ನಲಸೋಪರ ಶ್ರೀ ಮಾರಿಯಮ್ಮ ದೇವಸ್ಥಾನ:ನವರಾತ್ರಿ ಉತ್ಸವ


Team Udayavani, Oct 3, 2017, 1:42 PM IST

01-Mum11c.jpg

 ಮುಂಬಯಿ: ಪಶ್ಚಿಮ ಉಪನಗರ ನಲಸೋಪರ ಲೋಟಸ್‌ ರೋಡ್‌, ಅಚೋಲೆ ಪರಿಸರದಲ್ಲಿ ಸುಮಾರು ಹತ್ತು ವರ್ಷಗಳ ಹಿಂದೆ ಶ್ರೀ ಶನಿಮಹಾತ್ಮ ದೇವಸ್ಥಾನದೊಂದಿಗೆ ಸ್ಥಾಪನೆಗೊಂಡ ಶ್ರೀ ಮಾರಿಯಮ್ಮ ದೇವಸ್ಥಾನದಲ್ಲಿ ನವರಾತ್ರಿ ಉತ್ಸವವು ಸೆ. 30ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.

ಸೆ. 21 ರಂದು   ಕಲಶ ಪ್ರತಿಷ್ಠಾಪನೆಯ ಮೂಲಕ ಧಾರ್ಮಿಕ ಕಾರ್ಯಕ್ರಮವು ಪ್ರಾರಂಭಗೊಂಡು ದಿನಂಪ್ರತಿ ಸಂಜೆ 7 ರಿಂದ ವಿವಿಧ ಪೂಜಾ ಕೈಂಕರ್ಯಗಳು ನಡೆಯುತ್ತಿತ್ತು. ಸೆ. 28ರಂದು ದುರ್ಗಾಷ್ಟಮಿಯ ಆರಾಧನೆಯ ಅಂಗವಾಗಿ ಸಾರ್ವಜನಿಕ ಚಂಡಿಕಾ ಯಾಗ ನೆರವೇರಿತು. ಸೆ. 30ರಂದು ವಿಜಯ ದಶಮಿಯ ದಿನದಂದು ಮಧ್ಯಾಹ್ನ ಶ್ರೀದೇವಿಗೆ ಮಾರಿಯಮ್ಮ, ದುರ್ಗಾ ಪರಮೇಶ್ವರೀ ದೇವರಿಗೆ ಮಹಾಪೂಜೆ ಜರಗಿತು. ಆನಂತರ ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ಆಯೋಜಿಸಲಾಗಿತ್ತು. ಸಾವಿರಾರು ಭಕ್ತಾದಿಗಳು ಅನ್ನಪ್ರಸಾದ ಸ್ವೀಕರಿಸಿದರು. 

ಸಂಜೆ ಪರಿಸರದ ಭಕ್ತರಿಂದ ಭಜನ ಕಾರ್ಯಕ್ರಮ, ಆನಂತರ ದೇವಸ್ಥಾನದ ಶನಿದೇವರು, ಶ್ರೀ ಧರ್ಮ ಮಾರಿಯಮ್ಮ, ಶ್ರೀ ದುರ್ಗಾಪರಮೇಶ್ವರಿ, ಮಹಾಕಾಳಿ ದೇವರಿಗೆ ವಿವಿಧ ಪೂಜೆ, ಶ್ರೀ ದೇವಿ ದರ್ಶನ, ಉತ್ಸವ ಬಲಿ ನಡೆಯಿತು.

ಇದೇ ಸಂದರ್ಭದಲ್ಲಿ ಆಶೀರ್ವಚನ ನೀಡಿದ ದೇವಸ್ಥಾನದ ಪ್ರಧಾನ ಅರ್ಚಕ ವಿಶ್ವನಾಥ್‌ ಭಟ್‌ ಅವರು, ಕಳೆದ 9 ದಿನಗಳಿಂದ ವಿವಿಧ ಪೂಜಾ ಕೈಂಕರ್ಯಗಳ ಮೂಲಕ ನವದುರ್ಗೆಯರನ್ನು ಪೂಜಿಸಿ, ಸರ್ವರಿಗೂ ಅಭಯ ಪ್ರಾರ್ಥಿಸಲಾಗಿದ್ದು, ಜಗತ್ತಿನ ಸರ್ವ ಸಂಕುಲವನ್ನು ಕಾಯುವ ಶ್ರೀದೇವಿಯು ಭಕ್ತರಿಗೆ ಅಭಯಹಸ್ತ ನೀಡುವಳು. ದೈವಶಕ್ತಿಯನ್ನು ಹೊಂದಿರುವ ಈ ದೇವಸ್ಥಾನದಲ್ಲಿ ಭಕ್ತರ ಆಶೋತ್ತರಗಳನ್ನು  ಪೂರೈಸುವಳು. ಭಕ್ತಿಯಿಂದ ಶ್ರದ್ಧೆಯಿಂದ ಆರಾಧಿ ಸುವ ಭಕ್ತರಿಗೆ ದೇವಿಯ ಸದಾ ಅಭಯವನ್ನಿತ್ತು ಕಾಯುವುದರ ಜೊತೆಗೆ ಈ ದೇವಸ್ಥಾನದಲ್ಲಿ 9 ದಿನಗಳ ದೈವೀ ಭಕ್ತಿಯ ಪೂಜೆ ಪುರಸ್ಕಾರಗಳು ಜರಗಿದೆ ಎಂದು ಹೇಳಿದರು. ಉತ್ಸವ ಬಲಿ ಜರಗಿದ ನಂತರ ನೆರೆದ ಭಕ್ತರಿಗೆ ಶ್ರೀ ದೇವಿಯ ಪ್ರಸಾದವನ್ನಿತ್ತು ಹರಸಲಾಯಿತು.

ಶನಿಮಂದಿರದೊಂದಿಗೆ ಪ್ರಾರಂಭ ಗೊಂಡ ಈ ಮಂದಿರವು ಇಂದು ಶ್ರೀ ಧರ್ಮ ಮಾರಿಯಮ್ಮ, ಶ್ರೀ ದುರ್ಗಾಪರಮೇಶ್ವರಿ, ಶ್ರೀ ಮಹಾಕಾಳಿ, ಶ್ರೀ ಗಣಪತಿ, ಶ್ರೀ ರುದ್ರದೇವರ ಗುಡಿಗಳು ಸ್ಥಾಪಿತಗೊಂಡಿದ್ದು, ಎಲ್ಲಾ ದೇವರಿಗೂ ಪೂಜಾ ವಿಧಿ-ವಿಧಾನಗಳು ಜರಗುತ್ತಿದೆ. 

ಸಂಚಾಲಕರ ವತಿಯಿಂದ ದೇವಸ್ಥಾನದ ಜೀರ್ಣೋದ್ಧಾರದ ಚಿಂತನೆಯು ನಡೆಯುತ್ತಿದ್ದು, ಭಕ್ತಾದಿ ಗಳು, ದಾನಿಗಳ ಸಹಾಯದಿಂದ ಈ ಪರಿಸರದಲ್ಲಿ ಒಂದು ನವೀಕೃತ ಜೀರ್ಣೋದ್ಧಾರ ಮಂದಿರವು ನೆಲೆಕಾಣಲಿದೆ ಎಂದು ಮಂದಿರದ ಟ್ರಸ್ಟಿಗಳು ಹೇಳಿದರು. 

ಚಿತ್ರ-ವರದಿ: ರಮೇಶ್‌ ಉದ್ಯಾವರ

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.