ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವುದು ನಮ್ಮ ಉದ್ದೇಶ: ಶಾಂತಾರಾಮ ಶೆಟ್ಟಿ


Team Udayavani, Dec 3, 2019, 6:00 PM IST

mumbai-tdy-1

ಮುಂಬಯಿ, ಡಿ. 2: ಬಂಟರ ಸಂಘ ಮುಂಬಯಿ ಇದರ ಅಧ್ಯಕ್ಷ ಪದ್ಮನಾಭ ಎಸ್‌. ಪಯ್ಯಡೆ ಮತ್ತು ಸಂಘದ ಪದಾಧಿಕಾರಿಗಳ ಮಾರ್ಗದರ್ಶನದಲ್ಲಿ, ಸಂಘದ ಮುಖವಾಣಿ ಬಂಟರವಾಣಿಯ ಕಾರ್ಯಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ, ಸಂಪಾದಕ ಮಂಡಳಿ ಹಾಗೂ ಸಲಹಾಸಮಿತಿಯ ನೇತೃತ್ವದಲ್ಲಿ 2020, ಫೆ.8ರಂದು ಬಂಟರ ಭವನದ ಶ್ರೀಮತಿ ರಾಧಾಬಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಲಿರುವ ಬಂಟರ ವಾಣಿ ಚಿಣ್ಣರ ಚಿಲಿಪಿಲಿ-4′ ಫ್ಯಾಶನ್‌ ಶೋ, ಪ್ರತಿಭಾ ಸ್ಪರ್ಧೆ ಹಾಗೂ ಸಮೂಹ ನೃತ್ಯ ಸ್ಪರ್ಧೆಯ ಮೊದಲನೇ ದಿನದ ತರಬೇತಿ ಶಿಬಿರವನ್ನು ಡಿ. 1ರಂದು ಬೆಳಗ್ಗೆ ಸಂಘದ ಮುಂಭಾಗದಲ್ಲಿರುವ ಶಶಿ ಮನ್‌ ಮೋಹನ್‌ ಶೆಟ್ಟಿ ಉನ್ನತ ಶಿಕ್ಷಣ ಸಂಕೀರ್ಣದಲ್ಲಿರುವ ಕಿರು ಸಭಾ ಗೃಹದಲ್ಲಿ ನಡೆಯಿತು.

ಸಂಘದ ಗೌರವ ಕೋಶಾಧಿಕಾರಿ ಪ್ರವೀಣ್‌ ಭೋಜ ಶೆಟ್ಟಿ ಅವರು ಜ್ಯೋತಿ ಬೆಳಗಿಸಿ ಶಿಬಿರಕ್ಕೆ ಚಾಲನೆ ನೀಡಿ ಮಕ್ಕಳಿಗೆ ಶುಭ ಹಾರೈಸಿ ಮಾತನಾಡಿ, ಬಂಟರವಾಣಿಯ ಕಾರ್ಯಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ ಯವರ ಪರಿಕಲ್ಪನೆಯಲ್ಲಿ ಮೂಡಿಬಂದ ಚಿಣ್ಣರ ಚಿಲಿಪಿಲಿ ಪ್ರತಿಭಾ ಸ್ಪರ್ಧೆಯ ನಾಲ್ಕನೇ ಕಾರ್ಯಕ್ರಮವು ಜರಗಲಿರುವುದು ಸಂತೋಷದ ಸಂಗತಿಯಾಗಿದೆ. ಕಳೆದ ಮೂರು ವರ್ಷ ಗಳಲ್ಲಿ ಅಭೂತಪೂರ್ವ ಯಶಸ್ಸು ಪಡೆದು, ಸಂಘದ ಇತಿಹಾಸದಲ್ಲೇದಾಖಲೆ ನಿರ್ಮಿಸಿರುವ ಚಿಣ್ಣರ ಚಿಲಿ ಪಿಲಿ ಕಾರ್ಯಕ್ರಮ ಇನ್ನೊಂದು ಬಾರಿ ಅದ್ಭುತ ದಾಖಲೆ ನಿರ್ಮಿಸಲೆಂದು ಶುಭ ಹಾರೈಸಿ, ಸ್ಪರ್ಧೆಗೆ ಆಯ್ಕೆಯಾದ ಮಕ್ಕಳನ್ನು ಅಭಿನಂದಿಸಿ, ಬಂಟರ ವಾಣಿಯ ಪತ್ರಿಕಾ ಬಳಗದ ಪರಿಶ್ರಮಕ್ಕಾಗಿ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತ ನಾಡಿದ ಬಂಟರವಾಣಿಯ ಕಾರ್ಯಾಧ್ಯಕ್ಷ ಶಾಂತಾರಾಮ ಬಿ. ಶೆಟ್ಟಿ ಅವರು, ಯಾವುದೇ ಕಾರ್ಯಕ್ರಮ ಆಯೋಜಿಸುವಾಗ ಅದರ ಹಿಂದಿರುವಪರಿಶ್ರಮ ಎಷ್ಟೆಂಬುದನ್ನು ಆಯೋಜಕರೇ ಬಲ್ಲರು. ಕಳೆದ ಮೂರು ವರ್ಷ ಬಂಟರವಾಣಿ ಚಿಣ್ಣರ ಚಿಲಿಪಿಲಿಕಾರ್ಯಕ್ರಮ ಯಶಸ್ವಿಯಾಗುವಲ್ಲಿ ಸಹಕರಿಸಿದ ನಮ್ಮ ತಂಡದ ನಾಲ್ಕನೇ ಕಾರ್ಯ ಕ್ರಮ ಇದಾಗಿದ್ದು, ಬಂಟ ಬಾಂಧವರು ಎಂದಿನಂತೆ ಸಹಕಾರ ನೀಡಬೇಕು ಎಂದು ವಿನಂತಿಸಿದರು. ಸಮಾಜದಪುಟ್ಟ ಮಕ್ಕಳ ಪ್ರತಿಭೆಯ ಅನಾವರಣಕ್ಕೆ ವೇದಿಕೆ ಕಲ್ಪಿಸಬೇಕು ಎನ್ನುವ ಉದ್ದೇಶದಿಂದ ನಾನು ಈ ಯೋಜನೆ ಹಾಕಿಕೊಂಡಿದ್ದೇನೆ ಎಂದರು. ಬಂಟರವಾಣಿಯ ಗೌರವ ಸಂಪಾ ದಕ ಅಶೋಕ್‌ ಪಕ್ಕಳ ಸ್ವಾಗತಿಸಿ ಮಾತನಾಡಿ, ಈ ಬಾರಿ ಸ್ಪರ್ಧಿಗಳ ಆಯ್ಕೆ

ಪ್ರಕ್ರಿಯೆ ಸಂಘದ ಆಯಾಯ ಪ್ರಾದೇ ಶಿಕ ಸಮಿತಿಗಳಿಗೆ ಹಾಗೂ ಇತರ ಬಂಟರ ಸಂಘಸಂಸ್ಥೆಗಳಿಗೆ ನೀಡಲಾಗಿದ್ದು, ಅವರಿಂದ ಬಂದ ಆಯ್ಕೆ ಪಟ್ಟಿಯ ಅನುಸಾರವಾಗಿ ಮಕ್ಕಳನ್ನು ಅಧಿಕೃತ ತರಬೇತಿಯಲ್ಲಿ ಸೇರಿಸಿಕೊಳ್ಳಲಾಗುವುದು. ಡಿಸೆಂಬರ್‌ 8ರಂದು ಬೆಳಗ್ಗೆ 11ರಿಂದ ಸ್ಪರ್ಧಿಗಳ ಆಯ್ಕೆ ಅಂತಿಮಗೊಳ್ಳಲಿದ್ದು, ಸ್ಪರ್ಧಾಳುಗಳ ಭಾವಚಿತ್ರ, ಜನನ ದಿನಾಂಕದ ಪ್ರತಿನೀಡಲು ಕೊನೆಯ ದಿನಾಂಕ ವಾಗಿದೆ. ಮತ್ತೆ ಅದನ್ನು ಪರಿಗಣಿಸ ಲಾಗುವುದಿಲ್ಲ ಎಂದು ಹೇಳಿದರು. ತರಬೇತಿ ಶಿಬಿರದಲ್ಲಿ ಅಧಿಕ ಸಂಖ್ಯೆಯಲ್ಲಿ ಮಕ್ಕಳು, ಪಾಲಕರು ಭಾಗವಹಿಸಿದ್ದರು. ಬಂಟರವಾಣಿಯ ಸಂಪಾದಕ ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು ವಂದಿಸಿದರು.

ಉದ್ಘಾಟನಾ ಸಂದರ್ಭದಲ್ಲಿ ಹಿರಿಯಸಾಹಿತಿ ಡಾ| ಸುನೀತಾ ಎಂ. ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್‌ದಾಸ್‌ ಶೆಟ್ಟಿ, ಜಯ ಎ. ಶೆಟ್ಟಿ, ಡಾ| ಪ್ರಭಾಕರಶೆಟ್ಟಿ ಬಿ., ಹರೀಶ್‌ ವಾಸು ಶೆಟ್ಟಿ, ಲತಾ ಪಿ. ಶೆಟ್ಟಿ, ಚಿತ್ರಾ ಆರ್‌. ಶೆಟ್ಟಿ,ದಿವಾಕರ ಶೆಟ್ಟಿ ಕುರ್ಲಾ, ಪ್ರಸಾದ್‌ ಶೆಟ್ಟಿ ಅಂಗಡಿಗುತ್ತು, ನವೀನ್‌ ಶೆಟ್ಟಿ ಇನ್ನಬಾಳಿಕೆ, ಲತಾ ಸಂತೋಷ್‌ ಶೆಟ್ಟಿ, ತರಬೇತುದಾರರಾದ ಸಂದೀಪ್‌ ಶೆಟ್ಟಿ ಮತ್ತು ಶ್ವೇತಾ ಶೆಟ್ಟಿ, ಪ್ರವೀಣ್‌ ಶೆಟ್ಟಿ ವಾರಂಗ, ಸಚ್ಚಿದಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

 

ಚಿತ್ರವರದಿ: ಪ್ರೇಮನಾಥ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara: ಕನ್ನಡ ಕಲಾವಿದನ ಅಪ್ರತಿಮ ಕಲೆ :ಕುಂಚದಲ್ಲಿ ಅರಳಿದ ಅದ್ಭುತ ಚಿತ್ತಾರ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara-ಜಗದೋದ್ಧಾರಕ ವಸುದೇವ ಸುತ…..: ಅವತಾರ ಪುರುಷನ ಜನ್ಮ ವೃತ್ತಾಂತ

Desi Swara: ಶಿಶಿರದ ಸಂಗೀತ ಯಾನ: “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

Desi Swara: ಶಿಶಿರದ ಸಂಗೀತ ಯಾನ- “ಗಮಭನ’ ಸಂಸ್ಥೆಯ “ಸ್ವರ ಆನಂದ್‌’

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

ವಿಂಶತಿಯ ವಿಜೃಂಭಣೆಯಲ್ಲಿ ಯುಎಇ ಬ್ರಾಹ್ಮಣ ಸಮಾಜ: 20ನೇ ವರ್ಷದಲ್ಲಿ 20 ಕಾರ್ಯಕ್ರಮಗಳ ದಾಖಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.