ಕೇಂದ್ರದಿಂದ ಮಾಸ್ಕ್, ಪಿಪಿಇ ಕಿಟ್ ಇಲ್ಲ : ಟೋಪೆ
Team Udayavani, Sep 9, 2020, 5:36 PM IST
ಮುಂಬಯಿ, ಸೆ. 8: ಕೇಂದ್ರ ಸರಕಾರ ಇನ್ನು ಮುಂದೆ ಮುಖಗವಸು, ವೆಂಟಿಲೇಟರ್, ಪಿಪಿಇ ಕಿಟ್ಗಳನ್ನು ನೀಡುವುದಿಲ್ಲ ಎಂದು ರಾಜ್ಯ ಸರಕಾರಕ್ಕೆ ಕೇಂದ್ರ ಸರಕಾರದಿಂದ ಪತ್ರ ಬಂದಿದೆ ಎಂದು ರಾಜ್ಯ ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.
ಕೇಂದ್ರದ ಪತ್ರಕ್ಕೆಪ್ರತಿಕ್ರಿಯಿಸಿದ ಟೋಪೆ, ಕೇಂದ್ರದ ಇಂತಹ ಅಸಹಕಾರವನ್ನು ಸಮರ್ಥಿಸಲಾಗುವುದಿಲ್ಲ ಎಂದು ಕಿಡಿಕಾರಿದ್ದಾರೆ. ಈ ಬಗ್ಗೆ ನಾವು ಕೇಂದ್ರ ಸಚಿವ ಪ್ರಕಾಶ್ ಜಾಬ್ಡೇಕರ್ ಅವರೊಂದಿಗೆ ಪುಣೆಯಲ್ಲಿ ಶನಿವಾರ ಮಾತನಾಡಿದ್ದೇವೆ ಎಂದು ಅವರು ಹೇಳಿದರು. ಈ ನಿಟ್ಟಿನಲ್ಲಿ ರಾಜ್ಯ ಸರಕಾರ ಕೇಂದ್ರ ಆರೋಗ್ಯ ಸಚಿವರು ಮತ್ತು ಪ್ರಧಾನ ಮಂತ್ರಿಗೆ ಪತ್ರ ಬರೆಯಲಿದೆ. ರಾಜ್ಯ ಸರಕಾರವು ತನ್ನ ಜಂಬೋ ಆಸ್ಪತ್ರೆಯಲ್ಲಿ ಆಮ್ಲಜನಕ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಿದೆ ಮತ್ತು ಚಿಕಿತ್ಸೆಯಲ್ಲಿ ಯಾವುದೇ ತೊಂದರೆಯಾಗದಂತೆ ಐಸಿಯು ಹಾಸಿಗೆಗಳನ್ನು ಹೆಚ್ಚಿಸಲಾಗುತ್ತಿದೆ ಎಂದರು. ಇನ್ನೂ ಆರು ಜಿಲ್ಲೆಗಳಲ್ಲಿ ಟೆಲಿ-ಐಸಿಯುಗಳನ್ನು ಸೋಮವಾರ ಪ್ರಾರಂಭಿಸಲಾಗಿದೆ. ಆದ್ದರಿಂದ ಸೋಂಕಿತರ ಚಿಕಿತ್ಸೆಯಲ್ಲಿ ತಜ್ಞ ವೈದ್ಯರ ತತ್ಕ್ಷಣದ ಮಾರ್ಗದರ್ಶನ ಪಡೆಯಲಾಗುವುದು. ಲಾಕ್ಡೌನ್ಗಳ ಸಡಿಲಿಕೆ, ಅಂತರ್ ಜಿಲ್ಲಾ ಸಂಚಾರ ನಿರ್ಬಂಧ ಇಲ್ಲದಿರುವುದು, ಇ-ಪಾಸ್ ವಿತರಣೆ, ಕಚೇರಿಗಳಲ್ಲಿ ಹೆಚ್ಚಿನ ಉಪಸ್ಥಿತಿ ಯಿಂದಾಗಿ ಸೋಂಕು ಹೆಚ್ಚುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದರು.
ಸೋಂಕಿತರ ಸಂಖ್ಯೆ ಹೆಚ್ಚಾದಂತೆ ಆಸ್ಪತ್ರೆಗಳ ಮೇಲೆ ಒತ್ತಡ ಹೆಚ್ಚಾಗುತ್ತದೆ ಮತ್ತು ಹಾಸಿಗೆಗಳು ಲಭ್ಯವಿಲ್ಲ ಎಂದು ಆರೋಗ್ಯ ಸಚಿವರು ಹೇಳಿದರು. ಯಾವುದೇ ರೋಗಲಕ್ಷಣಗಳಿಲ್ಲದ ಸೋಂಕಿತರು ಮನೆಯಲ್ಲಿಯೇ ಇರಬೇಕು. 80ರಷ್ಟುಜನರಿಗೆ ರೋಗಲಕ್ಷಣಗಳಿಲ್ಲ, ಆದ್ದರಿಂದಅವರನ್ನು ಮನೆಯಲ್ಲಿಯೇ ನೋಡಿಕೊಳ್ಳ ಬೇಕು ಎಂದು ಅವರು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ