“ರಾಜ್ಯದಲ್ಲಿ ಆಷರೇಷನ್ ಕಮಲದ ಅಗತ್ಯವಿಲ್ಲ’
Team Udayavani, Jul 20, 2020, 4:35 PM IST
ಮುಂಬಯಿ, ಜು. 19: ರಾಜಸ್ಥಾನದ ರಾಜಕೀಯ ಬೆಳವಣಿಗೆಯ ಮಧ್ಯೆ, ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬೇಟಿ ಮಾಡಿದ್ದು ಮಹಾರಾಷ್ಟ್ರ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ.
ರಾಜ್ಯದ ಸಕ್ಕರೆ ಕೈಗಾರಿಕೆಗಳಿಗೆ ಹಣಕಾಸಿನ ನೆರವು ಪಡೆಯುವ ಉದ್ದೇಶಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್ ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲದ ಅಗತ್ಯವಿಲ್ಲ. ಎಂವಿಎಂ ಸರಕಾರ ಒಳ ಜಗಳದಿಂದಲೇ ಕುಸಿಯಲಿದೆ ಎಂದು ಹೇಳಿದ್ದಾರೆ.
ರಾಜಕೀಯ ಚರ್ಚೆ ನಡೆದಿಲ್ಲ ನಾವು ರಾಜ್ಯ ಸರಕಾರವನ್ನು ಅಸ್ಥಿರಗೊಳಿಸಲು ಸಿದ್ಧರಿಲ್ಲ. ಕೋವಿಡ್-19 ವೈರಸ್ ವಿರುದ್ಧ ಹೋರಾಡುವ ಸಮಯ ಇದು. ಆಪರೇಷನ್ ಕಮಲ ಮಹಾರಾಷ್ಟ್ರದಲ್ಲಿ ಆಗುವುದಿಲ್ಲ. ರಾಜ್ಯ ರಾಜಕೀಯದಲ್ಲಿ ತನ್ನ ಪಾತ್ರದ ಬಗ್ಗೆ ನನಗೆ ಅರಿವಿದೆ. ನನಗೆ ರಾಜ್ಯದ ಅಭಿವೃದ್ಧಿ ಮುಖ್ಯ. ನಾನು ರಾಜ್ಯದ ಸಕ್ಕರೆ ಕೈಗಾರಿಕೆಗಳಿಗೆ ಹಣಕಾಸಿನ ನೆರವು ಪಡೆಯುವ ಮತ್ತು ಕೊರೊನಾದಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕಾರ್ಮಿಕರು, ರೈತರೀಗೆ ವಿಶೇಷ ಫ್ಯಾಕೆಜ್ ನೀಡುವ ಸಲುವಾಗಿ ಶಾ ಮತ್ತು ಮೋದಿ ಅವರನ್ನು ಬೇಟಿಯಾದದ್ದು ಹೊರತು ಯಾವುದೇ ರಾಜಕೀಯ ಚರ್ಚೆ ನಡೆಸಿಲ್ಲ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು