ಚಾಂದಿವಲಿಯಲ್ಲಿ ಮಕ್ಕಳ ಕೋವಿಡ್‌ ಕೇರ್‌ ಸೆಂಟರ್‌ ಪ್ರಾರಂಭ


Team Udayavani, May 23, 2021, 12:50 PM IST

Opening of the Children’s covid Care Center

ಮುಂಬಯಿ: ನಗರದ ಕೆ -ವೆಸ್ಟ್‌ ವಾರ್ಡ್‌ ಕೋವಿಡ್‌ ಮೂರನೇ ಅಲೆ ಎದುರಿಸಲು ತಯಾರಿ ಪ್ರಾರಂಭಿಸಿದ್ದು, ಮಕ್ಕಳಿಗೆ ಸಾಕಷ್ಟು ಹಾಸಿಗೆಗಳು ಲಭ್ಯವಿದೆಯೆ ಎಂದು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಎಲ್ಲ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಮಕ್ಕಳನ್ನು ಪಾಲಕರಿಲ್ಲದೆ ದೀರ್ಘ‌ಕಾಲ ಪ್ರತ್ಯೇಕವಾಗಿರಿಸುವುದು ಕಷ್ಟವಾಗುವುದರಿಂದ ವಾರ್ಡ್‌ ಅಧಿಕಾರಿಗಳು ಎನ್‌ಜಿಒ ಡಾಕ್ಟರ್ಸ್‌ ಫಾರ್‌ ಯು ಸಂಸ್ಥೆಯ ಜತೆಗೆ ಮಕ್ಕಳಿಗೆ ಆಟದ ಪ್ರದೇಶಗಳು ಮತ್ತು ಪೋಷಕರಿಗೆ ಹಾಸಿಗೆಗಳನ್ನು ಸ್ಥಾಪಿಸಿದ್ದಾರೆ.

ಕೆ-ವೆಸ್ಟ್‌ ವಾರ್ಡ್‌ ತನ್ನ ಕೋವಿಡ್‌ ಕೇರ್‌ ಸೆಂಟರ್‌ 2 ಅನ್ನು ಚಾಂದಿವಲಿಯ ಎಸ್‌ಆರ್‌ಎ ಕಟ್ಟಡವೊಂದರಲ್ಲಿ ಪ್ರಾರಂಭಿಸಿದೆ. ಇದು 700 ಹಾಸಿಗೆಗಳೊಂದಿಗೆ 280 ಕೊಠಡಿಗಳನ್ನು ಹೊಂದಿದೆ. ಆರಂಭದಲ್ಲಿ ಕೇಂದ್ರವು ಪ್ರತ್ಯೇಕತೆ ಮತ್ತು ಸೌಮ್ಯ ರೋಗ ಲಕ್ಷಣಗಳನ್ನು ಹೊಂದಿರುವ ರೋಗಿಗಳಿಗೆ ಮಾತ್ರ ವ್ಯವಸ್ಥೆಗೊಳಿಸಿದ್ದು, ಇದು ಯಾವುದೇ ಆಮ್ಲಜನಕ ಸೌಲಭ್ಯವನ್ನು ಹೊಂದಿರಲಿಲ್ಲ, ಆದರೆ 2ನೇ ಅಲೆ ಸಮಯದಲ್ಲಿ ನಾವು ಆಮ್ಲಜನಕ ಹಾಸಿಗೆಗಳನ್ನು ಸೇರಿಸಿದ್ದೇವೆ. ನಾವು ಈಗಾಗಲೇ ಮೂರನೇ ಅಲೆಗೆ ತಯಾರಿ ಪ್ರಾರಂಭಿಸಿದ್ದೇವೆ. ಮಕ್ಕಳ ಕೊಠಡಿಗಳತ್ತ ಹೆಚ್ಚು ಗಮನ ಹರಿಸುತ್ತಿದ್ದೇವೆ ಎಂದು ಕೆ-ವೆಸ್ಟ್‌ ವಾ ರ್ಡ್‌ನ ಸಹಾಯಕ ಆಯುಕ್ತ ವಿಶ್ವಾಸ್‌ ಮೋಟೆ ಹೇಳಿದರು.

ನಾವು 140 ಹಾಸಿಗೆಗಳನ್ನು ಮಕ್ಕಳಿಗಾಗಿ ಪರಿವರ್ತಿಸಿದ್ದೇವೆ. ಈ ಪೈಕಿ 40 ಅನ್ನು ಈಗಾಗಲೇ ತೆರೆಯಲಾಗಿದೆ, ಉಳಿದವುಗಳು ಅಗತ್ಯವಿದ್ದಾಗ ಮತ್ತು ಕಾರ್ಯನಿರ್ವಹಿಸಲಿವೆ ಎಂದು ಮೋಟೆ ಹೇಳಿದ್ದಾರೆ. ಇಲ್ಲಿಯವರೆಗೆ ದೇಶಾದ್ಯಂತ 10,000 ಕ್ಕೂ ಹೆಚ್ಚು ವೈದ್ಯರು ಮತ್ತು ಅರೆವೈದ್ಯಕೀಯ ಸಿಬಂದಿಯನ್ನು ಸಂಸ್ಥೆ ಒದಗಿಸಿದ್ದು, ಮುಂಬಯಿಯಲ್ಲಿ ವೈದ್ಯರ ಕೊರತೆ ಇರುವುದರಿಂದ, ಕೇರಳ ಮತ್ತು ಆಂಧ್ರಪ್ರದೇಶ ಸೇರಿದಂತೆ ಇತರ ರಾಜ್ಯಗಳಿಂದ ನಮಗೆ ಸಿಬಂದಿ ಸಿಕ್ಕಿದ್ದಾರೆ ಎಂದು ಆಯುಕ್ತ ವಿಶ್ವಾಸ್‌ ಮೋಟೆ ಹೇಳಿದರು.

ಕೆ-ವೆಸ್ಟ್‌ ವಾರ್ಡ್‌ನಲ್ಲಿ 21 ವೈದ್ಯರು, 57 ಅರೆವೈದ್ಯಕೀಯ ಸಿಬಂದಿ ಮತ್ತು 12 ನೈರ್ಮಲ್ಯ ತಂತ್ರಜ್ಞರು ಕೆಲಸ ಮಾಡುತ್ತಿದ್ದಾರೆ ಎಂದು ಡಾಕ್ಟರ್ಸ್‌ ಫಾರ್‌ ಯು ಕಾರ್ಯದರ್ಶಿ ಡಾ| ಸಂಕೇತ್‌ ಶಾ ಹೇಳಿದರು. ಮಕ್ಕಳಿಗೆ ವಿಶೇಷ ಗಮನ ಬೇಕು, ಅವರ ಪೋಷಕರು ಇಲ್ಲದೆ ನಾವು ಅವರನ್ನು ದೀರ್ಘ‌ಕಾಲ ಪ್ರತ್ಯೇಕವಾಗಿಡಲು ಸಾಧ್ಯವಿಲ್ಲ, ಆದ್ದರಿಂದ ನಾವು ಪೋಷಕರಿಗೆ ಆಟದ ಪ್ರದೇಶಗಳು ಮತ್ತು ಹಾಸಿಗೆಗಳನ್ನು ಸ್ಥಾಪಿಸಿದ್ದೇವೆ ಎಂದು ಶಾ ಹೇಳಿದರು.

ಟಾಪ್ ನ್ಯೂಸ್

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ವಿಷಯ ಚಿಕ್ಕದಾದರೂ ಅದರೊಳಗಿನ ವಿಚಾರ ದೊಡ್ಡದು : ಅರಿವಿನ ಬೇಕು-ಬೇಡಗಳ ನಡುವೆ

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಟ್ರೆಂಟ್‌ ತೀರದಲ್ಲಿ ಲಾಸ್ಯ ಮತ್ತು ಕಿಂಕಿಣಿ ಮೇಳೈಸಿದಾಗ …

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಬಸ್‌ ಪ್ರವಾಸ ಮತ್ತು ಮಹಿಳಾ ದಿನಾಚರಣೆ: ಹೆಮ್ಮೆಯ ದುಬೈ ಕನ್ನಡಿಗ ಸಂಘ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಕನ್ನಡಿಗಾಸ್‌ ಸ್ಟಾರ್‌ ಅವಾರ್ಡ್‌ 2024 ಪ್ರದಾನ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

Desi Swara: ಪ್ಯಾಸೇಜು ಟು ಇಂಡಿಯಾ: ಭಾರತ ಪರಂಪರೆಯ ಅನಾವರಣ, ಸಾಂಸ್ಕೃತಿಕ ವೈಭವ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.