ಮುಂಬಯಿ: ಸೋಂಕಿತರನ್ನು ಕಾಡುತ್ತಿರುವ ಮಧುಮೇಹ


Team Udayavani, Aug 12, 2020, 6:05 PM IST

ಮುಂಬಯಿ: ಸೋಂಕಿತರನ್ನು ಕಾಡುತ್ತಿರುವ ಮಧುಮೇಹ

ಮುಂಬಯಿ, ಆ. 11: ಕಳೆದ ತಿಂಗಳು ನಡೆದ ಮೊದಲ ಸೀರೋ ಸಮೀಕ್ಷೆಯಲ್ಲಿ ಕೊಳೆಗೇರಿ ನಿವಾಸಿಗಳಲ್ಲಿ ಪತೆಯಾದ ಆ್ಯಂಟಿಬಾಡಿ ಅಭಿವೃದ್ಧಿಯಾದವರ ಪೈಕಿ ಶೇ. 6ರಷ್ಟು ಮಂದಿ ಮಧುಮೇಹ ಹೊಂದಿದ್ದು, ಕೊಳೆಗೇರಿ ಪ್ರದೇಶಗಳ ಪರೀಕ್ಷೆಗಳಲ್ಲಿ ಒಟ್ಟು ಶೇ. 9ರಷ್ಟು ಆ್ಯಂಟಿಬಾಡಿ ಇರುವುದು ಕಂಡುಬಂದಿದೆ ಎಂದು ಟಾಟಾ ಇನ್‌ ಸ್ಟಿಟ್ಯೂಟ್‌ ಆಫ್‌ ಫಂಡಮೆಂಟಲ್‌ ರಿಸರ್ಚ್‌ ಸಂಸ್ಥೆ ತಿಳಿಸಿದೆ.

ಮುಂಬಯಿಯ ಜನಸಂಖ್ಯೆಯ ಶೇ. 20ರಷ್ಟು ಶ್ರೀಮಂತ ವರ್ಗದವರಿಗೆ ಮಧುಮೇಹವಿದೆ ಎಂದು ಮುಂಬಯಿ ಮಹಾನಗರ ಪಾಲಿಕೆಯ ಅಧಿಕಾರಿಗಳು ತಿಳಿಸಿದ್ದಾರೆ. ಮಧುಮೇಹದಿಂದ ಬಳಲುತ್ತಿರುವವರು ಸೋಂಕಿಗೆ ಹೆಚ್ಚು ಗುರಿಯಾಗುತ್ತಿದ್ದು, ಈ ಕುರಿತು ನಿರ್ಧರಿಸಲು ಸಮೀಕ್ಷೆ ನಡೆಸಲಾಗಿತ್ತು. ಸಮೀಕ್ಷೆಯ ಸಂದರ್ಭ ಸುಮಾರು 4,218 ಕೊಳೆಗೇರಿ ನಿವಾಸಿಗಳನ್ನು ಪರೀಕ್ಷಿಸಲಾಗಿದ್ದು, ಅವರಲ್ಲಿ 2,387 ಪ್ರತಿಕಾಯಗಳ ಹರಡುವಿಕೆ ಇದೆ ಎಂದು ತಿಳಿದು ಬಂದಿದೆ.

ಟಿಐಎಫ್ ಆರ್‌ ಸಂಶೋಧಕರ ಪ್ರಕಾರ, ಪ್ರತಿಕಾಯಗಳೊಂದಿಗೆ ಪತ್ತೆಯಾದ 144 ನಿವಾಸಿಗಳು ಮಧುಮೇಹದ ಸಮಸ್ಯೆಯನ್ನು ಹೊಂದಿದ್ದು, ಕೊಳೆಗೇರಿ ಪ್ರದೇಶಗಳಲ್ಲಿ, ಪ್ರತಿಕಾಯ ಪರೀಕ್ಷೆಯಲ್ಲಿ ಪಾಸಿಟಿವ್‌ ಪರೀಕ್ಷಿಸಿದ 358ರಲ್ಲಿ 30 ನಿವಾಸಿಗಳಿಗೆ ಮಧುಮೇಹ ಕಂಡು ಬಂದಿದೆ ಎಂದು ಸಂಶೋಧನೆಯಲ್ಲಿ ತಿಳಿದು ಬಂದಿದೆ.

ಹೆಚ್ಚಿನ ಅಧ್ಯಯನದ ಅಗತ್ಯವಿದೆ : ಸಮೀಕ್ಷೆಯ ಪ್ರಧಾನ ತನಿಖಾಧಿಕಾರಿ ಉಲ್ಲಾಸ್‌ ಎಸ್‌. ಕೋಲ್ತರ್‌ ಮತ್ತು ಟಿಐಎಫ್‌ ಆರ್‌ನ ಸಂಶೋಧಕ ಸಂದೀಪ್‌ ಜುನೆಜಾ ಮಾತನಾಡಿ, ಕೊಳೆಗೇರಿ ಪ್ರದೇಶಗಳ ಜನರ ಜೀವನಶೈಲಿಯಿಂದ ಸೋಂಕು ಹರಡುವಿಕೆ ಹೆಚ್ಚು ಇರಬಹುದು ಎಂದಿದ್ದಾರೆ. ಅನೇಕರು ತಮ್ಮ ವೈದ್ಯಕೀಯ ಇತಿಹಾಸದ ಬಗ್ಗೆ ತಪ್ಪು ಮಾಹಿತಿ ಒದಗಿಸಿರಬಹುದು. ಕ್ವಾರಂಟೈನ್‌ ಗೆ ಒಳಗಾಗುವ ಭಯದಿಂದ ಸುಳ್ಳು ಮಾಹಿತಿ ಒದಗಿಸಿರಬಹುದು. ಒಟ್ಟಿನಲ್ಲಿ ಸರಿಯಾದ ಸಂಗತಿಗಳನ್ನು ತಿಳಿಸಲು ಹೆಚ್ಚಿನ ಅಧ್ಯಯನಗಳ ಆವಶ್ಯಕತೆಯಿದೆ ಎಂದು ಹೇಳಿದ್ದಾರೆ.

ಉತ್ಪಾದಿಸಿದ ಇಮ್ಯುನೊಗ್ಲಾಬ್ಯುಲಿನ್‌-ಜಿ (ಐಜಿಜಿ) ಪ್ರತಿಕಾಯದ ಉಪಸ್ಥಿತಿಯನ್ನು ಕಂಡುಹಿಡಿಯಲು ಎಂ-ವೆಸ್ಟ್‌ ವಾರ್ಡ್‌ನ ತಿಲಕ್‌ ನಗರ ಮತ್ತು ಚೆಂಬೂರು, ಎಫ್ ನಾರ್ತ್‌ನ ಮಾಟುಂಗಾ, ಸಯಾನ್‌ ಮತ್ತು ವಡಾಲಾ ಹಾಗೂ ಆರ್‌-ನಾರ್ತ್‌ ವಾರ್ಡ್‌ನ ದಹಿಸರ್‌ ಮತ್ತು ಮಂದಪೇಶ್ವರದಲ್ಲಿ ಸೀರೋ ಸಮೀಕ್ಷೆಯನ್ನು ನಡೆಸಲಾಯಿತು. ಈ ಹಿಂದೆ ಸೋಂಕಿಗೆ ಒಳಗಾದ ಬಳಿಕ ಚೇತರಿಸಿಕೊಂಡ ವ್ಯಕ್ತಿಗಳನ್ನು ಗುರುತಿಸಲು ಸೀರೊ ಸಮೀಕ್ಷೆ ಸಹಾಯ ಮಾಡುತ್ತದೆ.

ರಾಜ್ಯದ ಕೋವಿಡ್‌ ಕಾರ್ಯಪಡೆಯ ಭಾಗವಾಗಿರುವ ಮಧುಮೇಹ ತಜ್ಞ ಡಾ| ಶಶಾಂಕ್‌ ಜೋಶಿ ಮಾತನಾಡಿ, ಕೊಳೆಗೇರಿ ಪ್ರದೇಶಗಳಲ್ಲಿನ ನಿವಾಸಿಗಳ ಸಹಕಾರ ಕೊರತೆಯಿಂದಾಗಿ ಕೇವಲ 6,936 ಮಾದರಿಗಳನ್ನು ಸಂಗ್ರಹಿಸಲಾಗಿದೆ.ಬಿಎಂಸಿಯು 1,000 ಆರೋಗ್ಯ ಕಾರ್ಯಕರ್ತರ ಮೇಲೆ ಆ್ಯಂಟಿಬಾಡಿ ಪರೀಕ್ಷೆಯನ್ನು ಸಹ ನಡೆಸಿದ್ದು, ಫಲಿತಾಂಶಗಳಿಗಾಗಿ ಕಾಯುತ್ತಿದೆ. ನಗರದಲ್ಲಿ ಸೋಂಕಿನಿಂದ ಮೃತಪಟ್ಟ ಸುಮಾರು ಶೇ. 50ರಷ್ಟು ರೋಗಿಗಳು ಮಧುಮೇಹದ ವೈದ್ಯಕೀಯ ಇತಿಹಾಸವನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.