ನವದುರ್ಗಾ ಅಯ್ಯಪ್ಪ ಸೇವಾ ಸಂಘ: ವಾರ್ಷಿಕ ಮಹಾಪೂಜೆ


Team Udayavani, Dec 12, 2017, 12:00 PM IST

10-Mum01a.jpg

ಮುಂಬಯಿ: ದಹಿಸರ್‌ ಶ್ರೀ ನವದುರ್ಗಾ ಅಯ್ಯಪ್ಪ ಸೇವಾ ಸಂಘ ಇದರ 25ನೇ ವಾರ್ಷಿಕ ಮಹಾಪೂಜೆಯು ದಹಿಸರ್‌ ಪೂರ್ವದ ಶೈಲೇಂದ್ರ ನಗರದ ಹ್ಯಾಪಿ ಹೋಂನಲ್ಲಿರುವ ಶಿಬಿರದ ಆವರಣದಲ್ಲಿ ಡಿ. 9ರಂದು ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು.

ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ವಿಶ್ವನಾಥ್‌ ಅಯ್ಯರ್‌ ಗುರುಸ್ವಾಮಿ, ಕಣ್ಣನ್‌ ನಾಯರ್‌ ಗುರುಸ್ವಾಮಿ ಬಾಂದ್ರಾ, ಗಣೇಶ್‌ ಗುರುಸ್ವಾಮಿ ಘಾಟ್‌ಕೋಪರ್‌, ಶ್ರೀ ಧರ್ಮಶಾಸ್ತ ಭಕ್ತವೃಂದ ಬಾಂದ್ರಾ ಅಧ್ಯಕ್ಷ ರಾಮಣ್ಣ ಗುರುಸ್ವಾಮಿ, ಶ್ರೀ  ನವದುರ್ಗಾ ಅಯ್ಯಪ್ಪ ಸೇವಾ ಸಂಘದ ಗೌರವಾಧ್ಯಕ್ಷ ಸುರೇಂದ್ರ ಗುರುಸ್ವಾಮಿ ಬೆಳಗಾವಿ, ಅಧ್ಯಕ್ಷ ಸುಧಾಕರ ಎನ್‌. ಶೆಟ್ಟಿ ಬಿಯಾಳಿ ಮಂದಾರ್ತಿ, ಕಾರ್ಯದರ್ಶಿ ಮೋಹನ್‌ ರೈ ಗುರುಸ್ವಾಮಿ ಉಪ್ಪಳ, ಕೋಶಾಧಿಕಾರಿ ಗಣೇಶ್‌ ಶೆಟ್ಟಿ ಕುಂಬ್ಳೆ, ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟಿ, ಪ್ರಧಾನ ಅರ್ಚಕ ಸಾಂತಿಂಜ ಜನಾರ್ದನ ಭಟ್‌ ಅವರ ಪೌರೋಹಿತ್ಯದಲ್ಲಿ ಗಣಹೋಮ, ಅಯ್ಯಪ್ಪ ಪ್ರತಿಷ್ಠೆ, ಸಹಸ್ರ ನಾಮ ಅರ್ಚನೆ ಹಾಗೂ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿತು.

ಜಯಂತಿ ಶೆಟ್ಟಿ ನೇತೃತ್ವದ ಬೊರಿವಲಿ ಪಶ್ಚಿಮದ ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಇದರ ಮಹಿಳಾ ಸದಸ್ಯೆಯರಿಂದ ಮತ್ತು ಶ್ರೀ ಲಕ್ಷ್ಮೀನಾರಾಯಣ ಭಜನ ಮಂಡಳಿ ಮೀರಾರೋಡ್‌ ಇದರ ಸದಸ್ಯರಿಂದ ಭಜನ ಕಾರ್ಯಕ್ರಮ ನಡೆಯಿತು. ಮೀರಾರೋಡ್‌ ಶ್ರೀ ಅಯ್ಯಪ್ಪ ಭಕ್ತಮಂಡಳಿಯ ಗುರುಸ್ವಾಮಿ ಜಯಶೀಲ ತಿಂಗಳಾಯ ಮತ್ತು ಗುರುಸ್ವಾಮಿ ಉಮೇಶ್‌ ಕಾಂತಾವರ ಅವರು ಹಾಗೂ ಅಯ್ಯಪ್ಪ ವ್ರತಧಾರಿಗಳು ಶ್ರೀ ಸನ್ನಿಧಿಯ ಪರಿಚಯವನ್ನು ಶರಣು ಘೋಷದ ಮೂಲಕ ಮಾಡಿದರು.

ಶ್ರೀ ನವದುರ್ಗಾ ಅಯ್ಯಪ್ಪ ಸೇವಾ ಸಂಘ ಇದರ ಶಿಬಿರದ ವ್ರತಧಾರಿ ಅಯ್ಯಪ್ಪ ಸ್ವಾಮಿಗಳು ಪಡಿಪೂಜೆಯ ಹದಿನೆಂಟು ಮೆಟ್ಟಿಲುಗಳಿಗೆ ಶಾಸ್ತ್ರೋಕ್ತ ಹಾಗೂ ಸನಾತನ ಪೂಜಾ ಧಾರ್ಮಿಕ ಕಾರ್ಯಕ್ರಮಗಳ ಮೂಲಕ ತುಪ್ಪದ ದೀಪ, ಕರ್ಪೂರವನ್ನು ಹಚ್ಚಿ ಶ್ರೀ ಅಯ್ಯಪ್ಪ ಸ್ವಾಮಿಯನ್ನು ಸ್ಮರಿಸಿದರು. ಶಿಬಿರದ ಗುರುಸ್ವಾಮಿಗಳಿಂದ ಮಹಾಪೂಜೆಯ ಬಳಿಕ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಿತು.  ಅನ್ನಸಂತರ್ಪಣೆಯಲ್ಲಿ ತುಳು-ಕನ್ನಡಿಗರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡಿದ್ದರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಾತ್ರಿ ಶ್ರೀ ಗುರುನಾರಾಯಣ ಯಕ್ಷಗಾನ ಕಲಾಮಂಡಳಿ ಸಾಂತಾಕ್ರೂಜ್‌ ಕಲಾವಿದರಿಂದ ಬ್ರಹ್ಮ ಬಲಾಂಡಿ ಯಕ್ಷಗಾನ ಬಯಲಾಟ ಪ್ರದರ್ಶನಗೊಂಡಿತು. ದಿನಪೂರ್ತಿ ನಡೆದ ಧಾರ್ಮಿಕ 
ಉತ್ಸವದಲ್ಲಿ ಸ್ಥಳೀಯ ನಗರ ಸೇವಕರು, ಪೊಲೀಸ್‌ ಅಧಿಕಾರಿಗಳು, ದಾನಿಗಳು, ವಿವಿಧ ಕ್ಷೇತ್ರಗಳ ಗಣ್ಯರು, ವಿವಿಧ ಸಮಾಜದ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಪಾಲ್ಗೊಂಡು ಪ್ರಸಾದ 
ಸ್ವೀಕರಿಸಿದರು.  

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.