ನವೋದಯ ಶಿಕ್ಷಣ ಸಂಕುಲ: ವಿಚಾರ ಮಂಥನ, ಸಾಂಸ್ಕೃತಿಕ ಕಾರ್ಯಕ್ರಮ


Team Udayavani, Feb 28, 2018, 4:20 PM IST

2702mum01.jpg

ಮುಂಬಯಿ: ನವೋದಯ ಕನ್ನಡ ಸೇವಾ ಸಂಘ ಥಾಣೆ ಇವರ ಸಂಚಾಲಕತ್ವದಲ್ಲಿರುವ ನವೋದಯ ಇಂಗ್ಲೀಷ್‌ ಹೈಸ್ಕೂಲಿನ ಪ್ರಾಥಮಿಕ ವಿಭಾಗದ ಕನ್ನಡ ತರಗತಿಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಲಿನ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ವಿಜೇತರಿಗೆ ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ವಿಚಾರ ಮಂಥನ ಕಾರ್ಯಕ್ರಮವು ಫೆ. 17 ರಂದು ಸಂಸ್ಥೆಯ ಜೂನಿಯರ್‌ ಕಾಲೇಜಿನ ಸಭಾಗೃಹದಲ್ಲಿ ನಡೆಯಿತು.

ಕಾರ್ಯಕ್ರಮದ  ಅಂಗವಾಗಿ  ಸದೃಢ ಸಮಾಜ ನಿರ್ಮಾಣಕ್ಕೆ ನೈತಿಕ ಶಿಕ್ಷಣದ ಅಗತ್ಯ. ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದ ಕವಿ, ಬರಹಗಾರ, ಸಂಘಟಕ ವಿಶ್ವನಾಥ್‌ ಶೆಟ್ಟಿ ಪೇತ್ರಿ ಇವರು,  ಉತ್ತಮ ಸಮಾಜದ ನಿರ್ಮಾಣದಲ್ಲಿ ನೈತಿಕ ಶಿಕ್ಷಣದ ಅಗತ್ಯತೆಯ ಬಗ್ಗೆ ತಿಳಿಸುವುದರ ಜೊತೆಗೆ ಬೆಳೆಯ ಸಿರಿ ಮೊಳಕೆಯಲ್ಲಿ ಎಂಬ ನಾಣ್ನುಡಿಯಂತೆ ಮಕ್ಕಳಲ್ಲಿ ಉತ್ತಮ ಗುಣಗಳಾದಂತಹ ಶಿಸ್ತು, ನಿಷ್ಠೆ, ಗೌರವ, ಸಹನೆ ಹಾಗೂ ಆಧ್ಯಾತ್ಮಿಕತೆಯನ್ನು ಅಳವಡಿಸುವುದು ಬಾಲ್ಯದಲ್ಲಿಯೇ ಸಾಧ್ಯ.  ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸುವಲ್ಲಿ ಕುಟುಂಬದ ಪಾತ್ರ ಮುಖ್ಯವಾಗಿದೆ ಎಂದರು.

ಪಾಲಕರು ಸದಾ ತಮ್ಮ ಮಕ್ಕಳಿಗೆ ಕನ್ನಡ ಭಾಷೆ ಹಾಗೂ ನಮ್ಮ ಪರಂಪರೆಯ ಬಗ್ಗೆ ಹೆಚ್ಚು ತಿಳಿಸಿಕೊಡಬೇಕು.  ನೈತಿಕ ಶಿಕ್ಷಣ ನೀಡುವಲ್ಲಿ ಪಾಲಕರ ಮತ್ತು ಶಿಕ್ಷರ ಜವಾಬ್ದಾರಿ ಸಮಾನವಾಗಿದೆ.  ನೈತಿಕ ಶಿಕ್ಷಣದೊಂದಿಗೆ ಬೆಳೆದ ಮಕ್ಕಳು ಸದೃಢ ಭಾರತದ  ನಿರ್ಮಾಣದಲ್ಲಿ ಮುಖ್ಯ ಪಾತ್ರ ವಹಿಸುವುದರಲ್ಲಿ ಸಂಶಯವೇ ಇಲ್ಲ ಎಂದು ತಿಳಿಸಿದರು.

ಅತಿಥಿ ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.  ಕಾರ್ಯಕ್ರಮವು ಪ್ರಾರ್ಥನೆ ಹಾಗೂ ಸ್ವಾಗತಗೀತೆಯೊಂದಿಗೆ ಪ್ರಾರಂಭಗೊಂಡಿತು.  ನವೋದಯ ಕನ್ನಡ ಸೇವಾ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ  ದಯಾನಂದ್‌ ಎಸ್‌. ಶೆಟ್ಟಿ ಇವರು ಪ್ರಾಸ್ತಾವಿಕವಾಗಿ ಮಾತನಾಡಿದರು.  ಕಾರ್ಯಕಾರಿ ಸಮಿತಿಯ ಸದಸ್ಯರಾದ   ಗೋಪಾಲ ಎ. ಸೇರಿಗಾರ ಮತ್ತು   ರವಿ ಹೆಗ್ಡೆ ಇವರು ಅತಿಥಿಗಳನ್ನು ಪರಿಚಯಿಸಿದರು.  ಸಂಘದ ಅಧ್ಯಕ್ಷರಾದ  ಜಯ ಕೆ. ಶೆಟ್ಟಿ ಅತಿಥಿಗಳನ್ನು ಸ್ಮರಣಿಕೆಯನ್ನಿತ್ತು ಗೌರವಿಸಿದರು.  

ಶಾಲಾ ಶಿಕ್ಷಕಿ ಶ್ರುತಿ ಎನ್‌. ಇವರು ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಹಾಗೂ ವಾರ್ಷಿಕ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆದು ಉತ್ತೀರ್ಣರಾದ ವಿದ್ಯಾರ್ಥಿಗಳ ಯಾದಿಯನ್ನು ಓದಿದರು.  ಈ ಸಂದರ್ಭದಲ್ಲಿ ಕಳೆದ ನಾಲ್ಕು ವರ್ಷಗಳಿಂದ ಕನ್ನಡ ಕಲಿತು ಅತ್ಯುತ್ತಮ ವಿದ್ಯಾರ್ಥಿಗಳೆಂದು ಗುರುತಿಸಲ್ಪಟ್ಟ ಕು| ಭಾವಿಕಾ ಡಿ. ಹೆಗ್ಡೆ ಹಾಗೂ ಕು| ಅಶ್ವಿ‌ತ್‌ ಎ. ಶೆಟ್ಟಿ ಇವರನ್ನು ಸ್ಮರಣಿಕೆಯನ್ನಿತ್ತು ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ  ಗೌರವ ಅತಿಥಿಯಾಗಿ ಆಗಮಿಸಿದ ಉದ್ಯಮಿ  ಶೇಖರ ಶೆಟ್ಟಿ ಮಾತನಾಡಿ, ಮಕ್ಕಳ ಬೆಳವಣಿಗೆಯಲ್ಲಿ ಶಿಕ್ಷಕರಷ್ಟೇ ಪಾಲು ಪಾಲಕರದ್ದೂ ಇರುವುದರಿಂದ, ಮನೆಯಲ್ಲಿಯೂ ಒಳ್ಳೆಯ ವಾತಾವರಣವನ್ನು ಸೃಷ್ಟಿಸಿ ಕೊಡಬೇಕಾದುದು ಪಾಲಕರ ಆದ್ಯ ಕರ್ತವ್ಯ ಎಂದರು.

ನಕಾರಾತ್ಮಕವಾದುದನ್ನು ಸಕಾರಾತ್ಮಕವಾಗಿಸಿ 
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಸಂಘದ ಅಧ್ಯಕ್ಷರಾದ ಜಯ ಕೆ. ಶೆಟ್ಟಿ ಅವರು, ಮಕ್ಕಳಿಗೆ ಹಾಗೂ ಪಾಲಕರಿಗೆ ಹಲವು ಹಿತನುಡಿಗಳನ್ನು ತಿಳಿಸುವುದರ ಜೊತೆಗೆ ಮಕ್ಕಳು ಕೆಲವು ನಕಾರಾತ್ಮಕ ವಿಚಾರಗಳನ್ನು ಹೇಗೆ ಸಕಾರಾತ್ಮಕವಾಗಿ ಪರಿವರ್ತಿಸಬೇಕು.  ಆಂಗ್ಲ ಭಾಷೆಯ ನಕಾರಾತ್ಮಕ ಶಬ್ದಗಳ ಅರ್ಥವನ್ನು ಯಾವ ರೀತಿಯಾಗಿ ಸಕಾರಾತ್ಮಕವಾಗಿ ಪರಿವರ್ತಿಸುವುದರ  ಮೂಲಕ ಮಕ್ಕಳು ಯಶಸ್ಸನ್ನು ಪಡೆಯಬಹುದು ಎಂದು ಅಭಿಪ್ರಾಯಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಮಕ್ಕಳಿಂದ ಭಾವಗೀತೆ, ಸಮೂಹಗೀತೆ, ನೃತ್ಯ ಹಾಗೂ ಅಕ್ಷರ ದಾಸೋಹ ಎಂಬ ಕಿರುನಾಟಕ ಪ್ರದರ್ಶನಗೊಂಡಿತು. ಕು| ಅಶ್ವಿ‌ತ್‌ ಎ. ಶೆಟ್ಟಿ ಕಾರ್ಯಕ್ರಮದ ನಿರೂಪಣೆಗೈದರು. ಕು| ಭಾವಿಕಾ ಹೆಗ್ಡೆ ಸ್ವಾಗತಿಸಿದರು.  

ಕು| ಸಾನಿಕಾ ಶೆಟ್ಟಿ ವಂದಿಸಿದರು. ನವೋದಯ ಕನ್ನಡ ಸೇವಾ ಸಂಘದ ಕಾರ್ಯಕಾರಿ ಸಮಿತಿಯ ಸದಸ್ಯರು, ಮಾಜಿ ಪದಾಧಿಕಾರಿಗಳು, ಪ್ರಾಥಮಿಕ, ಮಾಧ್ಯಮಿಕ ಹಾಗೂ ಕಾಲೇಜು ವಿಭಾಗದ ಮುಖ್ಯೋಪಾಧ್ಯಾಯನಿಯರು, ಉಪ ಮುಖ್ಯೋಪಾಧ್ಯಾಯನಿ, ಶಿಕ್ಷಕ ವೃಂದ, ಪಾಲಕ -ಪೋಷಕರ ಉಪಸ್ಥಿತಿಕೆಯಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಟಾಪ್ ನ್ಯೂಸ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

10-fusion

UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.