ಅತಿಶಯ ಕ್ಷೇತ್ರ ಮುಂಬ್ರಾ: ಮಹಾಮಸ್ತಕಾಭಿಷೇಕ


Team Udayavani, May 17, 2017, 4:40 PM IST

14-Mum05c.jpg

ಮುಂಬಯಿ: ಅತಿಶಯ ಕ್ಷೇತ್ರ  ಮುಂಬ್ರಾದ ಭಗವಾನ್‌ ಬಾಹುಬಲಿಯ ಪುಣ್ಯಕ್ಷೇತ್ರದಲ್ಲಿ   16 ವರ್ಷಗಳ ಬಳಿಕ ಮಹಾ ಮಸ್ತಕಾಭಿಷೇಕವು ರವಿವಾರ ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ವೈಭವದಿಂದ  ನಡೆಯಿತು.

ಭಾರತ ಗೌರವ, ಗಣಿನಿ  ಆಯಿìಕಾ 105 ಜ್ಞಾನಮತಿ ಮಾತಾಜೀ ಮತ್ತು 105 ಚಂದನಮತಿ  ಮಾತಾಜಿಯವರ ದಿವ್ಯ ಉಪಸ್ಥಿತಿಯಲ್ಲಿ  ಹಾಗೂ ಸ್ವಸ್ತಿ ಶ್ರೀ ರವೀಂದ್ರಕೀರ್ತಿ ಸ್ವಾಮೀಜಿ ಅವರ ಶುಭಾಶೀರ್ವಾದಗಳೊಂದಿಗೆ ಭಗವಾನ್‌ ಬಾಹುಬಲಿಯ ಮಹಾಮಸ್ತಕಾಭಿಷೇಕ ಸಾವಿರಾರು  ಭಕ್ತಾದಿಗಳ ಸಮ್ಮುಖದಲ್ಲಿ ಮುಂಜಾನೆಯಿಂದ ಪೂಜಾ ವಿಧಿ-ವಿಧಾನಗಳೊಂದಿಗೆ ಮಂಗಳ ದ್ರವ್ಯಗಳ  ವಿತರಣೆ ನಡೆಯಿತು.

ಅಹಿಂಸೆಯಿಂದ ಸುಖ, ತ್ಯಾಗದಿಂದ ಶಾಂತಿ, ಮೈತ್ರಿಯಿಂದ ಪ್ರಗತಿ, ಧ್ಯಾನದಿಂದ ಸಿದ್ಧಿª, ಈ ಚಿಂತನೆಗಳನ್ನು ತನ್ನ ಜೀವನದಲ್ಲಿ ಅನುಷ್ಠಾನಕ್ಕೆ ತಂದು ಅಹಿಂಸಾ ಶಕ್ತಿಯನ್ನು ಜಗಕ್ಕೆ  ಪಸರಿಸಿದವರು  ಭಗವಾನ್‌ ಬಾಹುಬಲಿ. ಇಂತಹ ಉನ್ನತ ಗರಿಮೆಯುಳ್ಳ ತ್ಯಾಗಿಯ ಉನ್ನತ ಮೂರ್ತಿ ಇರುವ ಮುಂಬ್ರಾದಲ್ಲಿ ಬೆಳಗ್ಗೆ 8 ರಿಂದ ಸಭಾ ಮಂಟಪದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆರಂಭಗೊಂಡವು.

ಅನಂತರ ಭಗವಾನ್‌ ಬಾಹುಬಲಿಗೆ ನವರತ್ನ ಕಲಶ, ರಜತ ಕಲಶ, ತಾಮ್ರ ಕಲಶ ಹಾಗೂ ಪಂಚಾಮೃತ  ದ್ರವ್ಯಗಳಿಂದ, ಬಾಹುಬಲಿ ಗಿರಿಯಲ್ಲಿ 1008 ಕಲಶಗಳಿಂದ, ಜಲ, ಚಂದನ, ಅಷ್ಟಗಂಧ, ಅಮೃತರಸ, ಅರಶಿನ,  ಸರ್ವ ಔಷಧಿ, ಪುಷ್ಪ ವೃಷ್ಟಿ ಮುಂತಾದ ದ್ರವ್ಯಗಳಿಂದ ಮಹಾಮಜ್ಜನ ನೆರವೇರಿತು. 

ಸುಮಾರು 16 ವರ್ಷಗಳ ನಂತರ ಲಭಿಸಿದ ಇಂತಹ ಸೌಭಾಗ್ಯವನ್ನು ಸುಮಾರು 5000 ಶ್ರಾವಕ ಶ್ರಾವಕಿಯರು ಕಣ್ತುಂಬಿಕೊಂಡರು ಪುನೀತರಾದರು.
ಕೊನೆಯಲ್ಲಿ ಮಾತಾಜೀ ಹಾಗೂ ಹಾಗೂ ಸ್ವಾಮೀಜಿಯವರ ಪ್ರವಚನ ಕಾರ್ಯಕ್ರಮ ನಡೆಯಿತು.  

ಆಕರ್ಷಣೀಯವಾದ ಶಾಂತಿ ಮಂತ್ರ, ಮಹಾಮಂಗಳಾರತಿ ಯೊಂದಿಗೆ ಮಹಾಮಸ್ತಕಾಭಿಷೇಕ ಕಾರ್ಯಕ್ರಮವು ಸಮಾಪ್ತಿಗೊಂಡಿತು. 
ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಅನೇಕ ಧಾರ್ಮಿಕ, ರಾಜಕೀಯ ನೇತಾರರು, ಗಣ್ಯತಿ-ಗಣ್ಯರು, ತುಳು-ಕನ್ನಡಿಗರು, ಅಖೀಲ ಕರ್ನಾಟಕ ಜೈನ ಸಂಘ ಮುಂಬಯಿ ಇದರ ಪದಾಧಿಕಾರಿಗಳು, ಮಹಿಳಾ ವಿಭಾಗ, ಯುವ ವಿಭಾಗದ ಸದಸ್ಯರು, ಸಮಾಜ ಬಾಂಧವರು ವಿವಿಧೆಡೆಗಳಿಗೆ ಆಗಮಿಸಿ ಪ್ರಸಾದ ಸ್ವೀಕರಿಸಿದರು.

ಟಾಪ್ ನ್ಯೂಸ್

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

16-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

15-uv-fusion

Government School: ಸರಕಾರಿ ಶಾಲೆಯನ್ನು ಉಳಿಸಿ-ಬೆಳೆಸೋಣ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.