ಪಟ್ಲ ಸಂಭ್ರಮ ಒಡಿಯೂರು ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ
Team Udayavani, Aug 8, 2017, 3:18 PM IST
ಮುಂಬಯಿ: ಶ್ರೀ ಕ್ಷೇತ್ರ ಒಡಿಯೂರಿನ ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ಆ. 13ರಂದು ಕುರ್ಲಾ ಪೂರ್ವದ ಬಂಟರ ಭವನದಲ್ಲಿ ನಡೆಯಲಿರುವ ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮುಂಬಯಿ ಘಟಕದ ಪಟ್ಲ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿದರು.
ಆ. 6ರಂದು ಮಧ್ಯಾಹ್ನ ಚೆಂಬೂರು ಮೈತ್ರಿಪಾರ್ಕ್ನ ಶ್ರೀ ಸಾಯಿ ಬಾಬಾ ಮಂದಿರದ ಸಮೀಪದಲ್ಲಿರುವ ಉದ್ಯಮಿ, ಸಮಾಜ ಸೇವಕ ಮೇರ್ಕಳ ತ್ಯಾಂಪಣ್ಣ ಶೆಟ್ಟಿ ಅವರ ಬಂಗ್ಲೋದಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದ ಶ್ರೀಗಳು, ಐಕಳ ಹರೀಶ್ ಶೆಟ್ಟಿ ಅವರ ಸಂಘಟನ ನಾಯಕತ್ವದಲ್ಲಿ ಯಾವುದೇ ಕಾರ್ಯಕ್ರಮಗಳು ಯಶಸ್ವಿಯಾಗುವುದರಲ್ಲಿ ಸಂಶಯವಿಲ್ಲ. ಒಂದು ಒಳ್ಳೆಯ ಉದ್ದೇಶವನ್ನು ಇಟ್ಟುಕೊಂಡು ನೀವೆಲ್ಲರು ಈ ಸಮಾರಂಭಕ್ಕೆ ಇಳಿದಿದ್ದೀರಿ. ಪಟ್ಲ ಸತೀಶ್ ಶೆಟ್ಟಿ ಅವರು ಕಲಾವಿದರ ಆಶಾ ಕಿರಣವಾಗಿ ರೂಪಿಸಿರುವ ಫೌಂಡೇಷನ್ನ ಎಲ್ಲಾ ಯೋಜನೆಗಳು ಉತ್ತಮ ರೀತಿಯಲ್ಲಿ ಸಾಗಲಿದೆ. ಭಗವಂತನ ಅನುಗ್ರಹ ಸದಾ ನಿಮ್ಮ ಮೇಲಿದೆ ಎಂದು ನುಡಿದು ಕಾರ್ಯಕ್ರಮದ ಯಶಸ್ಸಿಗೆ ಅನುಗ್ರಹಿಸಿದರು.
ಈ ಸಂದರ್ಭ ಸಾಧ್ವಿ ಮಾತಾನಂದಮಯಿ, ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್ ಮುಂಬಯಿ ಘಟಕದ ಗೌರವಾಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಸಂಸ್ಥೆಯ ಸಂಚಾಲಕ ಅಶೋಕ್ ಶೆಟ್ಟಿ ಪೆರ್ಮುದೆ, ಯಕ್ಷಧ್ರುವ ಪಟ್ಲ ಫೌಂಡೇಷನ್ ಟ್ರಸ್ಟ್
ಮಂಗಳೂರಿನ ಸಂಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ, ಬಂಟರ ಸಂಘ ಮುಂಬಯಿ ಇದರ ಸಾಹಿತ್ಯ ಮತ್ತು ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರನಾಥ ಭಂಡಾರಿ, ಬಂಟರ ಸಂಘ ಕುರ್ಲಾ-ಭಾಂಡೂಪ್ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಬೆಳ್ಳಂಪಳ್ಳಿ ಬಾಲಕೃಷ್ಣ ಹೆಗ್ಡೆ, ಗುರುದೇವ ಸೇವಾ ಬಳಗದ ಮಹಾರಾಷ್ಟ್ರ ಘಟಕದ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ