ನವಿಮುಂಬಯಿ ಅಂ. ವಿಮಾನ ನಿಲ್ದಾಣನಾಮಕರಣ ಸಮಿತಿಯಿಂದ ಪ್ರತಿಭಟನೆ
ವಿಮಾನ ನಿಲ್ದಾಣಕ್ಕೆ ಸಮಾಜವಾದಿ ನಾಯಕ ದಿಂಕರ್ ಬಾಲು ಪಾಟೀಲ್ ಹೆಸರಿಡಬೇಕೆಂದು ಪ್ರತಿಭಟನಕಾರರ ಒತ್ತಾಯ
Team Udayavani, Jun 25, 2021, 12:56 PM IST
ನವಿಮುಂಬಯಿ, ಜೂ. 24: ನಗರದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೆಸರಿಡುವ ಬಗ್ಗೆ ಭಾರೀ ಸಂಖ್ಯೆಯಲ್ಲಿ ಜನರು ಗುರುವಾರ ನವಿಮುಂಬಯಿಯಲ್ಲಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ನವಿಮುಂಬಯಿ ಪೊಲೀಸರು ಭಾರೀ ಭದ್ರತೆಯನ್ನು ನಿಯೋಜಿಸಿದ್ದರು. ನವಿಮುಂಬಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಾಮಕರಣ ಸಮಿತಿ ಅವರ ಆಶ್ರಯದಲ್ಲಿ ಈ ಪ್ರತಿಭಟನೆಯನ್ನು ಆಯೋಜಿಸಲಾಗಿತ್ತು.
ವಿವಿಧ ಪಕ್ಷಗಳ ಮುಖಂಡರು ಮತ್ತು ಕಾರ್ಯಕರ್ತರು ಸಮಿತಿಯ ಧ್ವಜದ ಅಡಿಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದು, ಯಾವುದೇ ರಾಜಕೀಯ ಧ್ವಜವನ್ನು ಬಳಸಿರಲಿಲ್ಲ. ನವಿಮುಂಬಯಿ ವಿಮಾನ ನಿಲ್ದಾಣಕ್ಕೆ ಸಮಾಜವಾದಿ ನಾಯಕ ದಿಂಕರ್ ಬಾಲು ಪಾಟೀಲ್ ಹೆಸರಿಡಬೇಕೆಂದು ಪ್ರತಿಭಟನಕಾರರು ಒತ್ತಾಯಿಸುತ್ತಿದ್ದರೆ, ಶಿವಸೇನೆ ನೇತೃತ್ವದ ಎಂವಿಎ ಸರಕಾರ ಈ ಹಿಂದೆ ವಿಮಾನ ನಿಲ್ದಾಣಕ್ಕೆ ತಮ್ಮ ಸಂಸ್ಥಾಪಕ ಬಾಲಾಸಾಹೇಬ್ ಠಾಕ್ರೆ ಹೆಸರಿಡಲು ಉದ್ದೇಶಿಸಿದೆ ಎಂದು ಘೋಷಿಸಿತ್ತು.
ಸ್ಥಳೀಯ ಬಿಜೆಪಿ ಶಾಸಕ ಪ್ರಶಾಂತ್ ಠಾಕೂರ್ ಮಾತನಾಡಿ, ಅಭಿವೃದ್ಧಿ ಯೋಜನೆಗಳಿಗಾಗಿ ತಮ್ಮ ಭೂಮಿಯನ್ನು ಸ್ವಾಧೀನಪಡಿಸಿ ಕೊಳ್ಳತ್ತಿರುವ ರೈತರಿಗೆ ನ್ಯಾಯಯುತ ಪರಿಹಾರ ದೊರಕಿಸಿಕೊಡುವಲ್ಲಿ ಡಿ.ಬಿ. ಪಾಟೀಲ್ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ರಾಜಕೀಯ ಜೀವನ ಮತ್ತು ಇತರ ಹಿಂದುಳಿದ ವರ್ಗಗಳ ಹಕ್ಕುಗಳ ಹೋರಾಟದಲ್ಲಿ ಅವರ ಪಾತ್ರ (ಒಬಿಸಿಗಳು) ಪ್ರಮುಖವಾಗಿರುವುದರಿಂದ ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಬೇಕು ಎಂದು ಆಗ್ರಹಿಸಿದರು.
ಇಂದಿನ ಪ್ರತಿಭಟನೆಯು ಶಾಂತಿಯುತ ವಾಗಿದೆ. ಸರಕಾರ ನವಿಮುಂಬಯಿಯ ನಾಗರಿಕರ ಆಗ್ರಹಕ್ಕೆ ಮಣಿಯದಿದ್ದಲ್ಲಿ ಭವಿಷ್ಯದಲ್ಲಿ ಉಗ್ರ ಪ್ರತಿಭಟನೆ ನಡೆಯ ಲಿದೆ ಎಂದು ಅವರು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ