ಕಾರ್ನಾಡ್‌ ಚಿತ್ರ ಪ್ರದರ್ಶಿಸಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಿರುವ ಎನ್‌ಎಫ್‌ಎಐ


Team Udayavani, Jun 13, 2019, 5:11 PM IST

1206MUM52

ಪುಣೆ: ನ್ಯಾಷನಲ್‌ ಫಿಲ್ಮ್‌ ಆಚೀìವ್‌ ಆಫ್‌ ಇಂಡಿಯಾ (ಎನ್‌ಎಫ್‌ಎಐ) ಶನಿವಾರ ಇಲ್ಲಿ ಖ್ಯಾತ ನಾಟಕಕಾರ ದಿವಂಗತ ಗಿರೀಶ್‌ ಕಾರ್ನಾಡ್‌ ಅವರ ಕೆಲವು ಪ್ರಸಿದ್ಧ ಚಿತ್ರಗಳನ್ನು ಪ್ರದರ್ಶಿಸುವ ಮೂಲಕ ಅವರಿಗೆ ಶ್ರದ್ಧಾಂಜಲಿಯನ್ನು ಸಲ್ಲಿಸಲಿದೆ.

ಕಾರ್ನಾಡ್‌ ಅವರು ನಟಿಸಿರುವ ಒಂದಾನೊಂದು ಕಾಲದಲ್ಲಿ, ಕಾನೂರು ಹೆಗ್ಗಡ್ತಿ, ಕಾಡು ಮತ್ತು ಜಬ್ಬರ್‌ ಪಟೇಲ್‌ ಅವರ ಉಂಬರ್ಥ ಚಿತ್ರಗಳ ಪ್ರದರ್ಶನ ನಡೆಯಲಿದೆ. ಸಾಹಿತ್ಯ, ರಂಗಮಂದಿರ ಮತ್ತು ಸಿನೆಮಾ ಜಗತ್ತಿನಲ್ಲಿ ಹೆಸರುವಾಸಿಯಾಗಿದ್ದ ಬಹುಮುಖ ಪ್ರತಿಭಾಶಾಲಿ ಕಾರ್ನಾಡ್‌ (81) ಅವರು ದೀರ್ಘ‌ಕಾಲದ ಅನಾರೋಗ್ಯದ ಬಳಿಕ ಸೋಮವಾರ ಬೆಂಗಳೂರಿನಲ್ಲಿ ನಿಧನ ಹೊಂದಿದ್ದಾರೆ. 5 ದಶಕಗಳಿಗಿಂತಲೂ ಹೆಚ್ಚಿನ ಅವಧಿಯ ತನ್ನ ವೃತ್ತಿಜೀವನದಲ್ಲಿ ಕಾರ್ನಾಡ್‌ ಅವರು ಹಲವಾರು ಪ್ರಶಸ್ತಿ-ಪುರಸ್ಕಾರಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದರು. ನಾಟಕಕಾರನಾಗಿ ವೃತ್ತಿಜೀ ವನವನ್ನು ಪ್ರಾರಂಭಿಸಿದ್ದ ಅವರು ಚಿತ್ರನಿರ್ಮಾಣ, ಚಿತ್ರಕಥೆ, ನಿರ್ದೇಶನ ಮತ್ತು ನಟನೆಯಂತಹ ಹಲವಾರು ಅಂಶಗಳಲ್ಲಿ ಪರಿಣತರಾಗಿದ್ದರು ಎಂದು ಎನ್‌ಎಫ್‌ಎಐ ಮಂಗಳವಾರ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಕಾರ್ನಾಡ್‌ ಅವರ ಚಿತ್ರಗಳು ಸಮಕಾಲೀನ ವಿಷಯಗಳೊಂದಿಗೆ ಸಮ್ಮಿಶ್ರ ಗ್ರಾಮೀಣತೆ, ಇತಿಹಾಸ ಮತ್ತು ಪೌರಾಣಿಕ ವಿಚಾರಗಳಿಂದ ಕೂಡಿವೆ ಎಂದು ಅದು ತಿಳಿಸಿದೆ.

ಒಂದು ಮಹಾಕಾವ್ಯ ಚಿತ್ರವಾಗಿರುವ ಒಂದಾನೊಂದು ಕಾಲದಲ್ಲಿ (1978) ಚಿತ್ರವು ಕುರೊಸೋವಾ ಅವರ ಸ್ಯಾಮುರಾಯ್‌ ಚಲನಚಿತ್ರಗಳಿಗೆ ಕಾರ್ನಾಡ್‌ ಅವರ ಗೌರವಾರ್ಪಣೆಯಾಗಿತ್ತು. ಈ ಚಲನಚಿತ್ರವು ದಕ್ಷಿಣ ಭಾರತೀಯ ಸಮರ ಕಲೆಗಳ ತಂತ್ರವನ್ನು ಮುಖ್ಯವಾಗಿ
ಕೇರಳ ಮೂಲದ ಕಲರಿಪಾಯೆಟ್‌ ಅನ್ನು ‌ುನರುಜ್ಜೀವನಗೊಳಿಸಲು ಪ್ರಯತ್ನಿಸುತ್ತದೆ. ಸಿನಿಮಾಟೋಗ್ರಫಿ ಮತ್ತು ಸ್ಟಂಟ್‌ ಸೀಕ್ವೆನ್ಸ್‌ಗಾಗಿ ಈ ಚಿತ್ರವು 26ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಕನ್ನಡ ಚಲನಚಿತ್ರ ಪ್ರಶಸ್ತಿಯನ್ನು ಗೆದ್ದಿದೆ ಎಂದು ಎನ್‌ಎಫ್‌ಎಐ ಪ್ರಕಟನೆ ತಿಳಿಸಿದೆ.

ಕಾನೂರು ಹೆಗ್ಗಡ್ತಿ (1999) ಚಿತ್ರವು ಚಲನಚಿತ್ರ ನಿರ್ದೇಶನಕ್ಕೆ ಕಾರ್ನಾಡ್‌ ಅವರ ಪುನರಾಗಮನವನ್ನು ಸೂಚಿಸುತ್ತದೆ. ರಾಷ್ಟ್ರಕವಿ ಕುವೆಂಪು ಅವರ ಕಾನೂರು ಸುಬ್ಬಮ್ಮ ಹೆಗ್ಗಡ್ತಿ ಎಂಬ ಕಾದಂಬರಿಯನ್ನು ಆಧರಿಸಿರುವ ಈ ಚಿತ್ರವು ಇನ್ನೊಂದು ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಚಿತ್ರವಾಗಿದೆ ಎಂದು ಎನ್‌ಎಫ್‌ಎಐ ಹೇಳಿದೆ. ಕಾಡು (1973) ಕಾರ್ನಾಡ್‌ ಅವರ ಮೊದಲ ಏಕವ್ಯಕ್ತಿ ನಿರ್ದೇಶನದ ಚಿತ್ರವಾಗಿದೆ. ಉಂಬರ್ಥಾ (1981) ಜಬ್ಬರ್‌ ಪಟೇಲ್‌ ಅವರು ನಿರ್ದೇಶಿಸಿದ ಒಂದು ಪ್ರಸಿದ್ಧ ಮರಾಠಿ ಚಿತ್ರವಾಗಿದ್ದು ಕಾರ್ನಾಡ್‌ ಮತ್ತು ಸ್ಮಿತಾ ಪಾಟೀಲ್‌ ಅವರು ಇದರಲ್ಲಿ ಪ್ರಮುಖ ಪಾತ್ರಗಳಲ್ಲಿ ನಟಿಸಿ¨ªಾರೆ. ಶನಿವಾರ ಪುಣೆಯ ಎನ್‌ಎಫ್‌ಎಐನಲ್ಲಿ ಚಿತ್ರಗಳ ಪ್ರದರ್ಶನದ ವೇಳೆ ಜಬ್ಬರ್‌ ಪಟೇಲ್‌ ಅವರು ಸ್ವತಃ ಉಪಸ್ಥಿತರಿರಲಿದ್ದಾರೆ. ಈ ಸಂದರ್ಭದಲ್ಲಿ ಅವರು ತಮ್ಮ ಆಲೋಚನೆಗಳು ಮತ್ತು ನೆನಪುಗಳನ್ನು ಹಂಚಿಕೊಳ್ಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.