ವಾಲ್ಕೇಶ್ವರದ ಕವಳೆ ಮಠ ಶ್ರೀ ಶಾಂತಾದುರ್ಗಾ ದೇವಸ್ಥಾನ: ನವರಾತ್ರಿ ಉತ್ಸವ
Team Udayavani, Oct 13, 2019, 4:21 PM IST
ಮುಂಬಯಿ, ಅ. 12 : ದಕ್ಷಿಣ ಮುಂಬಯಿಯ ಬಾಣಗಂಗಾ ಪರಿಸರದ ವಾಲ್ಕೇಶ್ವರದ ಕವಳೆ ಮಠ ಶ್ರೀ ಶಾಂತಾದುರ್ಗಾ ದೇವಸ್ಥಾನದಲ್ಲಿ ಶ್ರೀ ಸಂಸ್ಥಾನ ಗೌಡ ಪಾದಾಚಾರ್ಯ ಕೈವಲ್ಯ ಮಠಾಧೀಶ ಶ್ರೀಮದ್ ಶಿವಾನಂದ ಸರಸ್ವತಿ ಶ್ರೀಪಾದಂಗಳವರ ದಿವ್ಯ ಉಪಸ್ಥಿತಿಯಲ್ಲಿ ನವರಾತ್ರಿ ಸುಸಂದರ್ಭದಲ್ಲಿ ಅ. 2ರಂದು ಲಲಿತಾ ಮಹಾಪಂಚಮಿಯು ವಿವಿಧ ಧಾರ್ಮಿಕ ಕಾರ್ಯಕ್ರ ಮಗಳೊಂದಿಗೆ ಜರಗಿತು.
ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಮುಂಜಾನೆಯಿಂದ ನವಚಂಡಿಕಾ ಹವನ, ಮಧ್ಯಾಹ್ನ ಗುರುಹಿರಿಯರ ಸಮಕ್ಷಮದಲ್ಲಿ ಪೂರ್ಣಾಹುತಿ, ಪರಮಪೂಜ್ಯರಿಂದ ಮಠದ ಆರಾಧ್ಯ ದೇವರಾದ ಭವಾನಿ ಶಂಕರ ದೇವರಿಗೆ ಪೂಜೆ, ಆರಾಧನೆ, ಮಹಾಮಂಗಳಾರತಿಗೈದರು. ಬಳಿಕ ಪ್ರಸಾದ ವಿತರಣೆ, ಶಾಂತಾ ದುರ್ಗಾದೇವಿಯ ಪೂಜೆ ನೆರವೇರಿತು.
ಸಮಾರಾಧನೆಯ ಬಳಿಕ ಸಂಜೆ ಅಂತಾರಾಷ್ಟ್ರೀಯ ಖ್ಯಾತಿಯ ಡಾ| ಪ್ರೇಮಾನಂದ ರಮಾನಿ ಅವರ ನೇತೃತ್ವದಲ್ಲಿ ಪಲ್ಲಕ್ಕಿ ಉತ್ಸವಕ್ಕೆ ಶ್ರೀಗಳು ಆರತಿಗೈದು ಚಾಲನೆ ನೀಡಿದರು. ಬಾಣಗಂಗಾ ಪರಿಸರದಲ್ಲಿ ಭವ್ಯ ಮೆರವಣಿಗೆಯ ಮೂಲಕ ಪಲ್ಲಕ್ಕಿ ಉತ್ಸವ ಜರಗಿತು. ಬಳಿಕ ಪ್ರಸಾದ ವಿತರಣೆ ನಡೆಯಿತು.
ದಿನವಿಡೀ ಸಾವಿರಾರು ಭಕ್ತಾದಿಗಳು ಆಗಮಿಸಿ ದೇವರ ದರ್ಶನಗೈದು ಪ್ರಸಾದ ಸ್ವೀಕರಿಸಿದರು. ರಾಜಾಪುರ ಸಾರಸ್ವತ ಬ್ರಾಹ್ಮಣ ಸಂಘದ ವತಿಯಿಂದ ಡಹಾಣೂ, ಪಾಲ್ಘರ್, ಪೂಣೆಯಿಂದ ಶಿಷ್ಯವರ್ಗದವರು ಭೇಟಿ ನೀಡಿ ಗುರುಗಳಿಗೆ ಆರತಿಗೈದು ಗುರುಗಳಿಂದ ಫಲಪುಷ್ಪ ಮಂತ್ರಾಕ್ಷತೆಯನ್ನು ಪಡೆದರು. ಕಾರ್ಯಕ್ರಮದಲ್ಲಿ ಮಠದ ಕಾರ್ಯಾಧ್ಯಕ್ಷ ಭೂಷಣ್ ಜಾಕ್, ಕಾರ್ಯದರ್ಶಿ ಪ್ರಮೋದ್ ಗಾಯೊಡೆ, ರಾಜೀವ್ ದಾರ್, ಚಿಂತಾಮಣಿ ನಾಡಕರ್ಣಿ, ಸಮಿತಿಯ ಸದಸ್ಯ ಕಮಲಾಕ್ಷ ಸರಾಫ್, ಸುಧೀರ್ ಫಡ್ನವೀಸ್, ಜಯಂತ್ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ