ನೂತನ ಸ್ವಾಗತ ಗೋಪುರ ಉದ್ಘಾಟನೆ
Team Udayavani, Mar 14, 2021, 7:21 PM IST
ಉಡುಪಿ: ಶ್ರೀ ಬಬ್ಬುಸ್ವಾಮಿ ದೈವವು ಪರಿವಾರ ದೈವಗಳೊಂದಿಗೆ ನೆಲೆಯಾದ “ಮಣಿಪಾಲದ ಜಾಗೃತ ಸ್ಥಾನ’ ವೆಂದೇ ಪ್ರಸಿದ್ಧಿಗೊಂಡ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ಮಣಿಪಾಲ
ದಲ್ಲಿ ಮಾ. 12ರಂದು ಆರಂಭ ಗೊಂಡಿದ್ದು, 14ರ ವರೆಗೆ ನೆರವೇರಲಿರುವ ಸಿರಿಸಿಂಗಾರದ ನೇಮದ ಪ್ರಯುಕ್ತ ನೂತನ ವಾಗಿ ನಿರ್ಮಿಸಲಾದ ಸ್ವಾಗತ ಗೋಪುರವನ್ನು ಮಣಿಪಾಲ ಮಾಹೆ ಟ್ರಸ್ಟಿ ವಸಂತಿ ಆರ್. ಪೈ ಅವರು ಶನಿವಾರ ಉದ್ಘಾಟಿಸಿ ಶುಭ ಹಾರೈಸಿದರು.
ದೈವಸ್ಥಾನದ ಆಡಳಿತ ಮೊಕ್ತೇಸರ ಟಿ. ಅಶೋಕ್ ಪೈ ಅವರ ನೇತೃತ್ವದಲ್ಲಿ ಸ್ವಾಗತ ಗೋಪುರಕ್ಕೆ ಕಲಶ ಏರಿಸಲಾಯಿತು. ಉದ್ಯಮಿ ಪುರುಷೋತ್ತಮ ಪಿ. ಶೆಟ್ಟಿ, ಉಜ್ವಲ್ ಪಿ. ಶೆಟ್ಟಿ, ತಲ್ಲೂರು ಶಿವರಾಮ ಶೆಟ್ಟಿ, ಗಿರಿಜಾ ಶಿವರಾಮ ಶೆಟ್ಟಿ, ಕಾರ್ಯಕಾರಿ ಸಮಿತಿ ಅಧ್ಯಕ್ಷ ಶ್ರೀನಿವಾಸ ಪೂಜಾರಿ, ಗಣ್ಯರು, ಗುರಿಕಾರರು, ಗ್ರಾಮದ ಹತ್ತು ಸಮಸ್ತರು, ಭಕ್ತರು ಭಾಗವಹಿಸಿದ್ದರು.
ಬೆಳಗ್ಗೆ ವರ್ಧಂತಿ ಆಚರಣೆ, ಮಧ್ಯಾಹ್ನ ಪಲ್ಲಪೂಜೆ, ಮಹಾ ಅನ್ನಸಂತರ್ಪಣೆ, ಸಂಜೆ ಭಂಡಾರ ಮೆರವಣಿಗೆ, ರಾತ್ರಿ ಶ್ರೀ ಬಬ್ಬುಸ್ವಾಮಿ ನೇಮ, ಶ್ರೀದೇವಿ ತನ್ನಿಮಾನಿಗ ನೇಮ ಜರಗಿತು. ಭಜನೆ, ಸಾಂಸ್ಕೃತಿಕ ಕಾರ್ಯಕ್ರಮವಾಗಿ ರಸಮಂಜರಿ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ
Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ
Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್’
ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ