ಮೈಸೂರು ಅಸೋಸಿಯೇಶನ್ ಜಾಗತಿಕ ಕವನ ಸ್ಪರ್ಧೆ ಬಹುಮಾನ ವಿತರಣೆ
Team Udayavani, Jul 5, 2017, 12:24 PM IST
ಮುಂಬಯಿ: ಮೈಸೂರು ಅಸೋಸಿಯೇಶನ್ ಮುಂಬಯಿ ಇದರ 90ನೇ ಹುಟ್ಟು ಹಬ್ಬದ ನಿಮಿತ್ತವಾಗಿ 2016 ರಿಂದ ಆರಂಭಿಸಿದ ನೇಸರು ಜಾಗತಿಕ ಕನ್ನಡ ಕವನ ಸ್ಪರ್ಧೆ’ಯ ಎರಡನೆ ವರ್ಷದ ಕವನ ಸ್ಪರ್ಧೆಯ ಬಹುಮಾನ ವಿತರಣೆ ಸಮಾರಂಭ ಹಾಗೂ ನೇಸರು ವಿಶೇಷ ಸಂಚಿಕೆ ಬಿಡುಗಡೆ ಕಾರ್ಯಕ್ರಮವು ಮಾಟುಂಗ ಪೂರ್ವದ ಮೈಸೂರು ಅಸೋಸಿ ಯೇಶನ್ ಸಭಾಗೃಹದಲ್ಲಿ ಜೂ. 24ರಂದು ಸಂಜೆ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಯಾಗಿ ಪಾಲ್ಗೊಂಡ ಕನ್ನಡ ಸಾಹಿತ್ಯ ಪರಿಷತ್ತು ಬೆಂಗಳೂರು ಇದರ ಅಧ್ಯಕ್ಷರಾದ ಮನು ಬಳಿಗಾರ್ ಅವರು ನೇಸರು ವಾರ್ಷಿಕ ವಿಶೇಷ ಸಂಚಿಕೆಯನ್ನು ಬಿಡುಗಡೆಗೊಳಿಸಿದರು. ವಿಶೇಷ ಅತಿಥಿಯಾಗಿ ಕನ್ನಡದ ಖ್ಯಾತ ಲೇಖಕರಾದ ಡಾ| ಜಯಂತ್ ಕಾಯ್ಕಿಣಿ, ಮುಂಬಯಿಯ ಖ್ಯಾತ ಸಾಹಿತಿ ಡಾ| ಸುನೀತಾ ಶೆಟ್ಟಿ ಅವರುಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಮೈಸೂರು ಅಸೋಸಿಯೇಶನ್ನ ಅಧ್ಯಕ್ಷೆ ಕೆ. ಕಮಲಾ ಅವರು ವಹಿಸಿದ್ದರು. ಎನ್ಕೆಇಎಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಮಂಜುನಾಥಯ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಎರಡನೇ ಜಾಗತಿಕ ಕವನ ಸ್ಪರ್ಧೆ- 2017ರ ಮೊದಲ ಬಹುಮಾನ ವಿಜೇತರಾದ ಗುರುರಾಜ್ ಬೆಂಗ ಳೂರು, ರೇಣುಕಾ ರಮಾನಂದ ಅಂಕೋಲಾ, ದ್ವಿತೀಯ ಬಹುಮಾನ ವಿಜೇತರಾದ ವಿನಾಯಕ ಅರಳಸುರಳಿ, ಶುಭಾ ಎ. ಆರ್., ತೃತೀಯ ಬಹು ಮಾನ ವಿಜೇತರಾದ ಮುಸ್ತಾಪ ಕೆ. ಎಚ್. ಜಿ. ಕೆ. ಕುಲಕರ್ಣಿ, ಪ್ರೋತ್ಸಾಹ ಬಹುಮಾನ ವಿಜೇತೆ ಶಾಂತಿ ಜೆ. ಶೆಟ್ಟಿ ಅವರಿಗೆ ಬಹುಮಾನ ನೀಡಿ, ಶಾಲು ಹೊದೆಸಿ, ಪುಷ್ಪ$ಗೌರವ ಕೊಟ್ಟು ಸಮ್ಮಾನಿಸಲಾಯಿತು.
ಪ್ರಾಸ್ತಾವಿಕವಾಗಿ ಮೈಸೂರು ಅಸೋಸಿಯೇಶನ್ ಪದಾಧಿಕಾರಿ ಕೆ. ಮಂಜುನಾಥಯ್ಯ ಮಾತನಾ ಡಿದರು. ನೇಸರು ಪತ್ರಿಕೆಯ ಸಂಪಾದಕಿ ಡಾ| ಜ್ಯೋತಿ ಸತೀಶ್ ಕಾರ್ಯಕ್ರಮ ನಿರ್ವಹಿಸಿದರು. ಮೈಸೂರು ಅಸೋಸಿಯೇಶನ್ನ ಸದಸ್ಯ ಪದ್ಮನಾಭ ಸಿದ್ಧಕಟ್ಟೆ ಪ್ರಾರ್ಥನೆಗೈದರು. ಮಂಜುನಾಥಯ್ಯ ವಂದಿಸಿದರು.
ಚಿತ್ರ: ಸುಭಾಷ್ ಶಿರಿಯಾ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ