ಮುಂಬಯಿ ವಿವಿ ಕನ್ನಡ ವಿಭಾಗ: ಜಾನಪದ ಸಂಭ್ರಮ


Team Udayavani, Apr 11, 2018, 1:01 PM IST

0904mum03a.jpg

ಮುಂಬಯಿ: ನನಗೆ ನಂಬಿಕೆ ಕಟ್ಟಿದ್ದು ಜಾನಪದ. ನಂಬಿಕೆ ಎಂದರೆ ಜಾನಪದ. ಗೌರವವನ್ನು ಪಡೆಯಲು ಕಲಿಸಿದ್ದು ಜಾನಪದ. ಹಿರಿಯರ ಮುಂದೆ ಗೌರವಪೂರ್ವಕವಾಗಿ ಯಾವ ಕೆಲಸ ಮಾಡಬಾರದು ಎಂದು ಸಂಸ್ಕೃತಿ ಕಲಿಸಿದ್ದಲ್ಲ. ಅದು ಜಾನಪದ ಸಂಸ್ಕೃತಿ ಕಲಿಸಿದ್ದು.  ಆದ್ದರಿಂದ ಬಾಳಿನ ಮರ್ಯಾದೆ, ಗೌರವವನ್ನು ಜಾನಪದದಿಂದ ಅರಿತಿದ್ದೇನೆ. ಮಕ್ಕಳಿಗೆ ಬಾಂಧ‌ವ್ಯ, ಮಾವ, ಚಿಕ್ಕಮ್ಮ, ಚಿಕ್ಕಪ್ಪ ಎಂದೆಲ್ಲ ಕಲಿಸಿದ್ದು ಜಾನಪದ. ಆದರೆ ಮಕ್ಕಳಲ್ಲಿ ಆಂಟಿ-ಅಂಕಲ್‌ ಎಂದು ಕರೆಯುವ ಸಂಸ್ಕೃತಿಯೊಳಗೆ ನಾವೂ ಬಾಂಧ‌ವ್ಯವನ್ನು ಕಳೆಕೊಂಡಿದ್ದೇವೆ. ನಾವೂ ದುಡಿಮೆಗಾಗಿ ಮುಂಬಯಿಗೆ ಬಂದಿದ್ದೇವೆ. ಅಂತೆಯೇ ನಮ್ಮ ಸಂಸ್ಕೃತಿ ಕಟ್ಟಲು ಅಥವಾ ಸಂಸ್ಕೃತಿ ಉಳಿಸಲು ಬಂದಿದ್ದೇವೆ ಎಂದೂ ತಿಳಿಯುವ ಅಗತ್ಯವಿದೆ. ಮುಂಬಯಿ ವಿವಿ ಕನ್ನಡ ವಿಭಾಗ 40 ವರ್ಷಗಳಿಂದ ಸಂಸ್ಕೃತಿ ಕಟ್ಟುವ, ಭಾಷೆ ಕಟ್ಟುವ ಕೆಲಸವನ್ನು ಮಾಡುತ್ತಿದೆ. ಸಂಸ್ಕೃತಿ ಮತ್ತು ಭಾಷೆಗೆ ತ್ಯಾಗ ಕೊಟ್ಟಂತಹ ಕವಿಗಳ ವಿಷಯವನ್ನು ಚರ್ಚಿಸುವಂತಹ ಕೆಲಸ ಮಾಡುತ್ತಿದೆ ಅಂದ ಮೇಲೆ ಮುಂಬಯಿಗರಲ್ಲಿ ಮಾತೃ ಸಂಸ್ಕೃತಿ ಜೀವಂತವಾಗಿದೆ ಎಂದಾರ್ಥ ಎಂದು ಬೆಂಗಳೂರಿನ ಸುಪ್ರಸಿದ್ಧ, ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದ ಡಾ| ಅಪ್ಪಗೆರೆ ತಿಮ್ಮರಾಜು ನುಡಿದರು.

ಎ. 7ರಂದು ಅಪರಾಹ್ನ ಸಾಂತಾಕ್ರೂಜ್‌ ಪೂರ್ವದ ಕಲೀನಾ ಕ್ಯಾಂಪಸ್‌ನ ವಿದ್ಯಾನಗರಿಯ ಕವಿವರ್ಯ  ಡಾ| ಕುಸುಮಾಗ್ರಜ ಮರಾಠಿ ಭಾಷಾ ಭವನದ ಸಭಾಂಗಣದಲ್ಲಿ ಮುಂಬಯಿ ವಿಶ್ವವಿದ್ಯಾಲಯದ ಕನ್ನಡ ವಿಭಾಗವು ಆಯೋಜಿಸಿದ್ದ ಜಾನಪದ ಸಂಭ್ರಮ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮವನ್ನು  ಉದ್ಘಾಟಿಸಿ “ಜಾನಪದ ಉಳಿವು’ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಭಾರತೀಯ ಸಂಸ್ಕೃತಿ  ಕಟ್ಟಿದ್ದೇ ನಾರಿಯರು. ಬೆಳಗಿನಿಂದ ಸಂಜೆಯ ವರೆಗೆ ಎಲ್ಲ ಕೆಲಸಗಳ ಮಧ್ಯೆಯೂ ಸಂಸ್ಕೃತಿ ಕಟ್ಟಿ ಬೆಳೆಸಿದ ಮಹಿಳೆಯರು. ಮಾತೆಯರು  ಈ ತನಕ ಜಾನಪದ ವನ್ನು  ಬದುಕುಳಿಸಿರುವುದೇ  ದೊಡ್ಡತನ. ಇಂತಹ ಮನಸ್ಸು ಶುದ್ಧವಾಗಿಸಿದರೆ ಬದುಕು ಭವ್ಯವಾಗುವುದು. ಆದ್ದರಿಂದ ಯಾವುದೇ ತರ್ಕಕ್ಕೆ ತಲೆಯೊಡ್ಡದೆ ಬಾಳುವ ಪ್ರಯತ್ನ ಮಾಡಿರಿ ಎಂದರು.

ಅನವಶ್ಯಕ ಯೋಚನೆಗಳು ಹೆಚ್ಚಾದರೆ ಆಯುಷ್ಯ ಕಡಿಮೆಯಾಗುತ್ತದೆ.  ಮನುಷ್ಯ ಜಗತ್ತಿನಲ್ಲಿ ಎಷ್ಟೇ ದೊಡ್ಡವನಾದರೂ ಸರಳತೆ  ಸಂಸ್ಕೃತಿಯನ್ನು ಮರೆಯಬಾರದು.  ಬದುಕು ಕಲಿಯುತ್ತಿದ್ದೇನೆ ಎಂಬುದಕ್ಕಿಂತ ಕಲಿಸುತ್ತಿದ್ದೇನೆ ಎಂಬುವುದು ಬಹಳ ಮುಖ್ಯ. ಅಂತೆಯೇ ನಮ್ಮ ಜಾನಪದವು ಬದುಕು ಕಲಿಸುತ್ತಿದೆೆ ಎಂದು ಅವರು ನುಡಿದರು.

ಮುಂಬಯಿ ವಿವಿ ಕನ್ನಡ ವಿಭಾಗದ ಮುಖ್ಯಸ್ಥ ಡಾ| ಜಿ.ಎನ್‌. ಉಪಾಧ್ಯ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಗಳಾಗಿ ಬಿಲ್ಲವರ ಅಸೋ ಸಿಯೇಶನ್‌  ಮುಂಬಯಿ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್‌, ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ ಪಾಲೆತ್ತಾಡಿ, ಕನ್ನಡ ವಿಭಾಗದ ಸಹ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್‌. ಶೆಟ್ಟಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಜಾನಪದ ಕಲಾವಿದ ಸಿದ್ದಪ್ಪ ಬಿದರಿ ಅವರ “ಜಾನಪದ ಜವಾರಿ’ ಕೃತಿಯನ್ನು ಡಾ| ಅಪ್ಪಗೆರೆ ಬಿಡುಗಡೆಗೊಳಿಸಿದರು. ಕನ್ನಡ ವಿಭಾಗದ ಸಂದರ್ಶಕ ಪ್ರಾಧ್ಯಾಪಕ ಡಾ| ಜೀವಿ ಕುಲಕರ್ಣಿ ಕೃತಿ ಪರಿಚಯಿಸಿದರು. ಬಳಿಕ ಡಾ| ಅಪ್ಪಗೆರೆ ತಿಮ್ಮರಾಜು, ಸಮಾಜ ಸೇವಕ ಮುದ್ರಾಡಿ ದಿವಾಕರ ಶೆಟ್ಟಿ ಹಾಗೂ ಶ್ರೀಪಾದ ಪಾದಕೀ ನವಿಮುಂಬಯಿ ಅವರನ್ನು ಅತಿಥಿಗಳು ಸಮ್ಮಾನಿಸಿ ಅಭಿನಂದಿಸಿದರು.

ಜಾನಪದ ಕಲಾವಿದ ಸಿದ್ದಪ್ಪ ಬಿದರಿ ಅವರು ಮಾತನಾಡಿ, ಒಂದು ಕಾಲದಲ್ಲಿ ಜಾನಪದ ಹಾಡು ಹಾಡಿದರೆಂದರೆ ಅವರೇ ಧರ್ಮವಂತರು, ಶ್ರೇಷ್ಠ ಸಂತರು ಎಂದಾಗಿತ್ತು. ಸತ್ಯವು ಶರಣರ ಪರವೂ ಗೌರವವೂ ಆಗಿತ್ತು. ಜಾನಪದ ಜನಪರ ಆಸ್ತಿ ಆದಾಗ ಈ ಸಂಸ್ಕೃತಿ  ಬೆಳೆದು ಉಳಿಯುವುದು ಎಂದು ಇಂಪಾಗಿ ಹಾಡುಗಳನ್ನು ಹಾಡುತ್ತಾ ಬಿದರಿ ಅವರು ತಿಳಿಸಿದರು.
ಸಮಾಜ ಸೇವಕ ಮುದ್ರಾಡಿ ದಿವಾಕರ ಶೆಟ್ಟಿ ಇವರು ಗೌರವ ಸ್ವೀಕರಿಸಿ ಮಾತನಾಡಿ, ಎಂದು ನಾಲ್ಕು ಶಬ್ದಗಳು ಹುಟ್ಟಿದವೋ ಅಂದೇ ಜಾನಪದ ಹುಟ್ಟಿತು. ತಾಯಿಯ ಹುಟ್ಟಿನಿಂದ ಇಂತಹ ಜಾನಪದ ವಿಸ್ತೃತಗೊಂಡಿತು. ಇಂತಹ ಜಾನಪದವನ್ನು ಮುಂಬಯಿಗರು  ಬೆಳೆಸಿದ್ದಾರೆ. 

ಮುಂಬಯಿ ಕನ್ನಡಿಗರು  ಸಿದ್ಧಿ ಸಾಧನೆಗೈದ ಪ್ರಾಮಾ ಣಿಕ ಬುದ್ಧಿ ಜೀವಿಗಳು. ಇಂತಹ ಜಾನಪದ ಸಂಭ್ರಮದ ವೇದಿಕೆಯಲ್ಲಿ ನನ್ನಂಥವರನ್ನು ಗುರುತಿಸಿ ಗೌರವಿಸಿದ್ದು ಅಭಿಮಾನ ಅನಿಸುತ್ತಿದೆ ಎಂದರು.

ಕನ್ನಡಿಗರು ಸಾಹಸಿಗರು 
ಮುಂಬಯಿ ವಾಸಿ ಕನ್ನಡಿಗರ ಸಾಧನೆ ಅಪರಿಮಿತ ವಾದದ್ದು. ಇಲ್ಲಿನ ಕನ್ನಡಿಗರು ಧೀರರು, ಶೂರರು, ಮಹಾನ್‌ ಸಾಹಸಿಗರೂ ಹೌದು. ಇಲ್ಲಿನ ಜನತೆಯ ಶ್ರದ್ಧೆ, ನಿಷ್ಠಾವಂತ ಬಾಳು ಸಾಮರಸ್ಯದ ಜೀವನ ಎಲ್ಲವೂ ಸುಂದರಮಯ. ಆದ್ದರಿಂದ ಮುಂಬಯಿ ಭಾರತದ ಭಾಗ್ಯ ನಗರಿಯಾಗಿದೆ  ಎಂದು ಅಧ್ಯಕ್ಷೀಯ ಭಾಷಣದಲ್ಲಿ ಡಾ| ಜಿ. ಎನ್‌. ಉಪಾಧ್ಯ ತಿಳಿಸಿದರು. 

ಸುಶೀಲಾ ಎಸ್‌. ದೇವಾಡಿಗ ಸ್ವಾಗತ ಗೀತೆ ಹಾಡಿದರು.  ನಳಿನಾ ಪ್ರಸಾದ್‌ ಸ್ವಾಗತಿಸಿ ಅತಿಥಿಗಳನ್ನು ಪರಿಚಯಿಸಿ ಕಾರ್ಯಕ್ರಮ ನಿರೂಪಿಸಿದರು. ಸೋಮಶೇಖರ ಮಾಲ್ತಿ ಪಾಟೀಲ್‌ ವಂದಿಸಿದರು. 

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.