ಮುಂಬಯಿ; ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಕೊಡುಗೆ ಅಪಾರ


Team Udayavani, May 31, 2023, 6:11 PM IST

ಮುಂಬಯಿ; ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಕೊಡುಗೆ ಅಪಾರ

ಮುಂಬಯಿ: ಉಪನಗರ ಪಾಲ್ಘರ್‌ ಜಿಲ್ಲೆಯಲ್ಲಿ ಉಡುಪಿ ಮೂಲದ ಆಲ್ಬರ್ಟ್‌ ಡಬ್ಲ್ಯು. ಡಿ’ಸೋಜಾ ಪಾಂಗಾಳ ಆಡಳಿತ್ವದ ಅಲ್ಡೇಲ್‌ ಎಜುಕೇಶನ್‌ ಟ್ರಸ್ಟ್‌ನ ಸಮೂಹದ ಸೈಂಟ್‌ ಜೋನ್‌ ಟೆಕ್ನಿಕಲ್‌ ಆ್ಯಂಡ್‌ ಎಜುಕೇಶನಲ್‌ ವಿದ್ಯಾಲಯದ 11ನೇ ವಾರ್ಷಿಕ ಘಟಿಕೋತ್ಸವವು ಮೇ 27 ರಂದು ಕಾಲೇಜಿನ ಕ್ಯಾಂಪಸ್‌ನಲ್ಲಿರುವ ಸೈಂಟ್‌ ಜೋನ್‌ ಮಹಾವಿದ್ಯಾಲಯದ ಸಭಾ ಗೃಹದಲ್ಲಿ ನೆರವೇರಿತು.

ಸೈಂಟ್‌ ಜೋನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಫಾರ್ಮಸಿ, ಸೈಂಟ್‌ ಜೋನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಮಾನವಿಕ ಮತ್ತು ವಿಜ್ಞಾನ (ಹ್ಯೂಮ್ಯಾ ನಿಟಿಸ್‌ ಆ್ಯಂಡ್‌ ಸೈನ್ಸ್‌) ಹಾಗೂ ಸೈಂಟ್‌ ಜೋನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಎಂಜಿನಿಯರಿಂಗ್‌ ಆ್ಯಂಡ್‌ ಎಂಎಂಎಸ್‌ ವಿಭಾಗದ ಘಟಿಕೋತ್ಸವ ನೆರವೇರಿ, ಬಾಟು ಲೋನೆರ್‌ ಮತ್ತು ಎನ್‌ ಪಿಸಿಐಎಲ್‌ ಲಿ. ಮುಂಬಯಿ ಪ್ರಪ್ರಥಮ ಮಾಜಿ ಉಪಕುಲಪತಿ ಡಾ| ಜಿ. ವಿ ಗೈಕಾರ್‌ ಅತಿಥಿಯಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನಗೈದರು.

ಆಲ್ಡೇಲ್‌ ಎಜುಕೇಶನ್‌ ಟ್ರಸ್ಟ್‌ನ ಕಾರ್ಯಾಧ್ಯಕ್ಷ ಆಲ್ಬರ್ಟ್‌ ಡಬ್ಲ್ಯು.ಡಿ’ಸೋಜಾ ಮಾತನಾಡಿ, ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ತರವಾಗಿದೆ. ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಸದ್ಗುಣಗಳನ್ನು ಅಳವಡಿಸಿ ಕೊಂಡು ಜೀವನದಲ್ಲಿ ಸುಸಂಸ್ಕೃತರಾಗಿ ಬೆಳೆ ಯಬೇಕು. ಜೀವನದ ವಿವಿಧ ಹಂತಗಳಲ್ಲಿ ವಿಭಿನ್ನ ಪ್ರಮಾಣದಲ್ಲಿ ಬರುವ ಸಮಯ, ಶಕ್ತಿ ಮತ್ತು ಹಣವನ್ನು ಉತ್ತಮವಾಗಿ ಬಳಸಿ ಕೊಳ್ಳಬೇಕು. ಶಿಕ್ಷಣ ಎಂಬುವುದು ಅಂಕಗಳಿಕೆಗೆ ಸೀಮಿತವಾಗಿಲ್ಲ. ಜೀವನದಲ್ಲಿ ಹಿರಿಯರಿಗೆ
ಗೌರವ ನೀಡಿ, ತಾನು ಕಲಿತ ಶಿಕ್ಷಣ ಸಂಸ್ಥೆ, ಗುರುಗಳನ್ನು ಹಾಗೂ ತಂದೆ-ತಾಯಿಗಳನ್ನು ಎಂದಿಗೂ ಮರೆಯಬಾರದು ಎಂದರು.

ಡಾ| ಜಿ. ವಿ. ಗೈಕರ್‌ ಅವರು ವೈಯಕ್ತಿಕ ಮತ್ತು ವೃತ್ತಿಪರ ಜೀವನದಲ್ಲಿ ಯಶಸ್ವಿ ಯಾಗಲು ಅಗತ್ಯವಾದ ಸುಸಂಸ್ಕೃತ ಕಲಿಕೆ
ಯಂತಹ ಅಂಶಗಳ ಮೇಲೆ ಮಾಹಿತಿ ನೀಡಿದರು. ಭವಿಷ್ಯದ ವಿವಿಧ ಪ್ರಯತ್ನ ಗಳಲ್ಲಿ ಯಶಸ್ವಿಯಾಗಲು ಧೈರ್ಯ ಮತ್ತು
ಸಹಯೋಗ ಮತ್ತು ಪರಿಣತಿಯನ್ನು ಹಂಚಿಕೊಳ್ಳುವ ಅಗತ್ಯ ತಿಳಿಸಿದ ಅವರು, ವಿದ್ಯಾರ್ಥಿಗಳು ರಾಷ್ಟ್ರದ ಅಭಿವೃದ್ಧಿಗೆ ಕೊಡುಗೆ
ನೀಡಬೇಕು ಎಂದರು.

ಸೈಂಟ್‌ ಜೋನ್‌ ಇಂಟರ್‌ನ್ಯಾಶನಲ್‌ ಸಿಬಿಎಸ್‌ಇ ಶಾಲಾ ವಿದ್ಯಾರ್ಥಿಗಳ ಸ್ಕೂಲ್‌ ಬ್ಯಾಂಡ್‌ನ‌ ನೀನಾದದೊಂದಿಗೆ ಪದವೀಧರ
ವಿದ್ಯಾರ್ಥಿಗಳು ಮತ್ತು ಗಣ್ಯರನ್ನು ಸಭಾಂಗಣಕ್ಕೆ ಕರೆತರಲಾಯಿತು. ಜಾಗತಿಕ ಶಾಂತಿ ನೆಮ್ಮದಿಗಾಗಿ ಸಾರ್ವತ್ರಿಕ ಪ್ರಾರ್ಥನೆ ನಡೆಸಿ
ಸರ್ವಶಕ್ತ ದೇವರಿಗೆ ಪ್ರಾರ್ಥಿಸಿ ಸರಸ್ವತಿ ವಂದನೆಯೊಂದಿಗೆ ದೀಪ ಬೆಳಗಿಸಿ ಸಮಾರಂಭಕ್ಕೆ ಚಾಲನೆ ನೀಡಲಾಯಿತು. ಆಲ್ಬರ್ಟ್‌
ಡಬ್ಲ್ಯು. ಡಿ’ಸೋಜಾ ಸ್ವಾಗತಿಸಿ, ಪ್ರಸ್ತಾವಿಸಿದರು.

ಎಐಸಿಟಿಇಯ ಗೌರವಾನ್ವಿತ ಅಧ್ಯಕ್ಷ ಪ್ರೊ| ಅನಿಲ್‌ ಡಿ. ಸಹಸ್ತ್ರಬುದ್ಧೆ ಮತ್ತು ಮುಂಬಯಿ ವಿಶ್ವವಿದ್ಯಾನಿಲಯದ ಗೌರವಾನ್ವಿತ ಉಪಕುಲಪತಿ ಪ್ರೊ| ಡಿ. ಟಿ. ಶಿರ್ಕೆ ಅವರ ವೀಡಿಯೋ ಭಾಷಣವನ್ನು ಬಿತ್ತರಿಸಲಾಯಿತು.

ಎಸ್‌ಜೆಸಿ ಫಾರ್ಮಸಿಯ 76 ವಿದ್ಯಾರ್ಥಿಗಳು, ಎಸ್‌ಜೆಸಿ ಹ್ಯೂಮ್ಯಾನಿಟಿಸ್‌ ಆ್ಯಂಡ್‌ ಸಾಯನ್ಸ್‌ ವಿಭಾಗದ 239 ವಿದ್ಯಾರ್ಥಿಗಳು
ಹಾಗೂ ಎಸ್‌ಜೆಸಿ ಎಂಜಿನಿಯರಿಂಗ್‌ ಮತ್ತು ಎಂಎಂಎಸ್‌ ವಿಭಾಗದ 415 ವಿದ್ಯಾರ್ಥಿ ಗಳು ಪದವಿ ಪ್ರಮಾಣಪತ್ರ ಸ್ವೀಕರಿಸಿದರು.
ಆಯಾಯ ಕಾಲೇಜುಗಳ ಪ್ರಾಂಶುಪಾಲರು ವಿಭಾಗದ ಕಾರ್ಯವೈಖರಿಯನ್ನು ವಿವರಿಸಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿ
ದರು. ವಿಭಾಗವಾರು ಫೋಟೋ ಸೆಷನ್‌ ನಡೆಸಿ ವಿದ್ಯಾರ್ಥಿಗಳಿಗೆ ಜೀವಮಾನದ ಪ್ರಮಾಣಪತ್ರ ಮತ್ತು ಸ್ಮರಣಿಗಳನ್ನಿತ್ತು
ಗೌರವಿಸಲಾಯಿತು.

ಆಲ್ಢೇಲ್‌ ಎಜುಕೇಶನ್‌ ಟ್ರಸ್ಟ್‌ನ ಕಾರ್ಯದರ್ಶಿ ಎಲ್ವಿನಾ ಎ. ಡಿ’ಸೋಜಾ, ಕೋಶಾಧಿಕಾರಿ ಎಲೈನ್‌ ಆರ್‌. ಬುಥೆಲ್ಲೋ, ಸದಸ್ಯ ಆಲ್ಡಿ†ಜ್‌ ಎ. ಡಿ’ಸೋಜಾ, ಉಪ ಕ್ಯಾಂಪಸ್‌ ನಿರ್ದೇಶಕಿ ಮತ್ತು ಎಸ್‌ಜೆಸಿಎಫ್‌ ಆರ್‌ ಪ್ರಾಂಶುಪಾಲೆ ಡಾ| ಸವಿತಾ ತೌರೊ,
ಎಸ್‌ಜೆಸಿಇಎಂ ಪ್ರಾಂಶುಪಾಲ ಡಾ| ಜಿ. ವಿ. ಮುಳಗುಂದ, ಸೈಂಟ್‌ ಜೋನ್‌ ಮಾನವಿಕ ಮತ್ತು ವಿಜ್ಞಾನ ಕಾಲೇಜಿನ ಮುಖ್ಯಸ್ಥ ಡಾ| ಬೃಜಬಂಧು ದಾಸ್‌ ಉಪಸ್ಥಿತರಿದ್ದರು. ಕ್ಯಾಂಪಸ್‌ನ ಜನರಲ್‌ ಮ್ಯಾನೇಜರ್‌ ಸತೀಶ್‌ ಶೆಟ್ಟಿ, ಮಾನವ ಸಂಪನ್ಮೂಲ ವ್ಯವಸ್ಥಾಪಕ ಸುಧೀರ್‌ ಬಾಬು ಭಾಗವಹಿಸಿದ್ದರು.

ವೃಶಾಲಿ ಗೋಖಲೆ, ಡಾ| ಪಂಢರೀನಾಥ ಘೋಂಗೆ ಮತ್ತು ಶ್ರೀಶೈಲಾ ಹೆಗ್ಗೊಂಡ ನಿರೂಪಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕ
ರಿಸಿದರು. ಸಹಾಯಕ ಪ್ರೊ| ಏಕ್ತಾ ಠಾಕೂರ್‌ ಮತ್ತು ಬೀಟ್ರಿಸ್‌ ಲೋಬೋ ಸಭಾ ಕಾರ್ಯ ಕ್ರಮವನ್ನು ನಿರ್ವಹಿಸಿದರು. ಡಾ| ಜಿ. ವಿ. ಮುಳಗುಂದ ಮತ್ತು ಡಾ| ಸವಿತಾ ತೌರೊ ವಂದಿಸಿದರು. ಸಂಸ್ಥೆಯ ಶಿಕ್ಷಕ ವೃಂದದವರು, ಶಿಕ್ಷಕೇತರ ಸಿಬಂದಿ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಚಿತ್ರ – ವರದಿ: ರೊನಿಡಾ ಮುಂಬಯಿ

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.