ನಾರಾಯಣಗುರುಗಳು ಭರವಸೆಯ ಬೆಳಕು ಮೂಡಿಸಿದ ಮಹಾನ್ ಚೇತನ: ನರೇಶ್ ಕೆ. ಪೂಜಾರಿ
ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಗುರು ಜಯಂತಿ ಆಚರಣೆ
Team Udayavani, Sep 2, 2021, 2:38 PM IST
ಭಾಯಂದರ್: ಭಾಯಂದರ್ ಪೂರ್ವದ ಬಿ. ಪಿ. ಕ್ರಾಸ್ ರೋಡ್, ಶ್ರೀ ಮಹಾದೇವ್ ನಗರ ಸೊಸೈಟಿಯಲ್ಲಿರುವ ಬಿಲ್ಲವರ ಅಸೋಸಿಯೇಶನ್ ಭಾಯಂದರ್ ಸ್ಥಳೀಯ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ 167ನೇ ಜಯಂತ್ಯುತ್ಸವವು ಆ. 29ರಂದು ಜರಗಿತು.
ಸಮಿತಿಯ ಅರ್ಚಕ ಸದಾನಂದ ಸುವರ್ಣ ಅವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮವಾಗಿ ಮಹಾಮಂಗಳಾರತಿ ತೀರ್ಥ ಪ್ರಸಾದ ನೆರವೇರಿತು. ಸಮಿತಿ ಸದಸ್ಯರಿಂದ ಗುರು ಸ್ತ್ರೋತ್ರ, ಭಜನೆ, ಓಂ ನಮೋ ನಾರಾಯಣಾಯ ನಮಃ ಶಿವಾಯ ಜಪ ಯಜ್ಞ ನಡೆಯಿತು.
ಭಾಯಂದರ್ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ನರೇಶ್ ಕೆ. ಪೂಜಾರಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಧರ್ಮ ಇರುವುದು ಮಾನವ ಸಮುದಾಯದ ಶೋಷಣೆಗೆ ಅಲ್ಲ. ಮೇಲು-ಕೀಳು, ಬಡವ-ಬಲ್ಲಿದ ಎಂಬ ಭೇದಭಾವ ಸೃಷ್ಟಿಸದೆ ಸಮಾನತೆಯ ಬಾಳು ನಮ್ಮದಾಗಬೇಕು. ಸಕಲ ಜೀವರಾಶಿಗಳಿಗೆ ಆತ್ಮಗೌರವದ ಬದುಕನ್ನು ನೀಡುವುದೇ ನಿಜವಾದ ಧರ್ಮದ ಸಾರ ಎಂದು ಬ್ರಹ್ಮಶ್ರೀ ನಾರಾಯಣಗುರುಗಳು ಜಗತ್ತಿಗೆ ಸಾರಿದ್ದಾರೆ. ಅಜ್ಞಾನದ ಅಂಧಕಾರವನ್ನು ನೀಗಿಸಿ ಸುಜ್ಞಾನದ ಜ್ಯೋತಿಯನ್ನು ಬೆಳಗಿಸಿದ ಅವರು ಕೆಳ
ವರ್ಗದ ಜನರಲ್ಲಿ ಆತ್ಮಸ್ಥೈರ್ಯ, ನವಚೈತನ್ಯ ತುಂ ಬಿಸಿದ್ದಾರೆ. ಸಾಮಾಜಿಕ-ಧಾರ್ಮಿಕ ಪರಿವರ್ತನೆಯ ಹರಿಕಾರರಾದ ಅವರು ಬದುಕಿನಲ್ಲಿ ಭರವಸೆಯ ಬೆಳಕು ಮೂಡಿಸಿದ ಮಹಾನ್ ಚೇತನ ಎಂದರು.
ಇದನ್ನೂ ಓದಿ:ಮಕ್ಕಳ ಇಚ್ಚೆ ನೋಡಿಕೊಂಡು1 ರಿಂದ 5ನೇ ತರಗತಿಯವರಗೆ ಶಾಲೆ ಆರಂಭ: ಸಚಿವ ಬಿ.ಸಿ.ನಾಗೇಶ್
ಗೌರವ ಪ್ರಧಾನ ಕಾರ್ಯದರ್ಶಿ ರಘುನಾಥ್ ಜಿ. ಹಳೆಯಂಗಡಿ ಅವರು ಅಸೋಸಿಯೇಶನ್ನ ಸಾಧನೆಗಳನ್ನು ವಿವರಿಸಿ ಕಾರ್ಯಕ್ರಮ ನಿರ್ವಹಿಸಿದರು. ಗೌರವ ಕಾರ್ಯಾಧ್ಯಕ್ಷ ಪ್ರಮೋದ್ ಕೆ. ಕೋಟ್ಯಾನ್, ಉಪ ಕಾರ್ಯಾಧ್ಯಕ್ಷರಾದ ಉದಯ ಡಿ. ಪೂಜಾರಿ, ವಾಸುದೇವ ಪೂಜಾರಿ, ಜತೆ ಕಾರ್ಯದರ್ಶಿ ಮಾಲತಿ ಆರ್. ಬಂಗೇರ, ಕೋಶಾಧಿಕಾರಿ ಕೃಷ್ಣ ಬಂಗೇರ, ಕೇಂದ್ರ ಕಚೇರಿಯ ಸೇವಾದಳದ ದಳಪತಿ ಗಣೇಶ್ ಕೆ. ಪೂಜಾರಿ, ಸಮಾಜ ಸೇವಕ ಚಿತ್ರಾಪು ಕೆ. ಎಂ. ಕೋಟ್ಯಾನ್, ಆರ್. ಕೆ. ಮೂಲ್ಕಿ, ಸುಮಿತ್ರಾ ಕರ್ಕೇರ, ಮಾಧವ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯಕಾರಿ ಸಮಿತಿ ಸದಸ್ಯರು, ಮಹಿಳಾ ಸದಸ್ಯೆಯರು, ಯುವ ವಿಭಾಗದವರು ಸಹಕರಿಸಿದರು.
ಚಿತ್ರ-ವರದಿ: ರಮೇಶ ಅಮೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Kasaragod ವಿವಿಪ್ಯಾಟ್ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ