ಒಕ್ಕಲಿಗರ ಸಂಘ ಮಹಾರಾಷ್ಟ್ರ: 8ನೇ ವಾರ್ಷಿಕ ಮಹಾಸಭೆ
Team Udayavani, Jul 26, 2017, 3:54 PM IST
ಮುಂಬಯಿ: ಒಕ್ಕಲಿಗರ ಸಂಘ ಮಹಾರಾಷ್ಟ್ರ ಇದರ ಎಂಟನೇ ವಾರ್ಷಿಕ ಮಹಾಸಭೆಯು ಜು. 23 ರಂದು ಪೂರ್ವಾಹ್ನ ಅಂಧೇರಿ ಪೂರ್ವದ ಜೆ. ಬಿ. ನಗರದ ಪಂಚಾಯತಿ ಸೇವಾ ಟ್ರಸ್ಟ್ನ ಗೋಯೆಂಕಾ ಭವನದಲ್ಲಿ ನಡೆಯಿತು.
ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ರಂಗಪ್ಪ ಸಿ. ಗೌಡ ಅವರು ದೀಪ ಪ್ರಜ್ವಲಿಸಿ ಮಹಾಸಭೆಗೆ ಚಾಲನೆ ನೀಡಿ ಮಾತನಾಡಿ, ಒಕ್ಕಲಿಗರಲ್ಲಿನ ಅನೇಕರು ಆರ್ಥಿಕವಾಗಿ ಸಬಲರಾಗಿರಬಹುದು. ಆದರೆ ಮೂಲ ಸಂಸ್ಕೃತಿ, ಪರಂಪರೆಯನ್ನು ಕಾಯ್ದುಕೊಂಡು ಉಳಿಸಿ-ಬೆಳೆಸುವಲ್ಲಿ ಎಂದೂ ಹಿಂದುಳಿದಿಲ್ಲ. ಒಟ್ಟಾರೆಯಾಗಿ ನಮ್ಮ ಸಮಾಜ ಇತರ ಸಮಾಜಕ್ಕಿಂತಲೂ ಎಲ್ಲಾ ವಿಧಗಳಲ್ಲಿಯೂ ಅಭಿವೃದ್ಧಿಯತ್ತ ಸಾಗುತ್ತಿರುವುದು ಹೆಮ್ಮೆಯಾಗುತ್ತಿದೆ. ರಾಜಕೀಯ ಕ್ಷೇತ್ರದಲ್ಲೂ ನಾವು ಹಿಂದೆ ಬಿದ್ದಿಲ್ಲ. ಭವಿಷ್ಯತ್ತಿನ ದಿನಗಳಲ್ಲೂ ಸಮಾಜಮುಖೀ ಸೇವೆಯೊಂದಿಗೆ ನಮ್ಮಲ್ಲಿನ ಒಗ್ಗಟ್ಟು ಭದ್ರಪಡಿಸುವ ಅಗತ್ಯ ನಮಗಿದೆ. ಇದಕ್ಕಾಗಿ ಇಂತಹ ಸಂಸ್ಥೆಗಳಲ್ಲಿ ಒಗ್ಗೂಡಿ ಸಮಾಜ ಬಾಂಧವರು ಸ್ವಂತಿಕೆಯ ಅಸ್ತಿತ್ವಕ್ಕೆ ಬದ್ಧರಾಗಬೇಕು ಎಂದು ನುಡಿದರು.
ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷರಾದ ಪುಟ್ಟ ಸ್ವಾಮೀ ಎನ್. ಗೌಡ ಮತ್ತು ಮೋಹನ್ ಕುಮಾರ್ ಗೌಡ, ಜತೆ ಕಾರ್ಯರ್ಶಿ ಮಂಜುನಾಥ ಕೆ. ಗೌಡ, ಜತೆ ಕೋಶಾಧಿಕಾರಿ ಮಂಜುನಾಥ ಸಿ. ಗೌಡ ಹಾಗೂ ಕಾರ್ಯಕಾರಿ ಸಮಿತಿಯ ಸದಸ್ಯರಾದ ಡಿ. ಎಸ್. ಮುತ್ತೇ ಗೌಡ, ಉಮೇಶ್ ಆರ್. ಗೌಡ ಮತ್ತು ಎ. ಕೆಂಪೇಗೌಡ ವೇದಿಕೆಯಲ್ಲಿ ಆಸೀನರಾಗಿದ್ದರು. ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಕೆ. ರಾಜೇ ಗೌಡ ಸ್ವಾಗತಿಸಿ ಸಭಾ ಕಲಾಪ ನಡೆಸಿ, ಗತ ವಾರ್ಷಿಕ ಮಹಾಸಭೆ ವರದಿ ವಾಚಿಸಿದರು. ಗೌರವ ಕೋಶಾಧಿಕಾರಿ ರವೀಂದ್ರ ಎನ್. ಗೌಡ ಅವರು ಗತವಾರ್ಷಿಕ ಲೆಕ್ಕಪತ್ರಗಳನ್ನು ಮಂಡಿಸಿದರು.
ಈ ಸಂಸ್ಥೆಯು ಮಹಾರಾಷ್ಟ್ರದಲ್ಲಿನ ಒಕ್ಕಲಿಗರ ಪಾಲಿನ ಮಾತೃ ಸಂಸ್ಥೆ ಎಂದೇ ಹೇಳಬಹುದು. ಯುಗಯೋಗಿ ಜಗದ್ಗುರು ಶ್ರೀ ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳ ಆಶಯ ಮತ್ತು ಅಭಯ ಹಸ್ತದಿಂದ ಸ್ಥಾಪಿಸಲ್ಪಟ್ಟ ಸಂಸ್ಥೆ ಇದಾಗಿದೆ. ಪೂಜನೀಯ ಶ್ರೀಗಳ ಉದ್ದೇಶಗಳನ್ನೇ ಪೂರೈಸಲು ಸಕ್ರಿಯವಾಗಿರುವ ಸಂಸ್ಥೆಯನ್ನು ಮುನ್ನಡೆಸಲು ಸರ್ವ ಒಕ್ಕಲಿಗರು ಒಮ್ಮತದಿಂದ ಸಹರಿಸುವ ಅಗತ್ಯವಿದೆ ಎಂದು ಪ್ರಸ್ತಾವಿಕವಾಗಿ ಮಾತನಾಡಿದ ರಾಜೇ ಗೌಡ ನುಡಿದರು.
ಸಂಘದ ಎಂ. ಎನ್. ರಾಮಲಿಂಗಯ್ಯ, ಜಿತೇಂದ್ರ ಜವರಪ್ಪ ಗೌಡ, ಶುಭಾ ರಾಮಲಿಂಗ ಗೌಡ, ಗಂಗಾಧರ್ ಎನ್. ಗೌಡ, ಸಿಂಗಾರಿ ಗೌಡ ಮತ್ತಿತರರು ಉಪಸ್ಥಿತರಿದ್ದು, ತಮ್ಮ ಸಲಹೆಗಳನ್ನಿತ್ತು ಸಂಘದ ಅಭಿವೃದ್ಧಿಯಲ್ಲಿ ಸಮಾಜ ಬಾಂಧವರ ಸಹಕಾರ ಅಗತ್ಯವಾಗಿದೆ ಎಂದರು.ಸಂಸ್ಥೆಯ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು, ಸಮಾಜ ಬಾಂಧವರು ಅಧಿಕ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?