ಪಲಿಮಾರು ಶ್ರೀಗಳ ಚಿಂತನೆಗಳಿಗೆ ಕೈಜೋಡಿಸೋಣ: ಸಚ್ಚಿದಾನಂದ ರಾವ್‌


Team Udayavani, Oct 24, 2020, 8:10 PM IST

MUMBAI-TDY-1

ಮುಂಬಯಿ, ಅ. 23: ಮೀರಾರೋಡ್‌ ಪೂರ್ವದ ಗೀತಾ ನಗರದಲ್ಲಿರುವ ಪಲಿಮಾರು ಮಠದ ಶ್ರೀ ಬಾಲಾಜಿ ಸನ್ನಿಧಿಯ ಅವರಣದಲ್ಲಿ ನವರಾತ್ರಿ ಉತ್ಸವದ ಅಂಗವಾಗಿ ಅ. 22ರಂದು ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ದಿನಪೂರ್ತಿ ಜರಗಿದವು.

ಧಾರ್ಮಿಕ ಕಾರ್ಯಕ್ರಮವಾಗಿ ಪಲಿಮಾರು ಮಠದ ಟ್ರಸ್ಟಿ ಸಚ್ಚಿದಾನಂದ ರಾವ್‌ ನೇತೃತ್ವದಲ್ಲಿ ಬೆಳಗ್ಗೆ ಶ್ರೀ ಚಂಡಿಕಾ ಮಹಾ ಯಜ್ಞ, ಪೂರ್ಣಾಹುತಿ, ಕಲಶಾಭೀಷೇಕ ಆಲಂಕಾರ ಪೂಜೆ, ಮಹಾಪೂಜೆ, ಆರತಿ, ಮಧ್ಯಾಹ್ನ ಶ್ರೀನಿವಾಸ ದೇವರಿಗೆ ಮಹಾಪೂಜೆ ಹಾಗೂ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ಜರಗಿತು. ಅಪರಾಹ್ನ ಶ್ರೀ ಬಾಲಾಜಿ ಸನ್ನಿಧಿಯ  ಭಜನ ಮಂಡಳಿಯ ಸದಸ್ಯರಿಂದ ದಾಸರ ಕೀರ್ತನೆಗಳು ನಡೆದವು.

ಟ್ರಸ್ಟಿ ಸಚ್ಚಿದಾನಂದ ರಾವ್‌ ಶ್ರೀ ಬಾಲಾಜಿ ಸನ್ನಿಧಿ ಬಗ್ಗೆ ಮಾತನಾಡಿ, ಉಡುಪಿ ಪರ್ಯಾಯ ಸಂದರ್ಭ ಪುಟಾಣಿಗಳಿಗೆ ಚಿಣ್ಣರೋತ್ಸವ, ಶಾಲಾ ವಿದ್ಯಾರ್ಥಿಗಳಿಗೆ ಬಿಸಿಯೂಟ, ನಿತ್ಯ ಲಕ್ಷ ತುಳಸಿ ಅರ್ಚನೆ, ಚಿನ್ನದ ಗೋಪುರ, ಎರಡು ವರ್ಷಗಳ ಕಾಲ ದಿನಂಪ್ರತಿ ರಾತ್ರಿ ಭಜನೆ ಮೊದಲಾದ ಸಾಮಾಜಿಕ, ಶೈಕ್ಷಣಿಕ, ಅಧ್ಯಾತ್ಮಿಕ ಕ್ಷೇತ್ರಗಳಲ್ಲಿ ಅದ್ವಿತೀಯ ಸಾಧನೆ ಮಾಡಿದ ಪಲಿಮಾರು

ಮಠದ ಶ್ರೀ ವಿದ್ಯಾಧೀಶ ತೀರ್ಥ ಸ್ವಾಮೀಜಿ  ಅವರಿಗೆ ಮಂಗಳೂರಿನ ಶ್ರೀನಿವಾಸ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ಪದವಿ ಪ್ರದಾನ ಮಾಡಿ ಗೌರವಿಸಿದ್ದು, ಅವರ ನಿರಂತರ ಶ್ರಮಕ್ಕೆ ಸಂದ ಗೌರವವಾಗಿದೆ. ಪಲಿಮಾರು  ಶ್ರೀಗಳ ತತ್ತಾÌದರ್ಶಗಳ ಪಾಲನೆಯೊಂದಿಗೆ ಸಮಾಜಮುಖೀ ಚಿಂತನೆಗಳಿಗೆ ನಾವೆಲ್ಲ ಕೈಜೋಡಿಸೋಣ. ಕೋವಿಡ್‌-19ರ ಸಾಂಕ್ರಾಮಿಕ ರೋಗದದ ಹಿನ್ನೆಲೆಯಲ್ಲಿ ಸರಕಾರದ ಮಾರ್ಗ ಸೂಚಿಯಂತೆ ಮಠದ ಪ್ರತಿಯೊಂದು ಧಾರ್ಮಿಕ, ಆಧ್ಯಾತ್ಮಿಕ ಆಚರಣೆಗಳು ಸರಳವಾಗಿ ನಡೆಯಲಿವೆ ಎಂದು ತಿಳಿಸಿದರು.

ವಿಜಯದಶಮಿಯಂದು ಮಧ್ವಜಯಂತಿ, ಬ್ರಹ್ಮೋತ್ಸವದ ಪೂರ್ವಭಾವಿಯಾಗಿ ಬೆಳಗ್ಗೆ ಕಲಶ ಪ್ರತಿಷ್ಠೆ, ಪ್ರಧಾನ ಹವನ, ಮಹಾಪೂಜೆ, ಅಪರಾಹ್ನ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ 5ರಿಂದ ಶ್ರೀ ಬಾಲಾಜಿ ಸನ್ನಿಧಿಯ ಮಹಿಳಾ ಸದಸ್ಯೆಯರಿಂದ ಭಜನೆ, ಸಾಂಕೇತಿಕ ರಥೋತ್ಸವ, ಶ್ರೀನಿವಾಸ ದೇವರಿಗೆ ರಂಗಪೂಜೆ ಮತ್ತು ಪರಿವಾರ ದೇವರಾದ ಶ್ರೀ ಗಣಪತಿ, ಹಿಮಾಲಯದ ಸ್ವಾಮಿಗಳಿಂದ ಪೂಜೆಯನ್ನು ಸ್ವೀಕರಿಸಿದ ಓಂಕಾರ ಇರುವ ಮಾಣಿಕ್ಯ ಲಿಂಗ ಶ್ರೀ ಮುಂಗೇಶಿ ಮಹಾ ಮೃತ್ಯುಂಜಯ ರುದ್ರ ದೇವರು, ಶ್ರೀ ಪದ್ಮಾಂಬಿಕೆ, ಶ್ರೀ ಆಂಜನೇಯ, ಶ್ರೀ ನಾಗದೇವರು, ನವಗ್ರಹ ದೇವರಿಗೆ ವಿಶೇಷ ಪೂಜೆಗಳು ನಡೆಯಲಿವೆ  ಎಂದು ತಿಳಿಸಿದ ಅವರು, ಭಕ್ತರ ಸಹಾಯ, ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಶುದ್ಧ ಪುಣ್ಯಾಹ ವಾಚನ, ಸಂಕಲ್ಪ, ಕಲಶ ಪ್ರತಿಷ್ಠಾಪನೆ, ಪ್ರಧಾನ ಹೋಮ, ಕಲೊ³àಕ್ತ ಪೂಜೆ, ಪೂರ್ಣಾಹುತಿ, ಸುವಾಸಿನಿ ಪೂಜೆಯ ಬಳಿಕ ಭಕ್ತರು ಮಂಗಲ ದ್ರವ್ಯ, ಮಂಗಲ ವಸ್ತ್ರ, ಫಲಪುಷ್ಪ ಸುವಸ್ತುಗಳನ್ನು ಯಜ್ಞಕುಂಡಕ್ಕೆ ಸಮರ್ಪಿಸಿ ಪ್ರಸಾದ ಸ್ವೀಕರಿಸಿದರು. ಟ್ರಸ್ಟಿ ವಾಸುದೇವ ಎಸ್‌. ಉಪಾಧ್ಯಾಯ, ಸಂತೋಷ್‌ ಭಟ್‌ ಬಕ್ರೆಮಠ, ಕಾರ್ತಿಕ್‌ ಉಪಾಧ್ಯಾಯ, ಕೃಷ್ಣಮೂರ್ತಿ ಉಪಾಧ್ಯಾಯ, ಗೋಪಾಲ ಭಟ್‌, ರಾಮರಾಜ್‌, ವೃಷಬ್‌ ಭಟ್‌, ಪ್ರಶಾಂತ್‌ ಭಟ್‌, ಮಧುಮತಿ ಸಚ್ಚಿದಾನಂದ ರಾವ್‌ ವಿವಿಧ ಪೂಜೆಗಳನ್ನು ನೆರವೇರಿಸಿದರು. ಕರಮಚಂದ್ರ ಗೌಡ ಮತ್ತು ಶ್ರೀ ಬಾಲಾಜಿ ಭಜನ ಸನ್ನಿಧಿಯ ಸದಸ್ಯರು ಸಹಕರಿಸಿದರು. ಸಾಮಾಜಿಕ ಅಂತರದಲ್ಲಿ ಭಕ್ತರು ದೇವರ ದರ್ಶನ ಪಡೆದರು.

 

-ಚಿತ್ರ-ವರದಿ: ರಮೇಶ ಅಮೀನ್‌

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.