ಥಾಣೆ ಪಶ್ಚಿಮದಲ್ಲಿ  ಒಡಿಯೂರು ಶ್ರೀಗಳ ಗುರುವಂದನ ಕಾರ್ಯಕ್ರಮ


Team Udayavani, Aug 2, 2018, 3:28 PM IST

0108mum11a.jpg

ಮುಂಬಯಿ: ನಾವು ಎಷ್ಟೇ ಮುಂದುವರಿದರೂ ನಮ್ಮ ಸನಾತನ ಪರಂಪರೆಯನ್ನು ಮರೆಯಬಾರದು.  ಆಧುನಿಕ ಬದುಕಿಗೆ ಅಗತ್ಯವಾದ ಅಂಶಗಳು ಅದರಲ್ಲಿ ಇವೆ. ಸನಾತನ ಪರಂಪರೆಯನ್ನು ಮರೆತರೆ ನಮ್ಮ ಬದುಕು ಶೂನ್ಯವಾಗಿರುತ್ತದೆ ಎಂದು ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ  ನುಡಿದರು.

ಅವರು ಜು. 31ರಂದು ಥಾಣೆ ಪಶ್ಚಿಮದ ಹೊಟೇಲ್‌ ವುಡ್‌ಲ್ಯಾಂಡ್‌ ರಿಟ್ರೀಟ್‌ ಸಭಾಗೃಹದಲ್ಲಿ ಥಾಣೆ ಪರಿಸರದ ಗುರು ಭಕ್ತರು ಆಯೋಜಿಸಿದ್ದ ಗುರುವಂದನ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ನಮಗೆ ಆಹಾರ ಸೇವಿಸುವ ಹಕ್ಕಿದೆ. ಆದರೆ ಅದನ್ನು ದುರುಪಯೋಗ ಪಡಿಸುವ ಹಕ್ಕಿಲ್ಲ. ಇತ್ತೀಚೆಗೆ ನಾವು ಅಗತ್ಯಕ್ಕಿಂತ ಹೆಚ್ಚು ದುರುಪಯೋಗ ಮಾಡುತ್ತಿದ್ದೇವೆ. ಆಹಾರದಲ್ಲಿ ಎಲ್ಲರಿಗೂ ಹಕ್ಕು ಇದೆ. ಎಷ್ಟೋ ಜನ ಒಂದು ಹೊತ್ತಿನ ಆಹಾರಕ್ಕಾಗಿ ಕಷ್ಟಪಡುತ್ತಿದ್ದಾರೆ. ಆದ್ದರಿಂದ ನಾವು ಆಹಾರವನ್ನು ದುರುಪಯೋಗಪಡಿಸದೆ ಎಷ್ಟು ಬೇಕೋ ಅಷ್ಟನ್ನೇ ಉಪಯೋಗಿಸುವ ಮನೋಭಾವನೆಯನ್ನು ಬೆಳೆಸಿಕೊಳ್ಳ ಬೇಕು. ನಾವು ಬದುಕಬೇಕು. ಇತರರನ್ನು ಬದುಕಲು ಬಿಡಬೇಕು. ಇದುವೇ ಶ್ರೇಷ್ಠವಾದುದು. ನಾವು ಇಲ್ಲಿ ಏನನ್ನು ಗಳಿಸುವುದರಲ್ಲೂ ಸಂಗ್ರಹಿಸುವುದರಲ್ಲೂ ಧರ್ಮ ಇರಬೇಕು. ಇವತ್ತು ಒಳ್ಳೆಯದು ಮಾಡಿದರೆ, ನಾಳೆ ಅದರ ಪ್ರತಿಫಲ ದೊರೆಯುತ್ತದೆ. ನಾವು ಬರುವಾಗ ಯಾವುದನ್ನೂ ತರಲಿಲ್ಲ. ಎಲ್ಲವೂ ಇಲ್ಲಿಂದಲೇ ಸಿಕ್ಕಿದೆ. ಆದ್ದರಿಂದ ನಾವು ಸಂಗ್ರಹಿಸಿದ ಸಂಪತ್ತಿನಲ್ಲಿ ಎಲ್ಲರಿಗೂ ಸಹಾಯ  ಮಾಡುತ್ತಿರಬೇಕು.  ನಗುನಗುತ್ತಾ ಜೀವನವನ್ನು ಸಾಗಿಸುವವನು ಸದಾ ಸಂತೋಷವಾಗಿರುತ್ತಾನೆ ಎಂದು ಸ್ವಾಮೀಜಿ ಅವರು ನುಡಿದರು.

ಭಜನೆಯ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು. ಈ ಸಂದರ್ಭದಲ್ಲಿ ಸಾಧ್ವಿ ಮಾತಾನಂದಮಯಿ ಅವರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಶ್ರೀಗಳು ದೀಪಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಗುರುದೇವ ಸೇವಾ ಬಳಗದ ಅಧ್ಯಕ್ಷ ನ್ಯಾಯವಾದಿ ಕೃಷ್ಣ ಎಲ್‌. ಶೆಟ್ಟಿ, ಉಪಾಧ್ಯಕ್ಷರಾದ ಬೊಳ್ನಾಡುಗುತ್ತು ಚಂದ್ರಹಾಸ ರೈ, ದಾಮೋದರ ಶೆಟ್ಟಿ, ಮಾಜಿ ಅಧ್ಯಕ್ಷ ನ್ಯಾಯವಾದಿ ಪ್ರಕಾಶ್‌ ಎಲ್‌. ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್‌ ಶೆಟ್ಟಿ, ವಾಮಯ್ಯ ಶೆಟ್ಟಿ, ಥಾಣೆಯ ಸೇವಾ ಬಳಗದ ಸಕ್ರಿಯ ಕಾರ್ಯಕರ್ತ ಗುಣಪಾಲ್‌ ಎಸ್‌. ಶೆಟ್ಟಿ, ಮೋಹನ್‌ ಹೆಗ್ಡೆ, ಮನೋಜ್‌ ಕುಮಾರ್‌ ಹೆಗ್ಡೆ, ಜಯರಾಮ ಟಿ. ಸಂತ, ಶೇಖರ್‌ ಡಿ. ಶೆಟ್ಟಿ, ಸುರೇಶ್‌ ಕೆ. ಶೆಟ್ಟಿ, ಗಂಗಾಧರ ಶೆಟ್ಟಿ, ಶೇಖರ್‌ ಶೆಟ್ಟಿ, ಮರಾಠ ಸುರೇಶ್‌ ಶೆಟ್ಟಿ, ಹರೀಶ್‌ ಉದ್ಯಾವರ, ರಾಜೇಶ್‌ ಆಮರ್‌ ಪ್ಯಾಲೇಸ್‌, ದಾಮೋದರ, ಧರ್ಮೇಂದ್ರ, ದೇವದಾಸ್‌ ಉಚ್ಚಿಲ್‌, ಸುಹಾಸಿನಿ ಶೆಟ್ಟಿ, ರೇವತಿ ವಾಮಯ್ಯ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ವೀರೇಂದ್ರ ಶೆಟ್ಟಿ ದಂಪತಿ ಶ್ರೀಗಳ ಪಾದುಕಾಪೂಜೆ ನೆರವೇರಿಸಿದರು. ಶ್ರೇಯಾ ಶೆಟ್ಟಿ, ಕಾರ್ತಿಕ್‌ ಶೆಟ್ಟಿ, ವೀರೇಂದ್ರ ಶೆಟ್ಟಿ, ಸಚಿನ್‌ ಶೆಟ್ಟಿ ಅವರು ಶ್ರೀಗಳಿಗೆ ಫಲಪುಷ್ಪವನ್ನಿತ್ತು ಗೌರವಿಸಿ ದರು. ಶರಣ್‌ ಶೆಟ್ಟಿ ಮತ್ತು ಶಾಶ್ವತಿ ಶೆಟ್ಟಿ ಪ್ರಾರ್ಥನೆಗೈದರು. ಶ್ರೀಗಳು ಭಕ್ತಾದಿಗಳನ್ನು ಫಲಮಂತ್ರಾಕ್ಷತೆಯನ್ನಿತ್ತು ಅನುಗ್ರಹಿಸಿದರು. ಗುರುಭಕ್ತರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರಸಾದ ಸ್ವೀಕರಿಸಿದರು. 

 ಧರ್ಮದಿಂದ ನಡೆಯಿರಿ
ಜೀವನದಲ್ಲಿ ಬರುವ ಕಷ್ಟಗಳಿಗೆ ಧೃತಿಗೆಡದೆ ಅದು ಬದುಕಿನ ಮೆಟ್ಟಿಲು ಎಂದು ತಿಳಿದು ಮುಂದೆ ಸಾಗಬೇಕು. ಆಗ ನಮಗೆ ಯಶಸ್ಸಿನ ಜೀವನ ನಡೆಸಲು ಸಾಧ್ಯವಾಗುತ್ತದೆ. ಧರ್ಮಪ್ರಜ್ಞೆಯು ಸದಾ ನಮ್ಮಲ್ಲಿ ಜಾಗೃತವಾಗಿರಬೇಕು. ಧರ್ಮದಿಂದ ನಡೆದರೆ ಪ್ರಪಂಚದ ಯಾವುದೇ ಶಕ್ತಿ ನಮ್ಮನ್ನು  ಮಣಿಸಲು ಸಾಧ್ಯವಿಲ್ಲ ಎಂದು ಶ್ರೀ ಗುರುದೇವಾನಂದ ಸ್ವಾಮೀಜಿ ಅವರು ನುಡಿದರು.

ಚಿತ್ರ-ವರದಿ: ಸುಭಾಷ್‌  ಶಿರಿಯಾ

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.