜೆ 4 ರಿಂದ ಸಂಘದ ಡೊಂಬಿವಲಿ ಪ್ರಾದೇಶಿಕ ಸಮಿತಿಯವರಿಂದ ಭಜನ ಕಾರ್ಯಕ್ರಮ ನಡೆಯಲಿದೆ.
ಸೆ. 16 ರಂದು ಬೆಳಗ್ಗೆ 10 ರಿಂದ ಗಣಹೋಮ, ಮಹಾಪೂಜೆ ನೆರವೇರಲಿದ್ದು, ಸೇವಾರ್ಥಿಗಳಾಗಿ ಸಂಘದ ಮೀರಾ-ಭಾಯಂದರ್ ಪ್ರಾದೇಶಿಕ ಸಮಿತಿ ಹಾಗೂ ವಸಾಯಿ-ಡಹಾಣೂ ಪ್ರಾದೇಶಿಕ ಸಮಿತಿಯವರು ಸಹಕರಿಸಲಿದ್ದಾರೆ. ಸೆ. 17 ರಂದು ಬೆಳಗ್ಗೆ 10 ರಿಂದ ಸಾರ್ವಜನಿಕ ಗಣಹೋಮ ಮತ್ತು ಮಹಾಪೂಜೆ ಜರಗಲಿದೆ. ದಿನದ ಸೇವಾರ್ಥಿಗಳಾಗಿ ಸಂಘದ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿ ಸಹಕರಿಸಲಿದ್ದಾರೆ.
ಮಧ್ಯಾಹ್ನ ಮಹಾ ಅನ್ನಸಂತರ್ಪಣೆ, ಮಧ್ಯಾಹ್ನ 1 ರಿಂದ ಹೂಕಟ್ಟುವ ಸ್ಪರ್ಧೆ, ಸಂಗೀತ ಕುರ್ಚಿ, ಬಲೂನ್ ಊದುವುದು ಇನ್ನಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಅಪರಾಹ್ನ 2 ರಿಂದ ಕೈರಬೆಟ್ಟು ವಿಶ್ವನಾಥ್ ಭಟ್ ಅವರಿಂದ ಶ್ಯಮಂತಕೋಪಾಖ್ಯಾನ ಹರಿಕಥಾ ಕಾಲಕ್ಷೇಪ ನಡೆಯಲಿದೆ. ಇದೇ ಸಂದರ್ಭದಲ್ಲಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಬಹುಮಾನ ವಿತರಿಸಲಾಗುವುದು.
ಬಳಿಕ ಬಂಟರ ಸಂಘ ಮಹಿಳಾ ವಿಭಾಗದಿಂದ ಭಜನ ಕಾರ್ಯಕ್ರಮ ನಡೆಯಲಿದೆ. ಸೇವಾರ್ಥಿಗಳಾಗಿ ಸಂಘದ ಸಿಟಿ ಪ್ರಾದೇಶಿಕ ಸಮಿತಿ ಹಾಗೂ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯವರು ಸಹಕರಿ ಸಲಿದ್ದಾರೆ.
ಈ ಎಲ್ಲ ಕಾರ್ಯಕ್ರಮಗಳಲ್ಲಿ ಸಂಘದ ಸದಸ್ಯ ಬಾಂಧವರು, ಸಮಾಜ ಬಾಂಧವರು, ಭಕ್ತಾಭಿಮಾನಿಗಳು ಪಾಲ್ಗೊಂಡು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸುವಂತೆ ಜ್ಞಾನ ಮಂದಿರದ ಕಾರ್ಯಾಧ್ಯಕ್ಷ ರವೀಂದ್ರನಾಥ ಎಂ. ಭಂಡಾರಿ ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ