ಕಾರಣಿಕ ಕ್ಷೇತ್ರ ನೆರೂಲ್‌ ಶ್ರೀ ಶನೀಶ್ವರ ಮಂದಿರ: ಅದ್ದೂರಿ ರಥೋತ್ಸವ


Team Udayavani, Feb 11, 2022, 11:08 AM IST

ಕಾರಣಿಕ ಕ್ಷೇತ್ರ ನೆರೂಲ್‌ ಶ್ರೀ ಶನೀಶ್ವರ ಮಂದಿರ: ಅದ್ದೂರಿ ರಥೋತ್ಸವ

ನವಿಮುಂಬಯಿ: ನೆರೂಲ್‌ ಸೆಕ್ಟರ್‌ – 11ರಲ್ಲಿರುವ ಕಾರಣಿಕ ಕ್ಷೇತ್ರ ಶ್ರೀ ಶನೀಶ್ವರ ಮಂದಿರ ನೆರೂಲ್‌ ಇದರ ರಥೋತ್ಸವ ಹಾಗೂ 30ನೇ ವಾರ್ಷಿಕೋತ್ಸವ ಸಂಭ್ರಮವು ಫೆ. 7ರಂದು ಪ್ರಾರಂಭ ಗೊಂಡಿದ್ದು, ಫೆ. 11ರ ವರೆಗೆ ವಿವಿಧ ಧಾರ್ಮಿಕ, ಸಾಮಾಜಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿ ಯಾಗಿ ಜರಗಲಿದೆ.

ಶ್ರೀ ಮಹಾಗಣಪತಿ, ಶ್ರೀ ಹನುಮಾನ್‌, ಶ್ರೀ ಶನಿದೇವರ ಮಂದಿರದಲ್ಲಿ ಧಾರ್ಮಿಕ ಕಾರ್ಯ ಕ್ರಮವಾಗಿ ಮಂದಿರದ ಪ್ರಧಾನ ಅರ್ಚಕ ಸೂರಜ್‌ ಭಟ್‌ ಮತ್ತು ಕಳತ್ತೂರು ಉದಯ ತಂತ್ರಿಯವರ ಪೌರೋಹಿತ್ಯದಲ್ಲಿ ಫೆ. 10ರಂದು ಮಂದಿರದ ರಥೋತ್ಸವ ನಡೆ ಯಿತು. ಮುಂಜಾನೆ 6ರಿಂದ ಕವಾಟೋದ್ಘಾಟನೆ, ನವಕ ಪ್ರಧಾನ ಹವನ, ಬೆಳಗ್ಗೆ 11ರಿಂದ ಮಹಾಪೂಜೆ, ಬಲಿ, ರಥಾರೋಹಣ, ಪಲ್ಲಪೂಜೆ, ಮಹಾಪೂಜೆ, ಅನ್ನಸಂತರ್ಪಣೆ ನಡೆಯಿತು. ತುಳು – ಕನ್ನಡಿಗರು ಸಹಿತ ನೂರಾರು ಭಕ್ತರು ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ಪ್ರಸಾದ ಸ್ವೀಕರಿಸಿ ಶನಿದೇವರ ಕೃಪೆಗೆ ಪಾತ್ರರಾದರು. ಸಂಜೆ 6ರಿಂದ ಬಲಿ ಉತ್ಸವ, ಅವಭೃಥ ಸ್ನಾನ, ರಾತ್ರಿ 8ರಿಂದ ಮಂಗಳಾರತಿ, ಅನ್ನಪ್ರಸಾದ ವಿತರಣೆ ನೆರವೇರಿತು.

ಈ ಸಂದರ್ಭದಲ್ಲಿ  ಶ್ರೀ ಶನೇಶ್ವರ ಮಂದಿರದ ಕಾರ್ಯಾಧ್ಯಕ್ಷ ಸಂತೋಷ್‌ ಡಿ. ಶೆಟ್ಟಿ, ಅಧ್ಯಕ್ಷ ಧರ್ಮದರ್ಶಿ ರಮೇಶ್‌ ಎಂ. ಪೂಜಾರಿ, ಉಪಾಧ್ಯಕ್ಷ ಗೋಪಾಲ ವೈ. ಶೆಟ್ಟಿ, ಕಾರ್ಯದರ್ಶಿ ವಿ. ಕೆ. ಸುವರ್ಣ, ಜತೆ ಕಾರ್ಯದರ್ಶಿ ಜಯಕರ ಬಿ. ಪೂಜಾರಿ, ಕೋಶಾಧಿಕಾರಿ ವಿಶ್ವನಾಥ್‌ ಕೆ. ಪೂಜಾರಿ, ಜತೆ ಕೋಶಾಧಿಕಾರಿ ಅದ್ಯಪಾಡಿಗುತ್ತು ಕರುಣಾಕರ್‌ ಎಸ್‌. ಆಳ್ವ, ವಿಶ್ವಸ್ತರಾದ ಎನ್‌. ಡಿ. ಶೆಣೈ, ಪುನೀತ್‌ ಕುಮಾರ್‌ ಆರ್‌. ಶೆಟ್ಟಿ, ಪ್ರಭಾಕರ್‌ ಎಸ್‌. ಹೆಗ್ಡೆ, ಅನಿಲ್‌ ಕುಮಾರ್‌ ಹೆಗ್ಡೆ, ಕೃಷ್ಣ ಎಂ. ಪೂಜಾರಿ, ದಾಮೋದರ್‌ ಶೆಟ್ಟಿ, ದಯಾನಂದ್‌ ಶೆಟ್ಟಿ, ತಾರಾನಾಥ ಶೆಟ್ಟಿ, ಸಲಹೆಗಾರ ಸಮಿತಿಯ ಪ್ರಕಾಶ್‌ ಭಂಡಾರಿ, ಕೆ. ಡಿ. ಶೆಟ್ಟಿ, ಸದಾನಂದ ಡಿ. ಶೆಟ್ಟಿ, ಎನ್‌. ಕೆ. ಪೂಜಾರಿ, ಜಯರಾಮ್‌ ಪೂಜಾರಿ, ಕೃಷ್ಣ ಆರ್‌. ಕೋಟ್ಯಾನ್‌, ಪ್ರಧಾನ ಅರ್ಚಕರಾದ ಸೂರಜ್‌ ಭಟ್ಟ ಹಾಗೂ ವೃಂದ, ಭಜನ ಮಂಡಳಿ ಅಧ್ಯಕ್ಷ ಜಯರಾಮ್‌ ಪೂಜಾರಿ, ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಸ್ವರ್ಣಲತಾ ಡಿ. ಶೆಟ್ಟಿ, ಪೂಜಾ ಸಮಿತಿ, ಮಹಿಳಾ ವಿಭಾಗ ಹಾಗೂ ಆಡಳಿತ ಸಮಿ ತಿಯ ಸದಸ್ಯರು, ವಿವಿಧ ನಗರ, ಉಪನಗರಗಳ ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಉಪಸ್ಥಿತರಿದ್ದರು.

ಫೆ. 7ರಂದು ಬೆಳಗ್ಗೆ 9ರಿಂದ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ಸ್ವಸ್ತಿ ಪುಣ್ಯಾಹ ವಾಚನ, ದ್ವಾದಶ ನಾಳಿಕೇರ ಗಣಪತಿಯಾಗ, ಮುಖ್ಯಪ್ರಾಣ ದೇವರಿಗೆ ನವಕ ಪ್ರಧಾನ ಹವನ, ಅಪರಾಹ್ನ 2ರಿಂದ ಸಂಪೂರ್ಣ ಶ್ರೀ ಶನೀಶ್ವರ ಮಹಾತ್ಮೆ ಗ್ರಂಥ ಪಾರಾಯಣ, ರಾತ್ರಿ 9ರಿಂದ ಮಹಾಮಂಗಳಾರತಿ ಹಾಗೂ ಪ್ರಸಾದ ವಿತರಣೆಯನ್ನು ಆಯೋಜಿಸಲಾಗಿತ್ತು.

ಫೆ. 8ರಂದು ಬೆಳಗ್ಗೆ 9ರಿಂದ ಶ್ರೀ ಮಹಾಗಣಪತಿ ದೇವರಿಗೆ ನವಕ ಪ್ರಧಾನ ಹವನ, ಶ್ರೀ ಶನೀಶ್ವರ ದೇವರಿಗೆ ನವಕ ಪ್ರದಾನ ಹವನ, ರಾತ್ರಿ 8ರಿಂದ ಶ್ರೀ ಮಹಾಗಣಪತಿ ಹಾಗೂ ಶ್ರೀ ವೀರಾಂಜನೇಯ  ಸ್ವಾಮಿಗೆ ರಂಗಪೂಜೆ, ಬಲಿ ಉತ್ಸವ ನಡೆಯಿತು. ಫೆ. 9ರಂದು ಬೆಳಗ್ಗೆ 9ರಿಂದ ಶ್ರೀ ಮುಖ್ಯಪ್ರಾಣ ಸ್ವಾಮಿಗೆ ವಾಯುಸ್ತುತಿ ಪುನಃಶ್ಚರಣ ಹವನ, ಸಗ್ರಹಮಕ ಶನಿ ಶಾಂತಿ ಹವನ, ಅಪರಾಹ್ನ 4ರಿಂದ ಶ್ರೀ ಸತ್ಯನಾರಾಯಣ ಮಹಾಪೂಜೆ, ರಾತ್ರಿ 8ರಿಂದ ಬಲಿ ಉತ್ಸವ, ಕವಾಟ ಬಂಧನ ಜರಗಿತು.  ಫೆ. 11ರಂದು ಬೆಳಗ್ಗೆ 9ರಿಂದ ನವಕ ಪ್ರಧಾನ ಹವನ, ಸಂಪ್ರೋಕ್ಷಣೆ, ಮಂತ್ರಾಕ್ಷತೆ, ತೀರ್ಥ ಪ್ರಸಾದ ವಿತರಣೆ ಜರಗಲಿದೆ.

ಚಿತ್ರ-ವರದಿ: ಸುಭಾಷ್‌ ಶಿರಿಯ

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.