- Sunday 08 Dec 2019
ಗುರುನಾರಾಯಣ ರಾತ್ರಿ ಶಾಲಾ ಹಳೆ ವಿದ್ಯಾರ್ಥಿ ಸಂಘದ ನೂತನ ಕಚೇರಿ ಲೋಕಾರ್ಪಣೆ
Team Udayavani, Jul 12, 2019, 3:58 PM IST
ಡೊಂಬಿವಲಿ: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿಗಳ ತಣ್ತೀವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಜೀವನ ಸಾರ್ಥಕವಾಗಬಹುದು. ಶಿಕ್ಷಣದಿಂದ ವಂಚಿತರಾದ ಕಡು ಬಡತನದಲ್ಲಿ ಇರುವವರನ್ನು ಹುಡುಕಿ ಜಾತಿ-ಮತ ಭೇದವಿಲ್ಲದೆ ಸಂಘದ ವತಿಯಿಂದ ಅವರಿಗೆ ಸಹಕಾರ ನೀಡಬೇಕು. ನಮ್ಮ ಸಂಘದ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ನಾವು ತೆಗೆದುಕೊಂಡ ನಿರ್ಧಾರಗಳನ್ನು ಆದಷ್ಟು ಬೇಗನೆ ಕಾರ್ಯರೂಪಕ್ಕೆ ತರುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಗುರುನಾರಾಯಣ ರಾತ್ರಿಶಾಲಾ ಹಳೆ ವಿದ್ಯಾರ್ಥಿಗಳ ಸಂಘದ ನಿಕಟಪೂರ್ವ ಅಧ್ಯಕ್ಷ ಟಿ. ಆರ್. ಶೆಟ್ಟಿ ನುಡಿದರು.
ಅವರು ಇತ್ತೀಚೆಗೆ ಗುರುನಾರಾಯಣ ರಾತ್ರಿಶಾಲೆಯ ಹಳೆವಿದ್ಯಾರ್ಥಿ ಸಂಘದ ನೂತನ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸಂಘ ಫೋರ್ಟ್ ಪರಿಸರದಲ್ಲಿ ಶಾಲೆಯನ್ನು ನಡೆಸುತ್ತಿದ್ದ ಸಂದರ್ಭದಲ್ಲಿ ಅದರ ಅಭಿವೃದ್ಧಿಗೆ ದುಡಿದಿರುವುದು ಸ್ಮರಣೀ ಯವಾಗಿದೆ. ಆನಂತರ ಕೂಡಾ ಬಿಲ್ಲವರ ಅಸೋಸಿಯೇಶನ್ನ ಸಹಕಾರದಿಂದ ನಮ್ಮ ಕೈಲಾದ ಸೇವೆಯನ್ನು ಆ ಶಾಲೆಗೆ ನೀಡುತ್ತಾ ಬಂದಿದ್ದೇವೆ. ಎಲ್ಲರೂ ಒಗ್ಗಟ್ಟಿನಿಂದ ಒಂದೇ ತಾಯಿಯ ಮಕ್ಕಳಂತೆ ಸಂಘದ ಏಳ್ಗೆಗಾಗಿ ಶ್ರಮಿಸೋಣ ಎಂದು ನುಡಿದು ಎಲ್ಲರಿಗೂ ಶುಭಹಾರೈಸಿದರು.
ಗುರುನಾರಾಯಣ ರಾತ್ರಿಶಾಲಾ ಹಳೆ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ರವಿ ಎ. ಬಂಗೇರ ಅವರು ಮಾತನಾಡಿ, ಬಹು ಕಷ್ಟದಿಂದ ಈ ಸಂಘವನ್ನು ಸ್ಥಾಪಿಸಿ ಅದನ್ನು ಉತ್ತಮ ರೀತಿಯಿಂದ ನಡೆಸಿಕೊಂಡು ಈ ಮಟ್ಟಕ್ಕೆ ಬೆಳೆಸಲಾಗಿದೆ. ನಮ್ಮ ಸುವರ್ಣ ಮಹೋತ್ಸವ ಸಂದರ್ಭದಲ್ಲಿ ತೆಗೆದು ಕೊಂಡ ಮಹತ್ತರ ನಿರ್ಣಯಗಳನ್ನು ನಾವು ಕಾರ್ಯರೂಪಕ್ಕೆ ತರಲು ಸಿದ್ಧತೆ ನಡೆಸಿದ್ದೇವೆ. ಎಲ್ಲಾ ಹಳೆವಿದ್ಯಾರ್ಥಿಗಳ ಸಹಕಾರಕ್ಕೆ ಕೃತಜ್ಞತೆಗಳು. ಭವಿಷ್ಯದಲ್ಲೂ ಎಲ್ಲರ ಸಹಕಾರ, ಪ್ರೋತ್ಸಾಹ ಸದಾಯಿರಲಿ ಎಂದರು.
ಧಾರ್ಮಿಕ ಕಾರ್ಯಕ್ರಮವಾಗಿ ಬೆಳಗ್ಗೆ ಸಂಘದ ನೂತನ ಕಚೇರಿಯಲ್ಲಿ ಗಣ ಹೋಮ ಇನ್ನಿತರ ಪೂಜಾ ಕೈಂಕರ್ಯಗಳು ಜರಗಿತು. ಪೂಜೆಯ ವ್ರತವನ್ನು ಸಂಘದ ಅಧ್ಯಕ್ಷ ರವಿ ಎ. ಬಂಗೇರ ಮತ್ತು ಪುಷ್ಪಾ ಆರ್. ಬಂಗೇರ ದಂಪತಿ ನೆರವೇರಿಸಿದರು. ಸಂಘದ ನಿಕಟಪೂರ್ವ ಅಧ್ಯಕ್ಷ ಟಿ. ಆರ್. ಶೆಟ್ಟಿ ಅವರು ಬ್ರಹ್ಮಶ್ರೀ ನಾರಾಯಣ ಗುರುದೇವರಿಗೆ ಪ್ರಾರ್ಥನೆ ಸಲ್ಲಿಸಿ ರಿಬ್ಬನ್ ಕತ್ತರಿಸಿ ನೂತನ ಕಚೇರಿಯನ್ನು ಉದ್ಘಾಟಿಸಿದರು.
ವಾರ್ಷಿಕ ಗುರುಪೂಜೆಯನ್ನು ಪೂರ್ವಾಹ್ನ 10 ಕ್ಕೆ ಡೊಂಬಿವಲಿ ಪೂರ್ವದ ಪೂರ್ಣಿಮಾ ಸಭಾಗೃಹದಲ್ಲಿ ಪುರೋಹಿತ ಪ್ರಕಾಶ್ ಭಟ್ ಕಾನಂಗಿ ಅವರ ಪೌರೋಹಿತ್ಯದಲ್ಲಿ ನಡೆಸಲಾಯಿತು. ಪೂಜಾ ವ್ರತವನ್ನು ಸಂಘದ ಉಪಾಧ್ಯಕ್ಷ ಶಿವರಾಮ ಎನ್. ಶೆಟ್ಟಿ ಮತ್ತು ಸರೋಜಾ ಎಸ್. ಶೆಟ್ಟಿ ಅವರು ನೆರವೇರಿಸಿದರು. ಇದೇ ಸಂದರ್ಭದಲ್ಲಿ ನಡೆದ ಭಜನಾ ಕಾರ್ಯಕ್ರಮದಲ್ಲಿ ತುಳು ವೆಲ್ಫೆàರ್ ಅಸೋಸಿಯೇಶನ್ ಡೊಂಬಿವಲಿ ಇದರ ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ, ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರಿ ಉತ್ಸವ ಮಂಡಳಿ ಹಾಗೂ ಮುಂಬ್ರಾ ಮಿತ್ರ ಭಜನಾ ಮಂಡಳಿಯಿಂದ ಭಜನೆ ನಡೆಯಿತು. ಮಧ್ಯಾಹ್ನ 1.30ರಿಂದ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿ ಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಹಿತೈಷಿಗಳು, ಮಾಜಿ ಶಿಕ್ಷಕರಾದ ಜಯಕರ ಪೂಜಾರಿ, ಎಂ. ಆರ್. ಹೊಸಕೋಟೆ, ಮಾಜಿ ಅಧ್ಯಕ್ಷ ಆರ್. ಎಸ್. ಕೋಟ್ಯಾನ್, ಕೃಷ್ಣ ಬಿ. ಪೂಜಾರಿ ಹಾಗೂ ಗಣ್ಯರು ಉಪಸ್ಥಿತರಿದ್ದರು. ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ವಸಂತ ಎನ್. ಸುವರ್ಣ ಅವರು ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.
ಈ ವಿಭಾಗದಿಂದ ಇನ್ನಷ್ಟು
-
ಮುಂಬಯಿ, ಡಿ. 6: ಮನುಷ್ಯನಿಗೆ ಜೀವನದಲ್ಲಿ ಬಡತನ, ಶ್ರೀಮಂತಿಕೆ ಶಾಶ್ವತವಲ್ಲ. ಸತ್ಯ, ಧರ್ಮದಲ್ಲಿ ನಡೆದರೆ ಆತನ ದಾರಿ ಸುಗಮವಾಗಿ ಸಾಗುತ್ತದೆ ಎಂದು ಮುಂಬಯಿ ಅಗ್ಯಾನಿಕ್...
-
ಮುಂಬಯಿ, ಡಿ. 4: ಹೊರನಾಡ ಕನ್ನಡ ಸಂಘಟನೆಗಳಲ್ಲಿ ಹಿರಿಯರ ದಂಡೇ ಹೆಚ್ಚಾಗಿರುವಾಗ ಯುವಕ-ಯುವತಿಯರೇ ತುಂಬಿದ ಪಲವಾ ಕನ್ನಡಿಗರ ಸಂಘ ಯುವ ಪಡೆಯ ಕನ್ನಡಾಭಿಮಾನವನ್ನು...
-
ಮುಂಬಯಿ, ಡಿ. 3: ಪ್ರಕೃತಿಯ ಮುನಿಸು, ಹವಾಮಾನ ವೈಪರೀತ್ಯದಿಂದಾಗಿ ಹಠಾತ್ ಸುರಿದ ಧಾರಾಕಾರ ಮಳೆಯಿಂದ ಮೈದಾನದಲ್ಲಿ ನೀರು ತುಂಬಿದ್ದರಿಂದ ಕಳೆದ ನವೆಂಬರ್ 8 ರಿಂದ...
-
ಮುಂಬಯಿ, ಡಿ. 2: ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಮತ್ತು ಸಂಘದ ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ, ಸಂಘದ ಮುಖವಾಣಿ ಬಂಟರವಾಣಿಯ ಕಾರ್ಯಾಧ್ಯಕ್ಷ...
-
ಮುಂಬಯಿ, ಡಿ. 1: ಒಬ್ಬ ಮೇರುನಟನಾದ ಮೋಹನ್ ಅವರಿಗೆಕರ್ನಾಟಕ ನಾಟಕ ಅಕಾಡೆಮಿಯ ಪ್ರಶಸ್ತಿ ಲಭಿಸಿದ್ದು, ಮುಂಬಯಿ ಕರ್ನಾಟಕ ಸಂಘಕ್ಕೆ ಅಪಾರ ಅಭಿಮಾನ ಎನಿಸುತ್ತಿದೆ....
ಹೊಸ ಸೇರ್ಪಡೆ
-
ಚಂದ್ರಶೇಖರ ಯರದಿಹಾಳ ಸಿಂಧನೂರು: ಕಲ್ಯಾಣ ಕರ್ನಾಟಕದಲ್ಲೇ ದೊಡ್ಡ ತಾಲೂಕು ಎಂಬ ಹೆಗ್ಗಳಿಕೆಗೆ ಪಾತ್ರವಾದ ಸಿಂಧನೂರು ನಗರದ ಹೈಟೆಕ್ ಬಸ್ ನಿಲ್ದಾಣ ಮೇಲೆಲ್ಲ,...
-
ಡಿ.ಬಿ. ವಡವಡಗಿ ಮುದ್ದೇಬಿಹಾಳ: ಯಾವುದೇ ಪಟ್ಟಣ, ನಗರ ಸುಂದರವಾಗಿ ಕಾಣಬೇಕಾದರೆ ಅಲ್ಲಿನ ಮುಖ್ಯ ರಸ್ತೆಗಳು ಸುಂದರವಾಗಿರಬೇಕು. ರಸ್ತೆಗಳ ನೋಟದಿಂದಲೇ ಪರಸ್ಥಳದಿಂದ...
-
ಬೆಳಗಾವಿ: ನಿಂತಿದ್ದ ಲಾರಿಗೆ ಹಿಂದಿನಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಖಾನಾಪುರ ತಾಲೂಕಿನ ನಂದಿಹಳ್ಳಿಯ ರಾಷ್ಟ್ರೀಯ...
-
ಮುಂಬಯಿ: ಸಮುದ್ರದಲ್ಲಿ ತೇಲಿ ಬಂದ ಸೂಟ್ ಕೇಸ್ ನ ರಹಸ್ಯವನ್ನು ಪೊಲೀಸರು ಬೇಧಿಸಿದ್ದು ಆರೋಪಿಗಳನ್ನು ಬಂಧಿಸಿದ್ದಾರೆ. ದತ್ತು ಪಡೆದ ಮಗಳೊಬ್ಬಳು ತನ್ನ ಪ್ರಿಯಕರನೊಂದಿಗೆ...
-
ಬೀದರ: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಹಿಂದಿನ ಎಲ್ಲ ಕಾಮಗಾರಿಗಳನ್ನು ಬರುವ ಮಾರ್ಚ್ದೊಳಗೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ...