ಸುರೇಶ್‌ ಶೆಟ್ಟಿಯವರದ್ದು ಅಪರೂಪದ ವ್ಯಕ್ತಿತ್ವ: ಐಕಳ ಹರೀಶ್‌ ಶೆಟ್ಟಿ

ಥಾಣೆಯಲ್ಲಿ ಸಮಾಜ ಸೇವಕ ಮರಾಠ ಸುರೇಶ್‌ ಶೆಟ್ಟಿ ಅವರ ಶೋಕ ಸಭೆ-ನುಡಿನಮನ

Team Udayavani, Feb 17, 2021, 11:17 AM IST

ಸುರೇಶ್‌ ಶೆಟ್ಟಿಯವರದ್ದು ಅಪರೂಪದ ವ್ಯಕ್ತಿತ್ವ: ಐಕಳ ಹರೀಶ್‌ ಶೆಟ್ಟಿ

ಥಾಣೆ: ಇತ್ತೀಚೆಗೆ ನಿಧನ ಹೊಂದಿದ ಮುಲುಂಡ್‌ ಮತ್ತು ಥಾಣೆ ಪರಿಸರದ ಪ್ರಸಿದ್ಧ ಹೊಟೇಲ್‌ ಉದ್ಯಮಿ, ಥಾಣೆ ಪಶ್ಚಿಮದ ಮರಾಠ ಹೊಟೇಲ್‌ ಮಾಲಕ, ಥಾಣೆ ಮತ್ತು ಮುಂಬಯಿಯ ವಿವಿಧ ಸಂಘಟನೆಗಳ ಪದಾಧಿಕಾರಿ, ದಾನಿ, ಸಮಾಜ ಸೇವಕ, ಕಲಾ ಪ್ರೋತ್ಸಾಹಕ ಮರಾಠ ಸುರೇಶ್‌ ಶೆಟ್ಟಿ ಅವರಿಗೆ ಶ್ರದ್ಧಾಂಜಲಿ ಸಭೆ ಮತ್ತು ನುಡಿನಮನ ಕಾರ್ಯಕ್ರಮವು ಫೆ. 13ರಂದು ಥಾಣೆ ಪಶ್ಚಿಮದ ಮುಲುಂಡ್‌ ಚೆಕ್‌ನಾಕಾ ಸಮೀಪದ ವುಡ್‌ಲ್ಯಾಂಡ್‌ ಹೊಟೇಲ್‌ ಸಭಾಗೃಹದಲ್ಲಿ ನಡೆಯಿತು.

ಥಾಣೆ ಬಂಟ್ಸ್‌, ಮುಲುಂಡ್‌ ಬಂಟ್ಸ್‌, ಮುಲುಂಡ್‌ ಹೊಟೇಲಿಯರ್ಸ್‌, ಥಾಣೆ ಹೊಟೇಲ್‌ ಓನರ್ಸ್‌ ಅಸೋಸಿಯೇಶನ್‌ ಹಾಗೂ ತಿರುಪತಿ ಬಳಗ ಇನ್ನಿತರ ಸಂಘಟನೆಗಳ ಆಶ್ರಯದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಅಪಾರ ಸಂಖ್ಯೆಯಲ್ಲಿ ಅವರ ಅಭಿಮಾನಿಗಳು ಪಾಲ್ಗೊಂಡು ಸಂತಾಪ ಸೂಚಿಸಿದರು. ನಗರದ ಗಾಯಕ ಗಣೇಶ್‌ ಎರ್ಮಾಳ್‌ ಅವರಿಂದ ಪ್ರಾರಂಭದಲ್ಲಿ ಸಂಗೀತ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್‌ ಶೆಟ್ಟಿ ಅವರು ನುಡಿನಮನ ಸಲ್ಲಿಸಿ, ಎಲ್ಲರೊಂದಿಗೆ ಅಣ್ಣ- ತಮ್ಮಂದಿ ರಂತೆ ಬಹಳಷ್ಟು ಅನ್ಯೋನ್ಯತೆಯೊಂದಿಗೆ ಬೆರೆಯುವ ಸುರೇಶ್‌ ಶೆಟ್ಟಿಯವರ ವ್ಯಕ್ತಿತ್ವವೇ ಒಂದು ವಿಶೇಷತೆ. ಅಂತಹ ವ್ಯಕ್ತಿತ್ವದವರು ಸಿಗುವುದು ಬಹಳ ವಿರಳ. ಅವ ರನ್ನು ನಾವಿಂದು ಅಕಾಲಿಕವಾಗಿ ಕಳೆದು ಕೊಂಡಿರುವುದುವುದು ದುಃಖದ ವಿಷಯ. ಅವರ ಪರಿವಾರಕ್ಕೆ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ಕರುಣಿಸಲಿ ಎಂದು ಶ್ರದ್ಧಾಂಜಲಿ ಸಲ್ಲಿಸಿದರು.

ಥಾಣೆ ಬಂಟ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ವೇಣುಗೋಪಾಲ್‌ ಎಲ್‌. ಶೆಟ್ಟಿ  ಮಾತನಾಡಿ, ನಾನು ಸುರೇಶ ಣ್ಣನನ್ನು ಕಳೆದ 32 ವರ್ಷಗಳಿಂದ ಹತ್ತಿರದಿಂದ ಬಲ್ಲವನು. ಅವರೊಂದಿಗೆ ಅನ್ಯೋನ್ಯತೆಯಿಂದ ಬೆಳೆದಿ ದ್ದೇನೆ. ಅವರೋರ್ವ ಬಹಳಷ್ಟು ತಿಳಿವಳಿಕೆಯ ವ್ಯಕ್ತಿ. ಅವರಲ್ಲಿ ಎಲ್ಲ ವಿಷಯಗಳ ಬಗ್ಗೆ ಅಪಾರ ಜ್ಞಾನ ಶಕ್ತಿ ಇತ್ತು. ಮತ್ತೂಬ್ಬರ ಬಗ್ಗೆ ನಿರಂತರ ಕಾಳಜಿ ವಹಿ ಸುತ್ತಾ ಬಂದ ಅವರು ಮಾತ್ರ ತನ್ನ ಸ್ವಂತ ಬದುಕಿನಲ್ಲಿ ಕಾಳಜಿ ವಹಿಸಲಿಲ್ಲ. ಅದರ ಪರಿಣಾಮ ನಾವಿಂದು ಅವರನ್ನು ಕಳೆದುಕೊಳ್ಳುವಂತಾಗಿದೆ. ಯಕ್ಷಗಾನದ ಬಗ್ಗೆ ಅವರು ತೋರಿಸುತ್ತಿದ್ದ ಅಪಾರ ಅಭಿಮಾನ, ಕಲಾಭಿಮಾನಿಗಳನ್ನು ಸದಾ ನೆನಪಿಡುವ ನಿಟ್ಟಿನಲ್ಲಿ ಥಾಣೆ ಬಂಟ್ಸ್‌ ಮುಂದಿನ ದಿನಗಳಲ್ಲಿ ಅವರ ಸ್ಮರಣಾರ್ಥ ಯಕ್ಷಗಾನ ಅಥವಾ ತಾಳಮದ್ದಳೆಯನ್ನು ಪ್ರತೀ ವರ್ಷ ಆಯೋಜಿಸುವ ನಿರ್ಧಾರವನ್ನು ಕೈಗೊಳ್ಳಲಿದೆ ಎಂದರು.

ಸುರೇಶ್‌ ಶೆಟ್ಟಿ ಅವರ ಅಗಲಿಕೆ ಅರಗಿಸಿಕೊಳ್ಳಲಾಗುತ್ತಿಲ್ಲ. ಯಾವಾಗಲೂ ನಗುತ್ತಾ, ತಮ್ಮ ಸುತ್ತಮುತ್ತಲಿ ನವರನ್ನೂ ನಗಿಸುವ ಸ್ವಭಾವದ ಅವರು ಬಹು ಬೇಗನೆ ಭಗವಂತನ ಪಾದ ಸೇರಿದರು. ಓರ್ವ ಕಲಾಪೋಷಕ, ಅಪ್ರತಿಮ ಕಲಾಭಿಮಾನಿಯನ್ನು ನಾವಿಂದು ಕಳೆದುಕೊಂಡಿದ್ದೇವೆ ಎಂದು ವರ್ತಕ್‌ ನಗರ ಕನ್ನಡ ಸಂಘದ ಅಧ್ಯಕ್ಷ ಜಯಂತ್‌ ಶೆಟ್ಟಿ ಅವರು ತಿಳಿಸಿದರು.

ಮುಲುಂಡ್‌ ಬಂಟ್ಸ್‌ನ ಮಾಜಿ ಅಧ್ಯಕ್ಷ ಡಾ| ಸತ್ಯಪ್ರಕಾಶ್‌ ಶೆಟ್ಟಿ  ಮಾತನಾಡಿ, ಓರ್ವ ಮನುಷ್ಯನಿಗೆ 56 ವರ್ಷ ಸಾಯುವ ಪ್ರಾಯವಲ್ಲ. ತನ್ನ ಗೃಹಸ್ಥ ಜೀವನದಲ್ಲಿ ಸಾಧನೆ ಮಾಡುವ ಕಾಲವದು. ಅರುವತ್ತರ ಬಳಿಕ ತಾನು ಮಾಡಿದ ಸಾಧನೆಯನ್ನು ಅನುಭವಿಸುವ ಕಾಲ. ಆದರೆ ಸುರೇಶ್‌ ಶೆಟ್ಟಿ ಅವರಿಗೆ ಮಾತ್ರ ಆ ಭಾಗ್ಯ ಸಿಗಲಿಲ್ಲ. ಜೀವನ ಪೂರ್ತಿ ಸಾಧನೆಗೈದು ನಮ್ಮಿಂದ ಮರೆಯಾಗಿದ್ದಾರೆ. ದಾನಿಯಾಗಿ, ಕಲಾ ಪೋಷಕರಾಗಿ ಸಲ್ಲಿಸಿರುವ ಅವರ ಸೇವೆ ಸ್ವರಣೀಯವಾಗಿದೆ ಎಂದರು.

ಉದ್ಯಮಿ ರತ್ನಾಕರ್‌ ಜಿ. ಶೆಟ್ಟಿ ಮಾತನಾಡಿ, ಸುರೇಶ್‌ ಶೆಟ್ಟಿ ಮುಂಬಯಿ ಮಾತ್ರವಲ್ಲ ಊರಲ್ಲೂ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು. ಅವರು ತಮ್ಮದೇ ಆದ ಅಭಿಮಾನಿ ವರ್ಗವನ್ನು ಹೊಂದಿದ್ದರು ಎಂಬುವುದಕ್ಕೆ ಅವರ ಅಂತಿಮ ಯಾತ್ರೆಯಲ್ಲಿ ಸೇರಿದ ಜನಸಾಗರ ಸಾಕ್ಷಿಯಾಗಿದೆ ಎಂದರು.

ಬಿಲ್ಲವರ ಅಸೋಸಿಯೇಶನ್‌ ಮುಂಬಯಿ ಉಪಾಧ್ಯಕ್ಷ ದಯಾನಂದ ಪೂಜಾರಿ, ಜಾಸ್ಮಿನ್‌ ಕೋ-ಆಪರೇಟಿವ್‌ ಕ್ರೆಡಿಟ್‌ ಸೊಸೈಟಿಯ ಕಾರ್ಯಾಧ್ಯಕ್ಷ ಡಾ| ಸುರೇಂದ್ರ ಶೆಟ್ಟಿ, ರಂಗಕರ್ಮಿ ಲೀಲಾಧರ ಶೆಟ್ಟಿ ಕಾಪು, ಪತ್ರಕರ್ತ ದಯಾಸಾಗರ್‌ ಚೌಟ ಅವರು ನುಡಿನಮನ ಸಲ್ಲಿಸಿದರು. ಅತಿಥಿ-ಗಣ್ಯರು ದೀಪ ಪ್ರಜ್ವಲಿಸಿ ಸುರೇಶ್‌ ಶೆಟ್ಟಿ ಅವರ ಭಾವಚಿತ್ರಕ್ಕೆ ಪುಷ್ಪವೃಷ್ಠಿ ಗೈದು ಶ್ರದ್ಧಾಂಜಲಿ ಸಲ್ಲಿಸಿದರು. ಉದ್ಯಮಿಗಳಾದ ಕರಿಯಣ್ಣ ಶೆಟ್ಟಿ, ಅಶೋಕ್‌ ಅಡ್ಯಂತಾಯ, ಉದಯ ಶೆಟ್ಟಿ, ಜಯ ಶೆಟ್ಟಿ, ಬಂಟ್ವಾಳ ಬಂಟರ ಸಂಘದ  ಅಧ್ಯಕ್ಷ ನಗ್ರಿಗುತ್ತು ವಿವೇಕ್‌ ಶೆಟ್ಟಿ, ಉದ್ಯಮಿ ಸುರೇಶ್‌ ಶೆಟ್ಟಿ, ಥಾಣೆ ಬಂಟ್ಸ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ರೇವತಿ ಶೆಟ್ಟಿ, ಮುಲುಂಡ್‌ ಬಂಟ್ಸ್‌ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಶಿಕಾಂತಿ ಶೆಟ್ಟಿ ಮೊದಲಾದವರು ನುಡಿನಮನ ಸಲ್ಲಿಸಿದರು.

ಕಲಾ ಸಂಘಟಕ ಕರ್ನೂರು ಮೋಹನ್‌ ರೈ ಅವರು ಮರಾಠ ಸುರೇಶ್‌ ಶೆಟ್ಟಿ ಅವರ ಸಾಧನೆಗಳನ್ನು ವಿವರಿಸಿ ಕಾರ್ಯಕ್ರಮ ನಿರ್ವಹಿಸಿದರು. ಮೌನ ಪ್ರಾರ್ಥನೆಯ ಮೂಲಕ ಸೇರಿದ ನೂರಾರು ಮಂದಿ ಶ್ರದ್ಧಾಂಜಲಿ ಸಲ್ಲಿಸಿದರು. ಸಂಗೀತ ಕಾರ್ಯಕ್ರಮದಲ್ಲಿ ತಬಲಾದಲ್ಲಿ ಜನಾರ್ದನ ಸಾಲ್ಯಾನ್‌ ಸಹಕರಿಸಿದರು. ಸಭೆಯಲ್ಲಿ ಥಾಣೆಯ ಉದ್ಯಮಿ ಶಿವರಾಮ್‌ ಶೆಟ್ಟಿ, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ಮಹಿಳಾ ವಿಭಾಗದ ಸದಸ್ಯೆಯರು, ಮುಂಬಯಿ, ಥಾಣೆ, ನವಿಮುಂಬಯಿ ಪರಿಸರದ ಉದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

ಕಳೆದ ಸುಮಾರು 30 ವರ್ಷಗಳಿಂದ ನನ್ನ ಜತೆಗಿದ್ದ ಓರ್ವ ಆತ್ಮೀಯ ಮಿತ್ರ ಎನ್ನುವುದಕ್ಕಿಂತ ನನ್ನ ಸಹೋದರನ ಸ್ಥಾನದಲ್ಲಿದ್ದ ಜತೆಗಾರನನ್ನು ನಾನಿಂದು ಕಳೆದುಕೊಂಡಿದ್ದೇನೆ. ನಮ್ಮ ತಿರುಪತಿ ಬಳಗದ ಓರ್ವ ಸಕ್ರಿಯ ಸದಸ್ಯರಾಗಿ ಅವರ ಕೊಡುಗೆ ಅಪಾರ. ಅವರ ಆತ್ಮಕ್ಕೆ ಪರಮಾತ್ಮ ಚಿರಶಾಂತಿಯನ್ನು ಕರುಣಿಸಲಿ.  ಪಲಿಮಾರು ವಸಂತ್‌ ಎನ್‌. ಶೆಟ್ಟಿ  ಅಧ್ಯಕ್ಷರು, ಮುಲುಂಡ್‌ ಬಂಟ್ಸ್‌

ತ್ಯಾಗದ ಸಾಕಾರ ಮೂರ್ತಿಯನ್ನು ನಾವಿಂದು ಕಳೆದುಕೊಂಡಿದ್ದೇವೆ. ತನ್ನ ಸ್ವಂತ ಐಶ್ವರ್ಯವನ್ನು ನಿಸ್ವಾರ್ಥ ಮನಸ್ಸಿನಿಂದ ಸಮಾಜಕ್ಕೆ ದಾನ ಮಾಡಿದ ಓರ್ವ ಮಹಾನ್‌ ವ್ಯಕ್ತಿ ಮರಾಠ ಸುರೇಶ್‌ ಶೆಟ್ಟಿ. ಅವರು ಇನ್ನಷ್ಟು ಕಾಲ ಬಾಳಿ ಬದುಕಬೇಕಿತ್ತು. 56ರ ಹರೆಯದಲ್ಲೇ ವಿಧಿ ಅವರನ್ನು ನಮ್ಮಿಂದ ದೂರ ಮಾಡಿದೆ. ಪೊಲ್ಯ ಉಮೇಶ್‌ ಶೆಟ್ಟಿ , ಅಧ್ಯಕ್ಷರು, ಥಾಣೆ ಹೊಟೇಲ್‌ ಓನರ್ಸ್‌ ಅಸೋಸಿಯೇಶನ್‌

ಸುಮಾರು 32 ವರ್ಷಗಳಿಂದ ಒಡನಾಡಿಯಾಗಿದ್ದ ಆಪ್ತಮಿತ್ರನನ್ನು ನಾನು ಕಳೆದುಕೊಂಡಿದ್ದೇನೆ. ನಾನಿಂದು ಅದೇನೇ ಸಮಾಜಪರ ಸೇವೆ ಮಾಡಿದ್ದರೂ ಸುರೇಶ್‌ ಶೆಟ್ಟಿ ಅವರು ಅದರ ಹಿಂದಿನ ಪ್ರೇರಕ ಶಕ್ತಿಯಾಗಿದ್ದರು. ವೈಯಕ್ತಿಕವಾಗಿ ಮತ್ತು ಬಂಟರ ಸಂಘ ಮುಂಬಯಿ ವತಿಯಿಂದ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸುತ್ತಿದ್ದೇನೆ. ಶಾಂತಾರಾಮ್‌ ಶೆಟ್ಟಿ , ಕಾರ್ಯಾಧ್ಯಕ್ಷರು, ಬಂಟರ ಸಂಘ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

ಎದುರಾರೈ ನಿನಗೆ ಸಮನಾರೈ ?: ಸಾಮ್ಯತೆ ಹಾಗೂ ವ್ಯತ್ಯಾಸದೊಳಗಿನ ಅರಿವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.