ಮುಂಬಯಿ: ಸೋಂಕಿತರನ್ನು ಕಾಡುತ್ತಿರುವ ಮಧುಮೇಹ


Team Udayavani, Aug 12, 2020, 6:05 PM IST

ಮುಂಬಯಿ: ಸೋಂಕಿತರನ್ನು ಕಾಡುತ್ತಿರುವ ಮಧುಮೇಹ

ಮುಂಬಯಿ, ಆ. 11: ಕಳೆದ ತಿಂಗಳು ನಡೆದ ಮೊದಲ ಸೀರೋ ಸಮೀಕ್ಷೆಯಲ್ಲಿ ಕೊಳೆಗೇರಿ ನಿವಾಸಿಗಳಲ್ಲಿ ಪತೆಯಾದ ಆ್ಯಂಟಿಬಾಡಿ ಅಭಿವೃದ್ಧಿಯಾದವರ ಪೈಕಿ ಶೇ. 6ರಷ್ಟು ಮಂದಿ ಮಧುಮೇಹ ಹೊಂದಿದ್ದು, ಕೊಳೆಗೇರಿ ಪ್ರದೇಶಗಳ ಪರೀಕ್ಷೆಗಳಲ್ಲಿ ಒಟ್ಟು ಶೇ. 9ರಷ್ಟು ಆ್ಯಂಟಿಬಾಡಿ ಇರುವುದು ಕಂಡುಬಂದಿದೆ ಎಂದು ಟಾಟಾ ಇನ್‌ ಸ್ಟಿಟ್ಯೂಟ್‌ ಆಫ್‌ ಫಂಡಮೆಂಟಲ್‌ ರಿಸರ್ಚ್‌ ಸಂಸ್ಥೆ ತಿಳಿಸಿದೆ.

ಮುಂಬಯಿಯ ಜನಸಂಖ್ಯೆಯ ಶೇ. 20ರಷ್ಟು ಶ್ರೀಮಂತ ವರ್ಗದವರಿಗೆ ಮಧುಮೇಹವಿದೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ. ಮಧುಮೇಹದಿಂದ ಬಳಲುತ್ತಿರುವವರು ಸೋಂಕಿಗೆ ಹೆಚ್ಚು ಗುರಿಯಾಗುತ್ತಿದ್ದು, ಈ ಕುರಿತು ನಿರ್ಧರಿಸಲು ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆಯ ಸಂದರ್ಭ ಸುಮಾರು 4,218 ಕೊಳೆಗೇರಿ ನಿವಾಸಿಗಳನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ 2,387 ಪ್ರತಿಕಾಯಗಳ ಹರಡುವಿಕೆ ಇದೆ ಎಂದು ತಿಳಿದು ಬಂದಿದೆ.

ಟಿಐಎಫ್ ಆರ್‌ ಸಂಶೋಧಕರ ಪ್ರಕಾರ, ಪ್ರತಿಕಾಯಗಳೊಂದಿಗೆ ಪತ್ತೆಯಾದ 144 ನಿವಾಸಿಗಳು ಮಧುಮೇಹದ ಸಮಸ್ಯೆಯನ್ನು ಹೊಂದಿದ್ದು, ಕೊಳೆಗೇರಿ ಪ್ರದೇಶಗಳಲ್ಲಿ, ಪ್ರತಿಕಾಯ ಪರೀಕ್ಷೆಯಲ್ಲಿ ಪಾಸಿಟಿವ್‌ ಪರೀಕ್ಷಿಸಿದ 358ರಲ್ಲಿ 30 ನಿವಾಸಿಗಳಿಗೆ ಮಧುಮೇಹ ಕಂಡು ಬಂದಿದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಹೆಚ್ಚಿನ ಅಧ್ಯಯನದ ಅಗತ್ಯವಿದೆ : ಸಮೀಕ್ಷೆಯ ಪ್ರಧಾನ ತನಿಖಾಧಿಕಾರಿ ಉಲ್ಲಾಸ್‌ ಎಸ್‌. ಕೋಲ್ತರ್‌ ಮತ್ತು ಟಿಐಎಫ್‌ ಆರ್‌ನ ಸಂಶೋಧಕ ಸಂದೀಪ್‌ ಜುನೆಜಾ ಮಾತನಾಡಿ, ಕೊಳೆಗೇರಿ ಪ್ರದೇಶಗಳ ಜನರ ಜೀವನಶೈಲಿಯಿಂದ ಸೋಂಕು ಹರಡುವಿಕೆ ಹೆಚ್ಚು ಇರಬಹುದು ಎಂದಿದ್ದಾರೆ. ಅನೇಕರು ತಮ್ಮ ವೈದ್ಯಕೀಯ ಇತಿಹಾಸದ ಬಗ್ಗೆ ತಪ್ಪು ಮಾಹಿತಿ ಒದಗಿಸಿರಬಹುದು. ಕ್ವಾರಂಟೈನ್‌ ಗೆ ಒಳಗಾಗುವ ಭಯದಿಂದ ಸುಳ್ಳು ಮಾಹಿತಿ ಒದಗಿಸಿರಬಹುದು. ಒಟ್ಟಿನಲ್ಲಿ ಸರಿಯಾದ ಸಂಗತಿಗಳನ್ನು ತಿಳಿಸಲು ಹೆಚ್ಚಿನ ಅಧ್ಯಯನಗಳ ಆವಶ್ಯಕತೆಯಿದೆ ಎಂದು ಹೇಳಿದ್ದಾರೆ.

ಉತ್ಪಾದಿಸಿದ ಇಮ್ಯುನೊಗ್ಲಾಬ್ಯುಲಿನ್‌-ಜಿ (ಐಜಿಜಿ) ಪ್ರತಿಕಾಯದ ಉಪಸ್ಥಿತಿಯನ್ನು ಕಂಡುಹಿಡಿಯಲು ಎಂ-ವೆಸ್ಟ್‌ ವಾರ್ಡ್‌ನ ತಿಲಕ್‌ ನಗರ ಮತ್ತು ಚೆಂಬೂರು, ಎಫ್ ನಾರ್ತ್‌ನ ಮಾಟುಂಗಾ, ಸಯಾನ್‌ ಮತ್ತು ವಡಾಲಾ ಹಾಗೂ ಆರ್‌-ನಾರ್ತ್‌ ವಾರ್ಡ್‌ನ ದಹಿಸರ್‌ ಮತ್ತು ಮಂದಪೇಶ್ವರದಲ್ಲಿ ಸೀರೋ ಸಮೀಕ್ಷೆಯನ್ನು ನಡೆಸಲಾಯಿತು. ಈ ಹಿಂದೆ ಸೋಂಕಿಗೆ ಒಳಗಾದ ಬಳಿಕ ಚೇತರಿಸಿಕೊಂಡ ವ್ಯಕ್ತಿಗಳನ್ನು ಗುರುತಿಸಲು ಸೀರೊ ಸಮೀಕ್ಷೆ ಸಹಾಯ ಮಾಡುತ್ತದೆ.

ರಾಜ್ಯದ ಕೋವಿಡ್‌ ಕಾರ್ಯಪಡೆಯ ಭಾಗವಾಗಿರುವ ಮಧುಮೇಹ ತಜ್ಞ ಡಾ| ಶಶಾಂಕ್‌ ಜೋಶಿ ಮಾತನಾಡಿ, ಕೊಳೆಗೇರಿ ಪ್ರದೇಶಗಳಲ್ಲಿನ ನಿವಾಸಿಗಳ ಸಹಕಾರ ಕೊರತೆಯಿಂದಾಗಿ ಕೇವಲ 6,936 ಮಾದರಿಗಳನ್ನು ಸಂಗ್ರಹಿಸಲಾಗಿದೆ.ಬಿಎಂಸಿಯು 1,000 ಆರೋಗ್ಯ ಕಾರ್ಯಕರ್ತರ ಮೇಲೆ ಆ್ಯಂಟಿಬಾಡಿ ಪರೀಕ್ಷೆಯನ್ನು ಸಹ ನಡೆಸಿದ್ದು, ಫಲಿತಾಂಶಗಳಿಗಾಗಿ ಕಾಯುತ್ತಿದೆ. ನಗರದಲ್ಲಿ ಸೋಂಕಿನಿಂದ ಮೃತಪಟ್ಟ ಸುಮಾರು ಶೇ. 50ರಷ್ಟು ರೋಗಿಗಳು ಮಧುಮೇಹದ ವೈದ್ಯಕೀಯ ಇತಿಹಾಸವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.