ನವಿ ಮುಂಬಯಿ: 2.50 ಲಕ್ಷ ಕೋವಿಡ್‌ ಪರೀಕ್ಷೆ


Team Udayavani, Oct 22, 2020, 6:22 PM IST

ನವಿ ಮುಂಬಯಿ: 2.50 ಲಕ್ಷ ಕೋವಿಡ್‌ ಪರೀಕ್ಷೆ

ಮುಂಬಯಿ, ಅ. 21: ಕಳೆದ ಕೆಲವು ದಿನಗಳಿಂದ ನಗರದಲ್ಲಿ ಕೋವಿಡ್‌ ಸೋಂಕಿನಿಂದ ಚೇತರಿಸುವವರ ಸಂಖ್ಯೆ ಹೆಚ್ಚಳವಾಗಿದೆ. ಕೋವಿಡ್‌ ದಿಂದ ಚೇತರಿಕೊಳ್ಳುವವರ ಸಂಖ್ಯೆ ಹೆಚ್ಚಾಗು ತ್ತಿದ್ದರೂ ದಿನಕ್ಕೆ ಸರಾಸರಿ 3,000 ಪರೀಕ್ಷೆಗಳನ್ನು ನಡೆಸುವ ಗುರಿ ಹೊಂದಿ ರುವ ನವಿ ಮುಂಬಯಿ ಮಹಾನಗರ ಪಾಲಿಕೆಯು ಇಲ್ಲಿಯವರೆಗೆ 2.50 ಲಕ್ಷ ಕೋವಿಡ್‌ ಪರೀಕ್ಷೆಗಳನ್ನು ನಡೆಸಿದೆ.

ಸುಮಾರು 15 ಲಕ್ಷ ಜನಸಂಖ್ಯೆ ಹೊಂದಿದ ನವಿ ಮುಂಬಯಿಯಲ್ಲಿ ಇದುವರೆಗೆ 2.5 ಲಕ್ಷಕ್ಕೂ ಹೆಚ್ಚಿನ ಜನರ ಕೊರೊನಾ ಪರೀಕ್ಷೆಗಳನ್ನು ನಡೆಸ ಲಾಗಿದೆ. ಮುಂಬರುವ ಅವಧಿಯಲ್ಲಿ ಹೆಚ್ಚು ಹೆಚ್ಚು ನಾಗರಿಕರನ್ನು ಪರೀಕ್ಷಿಸಲು ಮಹಾನಗರ ಪಾಲಿಕೆ ವತಿಯಿಂದ ಪ್ರಯತ್ನಿಸಲಾಗುತ್ತಿದೆ. ಮಹಾನಗರ ಪಾಲಿಕೆ ತನ್ನದೇ ಆದ ಪ್ರಯೋಗಾಲಯ ಪ್ರಾರಂಭಿಸಿದಾಗಿನಿಂದ ನಗರದಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಿದೆ. ನವಿ ಮುಂಬಯಿ ನಗರದ ಬೇಲಾಪುರ, ವಾಶಿ, ನೆರುಲ್, ಕೊಪರ್‌ ಖೈರ್ನಿ ಮತ್ತು ಐರೋಲಿ ವಿಭಾಗಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ಕಂಡುಬಂದಿದ್ದು, ಎಲ್ಲಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣಗಳು ನೆರೂಲ್‌ ಪರಿಸರದಲ್ಲಿ ಕಂಡುಬಂದಿದೆ. ಪರೀಕ್ಷೆಗಳನ್ನು ಹೆಚ್ಚಿಸುವುದರೊಂದಿಗೆ ತ್ವರಿತ ಚಿಕಿತ್ಸೆಗಳನ್ನು ಒದಗಿಸುವಂತೆ ಈಗಾಗಲೇ ವಿಶ್ವ ಆರೋಗ್ಯ ಸಂಸ್ಥೆಯು ಸೂಚಿಸಿದೆ.

ನಗರದಲ್ಲಿ 22ಕ್ಕೂ ಹೆಚ್ಚು ಸ್ಥಳಗ ಳಲ್ಲಿ ಪರೀಕ್ಷೆಗಳನ್ನು ನಡೆಸಲಾಗುತ್ತಿ ದ್ದು, ಪರೀಕ್ಷೆಗಳಿಗೆ ನಾಗರಿಕರು ಸಹಕರಿಸಬೇಕು. ಪ್ರಸ್ತುತ ಎಂಐಡಿಸಿಯಲ್ಲಿ ಯೂ ಹೆಚ್ಚಿನ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ಪುರಸಭೆ ಆಯುಕ್ತ ಅಭಿಜಿತ್‌ ಬಂಗಾರ್‌ ತಿಳಿಸಿದ್ದಾರೆ. ಇಲ್ಲಿಯ ತನಕ 1,58,890 ಆ್ಯಂಟಿಜೆನ್‌ ಪರೀಕ್ಷೆಗಳನ್ನು, 91,363 ಆರ್‌ಟಿಪಿಸಿಆರ್‌ ಪರೀಕ್ಷೆಗಳನ್ನು ನಡೆಸು ವುದರೊಂದಿಗೆ ಒಟ್ಟು 2,50,253 ನಾಗರಿಕರನ್ನು ಪರೀಕ್ಷಿಸಲಾಗಿದೆ.

ಪ್ರತಿನಿತ್ಯ 24 ಸಾವಿರ ಟೆಸ್ಟ್‌: ಬಿಎಂಸಿಗೆ ಸೂಚನೆ :

ಮುಂಬಯಿ, ಅ. 21: ಲಾಕ್‌ಡೌನ್‌ ಸಡಿಲಿಕೆ  ಮತ್ತು ಸಾಲು ಸಾಲು ಹಬ್ಬಗಳಿರುವುದರಿಂದ ಜನಸಂಚಾರ ಹೆಚ್ಚಾಗಿ, ಕೊರೊನಾ ಇನ್ನಷ್ಟು ಆತಂಕಕಾರಿಯಾಗಿ ಕಾಡುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಬಿಎಂಸಿ ಪ್ರತಿನಿತ್ಯ 24 ಸಾವಿರ  ಕೋವಿಡ್‌ ಟೆಸ್ಟ್‌ ನಡೆಸಬೇಕು ಎಂದು ಕೋವಿಡ್‌  ಟಾಸ್ಕ್ಫೋರ್ಸ್‌ ಮುಖ್ಯಸ್ಥ ಡಾ| ಸಂಜಯ್‌ ಓಕ್‌ ಪಾಲಿಕೆಗೆ ಸೂಚಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಓಕ್‌, ಕಳೆದ ಎರಡು ವಾರಗಳಿಂದ ಬಿಎಂಸಿ ಪ್ರತಿನಿತ್ಯ 13-15 ಸಾವಿರ ಪರೀಕ್ಷೆ ನಡೆಸುತ್ತಿದೆ. ಅತಿ ಕಡಿಮೆ ದರದಲ್ಲಿ ಟೆಸ್ಟ್‌ ನಡೆಸಲು ನಗರದ ವಿವಿಧ ಪ್ರದೇಶಗಳಲ್ಲಿ ವ್ಯವಸ್ಥೆ ಕಲ್ಪಿಸಬೇಕು. ಮುಂಬಯಿ ನಿತ್ಯ 20-24 ಸಾವಿರ ಕೋವಿಡ್‌ ಪರೀಕ್ಷೆಗಳನ್ನು ನಡೆಸಲೇಬೇಕಿದೆ ಎಂದು ಹೇಳಿದ್ದಾರೆ.

ಡ್ರೈವ್‌ – ಇನ್‌ ಟೆಸ್ಟಿಂಗ್‌ ಸೌಲಭ್ಯಗಳನ್ನು ಕಡ್ಡಾಯವಾಗಿ ಪೂರೈಸಲಾಗುತ್ತದೆ. ಇದಕ್ಕೆ ಇನ್ನಷ್ಟು ಸಹಾಯಧನವನ್ನೂ ನಾವು ನಿರೀಕ್ಷಿಸಿದ್ದೇವೆ. ರಾಜ್ಯ ಸರಕಾರ ಕೂಡ ಉಚಿತವಾಗಿ ಅಥವಾ ಕಡಿಮೆ ದರದಲ್ಲಿ ಮಾಸ್ಕ್ಗಳನ್ನು ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.

ಕಳೆದ ವಾರ ನಡೆದ ಬಿಎಂಸಿ ಅಧಿಕಾರಿಗಳ ಸಭೆಯಲ್ಲಿ ಕಮಿಷನರ್‌ ಪ್ರತಿನಿತ್ಯ 20 ಸಾವಿರ ಟೆಸ್ಟ್‌ನ ಟಾರ್ಗೆಟ್‌ ನೀಡಿದ್ದರು. ಫಿವರ್‌ ಕ್ಯಾಂಪ್‌, ಸಂಪರ್ಕ ಪತ್ತೆ, ತ್ವರಿತ ಪರೀಕ್ಷೆಗಳಿಗೆ ಕ್ರಮ ಕೈಗೊಳ್ಳಲು ಹಾಗೂ ಪ್ರತಿ ಅಧಿಕಾರಿಗಳೂ ಒಂದೊಂದು ಕಂಟೈನ್ಮೆಂಟ್‌ ವಲಯದ ಉಸ್ತುವಾರಿ ಹೊರಲು ಸೂಚಿಸಿದ್ದರು.

ಟಾಪ್ ನ್ಯೂಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

ಅಬುಧಾಬಿಯ ಹಿಂದೂ ಮಂದಿರ: ಅನುಪಯುಕ್ತ ವಸ್ತುಗಳಿಂದ ಆಕರ್ಷಕ ಕಲಾಕೃತಿಗಳ ಸೃಷ್ಟಿ

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಇಲ್ಲಿಗೆ ಹೋಗುವ ಮುನ್ನ ನೆನಪಿರಲಿ – ಇದು ಸಾವಿನ ಕಣಿವೆ!

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ಅಸಮಾಧಾನಗಳನ್ನು ಹತ್ತಿಕ್ಕುವುದು ಸಾಧ್ಯವೇ?

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ವಿಂಶತಿ ವೈಭವ: ಅಯೋಧ್ಯೆಯಲ್ಲಿ ಆಮಂತ್ರಣ ಪತ್ರ ಬಿಡುಗಡೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

Desi Swara: ಹಬ್ಬದ ವಾತಾವರಣದಲ್ಲಿ ರಂಗೇರಿದ ಆಡಳಿತ ಮಂಡಳಿಯ ಚುನಾವಣೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.