ಮೈಸೂರು ಅಸೋಸಿಯೇಶನ್‌ ಸಭಾಗೃಹ:ಚಿತ್ರಕಲಾ ಪ್ರದರ್ಶನ

ಪ್ರಶಸ್ತಿ ವಿಜೇತ ಚಿತ್ರಕಲಾವಿದ ಎಸ್‌. ಜಿ. ವಾಸುದೇವ‌ರಿಂದ ಉದ್ಘಾಟನೆ

Team Udayavani, Jun 30, 2019, 4:50 PM IST

2906MUM09A

ಮುಂಬಯಿ: ಮೈಸೂರು ಅಸೋಸಿಯೇಶನ್‌ ಮುಂಬಯಿ ವತಿಯಿಂದ ಕನ್ನಡ ವಿಭಾಗ ಮುಂಬಯಿ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಮಾಟುಂಗಾ ಪೂರ್ವದ ಭಾವುದಾಜಿ ರಸ್ತೆಯಲ್ಲಿನ ಸಭಾಗೃಹದಲ್ಲಿ ಕರ್ನಾಟಕ ಮೂಲದ ಮುಂಬಯಿಯ ನಾಮಾಂಕಿತ ಚಿತ್ರ ಕಲಾವಿದರ “ಚಿತ್ರಕಲಾ ಪ್ರದರ್ಶನ’ವು ಜೂ. 29 ರಂದು ಉದ್ಘಾಟನೆಗೊಂಡಿತು.

2 ದಿನಗಳ ಕಾಲ ನಡೆಯಲಿರುವ “ಚಿತ್ರಕಲಾ ಪ್ರದರ್ಶನ’ ವನ್ನು ಶನಿವಾರ ಪೂರ್ವಾಹ್ನ ಕರ್ನಾಟಕ ರಾಜ್ಯ ಪ್ರಶಸ್ತಿ ವಿಜೇತ ನಾಡಿನ ಹೆಸರಾಂತ ಚಿತ್ರಕಲಾವಿದ ಹಾಗೂ ಕರ್ನಾಟಕ ಲಲಿತ ಕಲಾ ಅಕಾಡೆಮಿಯ ಮಾಜಿ ಅಧ್ಯಕ್ಷ ಎಸ್‌. ಜಿ. ವಾಸುದೇವ ಉದ್ಘಾಟಿಸಿ, ಮೈಸೂರು ಅಸೋಸಿಯೇಶನ್‌ನ ಮುಖವಾಣಿ ನೇಸರು ತ್ತೈಮಾಸಿಕವನ್ನು ಬಿಡುಗ ಡೆಗೊಳಿಸಿ ಶುಭಹಾರೈಸಿದರು.

ಹಿರಿಯ ನಾಟಕಕಾರ, ಸಂಘಟಕ ಡಾ| ಬಿ. ಆರ್‌. ಮಂಜುನಾಥ್‌ ಅವರ ಪ್ರಧಾನ ಸಹಯೋಜಕತ್ವದಲ್ಲಿ ನಡೆಸಲ್ಪಟ್ಟ ಚಿತ್ರಕಲಾ ಪ್ರದರ್ಶನದಲ್ಲಿ ಪ್ರಸಿದ್ಧ ಚಿತ್ರಕಲಾವಿದರಾದ ವಾಸುದೇವ ಕಾಮತ್‌, ದೇವದಾಸ್‌ ಎಸ್‌. ಶೆಟ್ಟಿ, ದಿವಾಕರ ಶೆಟ್ಟಿ, ರೇಖಾ ಹೆಬ್ಟಾರ್‌, ಅನು ಪಾವಂಜೆ, ಪಂಜು ಗಂಗೊಳ್ಳಿ, ಚಿತ್ರಮಿತ್ರ ಮತ್ತು ಜಯ ಎಸ್‌. ಸಾಲ್ಯಾನ್‌ ಮತ್ತಿತರ ಕಲಾವಿದರು ಭಾಗವಹಿಸಿ ತಮ್ಮತಮ್ಮ ಚಿತ್ರಗಳನ್ನು ಪ್ರದರ್ಶಿಸಿ ಕಲಾಭಿಮಾನಿಗಳ ಪ್ರಶಂಸೆಗೆ ಪಾತ್ರರಾದರು.

ಪ್ರದರ್ಶನದ ಅಂಗವಾಗಿ ಸಯನ್‌, ದಾದರ್‌ ಮತ್ತು ಮಾಟುಂಗಾ ಆಸುಪಾಸಿನ 9 ರಿಂದ 12 ವರ್ಷದೊಳಗಿನ ಕನ್ನಡ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತ ಮಕ್ಕಳಿಗೆ ನಗದು ಬಹುಮಾನ ನೀಡಿ ಚಿತ್ರಕಲೆಗೆ ಪ್ರೋತ್ಸಾಹಿಸಲಾಯಿತು. ಈ ಸಂದರ್ಭದಲ್ಲಿ ಮೈಸೂರು ಅಸೋಸಿಯೇಶನ್‌ ಮುಂಬಯಿ ಟ್ರಸ್ಟಿ ಕೆ.ಮಂಜುನಾಥಯ್ಯ, ಕನ್ನಡ ವಿಭಾಗ ಮುಂಬಯಿ ವಿವಿಯ ಮುಖ್ಯಸ್ಥ ಡಾ| ಜಿ. ಎನ್‌. ಉಪಾಧ್ಯ, ಮೊಗವೀರ ಮಾಸಿಕದ ಸಂಪಾದಕ ಹಾಗೂ ಕನ್ನಡಿಗ ಪತ್ರಕರ್ತರ ಸಂಘ ಮಹಾರಾಷ್ಟ್ರ ಇದರ ಗೌರವ ಪ್ರಧಾನ ಕಾರ್ಯದರ್ಶಿ ಅಶೋಕ ಎಸ್‌.ಸುವರ್ಣ, ಕರ್ನಾಟಕ ಸಂಘ ಮುಂಬಯಿ ಕಾರ್ಯದರ್ಶಿ ಡಾ| ಭರತ್‌ಕುಮಾರ್‌ ಪೊಲಿಪು ಮತ್ತಿತರ ಗಣ್ಯರು ಉಪಸ್ಥಿತರಿದ್ದು ಚಿತ್ರಕಲಾ ಸ್ಪರ್ಧಿಗಳಿಗೆ ಪಾರಿತೋಷಕ ಪ್ರದಾನಿಸಿ ಅಭಿನಂದಿಸಿದರು.

ಅನೇಕ ಕಲಾವಿದರು ಹಾಜರಿದ್ದರು. ಪದ್ಮನಾಭ ಶೆಟ್ಟಿ ಸಿದ್ದಕಟ್ಟೆ ಪ್ರಾರ್ಥನೆಗೈದರು. ಮೈಸೂರು ಅಸೋಸಿಯೇಶನ್‌ನ ನಾರಾಯಣ ನವಿಲೇಕರ್‌ ಸ್ವಾಗತಿಸಿದರು. ಕನ್ನಡ ವಿಭಾಗದ ಮುಂಬಯಿ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಡಾ| ಪೂರ್ಣಿಮಾ ಎಸ್‌.ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಮೈಸೂರು ಅಸೋಸಿಯೇಶನ್‌ನ ಗೌರವ ಕಾರ್ಯ ದರ್ಶಿ ಡಾ| ಗಣಪತಿ ಶಂಕರಲಿಂಗ್‌ ವಂದಿಸಿದರು.

ಚಿತ್ರ-ವರದಿ : ರೊನಿಡಾ ಮುಂಬಯಿ.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.