ತವರೂರ ಅಭಿವೃದ್ಧಿಯಲ್ಲಿ ಮುಂಬಯಿಗರ ಕೊಡುಗೆ ಅಪಾರ


Team Udayavani, Mar 22, 2019, 2:48 PM IST

2103mum01.jpg

ಮುಂಬಯಿ: ಸಂಸ್ಕೃತಿ, ಸಂಸ್ಕಾರ, ಸಾಮಾಜಿಕ  ಬದ್ದತೆ ಹೊಂದಲು 13 ವರ್ಷಗಳ  ಹಿಂದೆ ಸ್ಥಾಪಿಸಿದ ಮುದರಂಗಡಿ ಬಿಲ್ಲವ ಸೇವಾ ಸಂಘ ಈಗ ಸಮುದಾಯ ಭವನ ನಿರ್ಮಾಣಕ್ಕೆ ಮುಂದಾಗಿದೆ. ವೈವಿಧ್ಯಮಯ ಕಲಾಪ್ರಕಾರಗಳ ರಂಗ ಭೂಮಿ, ಕಲ್ಯಾಣ ಮಂಟಪ, ಸಭಾಗೃಹಗಳಿರುವ ಮೂರು ಅಂತಸ್ತುಗಳ ಕಟ್ಟಡದ ಕಾಮಗಾರಿಯು 9 ತಿಂಗಳ ಹಿಂದೆ ಆರಂಭಗೊಂಡಿದೆ. ಅದನ್ನು ನಿಗದಿತ ಸಮಯದಲ್ಲಿ ಲೋಕಾರ್ಪಣೆಗೊಳ್ಳಲು ಆರ್ಥಿಕ ನೆರವು ಅತ್ಯಗತ್ಯವಿದೆ ಎಂದು ಮುಂಬಯಿ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್‌ ಬಿ. ಸುವರ್ಣ ತಿಳಿಸಿದರು.

ಮಾ. 17ರಂದು ಸಾಂತಾಕ್ರೂಜ್‌ ಪೂರ್ವದ ಬಿಲ್ಲವ ಭವನದಲ್ಲಿ ಮುದರಂಗಡಿ ಬಿಲ್ಲವ ಸೇವಾ ಸಂಘ ಇದರ ಸಮುದಾಯ ಭವನದ ಸಹಾಯರ್ಥಕವಾಗಿ ಹಮ್ಮಿಕೊಂಡ ನಾಟಕ ಪ್ರದರ್ಶನ ಸಂದರ್ಭದಲ್ಲಿ ನಡೆದ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ತವರೂರ ಅಭಿವೃದ್ಧಿಯಲ್ಲಿ ಮುಂಬಯಿ ಜನತೆಯ ಕೊಡುಗೆ ಮಹತ್ತರವಾಗಿದೆ. ಇಂತಹ ಹೃದಯ ಶ್ರೀಮಂತಿಕೆ ಬಿಲ್ಲವ ಸೇವಾ ಸಂಘಕ್ಕೆ ಸದಾ ಇರಲಿ. ನಾವೆಲ್ಲರು ಒಂದಾಗಿ ಈ ಬೃಹತ್‌ ಯೋಜನೆಗೆ ಒಮ್ಮತದಿಂದ ಸಹಕರಿಸೋಣ ಎಂದರು.

ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದ ಮುಂಬಯಿ ಬಿಲ್ಲವರ ಅಸೋಸಿಯೇಶನಿನ ಉಪಾಧ್ಯಕ್ಷ  ಶ್ರೀನಿವಾಸ ಕರ್ಕೇರ ಮಾತನಾಡಿ, ಸಮಾಜಕ್ಕೆ  ಅಗತ್ಯ ಇರುವ ಹಾಗೂ ಇತರ ಸಮುದಾಯದವರಿಗೆ ಉಪಯೋಗವಾಗುವ ಸಮುದಾಯ ಭವನದ ನಿರ್ಮಾಣ ಕಾರ್ಯ ಪ್ರಶಂಸನೀಯ. ಮುಂಬಯಿಯ ತುಳು-ಕನ್ನಡಿಗರು ಈ ಯೋಜನೆಗೆ ಕೈಜೋಡಿಸಬೇಕು ಎಂದರು.

ಕಟ್ಟಡ ನಿರ್ಮಾಣ ಸಮಿತಿಯ ಕಾರ್ಯಾಧ್ಯಕ್ಷ ನ್ಯಾಯವಾದಿ ರೋಹನ್‌ ಕುಮಾರ್‌ ಕುತ್ಯಾರು ಮಾತನಾಡಿ,  ಅಧಿಕ ವೆಚ್ಚದ ಕಟ್ಟಡದ ಕಾಮಗಾರಿಗೆ ಆರ್ಥಿಕ ಸಂಪನ್ನೂಲದ ಕೊರತೆ ಎದುರಾಗಿದೆ. ಅದನ್ನು ಸರಿದೂಗಿಸುವಲ್ಲಿ ಸಹೃದಯಿ ಮುಂಬಯಿ ದಾನಿಗಳು ಸಹಕರಿಸ ಬೇಕೆಂದು ವಿನಂತಿಸಿದರು.

ಸಮಿತಿಯ ಉಪಾಧ್ಯಕ್ಷ ಶಂಕರ ಡಿ. ಪೂಜಾರಿ ಸ್ವಾಗತಿಸಿದರು. ಗೌರವ ಕಾರ್ಯದರ್ಶಿ ಧನಂಜಯ ಶಾಂತಿ ಅವರು ಸಿದ್ಧಿ ಸಾಧನೆಗಳ ವಿವರಿಸಿ ಕಾರ್ಯಕ್ರಮ ನಿರ್ವಹಿಸಿದರು. ಸದಸ್ಯ, ಪತ್ರಕರ್ತ ಉಮೇಶ್‌ ಕೆ. ಅಂಚನ್‌ ವಂದಿಸಿದರು. ಗೌರವ ಅತಿಥಿಗಳಗಿ ಉಪಸ್ಥಿತರಿದ್ದ ಬಿಲ್ಲವರ ಅಸೋಸಿಯೇಶನಿನ ಉಪಾಧ್ಯಕ್ಷ ಹರೀಶ್‌ ಜಿ. ಅಮೀನ್‌, ದಯಾನಂದ ಪೂಜಾರಿ, ಯುವಾಭ್ಯುದಯ ಸಮಿತಿಯ ಕಾರ್ಯಾಧ್ಯಕ್ಷ ನಾಗೇಶ್‌ ಎಂ. ಕೋಟ್ಯಾನ್‌, ಮಹಿಳಾ ವಿಭಾದ ಕಾರ್ಯಧ್ಯಕ್ಷೆ ಜಯಂತಿ ವಿ. ಉಳ್ಳಾಲ…, ಅಂಧೇರಿ ಸಮಿತಿಯ ಕಾರ್ಯಾಧ್ಯಕ್ಷ ರವೀಂದ್ರ ಎಸ್‌. ಕೋಟ್ಯಾನ್‌  ಶುಭ ಹಾರೈಸಿ ಮಾತನಾಡಿದರು.

ಸೇವಾ ಸಮಿತಿಯ ಗೌರವ ಅಧ್ಯಕ್ಷ ಶ್ರೀಧರ ಪೂಜಾರಿ, ಕೋಶಾಧಿಕಾರಿ ಜಯ ಸಾಲ್ಯಾನ್‌, ಪುರೋಹಿತ ದಿನೇಶ್‌ ಶಾಂತಿ ಸಹಕರಿಸಿದರು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಬಿಲ್ಲವರ ಅಸೋಸಿಯೇಶನ ಮೀರಾರೋಡು ಸ್ಥಳೀಯ ಸಮಿತಿಯ ಕಲಾವಿದರಿಂದ ವಿ. ಎನ್‌. ಕುಲಾಲ್‌ ವಿರಚಿತ, ಜಗದೀಶ್‌ ಶೆಟ್ಟಿ ಮತ್ತು ಜಿ. ಕೆ. ಕೆಂಚನಕೆರೆ ನಿರ್ದೇಶನದಲ್ಲಿ ಮುತ್ತು ಮನಿಪುಜೆ ನಾಟಕ ಪ್ರರ್ದಶನಗೊಂಡಿತು.

ತುಂಬಿದ ಸಭಾಗೃಹದಲ್ಲಿ ನಡೆದ ಸಮಾರಂಭದಲ್ಲಿ ಊರ ಹಾಗೂ ಮುಂಬಯಿಯ ಗಣ್ಯರು, ಉದ್ಯಮಿಗಳು. ಇತರ ಸಮುದಾಯ ಸಂಘಟನೆಗಳ ಪ್ರತಿನಿಧಿಗಳು ಪಾಲ್ಗೊಂಡು ಸಹಕರಿಸಿದರು. 

 ಚಿತ್ರ-ವರದಿ : ರಮೇಶ ಅಮೀನ್‌

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.